Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಡವರಿಗಾಗಿ ಈ ವರ್ಷದಲ್ಲಿ 50 ಸಾವಿರ ಮನೆಗಳ ನಿರ್ಮಾಣ – ಸೋಮಣ್ಣ ಭರವಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಬಡವರಿಗಾಗಿ ಈ ವರ್ಷದಲ್ಲಿ 50 ಸಾವಿರ ಮನೆಗಳ ನಿರ್ಮಾಣ – ಸೋಮಣ್ಣ ಭರವಸೆ

Bengaluru Rural

ಬಡವರಿಗಾಗಿ ಈ ವರ್ಷದಲ್ಲಿ 50 ಸಾವಿರ ಮನೆಗಳ ನಿರ್ಮಾಣ – ಸೋಮಣ್ಣ ಭರವಸೆ

Public TV
Last updated: February 24, 2020 7:37 pm
Public TV
Share
3 Min Read
nml somanna 2
SHARE

ಬೆಂಗಳೂರು: ಬಡವರಿಗೆ ಸೂರು ಕಲ್ಪಿಸುವ ಸಲುವಾಗಿ ವರ್ಷಾಂತ್ಯದ ವೇಳೆಗೆ 50 ಸಾವಿರ ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ನೆಲಮಂಗಲ ಸಮೀಪದ ದಾಸನಪುರ ಹೋಬಳಿಯ ಅಗ್ರಹಾರಪಾಳ್ಯದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸೋಮಣ್ಣ ಅವರು ಈ ಬಗ್ಗೆ ಭರವಸೆ ನೀಡಿದರು. ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ವತಿಯಿಂದ 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯಡಿ ಜಿ+3 ಮಾದರಿಯಲ್ಲಿ ನಿರ್ಮಿಸುತ್ತಿರುವ ವಸತಿ ಸಮುಚ್ಚಯ ಕಾಮಗಾರಿಗೆ ಸೋಮಣ್ಣ ಅವರು ಶಂಕುಸ್ಥಾಪನೆ ನೆರವೇರಿಸಿದರು.

nml somanna 1

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರದಿಂದ 600 ಕೋಟಿ ರೂ. ಅನುದಾನ ನೀಡಿದ್ದರೂ ಕಾಂಗ್ರೆಸ್ ಹಾಗೂ ಸಮ್ಮಿಶ್ರ ಸರ್ಕಾರಗಳ ಅವಧಿಯಲ್ಲಿ ಚಾಲನೆ ಸಿಗದೆ, ಈ ಯೋಜನೆಯು ಕಳೆದ ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ವಸತಿ ಯೋಜನೆಯ ಭಾಗವಾಗಿ ಇಂದು 843 ಬಹುಮಹಡಿ ಮನೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಒಂದು ವರ್ಷದ ಅವಧಿಯಲ್ಲಿ ಕನಿಷ್ಟ 50 ಸಾವಿರ ಮನೆ ನಿರ್ಮಾಣ ಮಾಡಿ ಬಡವರಿಗೆ ಹಸ್ತಾಂತರ ಮಾಡಲಾಗುವುದು. ಯಲಹಂಕ ಕ್ಷೇತ್ರದಲ್ಲಿ 3 ಸಾವಿರ ಮನೆಗಳ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು.

nml somanna

ಸರ್ಕಾರದಿಂದ ಕಟ್ಟುತ್ತಿರುವ ಆಸ್ಪತ್ರೆ, ಆಟದ ಮೈದಾನ, ಕೊಳಚೆ ನೀರು ಸಂಸ್ಕರಣಾ ಘಟಕ ಸೇರಿ ಅಗತ್ಯ ಮೂಲಸೌಲಭ್ಯಗಳನ್ನು ಸಮುಚ್ಚಯಗಳಲ್ಲಿ ಒದಗಿಸುವ ಮೂಲಕ ಪ್ರಧಾನಿ ಮೋದಿ ಹಾಗೂ ಸಿಎಂ ಯಡಿಯೂರಪ್ಪ ಅವರ ಮಹತ್ವಾಕಾಂಕ್ಷಿ ವಸತಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ವಸತಿ ಯೋಜನೆಗಳಲ್ಲಿ ಲಭ್ಯವಿರುವ ಸುಮಾರು 4 ಲಕ್ಷ ರೂ. ಅನುದಾನ ಹಾಗೂ ಬ್ಯಾಂಕ್‍ಗಳಲ್ಲಿ 2 ಲಕ್ಷ ರೂ. ಸಾಲ ಸೌಲಭ್ಯ ಒದಗಿಸುವ ಮೂಲಕ ಸುಮಾರು 6 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿ ಬಡವರ ಕನಸನ್ನು ನನಸು ಮಾಡಲು ಬದ್ಧವಿರುವುದಾಗಿ ತಿಳಿಸಿದರು.

nml somanna

ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್ ಮಾತನಾಡಿ, ಯಲಹಂಕವನ್ನು ಗುಡಿಸಲು ರಹಿತ ಮಾದರಿ ಕ್ಷೇತ್ರವನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಹಿಂದಿನ ಸರ್ಕಾರಗಳ ಆಡಳಿತದ ಅವಧಿಯಲ್ಲಿ ಕಾರಣಾಂತರಗಳಿಂದ ಮನೆ ಬಡವರಿಗೆ ನೀಡಲು ಸಾಧ್ಯವಾಗಿರಲಿಲ್ಲ. ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ಮನೆ ನಿರ್ಮಾಣ ಮಾಡಲಾಗುತ್ತಿದೆ. ಕ್ಷೇತ್ರದ, ಕುಕ್ಕನಹಳ್ಳಿ, ತೋಟಗೆರೆ, ಪಿಳ್ಳಹಳ್ಳಿ, ಲಕ್ಷ್ಮಿಪುರ, ಬಿಳಿಜಾಜಿ, ದಾಸನಪುರ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಮನೆ ನಿರ್ಮಾಣ ಮಾಡಲಾಗುವುದು. ಕ್ಷೇತ್ರದಲ್ಲಿ 10 ಸಾವಿರ ಮನೆ ನಿರ್ಮಾಣ ಮಾಡುವ ಗುರಿ ಇದೆ. ಸರ್ಕಾರದಿಂದ ಸಿಗುವ ಎಲ್ಲಾ ಯೋಜನೆಗಳನ್ನು ಕ್ಷೇತ್ರಕ್ಕೆ ತರುವುದಾಗಿ ಭರವಸೆ ನೀಡಿದರು.

BSY PM Modi

ಜಿಲ್ಲಾಧಿಕಾರಿ ಶಿವಮೂರ್ತಿ, ರಾಜೀವ್ ಗಾಂಧಿ ವಸತಿ ನಿಗಮ ನಿ. ಎಂಡಿ ಡಾ.ರಾಮ ಪ್ರಸಾದ್ ಮನೋಹರ್, ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಅಧ್ಯಕ್ಷ ಜಿ.ಮರಿಸ್ವಾಮಿ, ಜಿ.ಪಂ ಸದಸ್ಯ ರವಿಕುಮಾರ್, ಬೆಂಗಳೂರು ಉತ್ತರ ತಾಲೂಕು ತಹಶೀಲ್ದಾರ್ ಶಿವರಾಜ್, ಗೋಪಾಲಪುರ ಗ್ರಾ.ಪಂ ಅಧ್ಯಕ್ಷ ಟಿ.ಎಂ ಬಸವೇಗೌಡ ಸೇರಿ ಯಲಹಂಕ ಕ್ಷೇತ್ರ ಬಿಜೆಪಿ ಅಧ್ಯಕ್ಷ ಹನುಮಯ್ಯ ಇನ್ನಿತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮನೆಗಳು ಹೇಗಿರಲಿವೆ?
ಸುಮಾರು 5 ಎಕ್ರೆ ಜಮೀನಿನಲ್ಲಿ ಜಿ+3 ಮಾದರಿಯಲ್ಲಿ ನಿರ್ಮಿಸುತ್ತಿರುವ ವಸತಿ ಸಮುಚ್ಚಯದಲ್ಲಿ 836 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಪ್ರತಿ ಮನೆಯನ್ನು 30 ಚ.ಮೀ ವಿಸ್ತೀರ್ಣದಲ್ಲಿ ಒಂದು ಹಾಲ್, ಬೆಡ್ ರೂಂ, ಅಡುಗೆಮನೆ ಸೇರಿದಂತೆ ಪ್ರತ್ಯೇಕ ಸ್ಥಾನದ ಮನೆ, ಶೌಚಾಲಯ, ಕಾಂಕ್ರೀಟ್ ಗೋಡೆಗಳು, ನೆಲಹಾಸಿಗೆಗೆ ವೆಟ್ರಿಫೈಡ್ ಟೈಲ್ಸ್, ಗ್ರಾನೈಟ್ ಬಳಸಿ ಸುಸಜ್ಜಿತವಾಗಿ ನಿರ್ಮಿಸಲಾಗುತ್ತಿದೆ. ಜೊತೆಗೆ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಕುಡಿಯುವ ನೀರು, ಪಂಪ್ ರೂಂ, ಮಳೆ ನೀರು ಕೊಯ್ಲು ಮುಂತಾದ ವ್ಯವಸ್ಥೆಯನ್ನು ಕೂಡ ಒದಗಿಸಲಾಗುತ್ತಿದೆ.

TAGGED:bengalurubjpgovernmenthomesHousing SchemePoorPublic TVV.Somannaಪಬ್ಲಿಕ್ ಟಿವಿಬಡವರುಬಿಜೆಪಿಬೆಂಗಳೂರುಮನೆಗಳುವಸತಿ ಯೋಜನೆವಿ.ಸೋಮಣ್ಣಸರ್ಕಾರ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Annabhagya Rice
Districts

ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 200 ಟನ್‌ ಅನ್ನಭಾಗ್ಯ ಅಕ್ಕಿ ಜಪ್ತಿ

Public TV
By Public TV
3 minutes ago
sirsis Visually impaired sslc student
Latest

ಶಿರಸಿಯ ಅಂಧ ವಿದ್ಯಾರ್ಥಿನಿಗೆ ಸಿಕ್ತು ನ್ಯಾಯ – 84% ಅಂಕ ತೆಗೆದ್ರೂ ಫೇಲ್ ಮಾಡಿದ್ದ ಬೋರ್ಡ್

Public TV
By Public TV
16 minutes ago
Raghav Chadha
Latest

ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸಂಸದರು

Public TV
By Public TV
52 minutes ago
Gadag Water supply once every 15 20 days Severe crisis in 76 villages
Districts

ಗದಗ|15-20 ದಿನಕ್ಕೊಮ್ಮೆ ನೀರು ಪೂರೈಕೆ- 76 ಹಳ್ಳಿಗಳಲ್ಲಿ ತೀವ್ರ ಬಿಕ್ಕಟ್ಟು

Public TV
By Public TV
1 hour ago
Kerala Aalin Sherin
Latest

ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ ಪಡೆದ ಕಂದನ ಮುದ್ದಾಡಿದ ಅಲಿನ್ ಪೋಷಕರು

Public TV
By Public TV
1 hour ago
14 year boy hangs himself for not giving mobile phone to play video games in hubballi
Crime

ಪ್ರೀ ಫೈರ್ ಗೇಮ್‌ ಆಡಲು ಮೊಬೈಲ್‌ ಕೊಡದಿದ್ದಕ್ಕೆ ನೇಣಿಗೆ ಶರಣಾದ ಬಾಲಕ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?