ಅಂಜನಾದ್ರಿಗೆ ರಾಜ್ಯಪಾಲರ ಭೇಟಿ

Public TV
2 Min Read
KOPPALA GOVERNOR 1

ಕೊಪ್ಪಳ: ಇತ್ತೀಚಿನ ದಿನಗಳಲ್ಲಿ ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಪರ್ವತ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಅದರ ಭಾಗವಾಗಿ ಇದೀಗ ಅಂಜನಾದ್ರಿಗೆ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಭೇಟಿ ನೀಡಿದರು.

ರಾಜ್ಯಪಾಲರಿಂದ ವಿಶೇಷ ಪೂಜೆ: ನಿನ್ನೆ ಹಂಪಿ ಕನ್ನಡ ವಿವಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಜ್ಯಪಾಲರು ಇಂದು ಬೆಳಗ್ಗೆ 7.40ಕ್ಕೆ ಅಂಜನಾದ್ರಿ (Anjanadri) ಗೆ ಭೇಟಿ ನೀಡಿದರು. ಅಂಜನಾದ್ರಿ ಬೆಟ್ಟ ಏರಲು ಸಾಧ್ಯವಾಗದ ಕಾರಣ ಜಿಲ್ಲಾ ಆಡಳಿತ ಅಂಜನಾದ್ರಿ ಬೆಟ್ಟದ ಕೆಳಗಡೆ ಪೂಜೆಗೆ ವ್ಯವಸ್ಥೆ ಮಾಡಲಾಗಿತ್ತು. ಮೊದಲು ಪೂರ್ಣ ಕುಂಭದ ಮೂಲಕ ಅರ್ಚಕರು ರಾಜ್ಯಪಾಲ ಗೆಹ್ಲೋಟ್ ಅವರನ್ನು ಸ್ವಾಗತಿಸಿದರು. ಬಳಿಕ ಅಂಜನಾದ್ರಿ ಬೆಟ್ಟದ ಕೆಳಭಾಗದಲ್ಲಿನ ಆಂಜನೇಯನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್ – ನಾನು ಸಿಎಂ ಆಗ್ಬೋದು ಅಂದ ಪ್ರತಿಭಾ ಸಿಂಗ್

KOPPALA GOVERNOR

ರಾಜ್ಯಪಾಲರ ಆಗಮನದ ಮುನ್ನ ಹೈಡ್ರಾಮಾ: ರಾಜ್ಯಪಾಲರು ಅಂಜನಾದ್ರಿ ಭೇಟಿ 7.40ಕ್ಕೆ ನಿಗದಿಯಾಗಿತ್ತು. ಇದಕ್ಕೂ ಅರ್ಧಗಂಟೆ ಪೂರ್ವದಲ್ಲಿ ಈ ಮುಂಚೆ ಅಂಜನಾದ್ರಿಯ ಪ್ರಧಾನ ಅರ್ಚಕರಾಗಿದ್ದ ವಿದ್ಯಾದಾಸ್ ಬಾಬಾ ಹಾಗೂ ಜಿಲ್ಲಾ ಆಡಳಿತ, ಪೊಲೀಸ್ ಇಲಾಖೆ ನಡುವೆ ಹೈಡ್ರಾಮಾ ನಡೆಯಿತು. ವಿದ್ಯಾದಾಸ್ ಬಾಬಾ ಗೆ ಜಿಲ್ಲಾ ಆಡಳಿತ ಅಂಜನಾದ್ರಿಯಲ್ಲಿನ ಆಂಜನೇಯನಿಗೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ಪೂಜೆ ಮಾಡಲು ಅವಕಾಶ ನೀಡಿದೆ. ಇದನ್ನೇ ಇಟ್ಟುಕೊಂಡು ವಿದ್ಯಾದಾಸ್ ಬಾಬಾ ರಾಜ್ಯಪಾಲರು ಪೂಜೆ ಸಲ್ಲಿಸುವ ಕೆಳ ಭಾಗಕ್ಕೆ ಬಂದು ನಾನು ಪೂಜೆ ಮಾಡುತ್ತೇನೆಂದು ಹೇಳಿದ್ದಾನೆ. ಆದರೆ ಇದಕ್ಕೆ ಜಿಲ್ಲಾ ಆಡಳಿತ ಒಪ್ಪಿಲ್ಲ. ಹೀಗಾಗಿ ವಿದ್ಯಾದಾಸ್ ಬಾಬಾ ಗಲಾಟೆ ಮಾಡಲು ಆರಂಭ ಮಾಡಿದ. ಈ ವೇಳೆ ಪೊಲೀಸರು ವಿದ್ಯಾದಾಸ್ ಬಾಬಾನನ್ನು ವಶಕ್ಕೆ ಪಡೆಯಲು ಮುಂದಾದರು. ಆದರೆ ಕೊನೆ ಗಳಿಗೆಯಲ್ಲಿ ವಿದ್ಯಾದಾಸ್ ಬಾಬಾ ಅಂಜನಾದ್ರಿ ಬೆಟ್ಟದ ಮೇಲೆ ಹೋಗಿದ್ದರಿಂದ ಪ್ರಕರಣ ಸುಖಾಂತ್ಯವಾಯಿತು.

KOPPALA GOVERNOR 2

ಅಂಜನಾದ್ರಿ ಬೆಟ್ಟ ಏರಿದ ಮುಸ್ಲಿಂ ಮಹಿಳೆಯರು: ಇತ್ತೀಚೆಗಷ್ಟೆ ಅಂಜನಾದ್ರಿಯಲ್ಲಿ ಧರ್ಮ ದಂಗಲ್ ಆರಂಭವಾಗಿತ್ತು. ಹಿಂದೂ ಧರ್ಮಿಯರನ್ನು ಹೊರತುಪಡಿಸಿ ಅನ್ಯಧರ್ಮೀಯರಿಗೆ ವ್ಯಾಪಾರ ಮಾಡಲು ಅವಕಾಶ ನೀಡಬಾರದೆಂದು ಹಿಂದೂ ಜಾಗರಣೆ ವೇದಿಕೆಯವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಇದಾದ ಒಂದು ವಾರದ ಆಗುವಷ್ಟರಲ್ಲೇ ಇದೀಗ ಮುಸ್ಲಿಂ ಧರ್ಮದ ಮಹಿಳೆಯರು ಅಂಜನಾದ್ರಿಗೆ ಭೇಟಿ ನೀಡಿದ್ದರು. ರಾಯಚೂರು ಜಿಲ್ಲೆಯ ಸಿಂಧನೂರಿನ ಮಹಿಳೆಯರ ತಮ್ಮ ಮಕ್ಕಳನ್ನು ಕರೆದುಕೊಂಡು ಬಂದು 575 ಮೆಟ್ಟಿಲುಗಳನ್ನು ಹತ್ತುವ ಮೂಲಕ ಆಂಜನೇಯನ ದರ್ಶನ ಪಡೆದುಕೊಂಡರು. ಈ ಮೂಲಕ ಮುಸ್ಲಿಂ ಮಹಿಳೆಯರು ಭಾವೈಕ್ಯತೆ ಸಾರುವ ಕಾರ್ಯ ಮಾಡಿದ್ದಾರೆ.

KOPPALA GOVERNOR 3

ಈ ಹಿಂದಿನ ರಾಜ್ಯಪಾಲರಾದ ವಜುಭಾಯ್ ವಾಲಾ ಅವರು ಸಹ ಅಂಜನಾದ್ರಿಗೆ ಭೇಟಿ ನೀಡಿದ್ದರು. ಇದೀಗ ಪ್ರಸ್ತುತ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಸಹ ಭೇಟಿ ನೀಡಿರುವುದು ಇದರ ಪ್ರಸಿದ್ಧಿಗೆ ಸಾಕ್ಷಿಯಾಗಿದೆ. ಪೂಜೆಯ ಬಳಿಕ ರಾಜ್ಯಪಾಲರಿಗೆ ಸ್ಥಳೀಯ ಶಾಸಕ ಪರಣ್ಣ ಮುನವಳ್ಳಿ ಆಂಜನೇಯನ ಫೋಟೋ ನೀಡಿ ಗೌರವಿಸಿದರು. ರಾಜ್ಯಪಾಲರ ಆಗಮನದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಕೈಗೊಳ್ಳುವ ಮೂಲಕ ರಾಜ್ಯಪಾಲರ ಅಂಜನಾದ್ರಿ ಭೇಟಿಯನ್ನು ಯಶಸ್ವಿಗೊಳಿಸಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *