Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈತರ ಧ್ವನಿಯಾಗಿ ಸಮ್ಮಿಶ್ರ ಸರ್ಕಾರ ಕೆಲಸ ಮಾಡಲಿದೆ: ವಜೂಭಾಯಿ ವಾಲಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೈತರ ಧ್ವನಿಯಾಗಿ ಸಮ್ಮಿಶ್ರ ಸರ್ಕಾರ ಕೆಲಸ ಮಾಡಲಿದೆ: ವಜೂಭಾಯಿ ವಾಲಾ

Bengaluru City

ರೈತರ ಧ್ವನಿಯಾಗಿ ಸಮ್ಮಿಶ್ರ ಸರ್ಕಾರ ಕೆಲಸ ಮಾಡಲಿದೆ: ವಜೂಭಾಯಿ ವಾಲಾ

Public TV
Last updated: July 2, 2018 1:31 pm
Public TV
Share
3 Min Read
Vala 3
SHARE

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ ಇಂದು ಆರಂಭವಾಗಿದೆ. ನಿಯಮದಂತೆ ಹೊಸ ವಿಧಾನಸಭೆಯ ಮೊದಲ ಅಧಿವೇಶನದ ಮೊದಲ ದಿನದಂದು ರಾಜ್ಯಪಾ ವಿ.ಆರ್.ವಾಲಾ ಜಂಟಿ ಸದನಗಳಾದ ವಿಧಾನಸಭೆ-ವಿಧಾನಪರಿಷತ್ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಿದರು.

ಸ್ಪೀಕರ್ ರಮೇಶ್ ಕುಮಾರ್, ರಾಜ್ಯಪಾಲರನ್ನು ವಿಧಾನಸಭೆಗೆ ಕರೆತಂದರು. ರಾಷ್ಟ್ರಗೀತೆ ಮೊಳಗಿದ ಬಳಿಕ ಜಂಟಿ ಸದನ ಉದ್ದೇಶಿಸಿ ಭಾಷಣ ಆರಂಭಿಸಿದ ರಾಜ್ಯಪಾಲರು ಮೊದಲಿಗೆ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾದ ಎಲ ನಾಯಕರಿಗೂ ಶುಭಕೋರಿದರು. ಎಲ್ಲ ಶಾಸಕರು ಕರ್ನಾಟಕದ ಅಭಿವೃದ್ಧಿಗಾಗಿ ಕೆಲಸ ಮಾಡಬೇಕಿದೆ. ಎಲ್ಲ ಹಿರಿಯ ಶಾಸಕರು, ಮೊದಲ ಬಾರಿಗೆ ಆಯ್ಕೆಯಾಗಿರುವ ಕಿರಿಯ ಶಾಸಕರಿಗೆ ಮಾದರಿಯಾಗಿ, ಆಡಳಿತದಲ್ಲಿ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.

ರಾಜ್ಯ ಸರ್ಕಾರ ರೈತರ ಧ್ವನಿಯಾಗಿ ಆಡಳಿತ ನಡೆಸಲಿದೆ. ನಮ್ಮ ಸರ್ಕಾರ ಮೊದಲು ನಾಡಿನ ರೈತ ಬಾಂಧವರಿಗೆ ಆಧ್ಯತೆ ನೀಡುತ್ತದೆ. ಸರ್ಕಾರ ರೈತರ ಸಮಸ್ಯೆಗಳನ್ನು ಪರಿಹರಿಸಲು ಹಳೆಯ ಯೋಜನೆಗಳೊಂದಿಗೆ ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲು ಬದ್ಧವಾಗಿದೆ. ಕಾಡು ಪ್ರಾಣಿಗಳಿಂದ ರೈತರ ಬೆಳೆ ಹಾಳಾದ್ರೆ ಸರ್ಕಾರ ಬೆಂಬಲ ನೀಡಲಿದೆ. ಕೃಷಿಯಲ್ಲಿ ಆಧುನೀಕರಣ, ತಂತ್ರಜ್ಞಾನದ ಬಳಕೆ, ಬೆಂಬಲ ಬೆಲೆ ಸೇರಿದಂತೆ ಹಲವು ಯೋಜನೆಗಳು ಜಾರಿಯಾಗಲಿದ್ದು, ನಾಡಿನ ರೈತರು ಆತ್ಮಹತ್ಯೆಗೆ ಶರಣಾಗಾಬಾರದು ಎಂದು ಹೇಳಿದರು.

Vala 1

ಹೈದರಾಬಾದ್ ಕರ್ನಾಟಕ ಸೇರಿದಂತೆ ಅಖಂಡ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ. ರಾಜ್ಯದ ಮಹಿಳೆಯರ ಭದ್ರತೆಗಾಗಿ ನಿರ್ಭಯಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಸೈಬರ್ ಕ್ರೈಂ ವಿಭಾಗದ ಅಪರಾಧಗಳ ತಡೆಗೆ ಸರ್ಕಾರ ಶಿಸ್ತಿನಿಂದ ಕೆಲಸ ಮಾಡಲಿದೆ. ಗ್ರಾಮೀಣ, ನಗರ ರಸ್ತೆ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಲಾಗುವುದು. ಜಿಲ್ಲಾ, ತಾಲೂಕುಗಳಲ್ಲಿ ವಿಡಿಯೋ ಕಾನ್ಫೆರೆನ್ಸ್ ಗಳ ಮೂಲಕ ನಾಯಕರು ಅಧಿಕಾರಿಗಳೊಂದಿಗೆ ಸಂವಹನ ಮಾಡಲಿದ್ದಾರೆ ಎಂದರು.

2021 ರೊಳಗೆ ನಮ್ಮ ಮೆಟ್ರೋ ಕಾಮಗಾರಿ ಪೂರ್ಣಗೊಳಿಸಲಾಗುವುದು. ಬೆಂಗಳೂರು ನಗರದಲ್ಲಿ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ವ್ಯವಸ್ಥೆ, ಮೆಟ್ರೋ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುವುದು. ಮಹಿಳೆಯ ಭದ್ರತೆಗಾಗಿ ಬೆಂಗಳೂರಿನ ಬಸ್‍ಗಳಲ್ಲಿ ಉಚಿತ ವೈಫೈ ಸೌಲಭ್ಯ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ರು.

ಮಹಿಳೆಯರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ನೀಡುವಿಕೆ, ಬಂಜಾರ ಸಮುದಾಯದ ಅಭಿವೃದ್ಧಿ, ಹಿಂದುಳಿದ ವರ್ಗಗಳ ಯುವಕರ ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಹೊಸ ಯೋಜನೆಗಳು, ಉತ್ತಮ ಶಿಕ್ಷಣದ ಮೂಲಕ 2030 ರೊಳಗೆ ಬಾಲ ಕಾರ್ಮಿಕ ಮುಕ ರಾಜ್ಯ ನಿರ್ಮಾಣ, ಈ ಹಿನ್ನೆಲೆಯಲ್ಲಿ ಶಿಕ್ಷಣದಲ್ಲಿ ಬದಲಾವಣೆ ಗರ್ಭಿಣಿಯರಿಗೆ ಸಹಾಯ ಧನ, ಪ್ಲಾಸ್ಟಿಕ್ ನಿಯಂತ್ರಣಕ್ಕಾಗಿ ಕಠಿಣ ಕಾನೂನುಗಳನ್ನು ಸರ್ಕಾರ ಜಾರಿ ಮಾಡಲಿದೆ ಎಂದು ತಮ್ಮ ಭಾಷಣದಲ್ಲಿ ತಿಳಿಸಿದರು.

Vala 2

ಮಲೀನಗೊಂಡಿರುವ ನದಿಗಳ ಅಭಿವೃದ್ಧಿ, ನೀರಾವರಿ ಯೋಜನೆಗಳಿಗೆ ಸರ್ಕಾರ ಬದ್ಧ. ಆರೋಗ್ಯ ಕರ್ನಾಟಕ ಯೋಜನೆ ಪೂರ್ಣ ಪ್ರಮಾಣದಲ್ಲಿ ಜಾರಿ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ, ಎಲ್ಲ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಕ್ಯಾನ್ಸರ್ ವಿಭಾಗ ತೆರೆಯಲಾಗುವುದು. ರೇಷನ್ ಕಾರ್ಡ್‍ಗಾಗಿ ಆನ್‍ಲೈನ್ ಸಲ್ಲಿಸುವ ಯೋಜನೆ ಜಾರಿ ಮಾಡಲಾಗಿದೆ. ಸೌರ ವಿದ್ಯುತ್, ಅಣು ವಿದ್ಯುತ್ ಘಟಕಗಳ ಅಭಿವೃದ್ಧಿಯ ಮೂಲಕ ಹೆಚ್ಚಿನ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡಲಾಗುವುದು ಎಂದರು.

ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಮಂಗಳವಾರ ಮತ್ತು ಬುಧವಾರ ಎರಡೂ ಸದನಗಳಲ್ಲಿ ಪ್ರತ್ಯೇಕವಾಗಿ ಚರ್ಚೆ ಸಾಗಲಿದೆ. ರೈತರ ಸಾಲ ಮನ್ನಾ, ಸಿದ್ದರಾಮಯ್ಯ ಸರ್ಕಾರದ ಜನಪ್ರಿಯ ಯೋಜನೆಗಳ ಮುಂದುವರಿಕೆಯ ಒತ್ತಡದ ನಡುವೆ ಗುರುವಾರ ಕುಮಾರಸ್ವಾಮಿ ವಿಧಾನಸಭೆಗೆ ಹೊತ್ತು ಒಯ್ಯಲಿರುವ ಸೂಟ್‍ಕೇಸ್ ಸಾಕಷ್ಟು ಕುತೂಹಲ ಕೆರಳಿಸಿದೆ. ಅಧಿವೇಶನದ ಕೊನೆಯ ದಿನವಾಗಿರೋ ಜುಲೈ 12ರಂದು ಬಜೆಟ್‍ನ್ನು ವಿಧಾನಸಭೆ ಅಂಗೀಕರಿಸಲಿದೆ. ಅಧಿವೇಶನದಲ್ಲಿ ಒಂದೂವರೆ ತಿಂಗಳ ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿಯನ್ನೇ ಪ್ರಸ್ತಾಪಿಸಿ ಬಿಜೆಪಿ ಸದನದೊಳಗೆ ಹೋರಾಟ ತೀವ್ರಗೊಳಿಸುವ ಸಾಧ್ಯತೆಯಿದೆ.

Honourable Governor of Karnataka Shri Vajubhai Vala will address the joint session of Karnataka legislature today.

I welcome the governor to the session and is looking forward to his guidance. pic.twitter.com/Ivip2VcfIA

— CM of Karnataka (@CMofKarnataka) July 2, 2018

ಈಗಾಗಲೇ ವಿಶ್ವಾಸಮತಯಾಚನೆ ವೇಳೆ 52 ಗಂಟೆ ಸಿಎಂ ಆಗಿದ್ದ ಯಡಿಯೂರಪ್ಪ ಮತ್ತು ಸಿಎಂ ಕುಮಾರಸ್ವಾಮಿ ಮಾತಿನ ಏಟು-ಎದಿರೇಟು ರೋಚಕತೆ ಹುಟ್ಟಿಸಿತ್ತು. ಸಾಲ ಮನ್ನಾ ಮತ್ತು ಸಮ್ಮಿಶ್ರ ಸರ್ಕಾರದ ಬಾಳಿಕೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯನ್ನು ಊಲ್ಲೇಖಿಸಿ ಬಿಜೆಪಿ ಮತ್ತೆ ಮುಗಿಬೀಳುವ ಸಾಧ್ಯತೆಯೂ ಇದೆ.

TAGGED:BangalorebjpbudgetCoalition GovernmentcongressgovernorKumaraswamyPublic TVsessionVajbhai Walaಅಧಿವೇಶಕಾಂಗ್ರೆಸ್ಕುಮಾರಸ್ವಾಮಿಪಬ್ಲಿಕ್ ಟಿವಿಬಜೆಟ್ಬಿಜೆಪಿಬೆಂಗಳೂರುರಾಜ್ಯಪಾಲವಜೂಭಾಯಿ ವಾಲಾಸಮ್ಮಿಶ್ರ ಸರ್ಕಾರ
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Jharkhand Ranchi Air Ambulence Crash
Latest

ಜಾರ್ಖಂಡ್‌ನ ರಾಂಚಿಯಲ್ಲಿ ಏರ್ ಅಂಬುಲೆನ್ಸ್ ಪತನ

Public TV
By Public TV
4 hours ago
ICC Mens T20 World Cup West Indies vs Zimbabwe West Indies won by 107 runs
Cricket

ಸಿಕ್ಸರ್‌, ಬೌಂಡರಿಯಿಂದಲೇ ವಿಂಡೀಸ್‌ಗೆ 178 ರನ್‌ – ಜಿಂಬಾಬ್ವೆ ವಿರುದ್ಧ 107 ರನ್‌ಗಳ ಭರ್ಜರಿ ಜಯ

Public TV
By Public TV
4 hours ago
big bulletin 23 February 2026 part 1
Big Bulletin

ಬಿಗ್‌ ಬುಲೆಟಿನ್‌ 23 February 2026 ಭಾಗ-1

Public TV
By Public TV
4 hours ago
big bulletin 23 February 2026 part 2
Big Bulletin

ಬಿಗ್‌ ಬುಲೆಟಿನ್‌ 23 February 2026 ಭಾಗ-2

Public TV
By Public TV
4 hours ago
big bulletin 23 February 2026 part 3
Big Bulletin

ಬಿಗ್‌ ಬುಲೆಟಿನ್‌ 23 February 2026 ಭಾಗ-3

Public TV
By Public TV
4 hours ago
Double Decker Bus Overturns In Lucknow
Crime

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ – ಐವರು ದುರ್ಮರಣ, 16 ಮಂದಿಗೆ ಗಾಯ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?