ಚೆನ್ನೈ: ತಮಿಳುನಾಡಿನ ರಾಜಕೀಯ ಬಿಕ್ಕಟ್ಟು ಇವತ್ತು ಸ್ವಲ್ಪ ಶಾಂತವಾಗೋ ಸಾಧ್ಯತೆಯಿದೆ. ರಾಜ್ಯದಲ್ಲಿ ಅಸ್ಥಿರತೆ ಉಂಟಾಗಿದ್ರೂ ಮುಂಬೈನಲ್ಲಿದ್ದ ತಮಿಳುನಾಡಿನ ಹೆಚ್ಚುವರಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಇಂದು ಚೆನ್ನೈಗೆ ಆಗಮಿಸಲಿದ್ದಾರೆ.
ಶಶಿಕಲಾ ಹಾಗೂ ಬೆಂಬಲಿಗ ಶಾಸಕರು ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಮನವಿ ಮಾಡಲಿದ್ದಾರೆ. ರಾಜ್ಯಪಾಲರು ಕೂಡ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗ್ರೀನ್ ಸಿಗ್ನಲ್ ನೀಡೋ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಅಜ್ಞಾತ ಸ್ಥಳಕ್ಕೆ ಹೋಗಿರೋ ಎಐಎಡಿಎಂಕೆಯ 130 ಶಾಸಕರು ರಾಷ್ಟ್ರಪತಿ ಮುಂದೆ ನಡೆಸಲು ಉದ್ದೇಶಿಸಿದ್ದ ಪರೇಡ್ನ್ನ ಕೈಬಿಟ್ಟಿದ್ದಾರೆ.
ಇದಕ್ಕೂ ಮುನ್ನ ರಾಜ್ಯಪಾಲರು ಉದ್ದೇಶಪೂರ್ವಕವಾಗಿ ಪ್ರಮಾಣ ವಚನ ಕಾರ್ಯಕ್ರಮವನ್ನ ಮುಂದೂಡ್ತಿದ್ದಾರೆ ಅಂತ ಶಶಿಕಲಾ ಆರೋಪಿಸಿದ್ರು. ಪಕ್ಷದ ಖಜಾಂಚಿ ಹುದ್ದೆಯಿಂದ ವಜಾಗೊಂಡಿರೋ ಪನ್ನೀರ್ ಸೆಲ್ವಂ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೇಜರ್ಗೆ ಪತ್ರ ಬರೆದಿದ್ದು, ಚಾಲ್ತಿ ಖಾತೆಯಲ್ಲಿರೋ ಪಕ್ಷದ ನಿಧಿಯನ್ನು ಹಿಡಿದಿಟ್ಟುಕೊಳ್ಳಬೇಕು. ನನ್ನ ಲಿಖಿತ ಅನುಮತಿ ಇಲ್ಲದೆ ಬೇರೆಯವ್ರಿಗೆ ಪಾರ್ಟಿ ಫಂಡ್ ಅನ್ನು ಆಪರೇಟ್ ಮಾಡೋಕೆ ಅವಕಾಶ ನೀಡಬಾರದು ಅಂತ ಮನವಿ ಮಾಡಿದ್ದಾರೆ.