ವಿಜಯಪುರ: ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ ಮೊಮ್ಮಗನ (Grandson) ಮೃತದೇಹ ಕಂಡು ತಾತ (Grandfather) ಹೃದಯಾಘಾತಕ್ಕೆ (Heart Attack) ಒಳಗಾಗಿ ಇಹಲೋಕ ತ್ಯಜಿಸಿದ ಘಟನೆ ವಿಜಯಪುರದಲ್ಲಿ (Vijayapura) ನಡೆದಿದೆ.
ಜಿಲ್ಲೆಯ ನಿಡಗುಂದಿ ಪಟ್ಟಣದ ವಂದಾಲ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಯುವಕ ಅಭಿಷೇಕ್ ಪ್ಯಾಟಿಗೌಡ್ರ (18) ಅಪಘಾತದಲ್ಲಿ ಮೃತಪಟ್ಟಿದ್ದ. ಈತ ಬೈಕ್ನಲ್ಲಿ ಹೋಗುತ್ತಿದ್ದಾಗ ಲಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದ. ಇದನ್ನೂ ಓದಿ: ಮುಷ್ಕರದಲ್ಲಿ ಭಾಗವಹಿಸಿದ್ದ ಸರ್ಕಾರಿ ನೌಕರ ಹೃದಯಾಘಾತದಿಂದ ಸಾವು
ಬಳಿಕ ಯುವಕನ ಮೃತದೇಹವನ್ನು ಕಂಡ ತಾತ ಬಸಪ್ಪ ಗುಡ್ಡದ (74) ಅವರಿಗೆ ಹೃದಯಾಘಾತವಾಗಿದ್ದು, ಅವರೂ ಸಾವನ್ನಪ್ಪಿದ್ದಾರೆ. ಬಳಿಕ ಮೊಮ್ಮಗ ಹಾಗೂ ತಾತನ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ವಂದಾಲ ಗ್ರಾಮದಲ್ಲಿ ನೆರವೇರಿಸಿದ್ದಾರೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ರೂಪಾ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಿಸಿದ ರೋಹಿಣಿ