ಚಿತ್ರ ವೀಕ್ಷಣೆಗಾಗಿ ರಜೆ ಕೇಳಿದ ಗ್ರಾಮ ಪಂಚಾಯ್ತಿ ನೌಕರ

Public TV
2 Min Read
bgk film leave letter collage copy

ಬಾಗಲಕೋಟೆ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಬಹುನಿರೀಕ್ಷಿತ ‘ನಟಸಾರ್ವಭೌಮ’ ಚಿತ್ರ ವೀಕ್ಷಿಸಲು ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ರಜೆ ಕೋರಿ ಪತ್ರ ಬರೆದಿದ್ದಾರೆ.

ಅನಿಲ್ ಚೌಹಾನ್ ರಜೆ ಪತ್ರ ಕಳುಹಿಸಿದ ನೌಕರ. ಅನಿಲ್ ಬಾಗಲಕೋಟೆ ತಾಲೂಕಿನ ಸೀಗಿಕೇರಿ ಪಂಚಾಯ್ತಿ ಬಿಲ್ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅನಿಲ್, ಪುನೀತ್ ರಾಜ್‍ಕುಮಾರ್ ಅವರ ಕಟ್ಟಾ ಅಭಿಮಾನಿ ಆಗಿದ್ದು, ಗುರುವಾರ ಬಿಡುಗಡೆ ಆಗುತ್ತಿರುವ ನಟಸಾರ್ವಭೌಮ ಚಿತ್ರ ವೀಕ್ಷಿಸಲು ರಜೆ ಕೋರಿದ್ದಾರೆ.

ಅನಿಲ್ ಅವರು ಪಂಚಾಯ್ತಿ ಪಿಡಿಓ ಹಿರೇಮಠ್ ಅವರಿಗೆ ವಾಟ್ಸಪ್ ಮೂಲಕ ರಜೆ ಪತ್ರ ಕಳುಹಿಸಿದ್ದಾರೆ. ಅನಿಲ್ ಅವರ ರಜೆ ಕೋರಿಕೆಗೆ ಪಿಡಿಓ ಹಿರೇಮಠ್ ಅವರು ರಜೆ ನೀಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ನೆಚ್ಚಿನ ನಟನ ಸಿನಿಮಾ ನೋಡಲು ರಜೆ ಪತ್ರ ಬರೆದ ವಿದ್ಯಾರ್ಥಿನಿ

ಪತ್ರದಲ್ಲಿ ಏನಿದೆ?
ನಟಸಾರ್ವಭೌಮ ಚಿತ್ರ ಬಾಗಲಕೋಟೆಯಲ್ಲಿ ಫೆ. 7ರಂದು ನೋಡಲು ರಾಜ್ಯಾದ್ಯಂತ ಈ ಚಿತ್ರವು ಬಿಡುಗಡೆ ಆಗಲಿದೆ. ಈ ಚಿತ್ರ ಕುಟುಂಬದ ಎಲ್ಲಾ ಸದಸ್ಯರು ಹಾಗೂ ಎಲ್ಲಾ ವಯಸ್ಸಿನವರು ನೋಡುವಂತಹ ಒಳ್ಳೆಯ ಚಿತ್ರವಾಗಿದ್ದು ಹಾಗೂ ಚಿತ್ರದ ನಟ ನಮ್ಮ ರಾಜಕುಮಾರ ಅವರ ಹೆಮ್ಮೆಯ ತೃತೀಯ ಮಗನಾದ ಪುನೀತ್ ರಾಜ್‍ಕುಮಾರ್ ಅವರಾಗಿದ್ದು, ಹಾಗಾಗಿ ನಾನು ನಟಸಾರ್ವಭೌಮ ಚಿತ್ರ ನೋಡಲು ದಿನಾಂಕ 7ರಂದು ಆನ್‍ಲೈನ್‍ನಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಿರುವುದರಿಂದ ನಾನು ಒಂದು ದಿನದ ರಜೆಯನ್ನು ಕೋರಿರುತ್ತೇನೆ. ಆದ್ದರಿಂದ ನನಗೆ ಕಾರ್ಯಾಲಯಕ್ಕೆ ಹಾಜರಾಗಲು ಆಗುವುದಿಲ್ಲ ಎಂದು ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಸಿನಿಮಾ ನೋಡಲು ರಜೆ ಕೇಳಿದ ಮೈಸೂರು ವಿದ್ಯಾರ್ಥಿನಿಗೆ ಪುನೀತ್ ಸಲಹೆ

bgk film leave letter 4 copy

ನಟಸಾರ್ವಭೌಮ ಚಿತ್ರದಲ್ಲಿ ಪುನೀತ್ ರಾಜ್‍ಕುಮಾರ್ ಜೊತೆ ಡಿಂಪಲ್ ಬೆಡಗಿ ರಚಿತಾ ರಾಮ್, ಅನುಪಮಾ ಪರಮೇಶ್ವರ್, ಸಾಧುಕೋಕಿಲಾ, ಬಿ. ಸರೋಜಾ ದೇವಿ, ಚಿಕ್ಕಣ್ಣ, ರವಿಶಂಕರ್ ನಟಿಸಿದ್ದಾರೆ. ಈ ಚಿತ್ರವನ್ನು ರಾಕ್‍ಲೈನ್ ವೆಂಕಟೇಶ್ ಅವರು ನಿರ್ಮಿಸಿದ್ದು, ಪವನ್ ಒಡೆಯರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. `ರಣವಿಕ್ರಮ’ ಸಿನಿಮಾದ ಬಳಿಕ ಪುನೀತ್ ರಾಜ್‍ಕುಮಾರ್ ಹಾಗೂ ಪವನ್ ಒಡೆಯರ್ ಒಂದಾಗಿರುವುದು ಸಾಕಷ್ಟು ಕುತೂಹಲ ಮೂಡಿಸಿದ್ದು, ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರ ಆಸ್ಟ್ರೇಲಿಯಾ, ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಬಿಡುಗಡೆಯಾಗಲಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *