ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ ಜೆಡಿಎಸ್ನಿಂದ ಇಬ್ಬರು ಶಾಸಕರನ್ನು ಉಚ್ಚಾಟನೆ ಮಾಡಲಾಗಿದೆ.
ಗುಬ್ಬಿ ಶ್ರೀನಿವಾಸ್, ಕೋಲಾರ ಶ್ರೀನಿವಾಸ ಗೌಡ ಉಚ್ಚಾಟನೆಗೊಳಿಸಿ ಜೆಡಿಎಸ್ ಆದೇಶ ಹೊರಡಿಸಿದೆ. ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ: ರಾರಾ ರಕ್ಕಮ್ಮ ಹಾಡಿಗೆ ರೇಣುಕಾಚಾರ್ಯ ಭರ್ಜರಿ ಸ್ಟೆಪ್ಸ್
ರಾಜ್ಯಸಭಾ ಚುನಾವಣೆಯಲ್ಲಿ ತಾವು ಪಕ್ಷದ ಅಧಿಕೃತ ಅಭ್ಯರ್ಥಿಯಾದ ಡಿ.ಕುಪೇಂದ್ರರೆಡ್ಡಿ ಅವರಿಗೆ ಮತ ನೀಡದೇ, ಅವರ ವಿರುದ್ಧವಾಗಿ ನಿಮ್ಮ ಪ್ರಥಮ ಪ್ರಾಶಸ್ತ್ಯ ಮತವನ್ನು ಬಿಜೆಪಿ ಅಭ್ಯರ್ಥಿ ಲೆಹರ್ಸಿಂಗ್ ಮತ್ತು ದ್ವಿತೀಯ ಮತವನ್ನು ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಅವರಿಗೆ ನೀಡಿರುವ ಬಗ್ಗೆ ಹೆಚ್.ಡಿ.ರೇವಣ್ಣ ಅವರು ನೀಡಿರುವ ವರದಿಯಲ್ಲಿ ವಿವರಿಸಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಗುಬ್ಬಿ ಶ್ರೀನಿವಾಸ್ ಅವರು ಖಾಲಿ ಪೇಪರ್ ಅನ್ನು ಬ್ಯಾಲೆಟ್ ಬಾಕ್ಸ್ಗೆ ಹಾಕಿ ಸಂಚಲನ ಮೂಡಿಸಿದ್ದರು. ಇದಕ್ಕೂ ಮೊದಲು ಜೆಡಿಎಸ್ನ ಶ್ರೀನಿವಾಸ್ ಗೌಡ ಅವರು ಅಡ್ಡ ಮತದಾನ ಮಾಡಿದ್ದರು.