– ಸಹಿ ಹಾಕದೇ ರಾಷ್ಟ್ರಪತಿಗಳ ಅಂಗಳಕ್ಕೆ ದ್ವೇಷ ಭಾಷಣ ಬಿಲ್!
ಬೆಂಗಳೂರು: ರಾಜ್ಯಪಾಲರು vs ಸರ್ಕಾರ ನಡುವೆ ಸಂಘರ್ಷ ಮತ್ತೆ ಶುರುವಾಗಿದೆ. ಸರ್ಕಾರದ ದ್ವೇಷ ಭಾಷಣ ಬಿಲ್ ಗೆ ರಾಜ್ಯಪಾಲರು ಕೊಕ್ಕೆ ಹಾಕಿದ್ದು, ಸಹಿ ಹಾಕದೇ ಮಸೂದೆಯನ್ನ (Hate Speech Bill) ರಾಷ್ಟ್ರಪತಿಗಳ ಅಂಗಳಕ್ಕೆ ಕಳಿಸಿದ್ದಾರೆ. ಈ ಮೂಲಕ ಮತ್ತೆ ಸರ್ಕಾರ- ರಾಜ್ಯಪಾಲರ ನಡುವೆ ವಾರ್ ಶುರುವಾಗಿದೆ.
ಬೆಳಗಾವಿ ಅಧಿವೇಶನದಲ್ಲಿ (Belagavi Session) ಪಾಸ್ ಆಗಿದ್ದ ದ್ವೇಷ ಭಾಷಣ ಬಿಲ್ಗೆ ರಾಜ್ಯಪಾಲ ಗೆಹ್ಲೋಟ್ (Thawar Chand Gehlot) ಕೊಕ್ಕೆ ಹಾಕಿದ್ದಾರೆ. ಬಿಲ್ಗೆ ಸಹಿ ಹಾಕದೇ ರಾಷ್ಟ್ರಪತಿಗಳ ಅಂಗಳಕ್ಕೆ ಮಸೂದೆ ರವಾನೆ ಮಾಡಿದ್ದಾರೆ. ದ್ವೇಷ ಭಾಷಣದ ವ್ಯಾಖ್ಯಾನವೇ ಮಸೂದೆಯಲ್ಲಿ ಅಸ್ಪಷ್ಟವಾಗಿದೆ. ಮಸೂದೆಗೆ ಒಪ್ಪಿಗೆ ಕೊಡದಂತೆ 40ಕ್ಕೂ ಹೆಚ್ಚು ಮನವಿ ಬಂದಿರೋ ಬಗ್ಗೆ ರಾಜ್ಯಪಾಲರು ಉಲ್ಲೇಖ ಮಾಡಿ ರಾಷ್ಟ್ರಪತಿ ಅಂಗಳಕ್ಕೆ ರವಾನೆ ಮಾಡಿದ್ದಾರೆ.

ರಾಷ್ಟ್ರಪತಿಗಳಿಗೆ ಬಿಲ್ ವರ್ಗಾವಣೆ ಮಾಡೋದಕ್ಕೆ ರಾಜ್ಯಪಾಲರು 29 ಕಾರಣಗಳನ್ನ ನೀಡಿದ್ದಾರೆ. ಈ ಬಿಲ್ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಎಂಬ ಉಲ್ಲೇಖ ಮಾಡಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ʻಕುರ್ಚಿ ಕದನʼ ಪ್ರಸ್ತಾಪ; ಸಿಎಂ – ಡಿಸಿಎಂ ಒಗ್ಗಟ್ಟು ಪ್ರದರ್ಶನ
ಬಿಲ್ ವಾಪಸ್ಗೆ ಗವರ್ನರ್ ಕೊಟ್ಟ ಪ್ರಮುಖ ಕಾರಣಗಳು..?
> ದ್ವೇಷ ಭಾಷಣದ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ
> ಅರ್ಥಪೂರ್ಣ ಸಮಾಲೋಚನೆ ಮಾಡದೇ ಅಂಗೀಕಾರ
> ಮಸೂದೆ ಸಂಬಂಧ ಕೆಲವು ಕಾನೂನು ತೊಡಕುಗಳಿವೆ
> ಮಿತಿಮೀರಿದ ಮತ್ತು ಭಯಾನಕ ಪರಿಣಾಮಗಳನ್ನು ಬೀರಲಿವೆ
> ಅಭಿವ್ಯಕ್ತಿ ಸ್ವಾತಂತ್ರ್ಯ, ಮೂಲಭೂತ ಹಕ್ಕನ್ನು ಕಸಿಯುವ ಮುನ್ಸೂಚನೆ
> ಈ ಮಸೂದೆಯು ಉದ್ದೇಶಕ್ಕಿಂತ ಪರಿಣಾಮಕ್ಕೆ ಆದ್ಯತೆ ನೀಡಿರುತ್ತದೆ
> ಸತ್ಯವನ್ನು ಮಾತಾಡಿದ್ರೂ, ಬೌದ್ಧಿಕ ಟೀಕೆ ಮಾಡಿದ್ರೂ ಬಂಧಿಸಬಹುದಾಗಿದೆ
> ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆ ಒಬ್ಬ ವ್ಯಕ್ತಿ, ಸಮುದಾಯಕ್ಕೆ ಸೀಮಿತವಾಗಿರಬಾರದು
> ಇಡೀ ಸಮಾಜದ ಸಾಮೂಹಿಕ ಹಕ್ಕಾಗಿರಬೇಕು
> ಅಧಿಕಾರಿಗಳು ನಿರ್ಧರಿಸಿದರೆ ಯಾವುದೇ ಕಾರ್ಯಕ್ರಮ ನಿಷೇಧಿಸಬಹುದು
> ಮಸೂದೆಯಲ್ಲಿರುವ ಈ ಕ್ರಮ ಸರಿಯಲ್ಲ… ಎಂದು ಕಾರಣವನ್ನ ಉಲ್ಲೇಖಿಸಿದ ಗವರ್ನರ್ ದ್ವೇಷ ಭಾಷಣ ಬಿಲ್ ಅನ್ನು ಸಹಿ ಮಾಡದೇ ರಾಷ್ಟ್ರಪತಿ ಮುರ್ಮ ಅವರಿಗೆ ರವಾನೆ ಮಾಡಿದ್ದಾರೆ.

ರಾಜ್ಯಪಾಲ ನಡೆಗೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ. ಕಾಂಗ್ರೆಸ್ ನಾಯಕರು ರಾಜ್ಯಪಾಲರ ನಡೆ ವಿರೋಧ ಮಾಡಿದ್ರೆ, ಬಿಜೆಪಿ ನಾಯಕರು ಸಮರ್ಥನೆ ಮಾಡಿಕೊಂಡಿದ್ದಾರೆ. ದ್ವೇಷ ಭಾಷಣ ನಾವು ಮಾಡೋದು ತಪ್ಪೇ ನೀವು ಮಾಡೋದು ತಪ್ಪೇ, ಅದಕ್ಕೆ ಬಿಲ್ ತಂದ್ವಿ. ದ್ವೇಷ ಭಾಷಣ ಪಿತಾಮಹರು ರಾಜ್ಯದಲ್ಲಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಕುಟುಕಿದರೆ, ನೇರವಾಗಿ ಒಂದು ವರ್ಗವನ್ನ ಕಾನೂನಿನಲ್ಲಿ ಸಿಲುಕಿಸಲು ಬಿಲ್ ತಂದಿದ್ದರು. ಇದಕ್ಕೆ ನಾವು ವಿರೋಧಿಸಿದ್ವಿ.. ಹೀಗಾಗಿ ರಾಜ್ಯಪಾಲರು ಧ್ವೇಷ ಭಾಷಣ ಬಿಲ್ ರಾಷ್ಟ್ರಪತಿಗಳಿಗೆ ಕಳಿಸಿದ್ದಾರೆ, ವಿಮರ್ಶೆ ಮಾಡಿ ಎಂದು ಹೇಳಿದ್ದಾರೆ ಅಂತ ಬಿಜೆಪಿ ಹೇಳ್ತಿದೆ.
ದ್ವೇಷ ಭಾಷಣ ಬಿಲ್ ಬಗ್ಗೆ ಹಲವು ಗೊಂದಲ ಇದೆ ಅಂತ ಕಾರಣ ನೀಡಿ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಬಿಲ್ ರವಾನೆ ಮಾಡಿದ್ದಾರೆ. ಸರ್ಕಾರ ಈ ಏನ್ ಮಾಡುತ್ತೆ ಕಾದು ನೋಡಬೇಕು. ಇದನ್ನೂ ಓದಿ: ಸತತ 4ನೇ ದಿನವೂ ಚಿನ್ನ, ಬೆಳ್ಳಿ ದರ ಇಳಿಕೆ – ಚಿನ್ನ 10 ಗ್ರಾಂಗೆ 4 ಸಾವಿರ, ಬೆಳ್ಳಿ ಕೆಜಿಗೆ 16 ಸಾವಿರ ಕುಸಿತ

