ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಿಗೆ ಮತ್ತೆ Z ಭದ್ರತೆ ನೀಡಲು ಸರ್ಕಾರ ತೀರ್ಮಾನ ಮಾಡಿದೆ. ಈ ಹಿಂದೆಯೂ ಮಾಜಿ ಸಿಎಂಗಳಿಗೆ Z ಭದ್ರತೆ ಇತ್ತು.ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ Z ಭದ್ರತೆಯಿಂದ Y ಭದ್ರತೆಗೆ ಇಳಿಸಲಾಗಿತ್ತು. ಹೀಗಾಗಿ ಮತ್ತೆ Z ಭದ್ರತೆ ನೀಡುವಂತೆ ಮಾಜಿ ಸಿಎಂಗಳು ಸಿದ್ದರಾಮಯ್ಯಗೆ (Siddaramaiah) ಮನವಿ ಮಾಡಿದ್ರು.
ಕಾವೇರಿ ಹೋರಾಟ (Cauvery Protest) ಸೇರಿದಂತೆ ಹಲವು ಪ್ರತಿಭಟನೆ ಸೇರಿದಂತೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಳಕ್ಕೆ ಮಾಜಿ ಸಿಎಂಗಳು ಮನವಿ ಮಾಡಿದ್ರು. ಮಾಜಿ ಸಿಎಂಗಳ ಮನವಿ ಹಿನ್ನೆಲೆಯಲ್ಲಿ Z ಭದ್ರತೆ ಮುಂದುವರಿಸಲು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಪಟಾಕಿ ಬ್ಯಾನ್: ಸಿದ್ದರಾಮಯ್ಯ
ಶೀಘ್ರವೇ ಮಾಜಿ ಸಿಎಂಗಳಿಗೆ Z ಭದ್ರತೆ ನೀಡಲು ಆದೇಶ ಹೊರಡಿಸುವ ಸಾಧ್ಯತೆ ಇದೆ ಅಂತ ಹೇಳಲಾಗ್ತಿದೆ. ಒಂದು ವೇಳೆ Z ಭದ್ರತೆ ಜಾರಿ ಆದರೆ ಮಾಜಿ ಸಿಎಂಗಳಾದ ಯಡಿಯೂರಪ್ಪ, ಎಸ್.ಎಂ.ಕೃಷ್ಣ ಕುಮಾರಸ್ವಾಮಿ, ಸದಾನಂದಗೌಡ, ಬಸವರಾಜ್ ಬೊಮ್ಮಾಯಿ ವೀರಪ್ಪ ಮೊಯ್ಲಿ, ಜಗದೀಶ್ ಶೆಟ್ಟರ್ ಈ ಸೌಲಭ್ಯ ಲಭ್ಯವಾಗಲಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]