ಬೀದರ್: ತುಂಬು ಗರ್ಭಿಣಿಗೆ ಸ್ಟ್ರೆಚರ್ ನೀಡದ ಪರಿಣಾಮ ಮಹಡಿಯಿಂದ ಮಹಡಿ ಸುತ್ತಾಡಿ ಗರ್ಭಿಣಿ ನರಕಯಾತನೆ ಅನುಭವಿಸಿದ ಅಮಾನವೀಯ ಘಟನೆ ಬೀದರ್ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಒಂದು ಕಡೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಖಾಸಗಿ ವೈದ್ಯರು ಮುಷ್ಕರದಲ್ಲಿ ಭಾಗಿಯಾಗಿದ್ದಾರೆ. ಮೊತ್ತೊಂದು ಕಡೆ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಬಂದಿದ್ದ ತುಂಬು ಗರ್ಭಿಣಿಗೆ ಸಿಬ್ಬಂದಿ ಸ್ಟ್ರೆಚರ್ ನೀಡದೆ ನಿರ್ಲಕ್ಷ್ಯ ತೊರಿದ್ದಾರೆ. ಹೆರಿಗೆ ವಾಡ್9 ಸಿಗದೇ ಮಹಡಿಯಿಂದ ಮಹಡಿ ಸುತ್ತಾಡಿ ಹೊಟ್ಟೆ ನೋವು ಕಾಣಿಸಿಕೊಂಡು ಗರ್ಭಿಣಿ ಸುಸ್ತಾಗಿ ನರಕಯಾತನೆ ಅನುಭವಿಸಿದ್ದಾರೆ.
ಬೀದರ್ ತಾಲೂಕಿನ ಕಾಶೆಂಪೂರ್ ಗ್ರಾಮದ ರೇಷ್ಮಾ ಎಂಬ ತುಂಬು ಗರ್ಭಿಣಿ ಜಿಲ್ಲಾಸ್ಪತ್ರೆಗೆ ಬಂದು ನರಕಯಾತನೆ ಅನುಭವಿಸಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಸಹಕಾರ ಸಚಿವರಾದ ಬಂಡೆಪ್ಪ ಕಾಶೆಂಪೂರ್ ಸ್ವಗ್ರಾಮದ ಗರ್ಭಿಣಿ ಮಹಿಳೆಗೆ ಈ ಸ್ಥಿತಿ ಬಂದಿದೆ. ಜಿಲ್ಲೆಯಲ್ಲಿ ಇಬ್ಬರು ಸಚಿವರು ಇದ್ದರೂ ಬೀದರ್ ಜಿಲ್ಲಾಸ್ಪತ್ರೆಯಲ್ಲಿ ಪದೇ ಪದೇ ಈ ರೀತಿ ನಡೆಯಿವ ಅವಮಾನವೀಯ ಘಟನೆಗಳು ನಡೆಯುತ್ತಿದ್ದರೂ ಅಧಿಕಾರಿಗಳು ಮಾತ್ರ ಎಚ್ಚೆತ್ತಿಲ್ಲ.