Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗ್ಳೂರಿನಲ್ಲಿ ಅಪಾರ್ಟ್‌ಮೆಂಟ್‌ ನಿರ್ಮಾಣಕ್ಕೆ ತಡೆ ಹಾಕಲು ಸರ್ಕಾರ ಚಿಂತನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗ್ಳೂರಿನಲ್ಲಿ ಅಪಾರ್ಟ್‌ಮೆಂಟ್‌ ನಿರ್ಮಾಣಕ್ಕೆ ತಡೆ ಹಾಕಲು ಸರ್ಕಾರ ಚಿಂತನೆ

Bengaluru City

ಬೆಂಗ್ಳೂರಿನಲ್ಲಿ ಅಪಾರ್ಟ್‌ಮೆಂಟ್‌ ನಿರ್ಮಾಣಕ್ಕೆ ತಡೆ ಹಾಕಲು ಸರ್ಕಾರ ಚಿಂತನೆ

Public TV
Last updated: June 27, 2019 1:37 pm
Public TV
Share
3 Min Read
dcm 1
SHARE

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 5 ವರ್ಷ ನಗರದಲ್ಲಿ ಅಪಾರ್ಟ್‌ಮೆಂಟ್‌ ನಿರ್ಮಾಣಕ್ಕೆ ತಡೆ ಹೇರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಡಿಸಿಎಂ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತಮನಾಡಿದ ಅವರು, ಅಪಾರ್ಟ್‌ಮೆಂಟ್‌ ಸಂಸ್ಕೃತಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿರುವ ಬಗ್ಗೆ ತಿಳಿಸಿದರು. ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್‌ ಗಳ ನಿರ್ಮಾಣಕ್ಕೆ ತಡೆ ಹಾಕಲು ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

apartments

ಅಪಾರ್ಟ್‌ಮೆಂಟ್‌ ಗಳಿಂದ ಸಮಸ್ಯೆ ಹೆಚ್ಚಾಗುತ್ತಿದೆ. ಕುಡಿಯುವ ನೀರಿನ ಪೂರೈಕೆಯಲ್ಲಿ ಕೊರತೆಯಾಗುತ್ತಿದ್ದು, ಅಪಾರ್ಟ್‍ಮೆಂಟ್‍ ಗಳಿಗೆ ಕುಡಿಯುವ ನೀರು ಪೂರೈಸಲು ಕಷ್ಟವಾಗುತ್ತಿದೆ. ನಗರದಲ್ಲಿ ಇರುವ ನೀರಿನ ಕೊರತೆಯಿಂದ ಅಪಾರ್ಟ್‌ಮೆಂಟ್‌ ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಹೇಳಿದರು.

dcm 2

ಇಂದು ಬೆಂಗಳೂರಿನಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುವ ಮುನ್ನ ಸಾರಿಗೆ ನೌಕರರ ಮುಖಂಡರು ಸರ್ಕಾರಕ್ಕೆ ಬೇಡಿಕೆಗಳ ಈಡೇರಿಕೆಗೆ ಡಿಸಿಎಂಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಸದಾಶಿವನಗರದ ಡಿಸಿಎಂ ಗೃಹಕಚೇರಿಗೆ ಆಗಮಿಸಿದ ಸಿಐಟಿಯು ಉಪಾಧ್ಯಕ್ಷ ಅನಂತ ಸುಬ್ಬರಾವ್, ಪ್ರಧಾನ ಕಾರ್ಯದರ್ಶಿ ವಿಜಯ ಭಾಸ್ಕರ್ ನೇತೃತ್ವದ ನಿಯೋಗದಿಂದ ಡಿಸಿಎಂಗೆ ಮನವಿ ಸಲ್ಲಿಸಲಾಗಿದೆ.

dcm 3

ಸಾರಿಗೆ ನೌಕರರ ಮನವಿ ಸ್ವೀಕಾರ ಬಳಿಕ ಡಿಸಿಎಂ ಅವರು ಮಾತನಾಡಿ,  ಕೆಎಸ್ಆರ್‌ಟಿಸಿ  ವರ್ಕರ್ಸ್ ಫೆಡರೇಷನ್ ಅವರು ಅನೇಕ ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ಅವರ ಮನವಿಯನ್ನು ಸಿಎಂ ಮತ್ತು ಸಾರಿಗೆ ಸಚಿವರ ಗಮನಕ್ಕೆ ತರುತ್ತೇನೆ. ಸಾರಿಗೆ ಸಚಿವರ ವಿರುದ್ಧವೂ ಮುಖಂಡರು ಆರೋಪ ಮಾಡಿದ್ದಾರೆ. ಅದನ್ನೂ ಕೂಡ ಸಿಎಂ ಗಮನಕ್ಕೆ ತರುತ್ತೇನೆ. ಕೆಎಸ್‍ಆರ್‍ಟಿಸಿಗೆ ನಷ್ಟ ಆಗದಂತೆ ಸಾರಿಗೆ ಅನುಕೂಲ ಮಾಡುತ್ತೇವೆ ಎಂದು ಭರವಸೆ ನೀಡಿದರು.

steel Bridge

ಸ್ಟೀಲ್ ಫ್ಲೈಓವರ್ ಮಾಡಲ್ಲ ಎಂದು ಸರ್ಕಾರದಿಂದ ಹೈಕೋರ್ಟ್‍ಗೆ ಪ್ರಮಾಣಪತ್ರ ಸಲ್ಲಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, 2016 ರಲ್ಲೇ ಸರ್ಕಾರ ಈ ಯೋಜನೆ ನಿಲ್ಲಿಸುವ ತೀರ್ಮಾನ ಮಾಡಿತ್ತು. ಅದಾದ ಮೇಲೆ ನಾನು ಮತ್ತೆ ಪ್ರಸ್ತಾಪ ಮಾಡಿದ್ದೆ. ಸ್ಟೀಲ್ ಫ್ಲೈಓವರ್ ಬೇಡವಾದರೆ ಬೇರೆ ಪರ್ಯಾಯ ಮಾರ್ಗ ಬೇಕಲ್ಲ? ಸ್ಟೀಲ್ ಫ್ಲೈಓವರ್ ಬದಲು ಎಲಿವೇಟೆಡ್ ರಸ್ತೆ ಮಾಡುವ ಪ್ರಸ್ತಾಪವೂ ಇದೆ. ಈ ಕುರಿತು ಪರಿಶೀಲನೆ ನಡಿಯುತ್ತಿದೆ. ಪರಿಶೀಲಿಸಿ ಸಮಗ್ರ ಯೋಜನಾ ವರದಿ(ಡಿಪಿಆರ್) ಮಾಡುವ ಬಗ್ಗೆ ತೀರ್ಮಾನ ತೆಗೆಕೊಳ್ಳುತ್ತೇವೆ. ಎಲಿವೇಟೆಡ್ ರಸ್ತೆಗೂ ವಿರೋಧ ಇದೆ. ಆದರೆ ಸರ್ಕಾರ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮುಂದಾಗಬೇಕಲ್ಲ? ಜನರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

collage jds

ಸೋಲಿಗೆ ಮೈತ್ರಿ ಕಾರಣವೆಂದು ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್‍ಗೆ ಪರಾಜಿತ ಅಭ್ಯರ್ಥಿಗಳ ದೂರು ನೀಡಿರುವ ವಿಚಾರವಾಗಿ ಮಾತನಾಡಿ, ಸೋತ ಅಭ್ಯರ್ಥಿಗಳು ವೇಣುಗೋಪಾಲ್ ಅವರ ಮುಂದೆ ಹಲವು ಕಾರಣಗಳನ್ನು ಹೇಳಿದ್ದಾರೆ. ಸೋಲಿಗೆ ಮೈತ್ರಿಯೂ ಕಾರಣ ಎಂದು ಕೆಲವರು ಅಂದಿದ್ದಾರೆ. ವೇಣುಗೋಪಾಲ್ ಅವರು ಸೋತವರ ಅಭಿಪ್ರಾಯಗಳನ್ನು ಸಂಗ್ರಹ ಮಾಡಿದ್ದಾರೆ. ಈ ವಿಚಾರ ವರಿಷ್ಠರ ಮಟ್ಟದಲ್ಲಿ ತೀರ್ಮಾನ ಆಗುತ್ತದೆ ಎಂದು ಹೇಳಿದರು.

JDS CONGRESS LEADERS 1

ನಂತರ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಬರುವುದಿಲ್ಲ. ಈಗಿನ ಪರಿಸ್ಥಿತಿಯಲ್ಲಿ ಮಧ್ಯಂತರ ಚುನಾವಣೆ ಬರಲು ಸಾಧ್ಯವಿಲ್ಲ. ಕೆಲವರು ಅಂತಹ ಹೇಳಿಕೆಗಳನ್ನು ಕೊಡುತ್ತಾರೆ, ಅದೆಲ್ಲ ಸ್ವಾಭಾವಿಕ. ಆದರೆ ಎರಡೂ ಪಕ್ಷಗಳೂ ಸರ್ಕಾರವನ್ನು ಉತ್ತಮವಾಗಿ ನಡೆಸಲು ತೀರ್ಮಾನಿಸಿದ್ದೇವೆ. ಮಧ್ಯಂತರ ಚುನಾವಣೆ ಬಗ್ಗೆ ಪಕ್ಷದ ಮಟ್ಟದಲ್ಲಿ ಚರ್ಚೆ ನಡಿಯುತ್ತಿಲ್ಲ. ವೈಯಕ್ತಿಕ ಹೇಳಿಕೆಗಳನ್ನು ಕೆಲವರು ಕೊಡುತ್ತಿದ್ದಾರೆ. ಅದು ಅವರ ವೈಯಕ್ತಿಕ ಅಭಿಪ್ರಾಯಗಳು ಎಂದು ಸ್ಪಷ್ಟಪಡಿಸಿದರು.

DCM

ಕೊನೆಗೆ ಅಗತ್ಯ ಇದ್ದರೆ ನಾನು ಸಹ ಗ್ರಾಮವಾಸ್ತವ್ಯ ಮಾಡುತ್ತೇನೆ. ನಗರದಲ್ಲೂ ಕೊಳಚೆ ಪ್ರದೇಶಗಳಲ್ಲಿ ವಾಸ್ತವ್ಯ ಮಾಡೋಣ ಅದಕ್ಕೇನು? ಜನರ ಸಮಸ್ಯೆ ಎಲ್ಲಿದೆ ಅಲ್ಲಿ ಹೋಗಿ ಬಗೆಹರಿಸುವ ಕೆಲಸ ಮಾಡುತ್ತೇವೆ. ನಾನು ಈಗಾಗಲೇ ಜನಸ್ಪಂದನ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇನೆ ಎಂದರು.

TAGGED:ApartmentsbengaluruCoalition GovernmentDCMKSRTC staffsPublic TVwater problemಅಪಾರ್ಟ್‍ಮೆಂಟ್ಡಿಸಿಎಂ ಪರಮೇಶ್ವರ್ನೀರಿನ ಸಮಸ್ಯೆಪಬ್ಲಿಕ್ ಟಿವಿಬೆಂಗಳೂರುಮೈತ್ರಿ ಸರ್ಕಾರಸಾರಿಗೆ ನೌಕಕರು
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

five youths die in horrific road accident in bengaluru
Bengaluru Rural

ಬೆಂಗಳೂರು | ಡಿವೈಡರ್‌ ಹಾರಿ ಬಸ್‌ಗೆ ಡಿಕ್ಕಿಯಾದ ಕಾರು – ಐವರು ದುರ್ಮರಣ

Public TV
By Public TV
49 seconds ago
TAMBITTU 1
Food

ಶಿವನಿಗೆ ಪ್ರಿಯವಾದ ತಂಬಿಟ್ಟು ಹೀಗೆ ಮಾಡಿ!

Public TV
By Public TV
3 minutes ago
Karnataka Student Missing In California
Crime

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ

Public TV
By Public TV
13 minutes ago
Ind vs Pak
Cricket

T20 World Cup 2026: ಇಂಡೋ-ಪಾಕ್‌ ಕದನ ಯಾವಾಗಲೂ ಏಕೆ ರಣಕಣ? – ನೆನಪಿದೆಯಾ ಆ ಕರಾಳ ದಿನಗಳು?

Public TV
By Public TV
23 minutes ago
India vs Pakistan shake hands row
Cricket

ಇಂದು ಭಾರತ vs ಪಾಕ್‌ ಕದನ – ಶತಕೋಟಿ ಭಾರತೀಯರಿಗೆ ಶಿವರಾತ್ರಿ ಗಿಫ್ಟ್‌ ಕೊಡಲು ಟೀಂ ಇಂಡಿಯಾ ರೆಡಿ

Public TV
By Public TV
46 minutes ago
Raichur Shivaratri 2
Districts

ರಾಯಚೂರಿನಲ್ಲಿ ಮಹಾಶಿವರಾತ್ರಿ ಸಂಭ್ರಮ – ಮಧ್ಯರಾತ್ರಿಯಿಂದಲೇ ಶಿವಲಿಂಗ ದರ್ಶನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?