ತುಮಕೂರು: ನನ್ನ ಅಪ್ಪನಾಣೆ ಇನ್ನೂ ಐದು ವರ್ಷ ನಾನೇ MLA ಆಗಿರುತ್ತೇನೆ ಎಂದು ಗುಬ್ಬಿ (Gubbi) ಜೆಡಿಎಸ್ (JDS) ಉಚ್ಛಾಟಿತ ಶಾಸಕ ಎಸ್.ಆರ್. ಶ್ರೀನಿವಾಸ್ (S. R. Srinivas) ಭವಿಷ್ಯ ನುಡಿದರು.
ಗುಬ್ಬಿ ತಾಲೂಕಿನ ಯಕ್ಕಲಕಟ್ಟೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವ ಜ್ಯೋತಿ ಶಾಸ್ತ್ರದವರು ನನ್ನ ಕುಂಡಳಿ ನೋಡಿದ್ರೆ ಹೆದರಿ ಓಡ್ತಾರೆ ಹಂಗಿದೆ ನನ್ನ ಕುಂಡಳಿ. ಯಾರ ಊಹೆಗೂ ನಿಲುಕದ್ದು ನನ್ನ ಭವಿಷ್ಯವಾಗಿದೆ. ಚುನಾವಣೆ ಹತ್ತಿರ ಬಂದಾಗ ಕಾಗೆ, ಗೂಬೆಗಳೆಲ್ಲ ವೇಷ ಹಾಕಿಕೊಂಡು ಬರುತ್ತಾರೆ ಎಂದು ವಿರೋಧಿಗಳಿಗೆ ಟಾಂಗ್ ನೀಡಿದರು. ಇದನ್ನೂ ಓದಿ: 1 ವರ್ಷದಲ್ಲಿ 3 ಬಾರಿ ಭರ್ತಿ – ದಾಖಲೆ ಬರೆದ ಕೆಆರ್ಎಸ್ ಡ್ಯಾಂ
ಮೊದಲು ಜಿಲ್ಲಾ ಪಂಚಾಯಿತಿ ಸದಸ್ಯನಾಗಿದ್ದೆ. ಅದಾದ ಬಳಿಕ ನಾನು ಶಾಸಕನಾಗಿದ್ದೇನೆ. ನಮ್ಮಪ್ಪನಾಣೆ ನಾನೇ ಮುಂದಿನ ಐದು ವರ್ಷ ಶಾಸಕನಾಗಿರುತ್ತೇನೆ. ನನ್ನನು ಸುಲಭವಾಗಿ ಸೋಲಿಸಿ ಬಿಡುತ್ತೇನೆ ಅಂದುಕೊಂಡವರೆ ಅದು ಸಾಧ್ಯ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬಾಲಕಿ ರೇಪ್ & ಮರ್ಡರ್ – ಅನಧಿಕೃತ ಟ್ಯೂಷನ್ ಸೆಂಟರ್ಗಳಿಗೆ ಡಿಡಿಪಿಐ ಎಚ್ಚರಿಕೆ