ಬೆಂಗಳೂರು : ಕೋಲಾರದಲ್ಲಿ (Kolar) ನಿಂತರೂ ಸಿದ್ದರಾಮಯ್ಯ (Siddaramaiah) ಅವರಿಗೆ ಸೋಲು ಖಚಿತ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ (Govinda Karajola) ಭವಿಷ್ಯ ನುಡಿದರು.
ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಸಿಎಂ ಆದವರು, ಡಿಸಿಎಂ ಆದವರು, ವಿಪಕ್ಷ ನಾಯಕ ಆಗಿರೋರು. ಅಂತಹವರು ಇವತ್ತು ಕ್ಷೇತ್ರಕ್ಕಾಗಿ ಅಲೆಮಾರಿ ತರಹ ಓಡಾಡುತ್ತಿದ್ದಾರೆ. ಇದು ವಿಪರ್ಯಾಸ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಫೇಸ್ಬುಕ್ ಸುಂದರಿಗಾಗಿ ಪತ್ನಿಗೆ ವಿಷವಿಟ್ಟ ಪತಿರಾಯ!
ಸಿದ್ದರಾಮಯ್ಯಗೆ ಕೋಲಾರವೂ ಸೇಫ್ ಅಲ್ಲ. ಸಿದ್ದರಾಮಯ್ಯ ಕೋಲಾರದಲ್ಲಿ ನಿಂತರೂ ಸೋಲುತ್ತಾರೆ. ಕೋಲಾರದ ಜನರ ಪ್ರೀತಿ, ವಿಶ್ವಾಸಕ್ಕೆ ಮಣಿದು ಕೋಲಾರಕ್ಕೆ ಬಂದಿದ್ದೇನೆ ಎಂದು ಹೇಳುತ್ತಾರೆ. ಬಳಿಕ ಹೈಕಮಾಂಡ್ ಹೇಳಿದೆ ಹಾಗೆ ಕೇಳುತ್ತೇನೆ ಅಂತಾರೆ. ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡುತ್ತಿದ್ದಾರೆ. ಕೋಲಾರದಲ್ಲಿ ಬಿಜೆಪಿಯೇ (BJP) ಗೆಲ್ಲೋದು ಎಂದು ಕೋಲಾರದ ಬಗ್ಗೆ ಭವಿಷ್ಯ ನುಡಿದರು. ಇದನ್ನೂ ಓದಿ: ಮೆಟ್ರೋ ಪಿಲ್ಲರ್ ದುರಂತ – ತಪ್ಪಿತಸ್ಥರಿಗೆ ಪೊಲೀಸರಿಂದ ಬುಲಾವ್
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k