Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎತ್ತಿನ‌ಹೊಳೆ ಯೋಜನೆಗೆ ಹೆಚ್ಚುವರಿ 3,000 ಕೋಟಿ ಅನುದಾನ ಕೊಡಲಾಗಿದೆ, ಸಿಎಂಗೆ ರೈತರ ಬಗ್ಗೆ ಕಾಳಜಿ ಇದೆ: ಬೈರತಿ ಸುರೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಎತ್ತಿನ‌ಹೊಳೆ ಯೋಜನೆಗೆ ಹೆಚ್ಚುವರಿ 3,000 ಕೋಟಿ ಅನುದಾನ ಕೊಡಲಾಗಿದೆ, ಸಿಎಂಗೆ ರೈತರ ಬಗ್ಗೆ ಕಾಳಜಿ ಇದೆ: ಬೈರತಿ ಸುರೇಶ್

Chikkaballapur

ಎತ್ತಿನ‌ಹೊಳೆ ಯೋಜನೆಗೆ ಹೆಚ್ಚುವರಿ 3,000 ಕೋಟಿ ಅನುದಾನ ಕೊಡಲಾಗಿದೆ, ಸಿಎಂಗೆ ರೈತರ ಬಗ್ಗೆ ಕಾಳಜಿ ಇದೆ: ಬೈರತಿ ಸುರೇಶ್

Public TV
Last updated: July 27, 2025 3:43 pm
Public TV
Share
4 Min Read
Chikkaballapura 5
SHARE

– ಗೌರಿಬಿದನೂರಿಗೆ ಕುಡಿಯುವ ನೀರು ಪೂರೈಕೆ ಯೋಜನೆ ಕಾಮಗಾರಿಗೆ ಭೂಮಿಪೂಜೆ
– ಕುಡಿಯುವ ನೀರು, ಒಳಚರಂಡಿ ಕಾಮಗಾರಿಗಳಿಗೆ 14,000 ಕೋಚಿ ಖರ್ಚು

ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಮ ಪಾಲುದಾರಿಕೆಯಲ್ಲಿ ರಾಜ್ಯದಲ್ಲಿ ಒಂದೂವರೆ ವರ್ಷದಲ್ಲಿ 14,000 ಕೋಟಿ ರೂಪಾಯಿಗಳನ್ನ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಮತ್ತು ಒಳಚರಂಡಿ ಕಾಮಗಾರಿಗಳಿಗೆ ಖರ್ಚು ಮಾಡಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಖಾತೆ ಸಚಿವ ಬೈರತಿ ಸುರೇಶ್‌ (Byrathi Suresh) ತಿಳಿಸಿದರು.

ಶನಿವಾರ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರಿನ ಗೊಟಕನಾಪುರದಲ್ಲಿ ಅಮೃತ್-2 ಯೋಜನೆಯಡಿ ವಾಟದಹೊಸಹಳ್ಳಿ ಕೆರೆಯಿಂದ ಗೌರಿಬಿದನೂರು ನಗರಕ್ಕೆ ಕುಡಿಯುವ ನೀರು ಪೂರೈಸುವ 66 ಕೋಟಿ ಮೊತ್ತದ ಯೋಜನೆಯ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಕುಡಿಯುವ ನೀರು (Drinking Water) ಮತ್ತು ಒಳಚರಂಡಿ ಕಾಮಗಾರಿಗಳಿಗೆ 14,000 ಕೋಟಿ‌ಖರ್ಚು ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗೂಂಡಾಗಳನ್ನ ಸಾಕ್ಬೇಡಿ, ಮನೆಯಲ್ಲಿ ನಾಯಿ ಸಾಕಿ, ಒಳ್ಳೆಯವರ ಸಹವಾಸ ಮಾಡಿ – ದರ್ಶನ್‌ಗೆ ಪ್ರಥಮ್‌ ಸ್ಟ್ರೈಟ್‌ ಹಿಟ್‌

Yettinahole Project Siddaramaiah

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಮೃತ್ 2 ಯೋಜನೆಯಡಿ 313 ಕೋಟಿ ರೂಪಾಯಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಜಿಲ್ಲೆಯ ಚಿಕ್ಕಬಳ್ಳಾಪುರ, ಗುಡಿಬಂಡೆ, ಗೌರಿಬಿದನೂರು, ಬಾಗೇಪಲ್ಲಿ ಪಟ್ಟಣಗಳ ಕುಡಿಯುವ ನೀರು ಸರಬರಾಜು ಯೋಜನೆಗಳಿಗೆ ಅಮೃತ್ 2 ಯೋಜನೆ ಸಹಕಾರಿಯಾಗಲಿದೆ. ರಾಜ್ಯ ಸರ್ಕಾರಕ್ಕೆ ಕುಡಿಯುವ ನೀರು ಬವಣೆಯ ಬಗ್ಗೆ ಅರಿವಿದೆ. ಕುಡಿಯುವ ನೀರಿನ ಕಾಮಗಾರಿಗಳನ್ನ ಮೊದಲ ಆದ್ಯತೆಯನ್ನಾಗಿ ರಾಜ್ಯ ಸರ್ಕಾರ ಪರಿಗಣಿಸಿದೆ. ವಾಟದಹೊಸಹಳ್ಳಿ ಕೆರೆಯಿಂದ ನೀರನ್ನು ಗೌರಿಬಿದನೂರು ನಗರಕ್ಕೆ ಕುಡಿಯುವ ಉದ್ದೇಶದಿಂದ ತೆಗೆದುಕೊಂಡು ಹೋಗಲಾಗುತ್ತಿದ್ದು, ಇದರಿಂದ ಗೌರಿಬಿದನೂರು ನಗರಕ್ಕೆ ಮಾತ್ರವಲ್ಲದೆ ಮಾರ್ಗಮಧ್ಯದ 08 ಗ್ರಾಮಗಳಿಗೂ ಕುಡಿಯುವ ನೀರನ್ನು ಪೂರೈಸಲಾಗುತ್ತದೆ ಎಂದು ವಿವರಿಸಿದರು.

ವಾಟದಹೊಸಹಳ್ಳಿ ಕೆರೆಯ ಶೇ.40 ರಷ್ಟು ನೀರನ್ನು ಮಾತ್ರ ಉದ್ಧೇಶಿತ ಯೋಜನೆಗೆ ಬಳಸಿಕೊಳ್ಳಲಾಗುವುದು. ಉಳಿದ ಶೇ.60 ರಷ್ಟು ನೀರು ಈ ಮೊದಲಿನಂತೆ ನೆರೆಹೊರೆಯ ಗ್ರಾಮಗಳ ಕೃಷಿ ಮತ್ತಿತರ ಉದ್ಧೇಶಗಳಿಗೆ ಬಳಕೆಯಾಗಲಿದೆ. ಗೌರಿಬಿದನೂರು ನಗರಕ್ಕೆ ನೀರು ತೆಗೆದುಕೊಂಡು‌ ಹೋದರೆ ಕೆರೆಯ ನೀರು ಖಾಲಿಯಾಗುತ್ತದೆ, ತೊಂದರೆಯಾಗುತ್ತದೆ ಎಂಬುದು ತಪ್ಪು ಕಲ್ಪನೆ. ಈ ತಪ್ಪು ಕಲ್ಪನೆಯಿಂದ ಈ ಭಾಗದ ಜನತೆ ಹೊರಬಂದು ಈ ವಿಷಯವನ್ನು ಕುಡಿಯುವ ನೀರಿನ ಸಮಸ್ಯೆ ಮತ್ತು ಆದ್ಯತೆಯ ಹಿನ್ನೆಲೆಯಲ್ಲಿ ಅರ್ಥ ಮಾಡಿಕೊಳ್ಳಬೇಕು. ಉದ್ದೇಶಿತ ಯೋಜನೆಯಿಂದ 83,000 ಜನರ ಕುಡಿಯುವ ನೀರಿಗೆ ಸಹಾಯವಾಗಲಿದೆ. ಇದನ್ನೂ ಓದಿ: 162 ಬಾರಿ ಫಾರಿನ್‌ ಟ್ರಿಪ್‌, 300 ಕೋಟಿ ಹಗರಣ – ನಕಲಿ ರಾಯಭಾರ ಕಚೇರಿ ರಹಸ್ಯ ಕಂಡು ಬೆಚ್ಚಿಬಿದ್ದ ಅಧಿಕಾರಿಗಳು

Yettinahole Project

ಇದೇ ವಾಟದಹೊಸಹಳ್ಳಿ ಕೆರೆಗೆ ಎತ್ತಿನಹೊಳೆ ಯೋಜನೆಯ ನೀರನ್ನೂ ಹರಿಸಲಾಗುವುದು. ಹೀಗಾಗಿ ಕೆರೆಯಲ್ಲಿ‌ ನೀರಿಗೆ ಯಾವುದೇ ಸಮಸ್ಯೆ ಮತ್ತು ಕೊರತೆ ಆಗುವುದಿಲ್ಲ. ಜನರು ಆತಂಕ ಪಡುವ ಅಗತ್ಯವಿಲ್ಲ. ಕುಡಿಯುವ ನೀರಿನ ಯೋಜನೆಗೆ ಯಾರೂ ತಕರಾರು ತೆಗೆಯಬಾರದು ಮತ್ತು ಅಡ್ಡಿಪಡಿಸಬಾರದು. ರೈತರನ್ನು ಕಷ್ಟಕ್ಕೆ ದೂಡಿ ನೀರನ್ನು ತೆಗೆದುಕೊಂಡು ಹೋಗುವುದಿಲ್ಲ. ಕುಡಿಯುವ ನೀರಿನ ವಿಷಯದಲ್ಲಿ ರಾಜಕಾರಣ ಬೇಡ. ಎತ್ತಿನಹೊಳೆ ಯೋಜನೆಯ ನೀರಿನ ಸಂಪರ್ಕ ವಾಟದಹೊಸಹಳ್ಳಿ ದೊರೆಯುವುದು ಖಚಿತ. ಇತ್ತೀಚಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಎತ್ತಿನ‌ಹೊಳೆ ಯೋಜನೆಗೆ ಹೆಚ್ಚುವರಿಯಾಗಿ 3,000 ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಇದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ರೈತರ ಪರವಾಗಿರುವ ಕಾಳಜಿಯನ್ನು ಎತ್ತಿ ತೋರಿಸುತ್ತದೆ ಎಂದು ತಿಳಿಸಿದರು.

Siddaramaiah govt hikes drinking water Tax BWSSB

ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಮಾತನಾಡಿ, ಇತ್ತೀಚಿಗೆ ನಗರೀಕರಣ ಹೆಚ್ಚಾಗುತ್ತಿದ್ದು, ನಗರಗಳು ಮತ್ತು ಗ್ರಾಮಾಂತರ ಪ್ರದೇಶಗಳಿಗೆ ಮೂಲಭೂತ ಸೌಕರ್ಯದಡಿ ಕುಡಿಯುವ ನೀರನ್ನು ಆದ್ಯತೆಯ ಮೇಲೆ ಒದಗಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹೊಣೆಗಾರಿಕೆ. ಎತ್ತಿನಹೊಳೆ ಯೋಜನೆ ನೀರು ಇನ್ನು ಎರಡು ವರ್ಷಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ದೊರೆಯಲಿದೆ. ಯೋಜನೆಗೆ ಅಗತ್ಯವಿರುವ 3000 ಕೋಟಿ ರೂಪಾಯಿಗಳನ್ನೂ ನೀಡಲು ಮುಖ್ಯಮಂತ್ರಿಗಳು ಒಪ್ಪಿದ್ದಾರೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಎತ್ತಿನ ಹೊಳೆ ನೀರು ನೀಡಿದ ನಂತರ ಉಳಿದ ಯೋಜನೆಗಳು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದು, ಎತ್ತಿನಹೊಳೆ ಕಾಮಗಾರಿಯನ್ನು ತ್ವರಿತವಾಗಿ ಪೂರೈಸಲು ಒತ್ತು ನೀಡಲಾಗುತ್ತಿದೆ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ರಸಗೊಬ್ಬರ ಕೊರತೆಗೆ ಕಳ್ಳದಂಧೆ ಕಾರಣ – ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ ಮಾತನಾಡಿ, ಕೇಂದ್ರ ಸರ್ಕಾರದ ಅಮೃತ್ ಯೋಜನೆ ನಗರ ಪ್ರದೇಶಗಳ ನೀರಿನ ವಿಚಾರದಲ್ಲಿ ವರದಾನವಾಗಿದೆ. ವಾಟದಹೊಸಹಳ್ಳಿ ಕೆರೆಯ ಕುಡಿಯುವ ನೀರಿನ ಯೋಜನೆ ಆಡಳಿತಾತ್ಮಕ ಅನುಮೋದನೆ ಸೇರಿ ಎಲ್ಲಾ ಅನುಮೋದನೆಗಳೂ ಆಗಿರುವುದರಿಂದ ಶಂಕುಸ್ಥಾಪನೆಯಾದ ಮೇಲೆ ಕಾಮಗಾರಿಗೆ ಅಡ್ಡಿಪಡಿಸುವುದು ಸರಿಯಲ್ಲ. ಈ ಕೆರೆಗೆ ಎತ್ತಿನಹೊಳೆ ನೀರನ್ನು ಹರಿಸುವವರೆಗೂ ಗೌರಿಬಿದನೂರು ನಗರಕ್ಕೆ ಒಂದು‌ ಹನಿ ನೀರು ತೆಗೆಯುವುದಿಲ್ಲ ಎಂದು ಸ್ಥಳೀಯ ಶಾಸಕರು ಸ್ಪಷ್ಟವಾಗಿ ಹೇಳಿರುವುದು ಸ್ವಾಗತಾರ್ಹ. ಈ ಭಾಗದ ಜನತೆ ಅವರ ಮೇಲೆ ನಂಬಿಕೆ ಇಟ್ಟು ಕುಡಿಯುವ ನೀರಿನ ಯೋಜನೆಗೆ ಸಹಕರಿಸಬೇಕು ಅಂತ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ಕೆ.ಹೆಚ್ ಪುಟ್ಟಸ್ವಾಮಿಗೌಡ, ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಜಿಲ್ಲಾ ಪಂಚಾಯಿತಿ ಸಿಇಓ ಡಾ.ವೈ ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ನಗರಸಭಾ ಉಪಾಧ್ಯಕ್ಷ ಲಕ್ಷೀನಾರಾಯಣ, ಪೌರಾಯುಕ್ತ ಕೆ.ಜಿ ರಮೇಶ್, ಮುಖ್ಯ ಅಭಿಯಂತರ ಪ್ರವೀಣ್ ಲಿಂಗಯ್ಯ, ಸಹಾಯಕ ಕಾರ್ಯಪಾಲಕ ಅಭಿಯಂತರ ಆರ್ ಲತಾ, ನಗರಸಭಾ ಸದ್ಯಸರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

TAGGED:BByrathi SureshChikkaballapuradrinking waterfarmersK Sudhakaryettinahole projectಎತ್ತಿನಹೊಳೆ ಯೋಜನೆಕುಡಿಯುವ ನೀರುಚಿಕ್ಕಬಳ್ಳಾಪುರಬೈರತಿ ಸುರೇಶ್ರೈತರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Shivam Dube
Cricket

6 ಸಿಕ್ಸ್‌, 4 ಬೌಂಡರಿ, 2 ವಿಕೆಟ್‌ – ದುಬೆ ಸ್ಫೋಟಕ ಆಟ, ಭಾರತಕ್ಕೆ 17 ರನ್‌ಗಳ ಜಯ

Public TV
By Public TV
1 hour ago
KSRTC
Bengaluru City

ಬೆಂಗಳೂರು ಚಲೋ ನಡೆಯುತ್ತೆ, ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗಿಯಾಗಿ: ಸಂಘಟನೆ ಮನವಿ

Public TV
By Public TV
2 hours ago
Nelamangala Crime
Bengaluru City

ಕತ್ತು ಹಿಸುಕಿ ವೃದ್ಧೆಯ ಹತ್ಯೆ – ಚಿನ್ನಾಭರಣ ದೋಚಿ ಆರೋಪಿಗಳು ಎಸ್ಕೇಪ್

Public TV
By Public TV
2 hours ago
Ramalinga Reddy
Bengaluru City

Transport Strike – 38ರ ಬದಲು 26 ತಿಂಗಳ ಹಿಂಬಾಕಿಗೆ ಸರ್ಕಾರ ಒಪ್ಪಿಗೆ

Public TV
By Public TV
2 hours ago
devendra fadnavis
Latest

ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ಧ ಶೇ.5 ಮೀಸಲಾತಿ ರದ್ದು

Public TV
By Public TV
3 hours ago
Guru Raghavendra
Districts

ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಗಳ ಗುರುವೈಭವೋತ್ಸವ – ರಾಯರ 405ನೇ ಪಟ್ಟಾಭಿಷೇಕ ಮಹೋತ್ಸವ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?