ಬೆಂಗಳೂರು: ವಿಧಾನಸಭಾ ಜಂಟಿ ಅಧಿವೇಶನದಲ್ಲಿ (Joint Session) ಭಾರೀ ಹೈಡ್ರಾಮಾ ನಡೆದಿದೆ. ರಾಜ್ಯಪಾಲರು (Governor Thawarchand Gehlot) ಅಧಿವೇಶನ ಆರಂಭಿಸಿ ಆರಂಭಿಕ ಸಾಲನ್ನು ಹೇಳಿ ಸದನದಿಂದ ಹೊರ ನಡೆದಿದ್ದಾರೆ.
ರಾಜ್ಯಪಾಲರು ಹೊರನಡೆಯುತ್ತಿದ್ದಂತೆ ಆಡಳಿತ ಪಕ್ಷದ ಶಾಸಕರು ಭಾರೀ ವಿರೋಧ ವ್ಯಕ್ತಪಡಿಸಿ ಧಿಕ್ಕಾರ ಕೂಗಲು ಆರಂಭಿಸಿದರು. ಆಡಳಿತ ಸದಸ್ಯರ ವಿರೋಧದ ನಡುವೆಯೂ ರಾಜ್ಯಪಾಲರು ವಿಧಾನಸೌಧದಿಂದ ಹೊರನಡೆದರು. ಇದನ್ನೂ ಓದಿ: ವಿಧಾನಸೌಧಕ್ಕೆ ರಾಜ್ಯಪಾಲರ ಆಗಮನ – ಹೂಗುಚ್ಛ ನೀಡಿ ಆತ್ಮೀಯ ಸ್ವಾಗತ ಕೋರಿದ ಸಿಎಂ
ಇದೇ ಮೊದಲ ಬಾರಿಗೆ ರಾಜ್ಯದ ಅಧಿವೇಶನ ಇತಿಹಾಸದಲ್ಲಿ ರಾಜ್ಯಪಾಲರು ಭಾಷಣ ಓದದೇ ತೆರಳಿದ್ದಾರೆ. ರಾಜ್ಯಪಾಲರ ನಡೆಗೆ ಕಾಂಗ್ರೆಸ್ ಶಾಸಕರು ವಿರೋಧ ವ್ಯಕ್ತಪಡಿಸಿ ಧಿಕ್ಕಾರ ಕೂಗಿದರು. ಈ ವೇಳೆ ರಾಜ್ಯಪಾಲರನ್ನು ಬಿ.ಕೆ.ಹರಿಪ್ರಸಾದ್ ಅಡ್ಡಹಾಕಿದರು. ಅವರನ್ನು ಮಾರ್ಷಲ್ಗಳು ಪಕ್ಕಕ್ಕೆ ಎಳೆದರು.
ಕೊನೆಯದಾಗಿ, ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಕಾನೂನು ಮಂತ್ರಿಗಳು ರಾಜ್ಯಪಾಲರನ್ನು ಬೀಳ್ಕೊಟ್ಟರು. ಇದನ್ನೂ ಓದಿ: ರಾಜ್ಯಪಾಲರು ಅಧಿವೇಶನಕ್ಕೆ ಬರ್ತಾರೆ; ಲೋಕಭವನದಿಂದ ಸರ್ಕಾರಕ್ಕೆ ಅಧಿಕೃತ ಮಾಹಿತಿ

