ಗ್ರಾಮದ ವಿಶೇಷ ಜಾತ್ರೆಯಲ್ಲಿ ಗ್ರಾ.ಪಂ ಸದಸ್ಯನ ಭೀಕರ ಹತ್ಯೆ

Public TV
1 Min Read
MND MURDER

– ತಮ್ಮನ ಮಗ್ಳ ಪ್ರೇಮ ವಿವಾಹದಿಂದ ಕೊಲೆಯಾದ್ರಾ.?

ಮಂಡ್ಯ: ಹಳೇ ವೈಷಮ್ಯಕ್ಕೆ ಗ್ರಾಮ ಪಂಚಾಯಿತಿ ಸದಸ್ಯನನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ನಡೆದಿದೆ.

ತಿಮ್ಮೇಗೌಡ(50) ಮೃತ ಪಂಚಾಯಿತಿ ಸದಸ್ಯ. ಗ್ರಾಮದೇವತೆ ದೇವೀರಮ್ಮನಿಗೆ ವರ್ಷಕ್ಕೊಮ್ಮೆ ದೇವಾಲಯದ ಬಾಗಿಲು ತೆರೆದು ದೇವಿಗೆ ಪೂಜೆ ಸಲ್ಲಿಸುವ ವಿಶೇಷ ಜಾತ್ರೆ ನಡೆಯಲಿದ್ದು, ಜಾತ್ರೆಯ ಸಂದರ್ಭದಲ್ಲೇ ಹಳೇ ದ್ವೇಷ ಹಿನ್ನೆಲೆಯಲ್ಲಿ ಉತ್ಸವದಲ್ಲಿ ಗಲಾಟೆ ತೆಗೆದು ಗ್ರಾಪಂ ಸದಸ್ಯನ ಭೀಕರ ಹತ್ಯೆ ಮಾಡಲಾಗಿದೆ.

vlcsnap 2019 02 19 14h48m53s439

ಕೊಲೆಯಾದ ತಿಮ್ಮೇಗೌಡರಿಗೆ ಲಾಂಗು, ಮಚ್ಚಿನಿಂದ ಹಲ್ಲೆ ಮಾಡಿ ಬಳಿಕ ಚಾಕು ಇರಿದು ಕೊಲೆ ಮಾಡಲಾಗಿದೆ. ಬಿಡಿಸಲು ಬಂದ ನಾಲ್ಕು ಮಂದಿಗೂ ಗಂಭೀರ ಗಾಯಗಳಾಗಿವೆ. ವಿನಾಯಕ, ಗೌತಮ್, ಮಹೇಶ್, ಸ್ವಾಮೀಗೌಡಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳು ಮೈಸೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಿಮ್ಮೇಗೌಡರ ತಮ್ಮನ ಮಗಳನ್ನು ಅದೇ ಗ್ರಾಮದ ಮದನ್ ಪ್ರೇಮ ವಿವಾಹ ವಾಗಿದ್ದನು. ಪದೇ ಪದೇ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ತಿಮ್ಮೇಗೌಡರು ನ್ಯಾಯ ಪಂಚಾಯಿತಿ ಮಾಡಿಸಿದ್ದರು. ವಿಚ್ಛೇದನ ನೀಡುವಂತೆ ಪಂಚಾಯಿತಿಯಲ್ಲಿ ತೀರ್ಮಾನ ಆಗಿತ್ತು. ಈ ಹಳೇ ದ್ವೇಷದ ಹಿನ್ನೆಲೆಯಿಂದ ಮದನ್ ಮತ್ತು ಸಹಚರರು ಉತ್ಸವದ ವೇಳೆ ಗಲಾಟೆ ಮಾಡಿ ಕೊಲೆ ಮಾಡಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.

ಈ ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *