ಬೆಂಗಳೂರು: ಡಿಸಿಸಿ ಬ್ಯಾಂಕ್ (DCC Bank) ಗಳ ಅಕ್ರಮದ ತನಿಖೆ ಸರ್ಕಾರ ನಡೆಸುತ್ತಿದ್ದು, ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತೆ ಅಂತ ಸಹಕಾರಿ ಸಚಿವ ಸೋಮಶೇಖರ್ (ST Somashekhar) ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಶರವಣ ಪ್ರಶ್ನೆ ಕೇಳಿದರು. ಜಿಲ್ಲಾ ಸಹಕಾರಿ ಬ್ಯಾಂಕುಗಳಲ್ಲಿ ನಡೆದ ಅಕ್ರಮಗಳ ತನಿಖೆಯನ್ನ ಸರ್ಕಾರ ಸಿಬಿಐಗೆ ಕೊಡಬೇಕು. ಅಮಿತ್ ಶಾ (AmitShah) ಕೈ ಕೆಳಗೆ ಇಲಾಖೆ ಬರುತ್ತೆ. ಸಿಓಡಿ (COD) ತನಿಖೆ ಇದಕ್ಕೆ ಸಾಲದು. ಯಾರನ್ನಾದ್ರು ಬಲಿ ಕೊಟ್ಟರೆ ಮಾತ್ರ ಅಕ್ರಮ ತಡೆಯಬಹುದು. ರೈತರ ಹೆಸರಲ್ಲಿ ನಕಲಿ ಖಾತೆ ಸೃಷ್ಟಿ ಮಾಡಿ ಅಕ್ರಮ ಮಾಡುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಕ್ರಮವಹಿಸಬೇಕು ಅಂತ ಆಗ್ರಹ ಮಾಡಿದರು.
ಇದಕ್ಕೆ ಉತ್ತರ ನೀಡಿದ ಸಚಿವ ಸೋಮಶೇಖರ್, 5 ಡಿಸಿಸಿ ಬ್ಯಾಂಕ್ ಗಳಲ್ಲಿ ಅಕ್ರಮ ಆಗಿದೆ. ಈಗಾಗಲೇ ತನಿಖೆ ನಡೆಯುತ್ತಿದೆ. ಅಕ್ರಮ ಮಾಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷರನ್ನ ವಜಾ ಮಾಡಲಾಗಿದೆ. ಅಕ್ರಮ ಮಾಡಿರೋ ಡಿಸಿಸಿ ಬ್ಯಾಂಕ್ ನಿಂದ ರಿಕವರಿ ಮಾಡೋ ಕೆಲಸ ಆಗ್ತಿದೆ ಎಂದರು. ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆಗೆ ಬಿಜೆಪಿಗೆ ಪ್ರತಿಸ್ಪರ್ಧಿಯೇ ಇಲ್ಲ: ಅಮಿತ್ ಶಾ
5 ಬ್ಯಾಂಕ್ ಬಿಟ್ಟು ಉಳಿದ 21 ಡಿಸಿಸಿ ಬ್ಯಾಂಕ್ ನಬಾರ್ಡ್, ಇಲಾಖೆ ನಿಯಮದ ಪ್ರಕಾರ ನಡೆಯುತ್ತಿದೆ. ಅಕ್ರಮ ಮಾಡಿರೋ ಬ್ಯಾಂಕ್ ತನಿಖೆ ಆಗುತ್ತಿದೆ ಕ್ರಮ ಆಗುತ್ತೆ ಎಂದರು. ಯಾರೇ ಆಕ್ರಮದಲ್ಲಿ ಇದ್ದರೂ ಸರ್ಕಾರ ಕ್ರಮ ತೆಗೆದುಕೊಳ್ಳುತ್ತೆ ಅಂತ ಭರವಸೆ ನೀಡಿದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k