ತುಮಕೂರು : ಜೆಡಿಎಸ್ (JDS) ಕಾರ್ಯಕರ್ತರು ಹಾಗೂ ಶಾಸಕ ಶ್ರೀನಿವಾಸ್ (Srinivas) ಅಭಿಮಾನಿಗಳ ನಡುವೆ ನಡೆದ ನಿಂದನೆ, ಆರೋಪ, ಪ್ರತ್ಯಾರೋಪಗಳ ಬೆನ್ನಲ್ಲೇ 10 ಜನರ ಮೇಲೆ ಎಫ್ಐಆರ್ (FIR) ದಾಖಲಾಗಿದೆ.
ವಿಧಾನಸಭಾ ಕ್ಷೇತ್ರದ ಚುನಾವಣೆ (Election) ಹತ್ತಿರವಾಗುತ್ತಿದ್ದಂತೆ ರಾಜಕೀಯ ಕೆಸರೆರಚಾಟ ಹೆಚ್ಚಾಗುತ್ತಿದೆ. ಗುಬ್ಬಿ ಕ್ಷೇತ್ರದಲ್ಲಿ ಆಕಾಂಕ್ಷಿಗಳಿಗಿಂತ ಅಭಿಮಾನಿಗಳ ರಾಜಕೀಯ ಕೆಸರೆರಚಾಟ ಜೋರಾಗಿದೆ. ಕಳೆದ 2 ದಿನಗಳಿಂದಲೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಾಗೂ ಶಾಸಕ ಶ್ರೀನಿವಾಸ್ನ ಅಭಿಮಾನಿಗಳು ರಾಜಕೀಯ ವಾಕ್ಸಮರಕ್ಕೆ ಇಳಿದಿದ್ದಾರೆ. ಇದನ್ನೂ ಓದಿ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಶಿಲ್ಪಾ ಎಸ್.ಎಲ್ ಅಮಾನತು
ಅಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಆರೋಪ, ಪ್ರತ್ಯಾರೋಪ ಮಾಡಿಕೊಂಡು ನಿಂದಿಸಿಕೊಂಡಿದ್ದಾರೆ. ಹಾಗಾಗಿ ಜೆಡಿಎಸ್ನ ಕಾರ್ಯಕರ್ತರು ಹಾಗೂ ಶ್ರೀನಿವಾಸ್ನ ಅಭಿಮಾನಿಗಳು ಸೇರಿ ಒಟ್ಟು 10 ಮಂದಿಯ ಮೇಲೆ ಗುಬ್ಬಿ (Gubbi) ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ನಡುವೆ ಜೆಡಿಎಸ್ ಕಾರ್ಯಕರ್ತರ ರಕ್ಷಣೆಗೆ ತೆರೆಮರೆಯಲ್ಲಿ ಜೆಡಿಎಸ್ ಪಕ್ಷದ ಆಕಾಂಕ್ಷಿ ನಾಗರಾಜು ನಿಂತರೆ, ಶ್ರೀನಿವಾಸ್ ಅಭಿಮಾನಿಗಳ ಪರ ಶ್ರೀನಿವಾಸ್ ಪರೋಕ್ಷ ಬೆಂಬಲಕ್ಕೆ ನಿಂತಿದ್ದಾರೆ. ಇದನ್ನೂ ಓದಿ: ಟೀ, ಸಿಗರೇಟ್ಗೆ ಸಾಲ ಕೊಡಲಿಲ್ಲವೆಂದು ಬಡ ಅಂಗಡಿ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k