ಮಡಿಕೇರಿ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಎರಡು ಗುಂಪಿನ ನಡುವೆ ನಡೆದ ಹೊಡೆದಾಟದಲ್ಲಿ ವಿದ್ಯಾರ್ಥಿಯೋರ್ವನಿಗೆ ಕೈ ಹಾಗೂ ಬೆನ್ನಿನ ಭಾಗಕ್ಕೆ ಚಾಕು ಇರಿದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ.
ಸಂದೀಪ್ ಹಲ್ಲೆಗೊಳಗಾದ ವಿದ್ಯಾರ್ಥಿ. ಇದೇ ಸಂದರ್ಭದಲ್ಲಿ ಧನುಷ್ ಹಾಗೂ ವಿಕ್ರಂ ಎಂಬವರಿಗೆ ತೀವ್ರವಾಗಿ ಪೆಟ್ಟು ಬಿದ್ದಿದೆ. ಕುಶಾಲನಗರದ ಸುಂದರ ನಗರ ಕಾಲೇಜಿನಲ್ಲಿ ಹಿಜಬ್ಗೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಕ್ಲುಲ್ಲಕ ಕಾರಣಕ್ಕೆ ಗುಂಪಿನಲ್ಲಿ ಹೊಡೆದಾಟ ನಡಿದಿದೆ. ಅಷ್ಟೇ ಅಲ್ಲದೆ ಕೈ ಕೈಮಿಲಾಯಿಸಿದ ವಿದ್ಯಾರ್ಥಿಗಳು ಬಳಿಕ ಮಾರಕಾಸ್ತ್ರಗಳಿಂದ ಪರಸ್ಪರ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಹಿಜಬ್ – ಕೇಸರಿ ಸಂಘರ್ಷದ ಬದಲು ಸಾಮರಸ್ಯ ಕಾಪಾಡಿಕೊಳ್ಳಿ: ರೇಣುಕಾಚಾರ್ಯ
ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಸಂದೀಪ್ ಎಂಬಾತನ ಕೈ ಹಾಗೂ ಬೆನ್ನಿನ ಭಾಗಕ್ಕೆ ಚಾಕು ಇರಿದಿದ್ದಾರೆ. ಹಾಗೂ ಧನುಷ್, ವಿಕ್ರಂ ಎಂಬವರಿಗೆ ತೀವ್ರವಾಗಿ ಪೆಟ್ಟು ಬಿದ್ದಿದೆ. ಬಳಿಕ ಗಾಯಾಳುಗಳನ್ನು ಕುಶಾಲನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹುಡುಗಿಯ ವಿಚಾರವಾಗಿ ಎರಡು ಗುಂಪುಗಳ ನಡುವೆ ಕಲಹ ಏರ್ಪಾಟಿದೆ ಎಂದು ಹೇಳಲಾಗಿದೆ. ಸದ್ಯ ಕುಶಾಲನಗರ ಪೊಲೀಸರು ಪ್ರಕರಣವನ್ನು ದಾಖಲು ಮಾಡಿಕೊಂಡು ನೈಜ ಘಟನೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಕಾಲೇಜಿನಲ್ಲಿ ಕೇಸರಿ ಧ್ವಜ ಹಾರಾಟ, ಕಲ್ಲು ತೂರಾಟ – ನಿಷೇಧಾಜ್ಞೆ ಜಾರಿ