ಕೊಪ್ಪಳ: ಕೇವಲ 100 ರೂ. ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಮೊಮ್ಮಗ ಅಜ್ಜಿಯನ್ನೇ ಕೊಲೆ ಮಾಡಿರುವ ಘಟನೆ ಕೊಪ್ಪಳದ(Kopala) ಕನಕಗಿರಿ(Kanakagiri) ಪಟ್ಟಣದಲ್ಲಿ ನಡೆದಿದೆ.
ಕನಕಮ್ಮ ನಾಗಪ್ಪ ಬೊಕ್ಕಸದ(82) ಕೊಲೆಯಾದ ವೃದ್ಧೆ. ಮೊಮ್ಮಗ ಚೇತನ್ ಕುಮಾರ್ ಕೊಲೆ ಮಾಡಿರುವ ಆರೋಪಿ. ಇದನ್ನೂ ಓದಿ: ರಾಜ್ಯದಲ್ಲಿ ಭಾರೀ ಮಳೆ – 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿ
ಚೇತನ್ ಹಣ ನೀಡುವಂತೆ ತಂದೆ, ತಾಯಿ ಹಾಗೂ ಅಜ್ಜಿಯನ್ನು ಪ್ರತಿದಿನ ಪೀಡಿಸುತ್ತಿದ್ದ. ಅಜ್ಜಿ ಕನಕಮ್ಮನ ಕೈಕಾಲು ಹಿಡಿದಿದ್ದ. ಆದರೂ ಕನಕಮ್ಮ ಹಣ ಕೊಟ್ಟಿರಲಿಲ್ಲ. ಇದರಿಂದ ಕೋಪಗೊಂಡ ಚೇತನ್ ಅಜ್ಜಿ ಕನಕಮ್ಮನ ತಲೆಯ ಮೇಲೆ ರುಬ್ಬುವ ಕಲ್ಲು ಎತ್ತಿಹಾಕಿದ್ದ. ಕನಕಮ್ಮಳ ತಲೆಯ ಭಾಗಕ್ಕೆ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವದಿಂದ ಮನೆಯಲ್ಲಿಯೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮಳೆಯಿಂದ ಪಂದ್ಯ ರದ್ದು, ಕೋಲ್ಕತ್ತಾ ಔಟ್ – ಪ್ಲೇ ಆಫ್ ಸನಿಹದಲ್ಲಿ ಆರ್ಸಿಬಿ
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ್, ಪಿಐ ಎಂ.ಡಿ ಫೈಜುಲ್ಲಾ ಭೇಟಿ ನೀಡಿ, ಪರಿಶೀಲಿಸಿದರು. ಆರೋಪಿ ಚೇತನ್ಕುಮಾರ್ನನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಚೇತನ್ ತಂದೆ ವೆಂಕಟೇಶ್ ದೂರಿನಾಧರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.