Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರೋಗ್ಯ ಇಲಾಖೆಯಲ್ಲಿ ಕೆಲಸ ಕದಿಯುವವರಿಗೆ ವೇತನ ಕಡಿತ ಶಿಕ್ಷೆ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆರೋಗ್ಯ ಇಲಾಖೆಯಲ್ಲಿ ಕೆಲಸ ಕದಿಯುವವರಿಗೆ ವೇತನ ಕಡಿತ ಶಿಕ್ಷೆ: ಸುಧಾಕರ್

Bengaluru City

ಆರೋಗ್ಯ ಇಲಾಖೆಯಲ್ಲಿ ಕೆಲಸ ಕದಿಯುವವರಿಗೆ ವೇತನ ಕಡಿತ ಶಿಕ್ಷೆ: ಸುಧಾಕರ್

Public TV
Last updated: April 21, 2022 7:39 pm
Public TV
Share
3 Min Read
SUDHAKAR MEETING 1 1
SHARE

ಬೆಂಗಳೂರು: ನಿಜವಾದ ಕಾರಣಗಳಿಲ್ಲದೆ ಕೆಲಸ ಕದಿಯುವುದನ್ನು ಸಹಿಸಲು ಆಗುವುದಿಲ್ಲ. ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಎಲ್ಲ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

SUDHAKAR MEETING 2

ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆ, ಇಲಾಖೆ ಕಚೇರಿ ಮತ್ತು ಸಂಸ್ಥೆಗಳಲ್ಲಿ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದಿರುವ ಬಗ್ಗೆ ಸಾರ್ವಜನಿಕರು ಹಾಗೂ ಚುನಾಯಿತ ಪ್ರತಿನಿಧಿಗಳಿಂದ ದೂರುಗಳು ಬಂದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಪೂಜೆ ವೇಳೆ ಶಬ್ದ ಮಾಲಿನ್ಯ ಆರೋಪ- ವೇಣುಗೋಪಾಲ ದೇಗುಲಕ್ಕೆ ನೊಟೀಸ್

ಸರ್ಕಾರಿ ಅಧಿಕಾರಿಗಳ ಕರ್ತವ್ಯಲೋಪದಿಂದ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಆಗುತ್ತದೆ. ಹೀಗಾಗಿ ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದ ಯಾರೇ ಆಗಲಿ ಅಂತಹವರ ವೇತನ ಕಡಿತಕ್ಕೆ ಸೂಚನೆ ನೀಡಲಾಗಿದೆ. ಇಲಾಖೆ ಅಡಿಯಲ್ಲಿ ಬರುವ ಎಲ್ಲ ಸಂಸ್ಥೆಗಳು ಮತ್ತು ಆಸ್ಪತ್ರೆಗಳಲ್ಲಿ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗೂ ಅವರ ಆಧಾರ್ ಆಧರಿತ ಬಯೋಮೆಟ್ರಿಕ್ ಹಾಜರಾತಿ (ಎಇಬಿಎಎಸ್) ಕಡ್ಡಾಯಗೊಳಿಸಲಾಗಿದೆ. ಅದನ್ನು ಆಧರಿಸಿಯೇ ಇನ್ನು ಮುಂದೆ ವೇತನ ನೀಡುವಂತೆ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ವಿವರಿಸಿದರು.

SUDHAKAR

ಕೋವಿಡ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಬಯೋಮೆಟ್ರಿಕ್ ಹಾಜರಾತಿ ಪದ್ಧತಿಯನ್ನು ಕಳೆದ ಎರಡು ತಿಂಗಳ ಹಿಂದಿನಿಂದಲೇ ಮತ್ತೆ ಕಡ್ಡಾಯಗೊಳಿಸಲಾಗಿದೆ. ಅನೇಕ ಸಭೆಗಗಳಲ್ಲಿ ಮತ್ತು ಸುತ್ತೋಲೆ ಮೂಲಕವೂ ಈ ಬಗ್ಗೆ ಸೂಚನೆ ನೀಡಲಾಗಿದೆ. ಆದರೂ ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಹಾಜರಾತಿ ದಾಖಲಿಸದಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈಗ ಸ್ಪಷ್ಟ ಎಚ್ಚರಿಕೆ ಜೊತೆಗೆ ಅಧಿಕೃತ ಆದೇಶ ನೀಡಿದ್ದು ಅಂತಹ ಪ್ರಕರಣಗಳನ್ನು ಗೈರು ಹಾಜರಿ ಎಂದು ಪರಿಗಣಿಸಿ ವೇತನ ಕಡಿತಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮೈಸೂರು ಸ್ಯಾಂಡಲ್ ಸೋಪ್ ಕಾರ್ಖಾನೆಯಲ್ಲೂ ಕಮಿಷನ್ ದಂಧೆ

ಡಿಡಿಒ ಹೊಣೆ:
ಇಲಾಖೆಯ ಆಸ್ಪತ್ರೆ, ಸಂಸ್ಥೆ ಮತ್ತು ಕೇಂದ್ರಗಳ ಜವಾಬ್ದಾರಿ ನಿರ್ವಹಿಸುವ ಡಿಡಿಒ (ಸ್ಯಾಲರಿ ಡ್ರಾಯಿಂಗ್ ಆಫೀಸರ್)ಗಳು ಪ್ರತೀ ತಿಂಗಳು ಎಇಬಿಎಎಸ್‍ನಲ್ಲಿ ತಮ್ಮ ವ್ಯಾಪ್ತಿಯ ಎಲ್ಲ ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿ ಅದರ ಅನುಸಾರವೇ ವೇತನ ಪಾವತಿಗೆ ವರದಿ ಸಿದ್ಧಪಡಿಸಿ ಸಂಬಂಧಿಸಿದ ಅಧಿಕಾರಿಗಳ ಮೂಲಕ ಆಯಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ (ಡಿಎಚ್‍ಒ) ಸಲ್ಲಿಸಬೇಕು. ಅವರು ಅದನ್ನು ಪರಿಶೀಲಿಸಿ ವೇತನ ಬಿಡುಗಡೆ ಮತ್ತು ಕಡಿತಕ್ಕೆ ಸೂಚನೆ ನೀಡಲಿದ್ದಾರೆ. ಡಿಎಚ್‍ಒ ಅವರು ಕೈಗೊಂಡ ಕ್ರಮಗಳನ್ನು ಮೇಲಿನ ಹಂತದ ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

SUDHKAR MEETING

ಯಾರೇ ಆಗಲಿ ಶೇ.80ರಷ್ಟು ಹಾಜರಾತಿಗಿಂತ ಕಡಿಮೆ ಇದ್ದಲ್ಲಿ ಅವರ ವೇತನ ತಡೆ ಹಿಡಿಯಲಾಗುತ್ತದೆ. ನಂತರ ಮಾರ್ಗಸೂಚಿ ಅನ್ವಯ ಮುಂದಿನ ಕ್ರಮ ವಹಿಸಲಾಗುವುದು. ಒಂದು ವೇಳೆ ಶೇ.80ರಷ್ಟು ಹಾಜರಾತಿ ಇದ್ದಲ್ಲಿ ವೇತನ ಬಿಡುಗಡೆ ಮಾಡಿ ಉಳಿದ ಶೇ.20 ಹಾಜರಾತಿ ದಾಖಲು ಮಾಡದಿರುವುದಕ್ಕೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗುತ್ತದೆ. ಸಿಬ್ಬಂದಿ ನೀಡುವ ಕಾರಣ ನಿಜವಾಗಿದ್ದಲ್ಲಿ ಪ್ರಕರಣ ಮುಕ್ತಾಯಗೊಳಿಸಲಾಗುವುದು. ಒಂದು ವೇಳೆ ಸಬೂಬು ನೀಡಿದರೆ ಅಥವಾ ನೀಡಿರುವ ಮಾಹಿತಿ ಸುಳ್ಳು ಆಗಿದ್ದಲ್ಲಿ ಮುಂದಿನ ತಿಂಗಳ ವೇತನದಲ್ಲಿ ನಿರ್ದಿಷ್ಟಪಡಿಸಿರುವ ಮೊತ್ತವನ್ನು ಕಡಿತಗೊಳಿಸಲಾಗುವುದು. ಒಂದು ವೇಳೆ ಎಇಬಿಎಎಸ್ ಅನುಷ್ಟಾನಗೊಳಿಸದೆ, ಹಾಜರಾತಿ ಪರಿಶೀಲಿಸದೆ ವೇತನ ಪಾವತಿಸಿದರೆ ಆಯಾ ಡಿಡಿಒಗಳನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು. ಇದನ್ನು ಸರಿಯಾಗಿ ಉಸ್ತುವಾರಿ ಮಾಡದಿದ್ದಲ್ಲಿ ಡಿಎಚ್‍ಒಗಳ ವಿರುದ್ಧವೂ ಕ್ರಮ ಕೈಗೊಳ್ಳಲು ವರದಿ ನೀಡುವಂತೆ ಜಿಲ್ಲೆಗಳ ಉಸ್ತುವಾರಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

SUDHKAR MEETING 1

ಪ್ರತಿ ವಾರ ಪರಿಶೀಲನೆ:
ಪ್ರತಿ ವಾರ ಇಲಾಖೆ ಪ್ರಗತಿ ಪರಿಶೀಲನೆಯಲ್ಲಿ ಉಳಿದ ಅಂಶಗಳ ಜೊತೆಗೆ ಹಾಜರಾತಿ ಕಡ್ಡಾಯ ಮತ್ತು ವೇತನಕ್ಕೆ ಸಂಯೋಜನೆಗೊಳಿಸಿರುವ ವ್ಯವಸ್ಥೆಯನ್ನು ಪರಾಮರ್ಶೆ ಮಾಡಲಾಗುತ್ತಿದೆ. ಅನುಷ್ಟಾನದಲ್ಲಿ ಲೋಪ ಕಂಡರೆ ನಿರ್ದಾಕ್ಷಿಣ್ಯ ಕ್ರಮ ನಿಶ್ಚಿತ. ಆರೋಗ್ಯಸೌಧ ಸೇರಿದಂತೆ ಇಲಾಖೆ ವ್ಯಾಪ್ತಿಯ ಎಲ್ಲಾ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು, ಸೇವಾ ಸಿಬ್ಬಂದಿ ಮತ್ತು ಕಚೇರಿ ಸಿಬ್ಬಂದಿಗಳು ಎಇಬಿಎಎಸ್‍ನಲ್ಲಿ ದಿನಕ್ಕೆ ಮೂರು ಬಾರಿ ತಮ್ಮ ಹಾಜರಾತಿ ದಾಖಲಿಸಲು ಸೂಚಿಸಲಾಗಿದೆ. ಕಚೇರಿ, ಆಸ್ಪತ್ರೆಗಳಲ್ಲಿ ಪ್ರತ್ಯೇಕ ಸಮಯ ನಿಗದಿ ಮಾಡಲಾಗಿದೆ. ಇಲಾಖೆಯ ಹೊಣೆ ಹೊತ್ತಿರುವ ಆಯುಕ್ತ ರಂದೀಪ್ ಅವರೇ ಬಯೋಮೆಟ್ರಿಕ್ ಹಾಜರಾತಿ ನೋಂದಯಿಸಿ ಅನುಸರಿಸುವ ಮೂಲಕ ಉಳಿದ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗೆ ಮಾದರಿಯಾಗಿದ್ದಾರೆ ಎಂದೂ ಸಚಿವ ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದರು.

TAGGED:dr. k sudhakarhealth departmentkarnatakaworkersಆರೋಗ್ಯ ಇಲಾಖೆಆಸ್ಪತ್ರೆಡಾ ಕೆ ಸುಧಾಕರ್ಬಯೋಮೆಟ್ರಿಕ್ಸರ್ಕಾರ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

milk producers association secretary commits suicide in tarikere
Chikkamagaluru

ತರೀಕೆರೆ | ಹಿಂದಿನ ದಾಖಲೆ ಕೇಳಿ ಮಾನಸಿಕ ಕಿರುಕುಳ ಆರೋಪ – ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ

Public TV
By Public TV
11 minutes ago
Rupee Value dollar down
Latest

ಡಾಲರ್‌ ವಿರುದ್ಧ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ

Public TV
By Public TV
32 minutes ago
Sri Mariyamma Temple Karkala
Bengaluru City

ಮಾಹಿತಿ ನೀಡದ್ದಕ್ಕೆ ಕಾರ್ಕಳದ ಶ್ರೀ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರರಿಗೆ 1 ಲಕ್ಷ ರೂ. ದಂಡ

Public TV
By Public TV
1 hour ago
Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
1 hour ago
india sets up high level group led by rajnath singh to monitor middle east crisis
Latest

ಇಂಧನ ಸರಬರಾಜು ಮೇಲೆ ನಿಗಾ ಇಡಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಂತರ-ಸಚಿವಾಲಯ ಸಮಿತಿ ರಚನೆ

Public TV
By Public TV
2 hours ago
Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆಯ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?