Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೆಟ್ರೋಲ್, ಡೀಸೆಲ್ ಕಾರುಗಳನ್ನು ನಿಷೇಧಿಸಲ್ಲ – ನಿತಿನ್ ಗಡ್ಕರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪೆಟ್ರೋಲ್, ಡೀಸೆಲ್ ಕಾರುಗಳನ್ನು ನಿಷೇಧಿಸಲ್ಲ – ನಿತಿನ್ ಗಡ್ಕರಿ

Latest

ಪೆಟ್ರೋಲ್, ಡೀಸೆಲ್ ಕಾರುಗಳನ್ನು ನಿಷೇಧಿಸಲ್ಲ – ನಿತಿನ್ ಗಡ್ಕರಿ

Public TV
Last updated: September 5, 2019 4:42 pm
Public TV
Share
2 Min Read
NITHIN GADKARI
SHARE

ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಕಾರ್ ಗಳನ್ನು ನಿಷೇಧಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ.

59ನೇ ವಾರ್ಷಿಕ ಭಾರತೀಯ ವಾಹನ ತಯಾರಿಕಾ ಕಂಪನಿಗಳ ಒಕ್ಕೂಟ (ಎಸ್‍ಐಎಎಂ) ಸಮಾವೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳ ನಿಷೇಧದ ಕುರಿತು ಸ್ಪಷ್ಟಪಡಿಸಿದ ಅವರು, ಭಾರತದ ವಾಹನ ಉದ್ಯಮವು ದೇಶದ ರಫ್ತು ಮತ್ತು ಉದ್ಯೋಗಕ್ಕೆ ನೀಡುತ್ತಿರುವ ಕೊಡುಗೆ ಅಪಾರ, ಈ ಬಗ್ಗೆ ಸರ್ಕಾರಕ್ಕೆ ತಿಳಿದಿದೆ. ರಫ್ತು ಹೆಚ್ಚಿರುವುದಕ್ಕೆ ವಾಹನ ಉದ್ಯಮವೇ ಸಾಕ್ಷಿ ಎಂದು ಗಡ್ಕರಿ ಅಭಿಪ್ರಾಯ ಪಟ್ಟರು.

Live from 59th SIAM Annual Convention – “Moving into a New Era of Auto Industry” https://t.co/0Oex0UMPuN

— Nitin Gadkari (@nitin_gadkari) September 5, 2019

ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಕಾರ್ ಗಳನ್ನು ನಿಷೇಧಿಸುವ ಕುರಿತ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಆಟೋಮೊಬೈಲ್ ವಲಯ ಸಾಕಷ್ಟು ಉದ್ಯೋಗ ಒದಗಿಸುತ್ತಿದ್ದು, ಮಾತ್ರವಲ್ಲದೆ ರಫ್ತು ಹೆಚ್ಚಿದೆ. ಆದರೆ, ಇದರಿಂದ ಸರ್ಕಾರ ಕೆಲ ಸಮಸ್ಯೆಗಳನ್ನು ಎದುರಿಸುತ್ತಿದೆ. ಮೊದಲನೇಯದು ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವ ವೆಚ್ಚ, ಎರಡನೇಯದು ಮಾಲಿನ್ಯ, ಮೂರನೇಯದು ರಸ್ತೆ ಸುರಕ್ಷತೆ ಎಂದು ತಿಳಿಸಿದರು.

ದೇಶದಲ್ಲಿ ಆಟೋಮೊಬೈಲ್ ಉದ್ಯಮ 4.50 ಲಕ್ಷ ಕೋಟಿ ರೂ. ಮೌಲ್ಯದ್ದಾಗಿದೆ. ಇದರ ಜೊತೆಗೆ ಮಾಲಿನ್ಯವು ದೇಶಕ್ಕೆ ಒಂದು ಪ್ರಮುಖ ವಿಷಯವಾಗಿ ಉಳಿದಿರುವುದರಿಂದ ಶುದ್ಧ ಇಂಧನ ಮೂಲಗಳತ್ತ ಮುಖ ಮಾಡಬೇಕಿದೆ. ಮಾಲಿನ್ಯದ ಸಮಸ್ಯೆಗೆ ವಾಹನಗಳನ್ನು ಮಾತ್ರ ದೂಷಿಸುವುದು ನ್ಯಾಯವಲ್ಲ. ಆದರೆ, ಅವರೂ ಸಹ ಕೆಲವು ಜವಾಬ್ದಾರಿಗಳನ್ನು ಹಂಚಿಕೊಳ್ಳಬೇಕಾಗುತ್ತದೆ. ದೆಹಲಿ ವಿಶ್ವದ ಅತಿ ಹೆಚ್ಚು ವಾಯು ಮಾಲಿನ್ಯ ಹೊಂದಿದ ನಗರಗಳಲ್ಲಿ ಒಂದು. ಅಲ್ಲದೆ, 2018ರಲ್ಲಿ ಹೆಚ್ಚು ಮಾಲಿನ್ಯ ಹೊಂದಿದ ನಗರಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಮಸ್ಯೆಗಳನ್ನು ನಿಭಾಯಿಸಲು ಸರ್ಕಾರ 50 ಸಾವಿರ ಕೋಟಿ ರೂ.ಗಳ ಯೋಜನೆಯನ್ನು ರೂಪಿಸಿದೆ. ಈ ನಿಟ್ಟಿನಲ್ಲಿ ಈಗಾಗಲೇ ಶೇ.29ರಷ್ಟು ಮಾಲಿನ್ಯವನ್ನು ನಿಯಂತ್ರಿಸಲಾಗಿದೆ. ಮಾಲಿನ್ಯವನ್ನು ಕಡಿಮೆ ಮಾಡುವುದು ರಾಷ್ಟ್ರೀಯ ಹಿತಾಸಕ್ತಿಯಾಗಿದೆ ಎಂದು ಗಡ್ಕರಿ ತಿಳಿಸಿದರು.

Live from 59th SIAM Annual Convention – “Moving into a New Era of Auto Industry” https://t.co/cggreIeZfZ

— Nitin Gadkari (@nitin_gadkari) September 5, 2019

ಈ ಹಿಂದೆ ನಡೆದ ನೀತಿ ಆಯೋಗದ ಸಭೆಯಲ್ಲಿ 2025ರ ವೇಳೆಗೆ ಎಲ್ಲ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ಎಲೆಕ್ಟ್ರಿಕ್ ಎಂಜಿನ್ ಆಗಿ ಪರಿವರ್ತಿಸಲಾಗುವುದು ಎದು ನಿರ್ಧರಿಸಲಾಗಿತ್ತು.

ನೀತಿ ಆಯೋಗದ `ಥಿಂಕ್ ಟ್ಯಾಂಕ್’ ಸಭೆಯಲ್ಲಿ ಈ ನಿರ್ಧಾರದ ಕುರಿತು ಎಲೆಕ್ಟ್ರಿಕ್ ವಾಹನಗಳ ಉತ್ಪಾದಕರು ಹಾಗೂ ಸ್ಟಾರ್ಟ್ ಅಪ್ ತಯಾರಿಕರೊಂದಿಗೆ ಚರ್ಚಿಸಲಾಗಿತ್ತು. ಮಾಲಿನ್ಯ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳದಿದ್ದರೆ, ನ್ಯಾಯಾಲಯ ಈ ಕುರಿತು ಕ್ರಮ ಕೈಗೊಳ್ಳುತ್ತದೆ ಎಂದು ಕಂಪನಿಗಳಿಗೆ ನೀತಿ ಆಯೋಗದ ಸಭೆಯಲ್ಲಿ ಎಚ್ಚರಿಕೆ ನೀಡಲಾಗಿತ್ತು.

electric car 2

ಇದಕ್ಕೆ ಹಲವು ಆಟೋಮೊಬೈಲ್ ಕಂಪನಿಗಳು ಆಕ್ಷೇಪ ವ್ಯಕ್ತಪಡಿಸಿ, ಈ ಕುರಿತು ಸೂಕ್ತ ನೀತಿ ಮತ್ತು ಮಾರ್ಗದರ್ಶನವಿಲ್ಲದೆ ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸಲು ಸಾಧ್ಯವಿಲ್ಲ. ನೀತಿಗಳನ್ನು ಸ್ಪಷ್ಟವಾಗಿಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದವು. ಇದಕ್ಕೆ ಪ್ರತಿಯಾಗಿ, ಹೆಚ್ಚು ವಾಯು ಮಾಲಿನ್ಯ ಹೊಂದಿದ 15ರ ಪೈಕಿ 14 ನಗರಗಳು ಭಾರತದಲ್ಲಿವೆ. ಸರ್ಕಾರ ಮತ್ತು ಕಂಪನಿಗಳು ಈ ಕುರಿತು ಕ್ರಮ ಕೈಗೊಳ್ಳದಿದ್ದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಎಚ್ಚರಿಸಿದ್ದರು.

2023ರ ವೇಳೆಗೆ ತ್ರಿಚಕ್ರ ವಾಹನಗಳನ್ನು ಸಂಪೂರ್ಣವಾಗಿ ಎಲೆಕ್ಟ್ರಿಕ್‍ಗೆ ಪರಿವರ್ತಿಸಬೇಕು, 2025ರ ವೇಳೆಗೆ 150 ಸಿಸಿಗಿಂತ ಕಡಿಮೆ ಎಂಜಿನ್ ಸಾಮಥ್ರ್ಯ ಹೊಂದಿರುವ ದ್ವಿಚಕ್ರ ವಾಹನಗಳನ್ನು ಎಲೆಕ್ಟ್ರಿಕ್‍ಗೆ ಪರಿವರ್ತಿಸಲು ನೀತಿ ಆಯೋಗ ಯೋಜನೆ ರೂಪಿಸಿದೆ.

TAGGED:Automobile CompanyElectric VehiclesNiti Ayognitin gadkaripollutionPublic TVಆಟೋಮೊಬೈಲ್ ಕಂಪನಿಎಲೆಕ್ಟ್ರಿಕ್ ವಾಹನಗಳುನಿತಿನ್ ಗಡ್ಕರಿನೀತಿ ಆಯೋಗಪಬ್ಲಿಕ್ ಟಿವಿಮಾಲಿನ್ಯ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Bhutnal Lake
Districts

ಕೆರೆಯಲ್ಲಿ ಮುಳುಗಿದ್ದ ಬಾಲಕನ ರಕ್ಷಣೆಗೆ ಹೋಗಿ ಬೆಂಗ್ಳೂರಿನ ಮೂವರು ಸಾವು

Public TV
By Public TV
3 minutes ago
Strait of Hormuz Ships
Latest

ಒಂದು ಬ್ಯಾರಲ್‌ ತೈಲಕ್ಕೆ 1 ಡಾಲರ್‌ ತೆರಿಗೆ – ಕ್ರಿಪ್ಟೋ ಕರೆನ್ಸಿಯಲ್ಲಿ ಟ್ಯಾಕ್ಸ್‌ ಪಾವತಿಗೆ ಇರಾನ್‌ ಡಿಮ್ಯಾಂಡ್‌

Public TV
By Public TV
45 minutes ago
Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
1 hour ago
Bengaluru Nayandhalli
Bengaluru City

ಆಟವಾಡ್ತಾ ಮೂರನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು – ಮಗಳ ಸ್ಥಿತಿ ಕಂಡು ತಾಯಿ ಮೂರ್ಛೆ

Public TV
By Public TV
2 hours ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಪ್ರಕರಣ – 24 ಗಂಟೆ ಕಳೆದ್ರೂ ಸಿಗದ ಸುಳಿವು

Public TV
By Public TV
3 hours ago
Raichuru Lingasuguru Protest
Districts

ನೀರು ಕೇಳಿ ಪ್ರತಿಭಟಿಸಿದ್ದ 80 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?