ಭ್ರಷ್ಟಾಚಾರ ಬಯಲು ಮಾಡಿದಕ್ಕೆ ಮಾರಣಾಂತಿಕ ಹಲ್ಲೆ!

Public TV
1 Min Read
dvg halle

ದಾವಣಗೆರೆ: ಗ್ರಾಮ ಪಂಚಾಯ್ತಿಯಲ್ಲಿನ ಭ್ರಷ್ಟಾಚಾರ ಬಯಲಿಗೆಳೆದ ಹಿನ್ನೆಲೆ, ಭ್ರಷ್ಟಾಚಾರ ವಿರೋಧಿ ವೇದಿಕೆ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದಲ್ಲಿ ನಡೆದಿದೆ.

ಕುಂದೂರು ಗ್ರಾಮ ಪಂಚಾಯ್ತಿಯಲ್ಲಿ ನಡೆದ ಭ್ರಷ್ಟಾಚಾರವನ್ನು ಬಯಲು ಮಾಡಿದಕ್ಕೆ ಹಲ್ಲೆ ಮಾಡಲಾಗಿದೆ. ಭ್ರಷ್ಟಾಚಾರ ವಿರೋಧಿ ವೇದಿಕೆ ಮುಖಂಡ ಪ್ರಸನ್ನ ಕುಮಾರ್ ಮೇಲೆ ಪಂಚಾಯ್ತಿಯ ಕೆಲ ಸದಸ್ಯರು ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಪ್ರಸನ್ನ ಅವರನ್ನು ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

dvg halle 1

ಪ್ರಸನ್ನ ಕುಮಾರ್ ಅವರು ಕುಂದೂರು ಗ್ರಾಮ ಪಂಚಾಯ್ತಿಯಲ್ಲಿ ನಡೆಯುತ್ತಿದ್ದ ಲಕ್ಷಾಂತರ ರೂಪಾಯಿ ಹಗರಣ ಬಯಲಿಗೆಳೆದಿದ್ದರು. ಅಲ್ಲದೆ ಭ್ರಷ್ಟಾಚಾರ ಬಯಲಿಗೆಳೆದು ಗ್ರಾಮ ಪಂಚಾಯತಿ ಉಪಾಧ್ಯಕ್ಷನ ಸ್ಥಾನವನ್ನು ವಜಾಗೊಳಿಸಿದ್ದರು. ಇದರಿಂದಾಗಿ ಪ್ರಸನ್ನ ಅವರ ಮೇಲೇ ಪಂಚಾಯ್ತಿಯ ಕೆಲ ಸದಸ್ಯರಿಗೆ ದ್ವೇಷ ಹುಟ್ಟಿಕೊಂಡಿತ್ತು. ಆದರಿಂದ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜಮ್ಮ ಹಾಗೂ ಅವರ ಪತಿ, ಮಾಜಿ ಅಧ್ಯಕ್ಷೆ ಗೌರಮ್ಮ ಹಾಗೂ ಅವರ ಮಗ ಮತ್ತು ಕೊಮ್ರಿ ಮಂಜುನಾಥ ಹಾಗೂ ಆಂಜನೇಯ ಎಂಬವರು ಪ್ರಸನ್ನ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

ಘಟನೆ ಕುರಿತು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *