ಬೆಂಗಳೂರು: ಪದವಿ ಪೂರ್ವ ಕಾಲೇಜ್ನಲ್ಲಿ ಮೊಬೈಲ್, ಲ್ಯಾಪ್ಟಾಪ್ ಬ್ಯಾನ್ ನಿರ್ಧಾರವನ್ನು ಸಮ್ಮಿಶ್ರ ಸರ್ಕಾರ ಹಿಂಪಡೆದಿದೆ.
ಪಿಯು ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಮೊಬೈಲ್ ಫೋನ್ ಮತ್ತು ಲ್ಯಾಪ್ಟಾಪ್ ಬಳಕೆ ಮಾಡುವಂತಿಲ್ಲ ಎಂದು ಪಿಯುಸಿ ಬೋರ್ಡ್ ಪಿಯುಸಿ ಆದೇಶ ಹೊರಡಿಸಿತ್ತು. ಈ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾವಿ ಅವರು ಸಲಹೆ ನೀಡಿದ್ದರು. ಪಿಯುಸಿ ಬೋರ್ಡ್ ಈ ಆದೇಶ ಜಾರಿಗೆ ತರುವಂತೆ ಎಲ್ಲಾ ಉಪ ನಿರ್ದೇಶಕರಿಗೆ ಸುತ್ತೋಲೆ ಹೊರಡಿಸಲಾಗಿತ್ತು. ಆದೇಶದ ಪ್ರತಿ ಪಬ್ಲಿಕ್ ಟಿವಿ ಗೆ ಲಭ್ಯವಾಗುತ್ತಿದ್ದಂತೆ ಸುದ್ದಿ ಪ್ರಸಾರ ಮಾಡಿತ್ತು. ಇದರಿಂದ ಎಚ್ಚೆತ್ತುಕೊಂಡ ಸರ್ಕಾರ ಆದೇಶವನ್ನು ರದ್ದು ಮಾಡಿದೆ.
ಮೊಬೈಲ್ ಫೋನ್ ಮತ್ತು ಲ್ಯಾಪ್ಟಾಪ್ ಬ್ಯಾನ್ ಮಾಡಿರುವ ಸರ್ಕಾರ ಧೋರಣೆ ವಿರುದ್ಧ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದರು. ಬಳಕೆಯ ಕುರಿತು ಜಾಗೃತಿ ಮೂಡಿಸಬೇಕು. ಅದನ್ನು ಬಿಟ್ಟು ಈ ನಿರ್ಧಾರ ತೆಗೆದುಕೊಂಡಿರುವುದು ಖಂಡನೀಯ ಎಂದು ಹೇಳಿದ್ದರು.
ಸರ್ಕಾರ ಹಾಗೂ ಪಿಯುಸಿ ಬೋರ್ಡ್ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿಯೂ ಭಾರೀ ಚರ್ಚೆಯಾಗಿತ್ತು. ಮೊಬೈಲ್ ಓಕೆ ಲ್ಯಾಪ್ಟಾಪ್ ಬ್ಯಾನ್ ಯಾಕೆ ಎಂದು ಪ್ರಶ್ನೆ ಮಾಡಿ ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಸರ್ಕಾರವೇ ಪದವಿ ಕಾಲೇಜ್ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡುತ್ತಿದೆ. ಆದರೆ ಪದವಿಯಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಬ್ಯಾನ್ ಮಾಡದೇ ಪಿಯುಸಿಯಲ್ಲಿ ಬ್ಯಾನ್ ಮಾಡಿದೆ ಎಷ್ಟು ಸರಿ ಎಂದು ಪ್ರಶ್ನಿಸಿ ಜನ ತರಾಟೆಗೆ ತೆಗೆದುಕೊಳ್ಳುತ್ತಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv