ಪೆಟ್ರೋಲ್,ಡೀಸೆಲ್ ದರ ಇಳಿಕೆ ದೀಪಾವಳಿ ಕೊಡುಗೆ ಅಲ್ಲ, ಉಪಚುನಾವಣೆಗಳ ಕೊಡುಗೆ: ಸಿದ್ದರಾಮಯ್ಯ

Public TV
1 Min Read
SIDDRAMAIHA

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿರುವುದು ಪ್ರಧಾನಿ ನರೇಂದ್ರ ಮೋದಿ ನೀಡಿದ ದೀಪಾವಳಿ ಕೊಡುಗೆ ಅಲ್ಲ, ಇದು ದೇಶದಾದ್ಯಂತ ನಡೆದ ಉಪಚುನಾವಣೆಗಳ ಕೊಡುಗೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

Petrol pump e1632889380797

ದೇಶ ಹಾಗೂ ರಾಜ್ಯದಲ್ಲಿ ತೈಲ ದರ ಕಡಿಮೆ ಆಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯುಪಿಎ ಕಾಲದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‍ಗೆ 125 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 65 ರೂಪಾಯಿಗಳಾಗಿತ್ತು. ಬಿಜೆಪಿ ಸರ್ಕಾರದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‍ಗೆ 82 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 100 ರೂಪಾಯಿಗೆ ಇಳಿಸಿದ್ದು ಮಹಾನ್ ಸಾಧನೆ. ಚುನಾವಣೆಯಲ್ಲಿ ಮತದಾರರು ಬಿಜೆಪಿ ಸೋಲಿಸಿದರೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಯುತ್ತದೆ ಎನ್ನುವ ಪಾಠವನ್ನು ಹೇಳಿಕೊಟ್ಟ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಇದು ಪ್ರಧಾನಿಗಳು ನೀಡಿದ ದೀಪಾವಳಿ ಕೊಡುಗೆ ಅಲ್ಲ, ಇದು ದೇಶದಾದ್ಯಂತ ನಡೆದ ಉಪಚುನಾವಣೆಗಳ ಕೊಡುಗೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಇಂಧನ ಮಾರಾಟ ತೆರಿಗೆ ಇಳಿಸಿದ ದೇಶದ ಮೊದಲ ರಾಜ್ಯ ಕರ್ನಾಟಕ

PM MODI

ಅಡುಗೆ ಅನಿಲ ಬೆಲೆ ಸಾವಿರ ರೂಪಾಯಿ ತಲುಪಿದೆ, ಆಹಾರ ಧಾನ್ಯ, ಖಾದ್ಯತೈಲದ ಬೆಲೆ ಏರುತ್ತಲೇ ಇದೆ. ಈ ಬೆಲೆಗಳು ಕೂಡಾ ಇಳಿಯಬೇಕಾದರೆ ಬಿಜೆಪಿಯನ್ನು ಇನ್ನಷ್ಟು ಚುನಾವಣೆಗಳಲ್ಲಿ ಮತದಾರರು ಸೋಲಿಸುತ್ತಲೇ ಇರಬೇಕು. ಸದ್ಯದಲ್ಲಿಯೇ ನಮ್ಮ ರಾಜ್ಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್‍ಗಳಿಗೆ ಹಾಗೂ ಬೆಂಗಳೂರು ಮಹಾನಗರಪಾಲಿಕೆಗೆ ಚುನಾವಣೆಗಳು ನಡೆಯಲಿವೆ. ನರೇಂದ್ರ ಮೋದಿ ಅವರು ಹೇಳಿಕೊಟ್ಟಿರುವ ಪಾಠವನ್ನು ಮತದಾರರು ನೆನಪಲ್ಲಿಟ್ಟುಕೊಂಡು ಮತದಾನ ನಡೆಸಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು. ದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್ 100.63, ಡೀಸೆಲ್ 85.03ರೂ. – ಸರ್ಕಾರದಿಂದ ಅಧಿಕೃತ ಅಧಿಸೂಚನೆ

Share This Article
Leave a Comment

Leave a Reply

Your email address will not be published. Required fields are marked *