ಶಾಸಕ ಶಿವನಗೌಡ ವರ್ತನೆ ಖಂಡಿಸಿ ಸರ್ಕಾರಿ ನೌಕರರಿಂದ ಪ್ರತಿಭಟನೆ

Public TV
1 Min Read
RCR PROTEST

ರಾಯಚೂರು: ಅವಾಚ್ಯ ಶಬ್ಧಗಳಿಂದ ಸರ್ಕಾರಿ ನೌಕರನಿಗೆ ನಿಂದಿಸಿದ್ದ ಶಾಸಕ ಶಿವನಗೌಡ ನಾಯಕ್ ರ ವರ್ತನೆಯನ್ನು ಖಂಡಿಸಿ ಜಿಲ್ಲಾ ಸರ್ಕಾರಿ ನೌಕರರು ಪತ್ರಿಭಟನೆ ನಡೆಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ನಾಗರಾಜ್ ಗೆ ದೂರವಾಣಿಯಲ್ಲಿ ಶಿವನಗೌಡ ನಾಯಕ್ ಅವಾಚ್ಯ ಪದಗಳಿಂದ ಬೈದಿದ್ದರು. ಅಂಗನವಾಡಿ ಮೊಟ್ಟೆ ಆಹಾರ ಪದಾರ್ಥಗಳ ಸರಬರಾಜು ವಿಚಾರಕ್ಕೆ ಅವಾಚ್ಯ ಪದಗಳಿಂದ ಬೈದಿದ್ದರು.

vlcsnap 2018 11 20 16h16m48s674

ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು ಇಂದು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಅಲ್ಲದೇ ಈ ಕೂಡಲೇ ಬಿಜೆಪಿ ಶಾಸಕ ಶಿವನಗೌಡ ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು. ಇದನ್ನೂ ಓದಿ: ಬಿಜೆಪಿ ಶಾಸಕನಿಂದ ಗೂಂಡಾಗಿರಿ- ನಿಂದನೆಯಿಂದ ಬೇಸತ್ತು ಹುದ್ದೆಯೇ ಬೇಡ ಅಂತಿದ್ದಾರೆ ಅಧಿಕಾರಿ!

ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಶಾಸಕರು ತಮ್ಮ ವರ್ತನೆಯನ್ನು ಬದಲಾಯಿಸಿಕೊಳ್ಳಲು ಮಾರ್ಗದರ್ಶನ ನೀಡುವಂತೆ ಮನವಿ ಸಲ್ಲಿಸಿದ್ದಾರೆ. ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Share This Article
Leave a Comment

Leave a Reply

Your email address will not be published. Required fields are marked *