ಚಿಕ್ಕೋಡಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬೆನ್ನತ್ತಿ ಸರ್ಕಾರ (Government) ಬಳಿ ಹಣವಿಲ್ಲದ ಕಾರಣ ಜನರಿಗೆ ಚಿಕಿತ್ಸೆ ನೀಡುತ್ತಿದ್ದ ಬೆಳಗಾವಿ (Belagavi) ಜಿಲ್ಲೆಯ ಏಕೈಕ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯ (Yoga & Nature Care Centre) ಮುಚ್ಚಲ್ಪಟ್ಟಿದೆ.
ಬೀಗ ಹಾಕಿರುವ ಆಸ್ಪತ್ರೆಯ ಎದುರು ಆಸ್ಪತ್ರೆಯನ್ನು ತಾತ್ಕಾಲಿಕ ಬಂದ್ ಮಾಡಲಾಗಿದೆ ಎಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿದ್ದ ಸರ್ಕಾರಿ ಯೋಗ ಹಾಗೂ ಪ್ರಕೃತಿ ಚಿಕಿತ್ಸಾಲಯದಲ್ಲಿ ಫಲಕ ಹಾಕಲಾಗಿದೆ. ಇದನ್ನೂ ಓದಿ: Ranji Trophy | 74 ವರ್ಷಗಳ ಬಳಿಕ ಮೈಲುಗಲ್ಲು – ಹೆಲ್ಮೆಟ್ನಿಂದ ರಣಜಿ ಫೈನಲ್ ತಲುಪಿದ ಕೇರಳ!
Advertisement
Advertisement
ಆಸ್ಪತ್ರೆಯಲ್ಲಿ ಹಲವು ವರ್ಷಗಳಿಂದ ಬಡ ರೋಗಿಗಳಿಗೆ ಆಯುಷ್ ಇಲಾಖೆಯಿಂದ ಉಚಿತವಾಗಿ ನ್ಯಾಚುರೋಪತಿ ಚಿಕಿತ್ಸೆ ನೀಡಲಾಗುತ್ತಿತ್ತು. ಸರ್ಕಾರದ ಬಳಿ ಹಣವಿಲ್ಲದ ಕಾರಣ ಆಸ್ಪತ್ರೆಯು ತನ್ನ ಕಾರ್ಯವನ್ನು ಸ್ಥಗಿತಗೊಳಿಸಿದೆ. ಸರ್ಕಾರವು ಎಸ್ಡಿಎಂ ಸಂಸ್ಥೆಯ ಸಹಯೋಗದಲ್ಲಿ ಆಸ್ಪತ್ರೆಯನ್ನು ನಡೆಸುತ್ತಿತ್ತು. ಆದರೆ ಈ ಬಾರಿ ಟೆಂಡರ್ ಪ್ರಕ್ರಿಯೆ ನಡೆಸದ ಕಾರಣ ಆಸ್ಪತ್ರೆಯನ್ನು ಮುಚ್ಚಲಾಗಿದೆ. ಇದನ್ನೂ ಓದಿ: ಮುಂಬೈ ಕೊಳೆಗೇರಿ ಪುನರ್ವಸತಿ ಪ್ರಾಧಿಕಾರದ ಯೋಜನೆಗಳಲ್ಲಿ ‘ವಸತಿ ಜಿಹಾದ್’: ಶಿವಸೇನಾ ನಾಯಕ ಆರೋಪ
Advertisement
ಸಂಕೇಶ್ವರ ಪಟ್ಟಣದಲ್ಲಿರುವ ಈ ಆಸ್ಪತ್ರೆಗೆ ದಿನನಿತ್ಯ ಹುಕ್ಕೇರಿ ತಾಲೂಕು ಸೇರಿದಂತೆ ವಿವಿಧೆಡೆಯಿಂದ ರೋಗಿಗಳು ಆಗಮಿಸುತ್ತಿದ್ದರು. ಓರ್ವ ಮುಖ್ಯ ವೈದ್ಯ ಸೇರಿದಂತೆ ನಾಲ್ಕು ಸಿಬ್ಬಂದಿಯಿಂದ ಬೆನ್ನು ನೋವು, ಸಂಧಿವಾತ ಸೇರಿದಂತೆ ವಿವಿಧ ಥೆರಪಿಗಳ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಇದರಿಂದ ಅನೇಕ ಬಡ ರೋಗಿಗಳಿಗೆ ಅನುಕೂಲವಾಗುತ್ತಿತ್ತು. ಈ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಸಾವಿರಾರು ರೂ. ಪಡೆಯುತ್ತಿದ್ದ ಕಾರಣ ಬಡ ರೋಗಿಗಳಿಗೆ ಈ ಆಸ್ಪತ್ರೆ ಸಾಕಷ್ಟು ಅನುಕೂಲ ಕಲ್ಪಿಸಿತ್ತು. ಇದನ್ನೂ ಓದಿ: 10 ದಿನಗಳ ಒಳಗೆ ನಿಗಮ ಮಂಡಳಿಗೆ ನಿರ್ದೇಶಕರ ನೇಮಕ: ಚಂದ್ರಶೇಖರ್
Advertisement
ಏಕಾಏಕಿ ಆಸ್ಪತ್ರೆಯನ್ನು ಬಂದ್ ಮಾಡಿರುವ ಕಾರಣ ಸಾರ್ವಜನಿಕರು ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ಬಡವರಿಗೆ ಸಿಗುತ್ತಿದ್ದ ಇಂಥ ಸೇವೆಗಳನ್ನು ಪುನರಾರಂಭಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಿಎಂ ಸಭೆ ಬಳಿಕ ವಿಧಾನಸೌಧದಲ್ಲೇ ಎರಡು ಬಾರ್ ಅಸೋಸಿಯೇಷನ್ಗಳ ಪ್ರತಿನಿಧಿಗಳ ನಡುವೆ ಗಲಾಟೆ