Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಾಳೆ ಗಡಿ ಭಾಗದ 8 ಜಿಲ್ಲೆಗಳಿಗೆ ಸಿಗುತ್ತಾ ರಿಲೀಫ್?-ಗಣೇಶೋತ್ಸವ ಮಾರ್ಗಸೂಚಿ ಸಡಿಲಕ್ಕೆ ಸರ್ಕಾರ ಪ್ಲಾನ್

Public TV
Last updated: August 29, 2021 9:57 pm
Public TV
Share
3 Min Read
CM Bommai
SHARE

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೆಮ್ಮಾರಿ ಸದ್ಯದ ಮಟ್ಟಿಗೆ ನಿಯಂತ್ರಣದಲ್ಲಿದೆ. ಆದ್ರೆ ನೆರೆಯ ಕೇರಳದಲ್ಲಿ ಸೋಂಕು ಆಸ್ಫೋಟ ಮುಂದುವರಿದಿರೋದು ರಾಜ್ಯದ ಆತಂಕಕ್ಕೂ ಕಾರಣವಾಗಿದೆ. ಜೊತೆಗೆ ಶ್ರಾವಣ ಮಾಸದ ಸಾಲು ಸಾಲು ಹಬ್ಬಗಳಿಂದಲೂ ಕೊರೊನಾ ಮತ್ತೆ ಹೆಚ್ಚಾಗಬಹುದು ಎಂಬ ಭೀತಿ ಆವರಿಸಿದೆ. ಇದರ ಜೊತೆ ಜೊತೆಗೆ ಕೋವಿಡ್ ಮೂರನೇ ಅಲೆಯ ಭಯವೂ ಕಾಡುತ್ತಿದೆ.

goravanahalli mahalakshmi temple tumkur ho tumkur temples 4knyedz

ಈ ಎಲ್ಲಾ ಆತಂಕ, ಭೀತಿ ಮಧ್ಯೆ, ರಾಜ್ಯದಲ್ಲಿ ಈಗಿರುವ ಕೊರೊನಾ ನಿಯಮಗಳನ್ನು ಹಿಂಪಡೆಯಬೇಕೇ? ಅಥವಾ ಮುಂದುವರಿಸಬೇಕೆ? ಅಥವಾ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಬೇಕೆ ಬೇಡವೇ ಎಂಬ ಗೊಂದಲದಲ್ಲಿ ರಾಜ್ಯ ಸರ್ಕಾರ ಇದೆ. ಇದು ಸೇರಿದಂತೆ ಒಟ್ಟು ಮೂರು ವಿಚಾರಗಳ ಬಗ್ಗೆ ಒಂದು ನಿರ್ಣಯಕ್ಕೆ ಬರಲು ನಾಳೆ ಸಂಜೆ ನಾಲ್ಕು ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಸದ್ಯದ ಪರಿಸ್ಥಿತಿ, ಸಂಭಾವ್ಯ ಪರಿಸ್ಥಿತಿ, ಕೋವಿಡ್ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲಾಗುತ್ತದೆ. ಮುಖ್ಯಮಂತ್ರಿಗಳು ಬಹುತೇಕ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳಿಗೆ ಮಣೆ ಹಾಕುವ ಸಂಭವ ಇದೆ.

CORONA 5

ನಾಳೆಯ ಸಭೆಯಲ್ಲಿ ಮುಖ್ಯಮಂತ್ರಿಗಳು ಪ್ರಮುಖವಾಗಿ ಮೂರು ವಿಚಾರಗಳ ಬಗ್ಗೆ ನಿರ್ಧಾರ ಕೈಗೊಳ್ಳುವ ಸಂಭವ ಇದೆ.
ನಿರ್ಧಾರ 1 – ಕೋವಿಡ್ ನಿಯಮಗಳನ್ನು ಮುಂದುವರಿಸುವುದೋ? ಬಿಡುವುದೋ?
ನಿರ್ಧಾರ 2 – ಸಾರ್ವಜನಿಕ ಗಣೇಶೋತ್ಸವ ನಿಯಮ ಸಡಿಲಿಸಬೇಕೋ? ಬೇಡವೋ?
ನಿರ್ಧಾರ 3 – ಪ್ರಾಥಮಿಕ, ಪ್ರೌಢ ಶಾಲೆ ಓಪನ್ ಮಾಡುವುದೋ? ಬಿಡುವುದೋ?

CORONA RULES 1

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸುಗಳೇನು?: ರಾಜ್ಯದ ಮಟ್ಟಿಗೆ ಮುಂದಿನ ನಾಲ್ಕು ವಾರ ನಿರ್ಣಾಯಕವಾಗಿದ್ದು, ಸೋಂಕು ತಡೆಗೆ ರಾಜ್ಯದ್ಯಂತ ನೈಟ್ ಕರ್ಫ್ಯೂ ಬಿಗಿ ಮಾಡಬೇಕು. ಇಡೀ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಬೇಕು. ಹಬ್ಬಗಳಿರುವುದರಿಂದ ದೇಗುಲ, ಮಾರ್ಕೆಟ್‍ಗಳಲ್ಲಿ ಕಠಿಣ ರೂಲ್ಸ್ ತರಬೇಕು. ಗಡಿ ಜಿಲ್ಲೆಗಳಲ್ಲಿ ಟೆಸ್ಟಿಂಗ್, ವ್ಯಾಕ್ಸಿನ್ ಹೆಚ್ಚಿಸಬೇಕು ಮತ್ತು ಕೇರಳ ಪ್ರಯಾಣಿಕರಿಗೆ ಸಾಂಸ್ಥಿಕ ಕ್ವಾರಂಟೇನ್ ಕಡ್ಡಾಯ ಮಾಡಬೇಕು. ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ.1 ರಿಂದ ದ್ವಿತೀಯ ಪಿಯುಸಿ ಆರಂಭಕ್ಕೆ ಜಿಲ್ಲಾಡಳಿತ ಗ್ರೀನ್ ಸಿಗ್ನಲ್

MDK Corona Checkpost 4

ಕೇರಳದಲ್ಲಿ ಸೋಂಕು ಆಸ್ಫೋಟಿಸಲು ಕಾರಣ ಹಬ್ಬ ಹರಿದಿನಗಳನ್ನು ಆಚರಿಸಲು ಅಲ್ಲಿನ ಸರ್ಕಾರ ಕೊರೊನಾ ನಿಯಮಗಳನ್ನು ಸಡಿಲ ಮಾಡಿದ್ದು ಎನ್ನುವ ಮಾತಿದೆ. ರಾಜ್ಯದಲ್ಲಿ ಕೇರಳ ಮಾದರಿಯ ಪರಿಸ್ಥಿತಿ ಬರಬಾರ್ದು ಅಂದ್ರೆ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗಳಿಗೆ, ಮೆರವಣಿಗೆಗೆ ಅವಕಾಶ ನೀಡಬಾರದು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ. ಸರ್ಕಾರ ಕೂಡ ಇದಕ್ಕೆ ಪೂರಕವಾಗಿ ಈಗಾಗಲೇ ಸಾರ್ವಜನಿಕವಾಗಿ ಗಣೇಶ ಉತ್ಸವಗಳಿಗೆ ನಿಷೇಧ ಹೇರಿ ಮಾರ್ಗಸೂಚಿ ಪ್ರಕಟಿಸಿದೆ. ಆದ್ರೆ, ಇದಕ್ಕೆ ಸ್ವತಃ ಬಿಜೆಪಿಯಲ್ಲಿಯೇ ಅಪಸ್ವರ ಕೇಳಿಬಂದಿದೆ. ಇದನ್ನೂ ಓದಿ: ಕಾಬೂಲ್ ವಿಮಾನ ನಿಲ್ದಾಣದ ಎಂಟ್ರಿ ಗೇಟ್ ಬಳಿ ಮತ್ತೆ ಫೈರಿಂಗ್

Mandya Corona 2

ಹಿಂದೂಪರ ಸಂಘಟನೆಗಳಂತೂ ರೂಲ್ಸ್ ಬದಲಿಸಲೇಬೇಕು. ಇಲ್ಲ ಅಂದ್ರೆ ರೂಲ್ಸ್ ಬ್ರೇಕ್ ಮಾಡ್ತೀವಿ. ಬೇಕಿದ್ರೆ ಗುಂಡಿಕ್ಕಿ ಎಂದು ಗುಡುಗ್ತಿವೆ. ಹೀಗಾಗಿ ರಾಜ್ಯ ಸರ್ಕಾರ ಸ್ವಲ್ಪ ಒತ್ತಡದಲ್ಲಿ ಸಿಲುಕಿದೆ. ಏನು ಮಾಡಬೇಕು? ಮಾರ್ಗಸೂಚಿಯನ್ನು ಪರಿಷ್ಕಕರಿಸಬೇಕೋ ಬೇಡವೋ ಎಂಬ ಗೊಂದಲದಲ್ಲಿದೆ. ಈ ಬಗ್ಗೆ ನಾಳೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಪಬ್ಲಿಕ್ ಟಿವಿಗೆ ಲಭ್ಯವಾದ ಮಾಹಿತಿ ಪ್ರಕಾರ, ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡುವ ನಿರೀಕ್ಷೆ ಇದೆ. ಹಾಗಿದ್ರೆ ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಸರ್ಕಾರ ಯಾವೆಲ್ಲಾ ಷರತ್ತುಗಳನ್ನು ಹಾಕಬಹುದು? ಇದನ್ನೂ ಓದಿ: ಕಾಬೂಲ್ ಏರ್ ಪೋರ್ಟ್ ಬಳಿ ಐಸಿಸ್-ಕೆ ರಾಕೆಟ್ ದಾಳಿ – ಇಬ್ಬರ ಸಾವು

ಗಣೇಶೋತ್ಸವಕ್ಕೆ ಪರಿಷ್ಕೃತ ಮಾರ್ಗಸೂಚಿ?
* ಹಬ್ಬವನ್ನು ಸರಳವಾಗಿ ಕನಿಷ್ಟ ಸಂಖ್ಯೆಯ ಜನರೊಂದಿಗೆ ಆಚರಣೆಗೆ ಅವಕಾಶ ಸಾಧ್ಯತೆ
* ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಎತ್ತರದ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ?
* ಒಂದು ವಾರ್ಡ್/ಗ್ರಾಮದಲ್ಲಿ 1 ಅಥವಾ 2 ಗಣೇಶಗಳನ್ನು ಸಾರ್ವಜನಿಕವಾಗಿ ಕೂರಿಸಬಹುದು?
* ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಒಮ್ಮೆ 20 ಭಕ್ತರ ಭೇಟಿಗೆ ಅವಕಾಶ?
* ಸ್ಥಳದಲ್ಲಿ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಡ್ಡಾಯ
* ಗಣೇಶೋತ್ಸವಗಳಲ್ಲಿ ಮನರಂಜನಾ ಕಾರ್ಯಕ್ರಮಗಳಿಗೆ ನೋ ಪರ್ಮಿಷನ್?
* ಗಣೇಶ ಮೂರ್ತಿ ತರುವಾಗ ಮತ್ತು ವಿಸರ್ಜಿಸುವಾಗ ಮೆರವಣಿಗೆಗಳಿಗೆ ಅವಕಾಶ ಇಲ್ಲ?
* ಸ್ಥಳೀಯ ಆಡಳಿತಗಳು ನಿರ್ಮಿಸಿದ ಹೊಂಡ, ಮೊಬೈಲ್ ಟ್ಯಾಂಕ್‍ಗಳಲ್ಲಿ ಮೂರ್ತಿ ವಿಸರ್ಜನೆ!

TAGGED:Basavaraj BommaibjpCM BommaiCorona VirusCovid 19GaneshotsavakeralaPublic TVಕೇರಳಕೊರೊನಾ ವೈರಸ್ಕೋವಿಡ್ 19ಗಣೇಶೋತ್ಸವಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಬಿಜೆಪಿಸಿಎಂ ಬೊಮ್ಮಾಯಿ
Share This Article
Facebook Whatsapp Whatsapp Telegram

You Might Also Like

Kalyana Karnatakas first ever breast milk bank is being set up in Ballari 3
Bellary

ಕಲ್ಯಾಣ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಳ್ಳಾರಿಯಲ್ಲಿ ಸ್ಥಾಪನೆಯಾಗುತ್ತಿದೆ ತಾಯಿ ಎದೆಹಾಲಿನ ಬ್ಯಾಂಕ್

Public TV
By Public TV
6 minutes ago
RAT
Crime

ಪರಿಶೀಲನೆ ವೇಳೆ 802 ಬಾಟಲಿ ಮದ್ಯ ನಾಪತ್ತೆ – ಅಧಿಕಾರಿಗಳ ಬಳಿ ಇಲಿಗಳು ಕುಡಿದಿವೆ ಎಂದ ವ್ಯಾಪಾರಿಗಳು!

Public TV
By Public TV
19 minutes ago
Serial Accident Between 5 car and one bike on bengaluru tumakuru National Highway Nelamangala
Bengaluru Rural

ಒಂದು ಬೈಕ್ ಐದು ಕಾರುಗಳ ನಡುವೆ ಭೀಕರ ಸರಣಿ ಅಪಘಾತ – ಪಾರಾದ ಸವಾರ

Public TV
By Public TV
38 minutes ago
Arvind Limbavali
Bengaluru City

ಗುಜರಾತ್ ರೀತಿ ಕಾಂಗ್ರೆಸ್ ಸರ್ಕಾರ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಎದೆಗಾರಿಕೆ ತೋರಿಸಲಿ: ಅರವಿಂದ ಲಿಂಬಾವಳಿ

Public TV
By Public TV
1 hour ago
Siddaramaiah M.B Patil
Bengaluru City

ದೇವನಹಳ್ಳಿ ಭೂಸ್ವಾಧೀನ ಬಿಕ್ಕಟ್ಟು: ಮಂಗಳವಾರ ಸಿಎಂ ಸಿದ್ದರಾಮಯ್ಯ ಅಂತಿಮ ತೀರ್ಮಾನ

Public TV
By Public TV
1 hour ago
How to Upgrade to BSNL 4G 5G SIM Card Online and Offline
Latest

ಬಿಎಸ್‌ಎನ್‌ಎಲ್‌ 4ಜಿಯಿಂದ 5ಜಿ ಸಿಮ್‌ ಕಾರ್ಡ್‌ಗೆ ಆನ್‌ಲೈನಿನಲ್ಲಿ ಅಪ್‌ಗ್ರೇಡ್‌ ಮಾಡೋದು ಹೇಗೆ?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?