Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಗ್ರೀನ್ ಸಿಗ್ನಲ್ – ಷರತ್ತುಗಳು ಅನ್ವಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಗ್ರೀನ್ ಸಿಗ್ನಲ್ – ಷರತ್ತುಗಳು ಅನ್ವಯ

Dharwad

ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಗ್ರೀನ್ ಸಿಗ್ನಲ್ – ಷರತ್ತುಗಳು ಅನ್ವಯ

Public TV
Last updated: September 3, 2024 6:56 pm
Public TV
Share
3 Min Read
Hubballi Edga Maidan Ganeshotsava
SHARE

ಹುಬ್ಬಳ್ಳಿ: ಹುಬ್ಬಳ್ಳಿಯ (Hubballi) ವಿವಾದಿತ ಈದ್ಗಾ ಮೈದಾನದಲ್ಲಿ (Idga Maidan) ಗಣೇಶ ಪ್ರತಿಷ್ಠಾಪನೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅನುಮತಿ ನೀಡಿದೆ. ಗಜಾನನೋತ್ಸವ ಮಹಾ ಮಂಡಳಿಗೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅನುಮತಿ ಪತ್ರ ನೀಡಿದ್ದಾರೆ.

ಸೆ.7 ರಂದು ಪ್ರತಿಷ್ಠಾಪನೆ, ಸೆ.9 ರಂದು ವಿಸರ್ಜನೆ ಸೇರಿದಂತೆ ಮೂರು ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ. ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಕಳೆದ ಬಾರಿ ರಾಜ್ಯಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಸುದ್ದಿ ಆಗಿತ್ತು. ಈ ವರ್ಷ ಪ್ರತಿಷ್ಠಾಪನೆಗೆ ನಾಲ್ಕೈದು ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು. ಕೆಲ ಷರತ್ತುಗಳೊಂದಿಗೆ ಮೂರು ದಿನಗಳ ಕಾಲ ಗಣೇಶೋತ್ಸವಕ್ಕೆ ಮಹಾನಗರ ಪಾಲಿಕೆ ಅನುಮತಿ ನೀಡಿದೆ.

GANESHA 1

 

ಷರತ್ತುಗಳು ಏನು?
* ಸಂಘಟನೆ ಪಾಲಿಕೆ ವಿಧಿಸುವ ಕರಾರುಗಳಿಗೆ ಬದ್ಧರಾಗಿರಬೇಕು.
* ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಮುನ್ನ ಕಡ್ಡಾಯವಾಗಿ ಪಾಲಿಕೆ ಮತ್ತು ಪೊಲೀಸ್ ಆಯುಕ್ತರ ಅನುಮತಿ ಪಡೆದುಕೊಳ್ಳಬೇಕು.
* ಸೆ.7ರಂದು ಬೆಳಗ್ಗೆ 06:00 ಗಂಟೆಯಿಂದ 08:00 ಗಂಟೆಯೊಳಗೆ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು. ಸೆ.9ರಂದು
ಮಧ್ಯಾಹ್ನ 12:00 ಗಂಟೆಯ ಒಳಗಾಗಿ ಗಣೇಶ ವಿಸರ್ಜನೆ ಮಾಡಬೇಕು.
* 30 ಅಡಿ ಉದ್ದ, 30 ಅಡಿ ಅಗಲಕ್ಕೆ ಮೀರದಂತೆ ಹಾಗೂ ಪಾಲಿಕೆ/ಪೊಲೀಸ್/ಕಂದಾಯ ಅಧಿಕಾರಿಗಳು ಸೂಚಿಸುವ ಜಾಗದಲ್ಲಿ ಮಾತ್ರ ಪೆಂಡಾಲನ್ನು ಹಾಕುವುದು.
* ಸದರಿ ಜಾಗದಲ್ಲಿ ಯಾವುದೇ ಖಾಯಂ ಕಟ್ಟಡ ನಿರ್ಮಿಸಬಾರದು.
* ಉತ್ಸವ ಮೂರ್ತಿಯ ಹೊರತಾಗಿ ಯಾವುದೇ ರೀತಿಯ ಬಾವುಟಗಳು ಹಾಗೂ ಇತರೆ ಮೈದಾನದ ಭಾಗದಲ್ಲಿ ಯಾವುದೇ ರೀತಿಯ ವಿವಾದಿತ ಹಾಗೂ ಪ್ರಚೋದನಕಾರಿ ಫೋಟೊಗಳನ್ನು, ಭಿತ್ತಿಪತ್ರ, ಬ್ಯಾನರ್&ಬಂಟಿಂಗ್ಸ್‌ಗಳನ್ನು ಅಳವಡಿಸಕೂಡದು ಹಾಗೂ ಪ್ರದರ್ಶಿಸಕೂಡದು. ಯಾವುದೇ ಪ್ರಚೋದನಕಾರಿ ಹಾಡುಗಳನ್ನು ಹಾಕಬಾರದು ಹಾಗೂ ಡಿಜೆ ಅಥವಾ ಇತರೇ ಕರ್ಕಶಯುಕ್ತ ಧ್ವನಿವರ್ಧಕಗಳನ್ನು ಉಪಯೋಗಿಸುವಂತಿಲ್ಲ.
* ಯಾವುದೇ ಮನರಂಜನಾ ಹಾಗೂ ಇನ್ನಿತರ ಕಾರ್ಯಕ್ರಮ ಕೈಗೊಳ್ಳಲು/ಆಯೋಜಿಸಲು ಅವಕಾಶ ಇರುವುದಿಲ್ಲ.
* ಗಣೇಶ ಚತುರ್ಥಿಯ ಉತ್ಸವ ಆಚರಿಸುವ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಗಲಭೆಗಳಿಗೆ ಅವಕಾಶಗಳನ್ನು ನೀಡಕೂಡದು. ಸಾರ್ವಜನಿಕರ ವಿರೋಧಗಳಿಗೆ ಮತ್ತು ಪ್ರತಿಭಟನೆಗಳಿಗೆ ಪ್ರಚೋದನೆಯನ್ನು ನೀಡುವಂತೆ ಆಯೋಜಿಸಬಾರದು.
* ಸಾರ್ವಜನಿಕ ಗಣೇಶ ಉತ್ಸವ ಆಚರಣೆಗಾಗಿ ಪೆಂಡಾಲ್‌ಗಳಲ್ಲಿ ಯಾವುದೇ ವಾಣಿಜ್ಯ ಹಾಗೂ ಇನ್ನಿತರ ಜಾಹಿರಾತುಗಳನ್ನು ಹಾಕುವಂತಿಲ್ಲ.
* ಈ ಸಂಧರ್ಭದಲ್ಲಿ ಸಾರ್ವಜನಿಕ ಶಾಂತಿಯನ್ನು ಹಾಗೂ ಕೋಮು ಸೌಹಾರ್ದತೆಯನ್ನು ಕಾಪಾಡಿಕೊಂಡು ಹೋಗುವ ಭರವಸೆಯನ್ನು ಸಮಾರಂಭದ ಆಯೋಜಕರು ನೀಡಬೇಕು ಹಾಗೂ ಯಾವುದೇ ಪರಿಸ್ಥಿತಿಯಲ್ಲಿ ಅನಾವಶ್ಯಕವಾಗಿ ಗಲಭೆಗಳು, ಗಲಾಟೆಗಳು ಉಂಟಾಗಿ ಸಾರ್ವಜನಿಕರ ಸ್ವಸ್ಥತೆಗೆ ಮತ್ತು ಆಸ್ತಿ ಪಾಸ್ತಿಗಳಿಗೆ ಹಾನಿಯಾದ ಸಂಧರ್ಭದಲ್ಲಿ ಸಂಪೂರ್ಣ ಜವಾಬ್ದಾರಿಯನ್ನು ಸಮಾರಂಭದ ಆಯೋಜಕರು ವಹಿಸಿಕೊಂಡು ಮುಂದಿನ ಯಾವುದೇ ಕಾನೂನು ರೀತಿಯ ಕ್ರಮಗಳನ್ನು ಒಪ್ಪಿಕೊಂಡು ತನ್ಮೂಲಕ ಉಂಟಾಗುವ ಹಾನಿಯ ಮೊತ್ತವನ್ನು ಭರಿಸುವುದಾಗಿ ಘೋಷಿಸಿ ಲಿಖಿತವಾಗಿ ಪ್ರಮಾಣವನ್ನು ಸಲ್ಲಿಸಬೇಕು.

ganesha 1
* ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳು ಸೂಚಿಸಿದಂತೆ ಗಣೇಶ ಮೆರವಣಿಗೆ ಮಾರ್ಗಕ್ಕೆ ಬದ್ಧರಾಗಿರತಕ್ಕದ್ದು ಹಾಗೂ ಸದರಿ ಮೆರವಣಿಗೆಯನ್ನು ಒಂದು ಗಂಟೆಯ ಒಳಗೆ ಮುಕ್ತಾಯಗೊಳಿಸಿ ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳು ಸೂಚಿಸಿದ ಸ್ಥಳದಲ್ಲಿ ಗಣೇಶ ವಿಸರ್ಜನೆ ಮಾಡತಕ್ಕದ್ದು.
* ಸಮಾರಂಭವನ್ನು ಆಚರಿಸಿದ ನಂತರದಲ್ಲಿ ಪಾಲಿಕೆಯ ಸ್ಥಳವನ್ನು ತೆರವುಗೊಳಿಸಿ ಮತ್ತು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಮಹಾನಗರ ಪಾಲಿಕೆಗೆ ವರದಿಯನ್ನು ನೀಡಬೇಕು.
* ಕಾಲಕಾಲಕ್ಕೆ ಮಾನ್ಯ ಸರ್ವೋಚ್ಚ ನ್ಯಾಯಾಲಯ ಹಾಗೂ ಉಚ್ಚ ನ್ಯಾಯಾಲಯ ನೀಡುವ ಆದೇಶ ಹಾಗೂ ಸೂಚನೆಗಳಿಗೆ ಬದ್ಧರಾಗಿರಬೇಕು.
* ಪೊಲೀಸ್ ಇಲಾಖೆಯಿಂದ ಭದ್ರತೆ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡತಕ್ಕದ್ದು.
* ಗಣೇಶ ಮೂರ್ತಿ ಪ್ರತಿಷ್ಠಾಪನೆ ಪಾಲಿಕೆ, ಪೊಲೀಸ್ ಹಾಗೂ ಕಂದಾಯ ಅಧಿಕಾರಿಗಳು ಸೂಚಿಸುವ ಜಾಗದಲ್ಲಿ ಹಾಗೂ ವಿಧಿಸುವ ಮಾನದಂಡಗಳಿಗೆ ಅನುಗುಣವಾಗಿ ಮಾತ್ರ ಆಚರಿಸಬೇಕು.
* ಸರ್ಕಾರದ ಮತ್ತು ಇತರೆ ಇಲಾಖೆಗಳ ಇನ್ನಿತರ ಕರಾರುಗಳು ಅನ್ವಯಿಸುತ್ತವೆ.
* ಈದ್ಗಾ ಮೈದಾನದ ಆವರಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಯಾವುದೇ ಪಟಾಕಿ ಹಾಗೂ ಇತರೆ ಸಿಡಿಮದ್ದುಗಳನ್ನು ಬಳಸಬಾರದು.
* ಯಾವುದೇ ರೀತಿಯ ಪ್ರಚೋದನಾಕಾರಿ ಹೇಳಿಕೆ ಹಾಗೂ ಭಾಷಣ ಮಾಡಕೂಡದು.
* ಅನ್ಯ ಧರ್ಮೀಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತಹ ಯಾವುದೇ ಕಾರ್ಯಕ್ರಮಗಳನ್ನು ಅಥವಾ ಧಾರ್ಮಿಕ ಚಟುವಟಿಕೆಗಳನ್ನು ಮಾಡಬಾರದು.

TAGGED:GaneshotsavahubballiIdga Maidanಈದ್ಗಾ ಮೈದಾನಗಣೇಶೋತ್ಸವಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Dharwad 4
Dharwad

ಸಂಗ್ರಹಿಸಿದ್ದ ಪೆಟ್ರೋಲ್ ಕ್ಯಾನ್‌ಗೆ ಬೆಂಕಿ, ಇಡೀ ಮನೆಯೇ ಧಗಧಗ – ಮಹಿಳೆ ಗಂಭೀರ

Public TV
By Public TV
45 minutes ago
US Strikes
Latest

900 ಕೆಜಿ ಬಂಕರ್ ಬಸ್ಟರ್ ಬಾಂಬ್‌ನಿಂದ ಅಮೆರಿಕ ದಾಳಿ – ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ!

Public TV
By Public TV
54 minutes ago
Water Bill Electricity Bill Toll Price Hike 1 1
Bengaluru City

ನೀರು, ವಿದ್ಯುತ್, ಟೋಲ್ ದರ ಏರಿಕೆ – ಏ.1ರಿಂದ ಜನರ ಜೀವನ ದುಬಾರಿ

Public TV
By Public TV
2 hours ago
Hasi Karaga 2
Bengaluru City

ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ – ಇಂದು ದ್ರೌಪದಿ ದೇವಿ ಹಸಿ ಕರಗ ಶಕ್ತ್ಯೋತ್ಸವ

Public TV
By Public TV
2 hours ago
Accident 2
Districts

ಹಾಸನದಲ್ಲಿ ಡೀಸೆಲ್‌ ಟ್ಯಾಕರ್‌ – ಕಾರಿನ ನಡ್ವೆ ಭೀಕರ ಅಪಘಾತ; ತಪ್ಪಿದ ದುರಂತ

Public TV
By Public TV
3 hours ago
Mysuru Crime
Crime

ಖರ್ಚಿಗೆ ಹಣ ಕೊಟ್ಟಿಲ್ಲ ಅಂತ ಯುವಕರಿಂದ ಮಂಗಳಮುಖಿಯರ ಮೇಲೆ ಹಲ್ಲೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?