ಚಿಕ್ಕಬಳ್ಳಾಪುರ: ಬೈಕಿನಲ್ಲಿ ತೆರಳುತ್ತಿದ್ದ ಗ್ರಾಮಪಂಚಾಯ್ತಿ ಸದಸ್ಯನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಎಚ್ ಕ್ರಾಸ್ ಬಳಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತರಬಹಳ್ಳಿ ಗ್ರಾಮದ ಗ್ರಾಮಪಂಚಾಯತ್ ಸದಸ್ಯ ತ್ಯಾಗರಾಜ್ ಹಲ್ಲೆಗೊಳಗಾದವ. ಬೆಳಗ್ಗೆ ಎಚ್ ಕ್ರಾಸ್ನಿಂದ ಸ್ವಗ್ರಾಮ ತರಬಹಳ್ಳಿಗೆ ತೆರಳುತ್ತಿದ್ದ ಗ್ರಾಮಪಂಚಾಯ್ತಿ ಸದಸ್ಯನ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡ ಮನಸ್ಸೋ ಇಚ್ಚೆ ಲಾಂಗ್ನಿಂದ ಅಟ್ಯಾಕ್ ಮಾಡಿ ಹೊಟ್ಟೆಯ ಹಿಂಭಾಗಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.
- Advertisement 2
- Advertisement 3
ಸದ್ಯ ಗಾಯಾಳು ಗ್ರಾಮಪಂಚಾಯ್ತಿ ಸದಸ್ಯನನ್ನು ಹೊಸಕೋಟೆ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ನಂತರ ಶಿಡ್ಲಘಟ್ಟ ಗ್ರಾಮಾಂತರ ಪಿಎಸ್ಐ ಹರೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ಬಳಿಕ ಪಿಎಸ್ಐ ಹರೀಶ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲು ಮುಂದಾಗಿದ್ದಾರೆ. ಹಳೆ ವೈಷಮ್ಯದ ಹಿನ್ನೆಲೆ ಘಟನೆ ನಡೆದಿದೆ ಎನ್ನಲಾಗಿದ್ದು, ಪೊಲೀಸರ ತನಿಖೆಯಿಂದ ದುಷ್ಕರ್ಮಿಗಳು ಯಾರೆಂಬುದು ಬಯಲಾಗಬೇಕಿದೆ.