ನಾಳೆ ಗಡಿ ಭಾಗದ 8 ಜಿಲ್ಲೆಗಳಿಗೆ ಸಿಗುತ್ತಾ ರಿಲೀಫ್?-ಗಣೇಶೋತ್ಸವ ಮಾರ್ಗಸೂಚಿ ಸಡಿಲಕ್ಕೆ ಸರ್ಕಾರ ಪ್ಲಾನ್

Public TV
3 Min Read
CM Bommai

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೆಮ್ಮಾರಿ ಸದ್ಯದ ಮಟ್ಟಿಗೆ ನಿಯಂತ್ರಣದಲ್ಲಿದೆ. ಆದ್ರೆ ನೆರೆಯ ಕೇರಳದಲ್ಲಿ ಸೋಂಕು ಆಸ್ಫೋಟ ಮುಂದುವರಿದಿರೋದು ರಾಜ್ಯದ ಆತಂಕಕ್ಕೂ ಕಾರಣವಾಗಿದೆ. ಜೊತೆಗೆ ಶ್ರಾವಣ ಮಾಸದ ಸಾಲು ಸಾಲು ಹಬ್ಬಗಳಿಂದಲೂ ಕೊರೊನಾ ಮತ್ತೆ ಹೆಚ್ಚಾಗಬಹುದು ಎಂಬ ಭೀತಿ ಆವರಿಸಿದೆ. ಇದರ ಜೊತೆ ಜೊತೆಗೆ ಕೋವಿಡ್ ಮೂರನೇ ಅಲೆಯ ಭಯವೂ ಕಾಡುತ್ತಿದೆ.

goravanahalli mahalakshmi temple tumkur ho tumkur temples 4knyedz

ಈ ಎಲ್ಲಾ ಆತಂಕ, ಭೀತಿ ಮಧ್ಯೆ, ರಾಜ್ಯದಲ್ಲಿ ಈಗಿರುವ ಕೊರೊನಾ ನಿಯಮಗಳನ್ನು ಹಿಂಪಡೆಯಬೇಕೇ? ಅಥವಾ ಮುಂದುವರಿಸಬೇಕೆ? ಅಥವಾ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಬೇಕೆ ಬೇಡವೇ ಎಂಬ ಗೊಂದಲದಲ್ಲಿ ರಾಜ್ಯ ಸರ್ಕಾರ ಇದೆ. ಇದು ಸೇರಿದಂತೆ ಒಟ್ಟು ಮೂರು ವಿಚಾರಗಳ ಬಗ್ಗೆ ಒಂದು ನಿರ್ಣಯಕ್ಕೆ ಬರಲು ನಾಳೆ ಸಂಜೆ ನಾಲ್ಕು ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಸದ್ಯದ ಪರಿಸ್ಥಿತಿ, ಸಂಭಾವ್ಯ ಪರಿಸ್ಥಿತಿ, ಕೋವಿಡ್ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲಾಗುತ್ತದೆ. ಮುಖ್ಯಮಂತ್ರಿಗಳು ಬಹುತೇಕ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳಿಗೆ ಮಣೆ ಹಾಕುವ ಸಂಭವ ಇದೆ.

CORONA 5

ನಾಳೆಯ ಸಭೆಯಲ್ಲಿ ಮುಖ್ಯಮಂತ್ರಿಗಳು ಪ್ರಮುಖವಾಗಿ ಮೂರು ವಿಚಾರಗಳ ಬಗ್ಗೆ ನಿರ್ಧಾರ ಕೈಗೊಳ್ಳುವ ಸಂಭವ ಇದೆ.
ನಿರ್ಧಾರ 1 – ಕೋವಿಡ್ ನಿಯಮಗಳನ್ನು ಮುಂದುವರಿಸುವುದೋ? ಬಿಡುವುದೋ?
ನಿರ್ಧಾರ 2 – ಸಾರ್ವಜನಿಕ ಗಣೇಶೋತ್ಸವ ನಿಯಮ ಸಡಿಲಿಸಬೇಕೋ? ಬೇಡವೋ?
ನಿರ್ಧಾರ 3 – ಪ್ರಾಥಮಿಕ, ಪ್ರೌಢ ಶಾಲೆ ಓಪನ್ ಮಾಡುವುದೋ? ಬಿಡುವುದೋ?

CORONA RULES 1

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸುಗಳೇನು?: ರಾಜ್ಯದ ಮಟ್ಟಿಗೆ ಮುಂದಿನ ನಾಲ್ಕು ವಾರ ನಿರ್ಣಾಯಕವಾಗಿದ್ದು, ಸೋಂಕು ತಡೆಗೆ ರಾಜ್ಯದ್ಯಂತ ನೈಟ್ ಕರ್ಫ್ಯೂ ಬಿಗಿ ಮಾಡಬೇಕು. ಇಡೀ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಬೇಕು. ಹಬ್ಬಗಳಿರುವುದರಿಂದ ದೇಗುಲ, ಮಾರ್ಕೆಟ್‍ಗಳಲ್ಲಿ ಕಠಿಣ ರೂಲ್ಸ್ ತರಬೇಕು. ಗಡಿ ಜಿಲ್ಲೆಗಳಲ್ಲಿ ಟೆಸ್ಟಿಂಗ್, ವ್ಯಾಕ್ಸಿನ್ ಹೆಚ್ಚಿಸಬೇಕು ಮತ್ತು ಕೇರಳ ಪ್ರಯಾಣಿಕರಿಗೆ ಸಾಂಸ್ಥಿಕ ಕ್ವಾರಂಟೇನ್ ಕಡ್ಡಾಯ ಮಾಡಬೇಕು. ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ.1 ರಿಂದ ದ್ವಿತೀಯ ಪಿಯುಸಿ ಆರಂಭಕ್ಕೆ ಜಿಲ್ಲಾಡಳಿತ ಗ್ರೀನ್ ಸಿಗ್ನಲ್

MDK Corona Checkpost 4

ಕೇರಳದಲ್ಲಿ ಸೋಂಕು ಆಸ್ಫೋಟಿಸಲು ಕಾರಣ ಹಬ್ಬ ಹರಿದಿನಗಳನ್ನು ಆಚರಿಸಲು ಅಲ್ಲಿನ ಸರ್ಕಾರ ಕೊರೊನಾ ನಿಯಮಗಳನ್ನು ಸಡಿಲ ಮಾಡಿದ್ದು ಎನ್ನುವ ಮಾತಿದೆ. ರಾಜ್ಯದಲ್ಲಿ ಕೇರಳ ಮಾದರಿಯ ಪರಿಸ್ಥಿತಿ ಬರಬಾರ್ದು ಅಂದ್ರೆ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗಳಿಗೆ, ಮೆರವಣಿಗೆಗೆ ಅವಕಾಶ ನೀಡಬಾರದು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ. ಸರ್ಕಾರ ಕೂಡ ಇದಕ್ಕೆ ಪೂರಕವಾಗಿ ಈಗಾಗಲೇ ಸಾರ್ವಜನಿಕವಾಗಿ ಗಣೇಶ ಉತ್ಸವಗಳಿಗೆ ನಿಷೇಧ ಹೇರಿ ಮಾರ್ಗಸೂಚಿ ಪ್ರಕಟಿಸಿದೆ. ಆದ್ರೆ, ಇದಕ್ಕೆ ಸ್ವತಃ ಬಿಜೆಪಿಯಲ್ಲಿಯೇ ಅಪಸ್ವರ ಕೇಳಿಬಂದಿದೆ. ಇದನ್ನೂ ಓದಿ: ಕಾಬೂಲ್ ವಿಮಾನ ನಿಲ್ದಾಣದ ಎಂಟ್ರಿ ಗೇಟ್ ಬಳಿ ಮತ್ತೆ ಫೈರಿಂಗ್

Mandya Corona 2

ಹಿಂದೂಪರ ಸಂಘಟನೆಗಳಂತೂ ರೂಲ್ಸ್ ಬದಲಿಸಲೇಬೇಕು. ಇಲ್ಲ ಅಂದ್ರೆ ರೂಲ್ಸ್ ಬ್ರೇಕ್ ಮಾಡ್ತೀವಿ. ಬೇಕಿದ್ರೆ ಗುಂಡಿಕ್ಕಿ ಎಂದು ಗುಡುಗ್ತಿವೆ. ಹೀಗಾಗಿ ರಾಜ್ಯ ಸರ್ಕಾರ ಸ್ವಲ್ಪ ಒತ್ತಡದಲ್ಲಿ ಸಿಲುಕಿದೆ. ಏನು ಮಾಡಬೇಕು? ಮಾರ್ಗಸೂಚಿಯನ್ನು ಪರಿಷ್ಕಕರಿಸಬೇಕೋ ಬೇಡವೋ ಎಂಬ ಗೊಂದಲದಲ್ಲಿದೆ. ಈ ಬಗ್ಗೆ ನಾಳೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಪಬ್ಲಿಕ್ ಟಿವಿಗೆ ಲಭ್ಯವಾದ ಮಾಹಿತಿ ಪ್ರಕಾರ, ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡುವ ನಿರೀಕ್ಷೆ ಇದೆ. ಹಾಗಿದ್ರೆ ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಸರ್ಕಾರ ಯಾವೆಲ್ಲಾ ಷರತ್ತುಗಳನ್ನು ಹಾಕಬಹುದು? ಇದನ್ನೂ ಓದಿ: ಕಾಬೂಲ್ ಏರ್ ಪೋರ್ಟ್ ಬಳಿ ಐಸಿಸ್-ಕೆ ರಾಕೆಟ್ ದಾಳಿ – ಇಬ್ಬರ ಸಾವು

ಗಣೇಶೋತ್ಸವಕ್ಕೆ ಪರಿಷ್ಕೃತ ಮಾರ್ಗಸೂಚಿ?
* ಹಬ್ಬವನ್ನು ಸರಳವಾಗಿ ಕನಿಷ್ಟ ಸಂಖ್ಯೆಯ ಜನರೊಂದಿಗೆ ಆಚರಣೆಗೆ ಅವಕಾಶ ಸಾಧ್ಯತೆ
* ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಎತ್ತರದ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ?
* ಒಂದು ವಾರ್ಡ್/ಗ್ರಾಮದಲ್ಲಿ 1 ಅಥವಾ 2 ಗಣೇಶಗಳನ್ನು ಸಾರ್ವಜನಿಕವಾಗಿ ಕೂರಿಸಬಹುದು?
* ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಒಮ್ಮೆ 20 ಭಕ್ತರ ಭೇಟಿಗೆ ಅವಕಾಶ?
* ಸ್ಥಳದಲ್ಲಿ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಡ್ಡಾಯ
* ಗಣೇಶೋತ್ಸವಗಳಲ್ಲಿ ಮನರಂಜನಾ ಕಾರ್ಯಕ್ರಮಗಳಿಗೆ ನೋ ಪರ್ಮಿಷನ್?
* ಗಣೇಶ ಮೂರ್ತಿ ತರುವಾಗ ಮತ್ತು ವಿಸರ್ಜಿಸುವಾಗ ಮೆರವಣಿಗೆಗಳಿಗೆ ಅವಕಾಶ ಇಲ್ಲ?
* ಸ್ಥಳೀಯ ಆಡಳಿತಗಳು ನಿರ್ಮಿಸಿದ ಹೊಂಡ, ಮೊಬೈಲ್ ಟ್ಯಾಂಕ್‍ಗಳಲ್ಲಿ ಮೂರ್ತಿ ವಿಸರ್ಜನೆ!

Share This Article
Leave a Comment

Leave a Reply

Your email address will not be published. Required fields are marked *