ಮೈಸೂರು: ಸಚಿವ ಜಿ.ಟಿ ದೇವೇಗೌಡ ಬಿಜೆಪಿ ಪಕ್ಷಕ್ಕೆ ಬರಲಿದ್ದಾರೆ ಎಂದು ಅವರ ಅಭಿಮಾನಿಗಳು ಪೋಸ್ಟ್ ಹಾಕಿದ್ದು, ಇದೀಗ ಆ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಬಿಜೆಪಿಗೆ ಬರುತ್ತಿರುವ ಸಚಿವ ಜಿಟಿ ದೇವೇಗೌಡರಿಗೆ ಸ್ವಾಗತ. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಗೆ ಮೆಚ್ಚಿ ಬಿಜೆಪಿಗೆ ಜಿಟಿಡಿ ಆಗಮಿಸುತ್ತಿದ್ದಾರೆ. ಹೀಗೆಂದು ಕೆಲ ಬಿಜೆಪಿ ಕಾರ್ಯಕರ್ತರು ಫೇಸ್ಬುಕ್ನಲ್ಲಿ ಪೋಸ್ಟ್ ಮೇಲೆ ಪೋಸ್ಟ್ ಹಾಕುತ್ತಿದ್ದಾರೆ.
ಪೋಸ್ಟ್ ನಲ್ಲೇನಿದೆ..?
ಅಪ್ಪ-ಮಕ್ಕಳ ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿಗೆ ಮರಳಿ ಬರುತ್ತಿರುವ ಸಚಿವರು ಜಿ.ಟಿ.ದೇವೇಗೌಡ ಅವರಿಗೆ ಸ್ವಾಗತ. ನಮ್ಮ ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಜೀ ಅವರು ದೇಶಕ್ಕೆ ನೀಡುತ್ತಿರುವ ಅಪಾರ ಯೋಜನೆಗಳನ್ನು ಇಷ್ಟಪಟ್ಟು ಬಿಜೆಪಿಗೆ ಸೇರುತ್ತಿರುವ ಜಿಟಿಡಿ ಅವರಿಗೆ ಸುಸ್ವಾಗತ.
ನಿಮ್ಮ ಪುತ್ರ ಹರೀಶ್ಗೌಡ ಅವರಿಗೆ ಚುನಾವಣೆಗೆ ಟಿಕೆಟ್ ನೀಡದ ಜೆಡಿಎಸ್ ಪಕ್ಷ ಇದ್ದು ಸತ್ತಂತೆ. ಬಿಜೆಪಿಗೆ ಬಂದು ತಮ್ಮ ಚಾಮುಂಡೇಶ್ವರಿ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿ ಮಾಡಬೇಕೆಂದು ಬಿಜೆಪಿಗೆ ಬರುತ್ತಿರುವ ಜಿಟಿಡಿ ಅವರಿಗೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ.
ಪೋಸ್ಟ್ ನೊಂದಿಗೆ ಜಿಟಿಡಿ ಅವರ ಫೋಟೋ ಹಾಕಿ ಫೇಸ್ಬುಕ್ ಮತ್ತು ವಾಟ್ಸಪ್ ಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಇದೀಗ ಈ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.