Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ಕೃಷಿ ಕಾಯ್ದೆ ಬಗ್ಗೆ ರೈತರಿಗೆ ತಿಳಿ ಹೇಳುವಲ್ಲಿ ವಿಫಲರಾಗಿದ್ದೇವೆ: ಗೋವಿಂದ ಕಾರಜೋಳ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಹೊಸ ಕೃಷಿ ಕಾಯ್ದೆ ಬಗ್ಗೆ ರೈತರಿಗೆ ತಿಳಿ ಹೇಳುವಲ್ಲಿ ವಿಫಲರಾಗಿದ್ದೇವೆ: ಗೋವಿಂದ ಕಾರಜೋಳ

Bagalkot

ಹೊಸ ಕೃಷಿ ಕಾಯ್ದೆ ಬಗ್ಗೆ ರೈತರಿಗೆ ತಿಳಿ ಹೇಳುವಲ್ಲಿ ವಿಫಲರಾಗಿದ್ದೇವೆ: ಗೋವಿಂದ ಕಾರಜೋಳ

Public TV
Last updated: November 22, 2021 2:38 pm
Public TV
Share
3 Min Read
Govinda Karajola
SHARE

ಬಾಗಲಕೋಟೆ: ರೈತರ ಆದಾಯ ದ್ವಿಗುಣಗೊಳಿಸಬೇಕು. ರೈತರಿಗೆ ಅನುಕೂಲ ಆಗಬೇಕೆಂಬ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಮೂರು ಕೃಷಿ ಕಾಯ್ದೆಗಳನ್ನು ತಂದಿದ್ರು. ಆದ್ರೆ ಎಲ್ಲೊ ಒಂದು ಕಡೆ ಹೊಸ ಕಾಯ್ದೆ ಬಗ್ಗೆ ರೈತರಿಗೆ ತಿಳಿ ಹೇಳುವಲ್ಲಿ ವಿಫಲ ಆಗಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಷಾದ ವ್ಯಕ್ತಪಡಿಸಿದರು.

bagalkot farmers
ಬಾಗಲಕೋಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರು ಹೊಸ ಕೃಷಿ ಕಾಯ್ದೆಗಳ ಬಗ್ಗೆ ರೈತರಿಗೆ ತಿಳಿಸಿ ಹೇಳುವಲ್ಲಿ ನಾವು ವಿಫಲರಾಗಿದ್ದೇವೆ. ಕಾಂಗ್ರೆಸ್ ಪಕ್ಷ ರಾಷ್ಟ್ರಮಟ್ಟದಲ್ಲಿ ಒಬ್ಬ ಪೂರ್ಣಾವಧಿ ಅಧ್ಯಕ್ಷ ಸಿಗದ ಹೀನಾಯ ಸ್ಥಿತಿಗೆ ಬಂದು ತಲುಪಿದೆ. ಏಳು ವರ್ಷದ ಹಿಂದೆ ಮೋದಿ ಅವರು ಕೈ ಮುಕ್ತ ಭಾರತ ಆಗುತ್ತೆ ಎಂದು ಹೇಳಿದರು. ಆಗ ಅವರಿಗೆ ಕೆಲವರು ಗೇಲಿ ಮಾಡಿದರು. ಇವ್ರೇನು ಭವಿಷ್ಯ ಹೇಳ್ತಾರಾ? ಕಾಲಜ್ಞಾನಿಗಳಾ ಅಂದಿದ್ರು. ಈಗ ಅವರ ಮಾತು ನಿಜ ಆಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ:  ಮಂಡ್ಯದಲ್ಲಿ ಹೆರಾಯಿನ್, ಅಫೀಮು ದಂಧೆ – ಆರೋಪಿಗಳು ಅರೆಸ್ಟ್

ಇನ್ನೊಂದು ವರ್ಷದಲ್ಲಿ ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ. ಕಾಂಗ್ರೆಸ್ ಮುಕ್ತ ಭಾರತ ಆಗುತ್ತೆ. ಕಾಂಗ್ರೆಸ್ ನೀತಿಗೆಟ್ಟ ನಡವಳಿಕೆ ಬಗ್ಗೆ ಮಾಧ್ಯಮಗಳ ಮೂಲಕ ಜನರಿಗೆ ತಿಳಿಸಲು ಇಷ್ಟಪಡುತ್ತೇನೆ. ಕಾಂಗ್ರೆಸ್ ಅವರು ನಮ್ಮ ಪ್ರಧಾನಿ ಮೋದಿ ಬಗ್ಗೆ, ರಾಜ್ಯದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಬಗ್ಗೆ, ಸಿಎಂ ಬಗ್ಗೆ ನಾಲಿಗೆ ಮೇಲೆ ಹತೋಟಿ ಇಲ್ಲದೇ, ಬಾಯಿಗೆ ಬಂದಂಗೆ ಟೀಕೆ, ಟಿಪ್ಪಣಿ ಮಾಡುತ್ತಿದ್ದಾರೆ. ಅವರ ಬಳಸುತ್ತಿರುವ ಭಾಷೆ ಸಂಸದೀಯ ಭಾಷೆ ಅಲ್ಲ. ಅಂತಹ ಒಂದು ಕೆಟ್ಟ ನಡವಳಿಕೆ ನಾವು ಕಾಣುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Govinda Karajola 1

ನಾನು ಕಾಂಗ್ರೆಸ್ ನಾಯಕರಿಗೆ ಪ್ರಶ್ನೆ ಮಾಡೋಕೆ ಇಷ್ಟ ಪಡುತ್ತೇನೆ. ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ರೈತರ ಆದಾಯ ಹೆಚ್ಚಾಗಬೇಕು. ಬೆಳೆಗೆ ಯೋಗ್ಯ ಬೆಲೆ ಸಿಗಬೇಕು, ರೈತರು ನೆಮ್ಮದಿಯಿಂದ ಇರಬೇಕು. ರೈತರಿಗೂ ಪಿಂಚಣಿ ಸಿಗಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದ ಇತ್ತು. ಈ ದೇಶದಲ್ಲಿ ಮೊದಲ ಬಾರಿಗೆ ಮೋದಿ ಅವರು ರೈತರಿಗೆ ಪರೋಕ್ಷವಾಗಿ ಪಿಂಚಣಿ ಕೊಡುವ ಕೆಲಸ ಮಾಡುತ್ತಿದ್ದಾರೆ. ಇದನ್ನ ಕಾಂಗ್ರೆಸ್ ಅವರು ಮೆಚ್ಚಬೇಕಾಗಿತ್ತು. ದೇಶಕ್ಕೆ ಸ್ವಾತಂತ್ರ್ಯ ಬಂದ 75 ವರ್ಷದಲ್ಲಿ 60 ವರ್ಷ ಆಡಳಿತ ಮಾಡಿದ ಕಾಂಗ್ರೆಸ್ ಪಕ್ಷ ಏನೂ ಮಾಡಿಲ್ಲ. ರೈತರ ದೇಶದ ಬೆನ್ನೆಲುಬು ಅನ್ನುತ್ತಲೇ ಅದನ್ನ ಮುರಿದಿದ್ದಾರೆ ಎಂದು ಟೀಕಿಸಿದರು.

narendra modi 1

ಕೊರೊನಾ, ಪ್ರವಾಹ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಎರಡು ವರ್ಷ ಮಾಡಿದ ಕಾರ್ಯ ಮೆಚ್ಚದೆ, ಕೈ ನಾಯಕರು ಆರೋಪ ಮಾಡುತ್ತಿದ್ದಾರೆ. ನಾವು ಮಾಡಿದ ಕೆಲಸಗಳು ಕೈ ನಾಯಕರಿಗೆ ಕಾಣುತ್ತಿಲ್ಲ. ಎಲ್ಲೋ ಒಂದು ಕಡೆ ಕೈ ನಾಯಕರು ಹತಾಶರಾಗಿ ನಾವು ಮಾಡುವ ಕಾರ್ಯವನ್ನು ಟೀಕೆ ಮಾಡುತ್ತಿದ್ದಾರೆ. 60 ವರ್ಷಗಳ ಆಡಳಿತದಲ್ಲಿ ಅವರ ಸಾಧನೆ ಶೂನ್ಯ. ಏನೂ ಮಾಡದೇ ತೊರಿಸೋದಿಕ್ಕೆ ಆಗದಿದ್ದಾಗ ದೇಶದ ಉದ್ದಗಲಕ್ಕೂ ದಲಿತರು, ಹಿಂದುಳಿದವರು ಕಾಂಗ್ರೆಸ್ ಬಿಟ್ಟು ಮೋದಿ ಅವರ ಕೈ ಬಲಪಡಿಸುವ ಕೆಲಸ ಮಾಡ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ರಸ್ತೆಯಲ್ಲಿದ್ದ ಸಸಿ ಕಿತ್ತುಕೊಂಡು ನೆಟ್ಟಿಗರ ಕಣ್ಣಿಗೆ ಗುರಿಯಾದ ಮಹಿಳೆಯರು – ವೀಡಿಯೋ ವೈರಲ್

ಕಾಂಗ್ರೆಸ್ ಅವರಿಗೆ ದೀನದಲಿತರು, ಅಲ್ಪಸಂಖ್ಯಾತರ ಬಗ್ಗೆ ಅವಹೇಳನಕಾರಿ ಮಾತನಾಡುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ದಲಿತರ ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂದು ಹೇಳ್ತಾರೆ. ಈ ಮಾತು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತದಲ್ಲ. ಅವರು ಮಾಜಿ ಮುಖ್ಯಮಂತ್ರಿಗಳು, ಪ್ರತಿಪಕ್ಷದ ನಾಯಕರಿದ್ದಾರೆ. ಒಬ್ಬ ಹಿರಿಯ ರಾಜಕಾರಣಿಗಳಾಗಿ ಈ ರೀತಿ ಮಾತನಾಡೋದು ಅವರಿಗೆ ಶೋಭೆ ತರುವಂತದಲ್ಲ ಎಂದು ಸಲಹೆ ನೀಡಿದರು.

Congress

ನಮ್ಮ ಬಗ್ಗೆ ಹಗುರವಾಗಿ ಮಾತನಾಡೋದು ಸರಿಯಲ್ಲ. ಈ ದೇಶದ ದೀನದಲಿತರು, ಅಲ್ಪಸಂಖ್ಯಾತರು ಕಾಂಗ್ರೆಸ್ ನ ಗುಲಾಮರಲ್ಲ. ಅಲ್ಪಸಂಖ್ಯಾತರು, ದೀನದಲಿತರಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚಾಗುತ್ತಿದೆ. ವಿದ್ಯಾವಂತರು ಹೆಚ್ಚಾದ ಮೇಲೆ ಕಾಂಗ್ರೆಸ್ ಮಾಡಿದ ದ್ರೋಹವನ್ನು ತಿಳಿದುಕೊಳ್ಳುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷ ಈಗ ಅವಸಾನದ ಅಂಚಿನಲ್ಲಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

TAGGED:bjpcongressGovind Karajolanarendra modiಕಾಂಗ್ರೆಸ್ಗೋವಿಂದ ಕಾರಜೋಳನರೇಂದ್ರ ಮೋದಿಬಿಜೆಪಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

donald trump 2
Latest

4-5 ವಾರಗಳವರೆಗೆ ಮುಂದುವರಿಯುತ್ತೆ – ಅರಬ್‌ ರಾಷ್ಟ್ರಗಳು ನಮ್ಮ ಜೊತೆ ಸೇರಲು ಬಯಸುತ್ತಿವೆ: ಟ್ರಂಪ್‌

Public TV
By Public TV
22 minutes ago
MLC Bhojegowda
Chikkamagaluru

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭೋಜೇಗೌಡ ಸೇಫ್ – ಸ್ವತಃ ವಿಡಿಯೋ ಮಾಡಿ ಕಳಿಸಿರುವ MLC

Public TV
By Public TV
45 minutes ago
Sabarimala Temple
Latest

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Public TV
By Public TV
2 hours ago
Khamenei Wife
Latest

ಖಮೇನಿ ಹತ್ಯೆಯಾದ ಎರಡು ದಿನಗಳ ಬಳಿಕ ಪತ್ನಿ ಮನ್ಸೌರೆ ಸಾವು

Public TV
By Public TV
2 hours ago
gold price hike
Latest

Iran War| ಹೂಡಿಕೆದಾರರಿಗೆ 8 ಲಕ್ಷ ಕೋಟಿ ಲಾಸ್‌ – 2 ಲಕ್ಷ ದಾಟುತ್ತಾ ಚಿನ್ನದ ದರ?

Public TV
By Public TV
2 hours ago
Narendra Modi Ayatollah Ali Khamenei
Latest

ಇರಾನ್‌ ಸರ್ವೋಚ್ಚ ನಾಯಕ ಖಮೇನಿ ಹತ್ಯೆಯನ್ನು ಭಾರತ ಖಂಡಿಸಿಲ್ಲ ಯಾಕೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?