ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಜನಸಾಮಾನ್ಯರಿಗೊಂದು ನ್ಯಾಯ. ಉಳ್ಳವರಿಗೊಂದು ನ್ಯಾಯ ಎನ್ನುವುದು ಮತ್ತೆ ಸಾಬೀತಾಗಿದೆ. ಕೋಟಿ ಕೋಟಿ ವ್ಯವಹಾರ ಮಾಡುವ ರಾಜ್ಯದ ಸರ್ಕಾರಿ ಯೋಜನೆಗಳ ಗುತ್ತಿಗೆದಾರರಿಗೆ ಜಿಎಸ್ಟಿ ಹೇರದಂತೆ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
ಈ ಮೊದಲು ಶೇ.10ರಷ್ಟು ಮಾತ್ರ ತೆರಿಗೆ ಇತ್ತು. ಜಿಎಸ್ಟಿ ಹೇರಿದ್ರೆ ಶೇ.18ರಷ್ಟು ಕಟ್ಟಬೇಕು, ಹಾಗಾಗಿ ನಮಗೆ ನಷ್ಟವಾಗುತ್ತದೆ. ಗುತ್ತಿಗೆ ಕೆಲಸ ಮಾಡುವುದಕ್ಕೆ ಆಗುವುದಿಲ್ಲ ಎಂದು ಗುತ್ತಿಗೆದಾರರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು.
- Advertisement 2
ಪಿಡಬ್ಲೂಡಿ, ಬಿಬಿಎಂಪಿ, ಗುತ್ತಿಗೆದಾರ ಮನವಿಗೆ ತಲೆಬಾಗಿದ ಸಿಎಂ ವಾಣಿಜ್ಯ ತೆರಿಗೆ ಇಲಾಖೆಗೆ ಜಿಎಸ್ಟಿ ತೆಗೆಯುವಂತೆ ಆದೇಶಿಸಿದ್ದಾರೆ. ಸಿಎಂ ಆಣತಿಯಂತೆ ಮುಂದಿನ ಆದೇಶ ಬರುವ ತನಕ ಗುತ್ತಿಗೆದಾರರಿಗೆ ಜಿಎಸ್ಟಿ ಅನ್ವಯಿಸುವುದಿಲ್ಲ ಎಂದು ರಾಜ್ಯ ಸರ್ಕಾರದ ವಾಣಿಜ್ಯ ಇಲಾಖೆ ಕೂಡ ಆದೇಶ ಹೊರಡಿಸಿದೆ. ಸರ್ಕಾರದ ಈ ನಡೆಗೆ ಸಾರ್ವಜನಿಕ ವಲಯದಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ.
- Advertisement 3
- Advertisement 4