Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಯುವಕರಿಗೆ ಮಾರ್ಗದರ್ಶನ ನೀಡಲು ನೂತನ ಯುವನೀತಿ: ಬೊಮ್ಮಾಯಿ

Public TV
Last updated: January 12, 2022 6:04 pm
Public TV
Share
3 Min Read
BASAVARJ BOMMAI 1
SHARE

ಬೆಂಗಳೂರು: ಸರ್ಕಾರ ಹೊಸ ಯುವ ನೀತಿಯನ್ನು ತರಲು ಉದ್ದೇಶಿಸಿದ್ದು, ಮುಂಬರುವ ವರ್ಷಗಳಲ್ಲಿ ಈ ನೀತಿ ಯುವಕರಿಗೆ ಮಾದರಿ ರೀತಿಯಲ್ಲಿ ಮಾರ್ಗದರ್ಶನ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

BASAVARJ BOMMAI PROGRAM 1

ಇಂದು ಸ್ವಾಮಿ ವಿವೇಕಾನಂದರ 159 ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ವರ್ಚುಯಲ್ ಆಗಿ ಭಾಗವಹಿಸಿ ಮಾತನಾಡಿದ ಅವರು, ಯುವಕರಿಗಾಗಿ ತತ್ವಾಧಾರಿತವಾದಂತಹ ವೈಚಾರಿಕೆ ನೆಲೆಯಲ್ಲಿ ಹೆಚ್ಚಿನ ಬೆಂಬಲ, ಪ್ರೋತ್ಸಾಹ ನೀಡಲು ಸರ್ಕಾರ ಸಿದ್ಧವಿದೆ. ಈ ದಿಸೆಯಲ್ಲಿ ವಿಶೇಷ ಯೋಜನೆಯೊಂದನ್ನು ಮುಂದಿನ ಆಯವ್ಯಯದಲ್ಲಿ ತರಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ನಮ್ಮ ಜೀವನದಲ್ಲಿ ಸ್ವಾಮಿ ವಿವೇಕಾನಂದರು ಸದಾ ಪ್ರಸ್ತುತವಾಗಿರುತ್ತಾರೆ. ಸಾರ್ಥಕತೆಯ ಹಾಗೂ ಸಾಧನೆಯ ಬದುಕನ್ನು ನಡೆಸಿ ಹಾಗೂ ಸಾವಿನ ನಂತರವೂ ಬದುಕುವ ರೀತಿಯನ್ನು ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ

BASAVARJ BOMMAI 1 1

ಸಾಧಕನಿಗೆ ಸಾವು ಅಂತ್ಯವಲ್ಲ:
ಸ್ವಾಮಿ ವಿವೇಕಾನಂದರ ಲೈಫ್ ಆಫ್ಟರ್ ಡೆತ್ ಎಂಬ ಪುಸ್ತಕವನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು, ವಿವೇಕಾನಂದರ ಸಾವಿನ ನಂತರದ ಬದುಕು ಎನ್ನುವ ಕಲ್ಪನೆ ಅದ್ಬುತವಾದದ್ದು. ಸಾಧಕನಿಗೆ ಸಾವು ಅಂತ್ಯವಲ್ಲ. ಸಾವಿನ ನಂತರವೂ ಬದುಕುವುದು ಸಾಧನೆ ಎಂಬುದನ್ನು ಪ್ರತಿಪಾದಿಸಿದ್ದರು. ಚೈತನ್ಯಮಯ ಬದುಕಿನ ದಾರಿಯನ್ನು ತೋರಿಸಿಕೊಟ್ಟಿದ್ದಾರೆ. ಸ್ವಾಮಿ ವಿವೇಕಾನಂದರ ಬದುಕಿನ ರೀತಿ ನೀತಿಗಳನ್ನು ಯುವಜನತೆಗೆ ಮನದಟ್ಟು ಮಾಡುವ ಕೆಲಸ ಮಾಡಬೇಕಿದೆ. ಸರ್ಕಾರ ಹಾಗೂ ಸಮಾಜ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ರಾಮಕೃಷ್ಣ ಪರಮಹಂಸ, ಶಾರದಾದೇವಿ ಹಾಗೂ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಸಮಾಜಕ್ಕೆ ಪ್ರಚಾರ ಪಡಿಸುವ ಕೆಲಸವನ್ನು ರಾಮಕೃಷ್ಣ ಮಿಷನ್ ಸಂಸ್ಥೆ ಪರಿಣಾಮಕಾರಿಯಾಗಿ ಮಾಡುತ್ತಿದೆ ಎಂದರು.

ಯುಗಪುರುಷ:
ಸ್ವಾಮಿ ವಿವೇಕಾನಂದರು ಯುಗಪುರುಷರು. ಯುಗದಲ್ಲಿ ಒಬ್ಬರು ಅತ್ಯಂತ ತೇಜ್ವಸಿಯಾಗಿ ವಿಭಿನ್ನವಾಗಿ ಹುಟ್ಟುತ್ತಾರೆ. ಅವರ ಅರ್ಥಪೂರ್ಣವಾಗಿ ಪುನರ್ ನಾಮಕರಣವನ್ನು ರಾಮಕೃಷ್ಣ ಪರಮಹಂಸರು ಮಾಡಿದ್ದಾರೆ. ಎಲ್ಲಿ ವಿವೇಕ ಇದೆಯೋ ಅಲ್ಲಿ ಆನಂದ ಇದೆ ಎಂದು. ವಿವೇಕ ಎನ್ನುವುದು ಪ್ರತಿ ಮನುಷ್ಯನ ಅಂತರ್ಗತವಾದ ಗುಣಧರ್ಮ. ವಿವೇಕ ಎನ್ನುವುದು ಪ್ರಾಣಿಗಳಿಂದ ಮನುಷ್ಯನನ್ನು ಪ್ರತ್ಯೇಕ ಮಾಡುವುದು. ಈ ವಿವೇಕವನ್ನು ನಾವು ಯಾವ ರೀತಿ, ಯಾವ ದಿಕ್ಕಿನಲ್ಲಿ ಯಾವುದಕ್ಕೆ ಬಳಕೆ ಮಾಡುತ್ತೇವೆ ಎನ್ನುವುದು ಬಹಳ ಮುಖ್ಯ. ಸ್ವಾಮಿ ವಿವೇಕಾನಂದರು ನಮಗೆ ದಾರಿ ತೋರಿದ್ದಾರೆ. ವಿವೇಕವನ್ನು ಯಾವ ರೀತಿ, ಯಾವುದಕ್ಕೆ ಬಳಸಬೇಕು. ಬದುಕನ್ನು ತನಗಾಗಿ ಬದುಕುವುದು ಸಹಜ. ಪರರಿಗಾಗಿ ಬದುಕುವುದು ಧರ್ಮ ಎಂದು ಸ್ವಾಮಿ ವಿವೇಕಾನಂದರು ತೋರಿಸಿಕೊಟ್ಟಿದ್ದಾರೆ ಎಂದರು.

BASAVARJ BOMMAI 2

ಹಲವು ಆಯಾಮಗಳ ವ್ಯಕ್ತಿತ್ವ:
ಸ್ವಾಮಿ ವಿವೇಕಾನಂದ ವ್ಯಕ್ತಿತ್ವ ಹಲವು ಆಯಾಮಗಳಿಂದ ಕೂಡಿದೆ. ಕೇವಲ ತತ್ವಜ್ಞಾನ ಧರ್ಮ ಮಾತ್ರವಲ್ಲದೆ, ವಾಸ್ತವಿಕ ಬದುಕಿನ ಮೇಲೆ ಕೂಡ ಬೆಳಕನ್ನು ಚೆಲ್ಲುವ ಕೆಲಸವನ್ನು ಮಾಡಿದ್ದಾರೆ. ಸವಾಲುಗಳನ್ನು ಯಾವ ತತ್ವದ ಆಧಾರದ ಮೇಲೆ ನಾವು ಎದುರಿಸಬೇಕೆನ್ನುವುದನ್ನು ಅವರ ಬದುಕು ಮತ್ತು ವಿಚಾರಧಾರೆಯಲ್ಲಿ ಕಂಡುಕೊಳ್ಳುತ್ತೇವೆ. ಯಾವುದೇ ಒಂದು ವಿಚಾರಕ್ಕೆ ಅವರು ಸೀಮಿತರಾಗಿರಲಿಲ್ಲ. ಸೃಷ್ಟಿಕರ್ತನ ಮೂಲಕ್ಕೆ ಹೋಗಬಹುದೆಂದು ತೋರಿಸಿದ್ದಾರೆ. ಅವರ ಆಲೋಚನೆ ಹಾಗೂ ವಿಚಾರಗಳು ದೇಶ, ಗಡಿಗಳನ್ನು ದಾಟಿ ಅನಂತವಾಗಿತ್ತು. ಇದನ್ನೂ ಓದಿ: ನಾವು ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ ತಿಂಗಳಿಗೆ 1 ಸಾವಿರ: ಕೇಜ್ರಿವಾಲ್

ಯುವಶಕ್ತಿಯಲ್ಲಿ ನಂಬಿಕೆ:
ಯುವಶಕ್ತಿಯಲ್ಲಿ ವಿವೇಕಾನಂದರಿಗೆ ಅಪಾರವಾದ ನಂಬಿಕೆ ಇತ್ತು. ಏನನ್ನಾದರೂ ಸಾಧಿಸಬಹುದಾದರೆ ದೊಡ್ಡ ಬದಲಾವಣೆಯನ್ನು ತಮ್ಮ ಹಾಗೂ ಇತರರ ಬದುಕಿನಲ್ಲಿ ತರಬೇಕಾದರೆ ಅದು ಯೌವ್ವನದಲ್ಲಿ ಮಾತ್ರ ಸಾಧ್ಯ ಎನ್ನುವುದು ಅವರ ಪ್ರಬಲವಾದ ನಂಬಿಕೆ. ಆ ನಂಬಿಕೆಗೆ ಅನುಗುಣವಾಗಿ ಅವರ ಬದುಕನ್ನು ನಡೆಸಿದ್ದರು. ತಮ್ಮ ವಿಭಿನ್ನ ಚಿಂತನೆಯಿಂದ ವೈಚಾರಿಕ ಕ್ರಾಂತಿಯನ್ನು ತರುವ ನಿರ್ಣಯಗಳನ್ನು ಸ್ವಾಮಿ ವಿವೇಕಾನಂದರು ಜೀವನದುದ್ದಕ್ಕೂ ಕೈಗೊಂಡಿದ್ದಾರೆ. ಸಾವಿನ ನಂತರವೂ ಬದುಕಿದ ಮಹಾತ್ಮರಾಗಿದ್ದರು. ಬದುಕಿನ ಯಶಸ್ಸು ಹಾಗೂ ಸಾಧನೆಗಳನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಿದವರು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಡಾ. ಅಶ್ವತ್ಥ್ ನಾರಾಯಣ್, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ರಾಮಕೃಷ್ಣ ಮಠದ ಸ್ವಾಮೀಜಿಗಳು, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಉಪಸ್ಥಿತರಿದ್ದರು. ಇದನ್ನೂ ಓದಿ: ಕಳೆದ 24 ಗಂಟೆಯ ಅವಧಿಯಲ್ಲಿ ಯೋಗಿ ಸರ್ಕಾರದ ಎರಡು ಮಂತ್ರಿಗಳು ರಾಜೀನಾಮೆ

 

TAGGED:Basvarj BommaiYouth Policyಬಸವರಾಜ ಬೊಮ್ಮಾಯಿಸ್ವಾಮಿ ವಿವೇಕಾನಂದ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Vishnuvardhan Memorial 3
ದಾದಾ ಅಂತ್ಯಕ್ರಿಯೆ ಸ್ಥಳದಲ್ಲೇ ಸ್ಮಾರಕ ನಿರ್ಮಿಸಲಿ – ಫಿಲ್ಮ್ ಚೇಂಬರ್‌ಗೆ ವಿಷ್ಣು ಅಭಿಮಾನಿಗಳ ಸಂಘ ಮನವಿ
Cinema Latest Sandalwood Top Stories
Actor Jaggesh at mantralaya 1
ರಾಯರ ಮಧ್ಯಾರಾಧನೆಯಲ್ಲಿ ನಟ ಜಗ್ಗೇಶ್ ಭಾಗಿ
Cinema Districts Latest Raichur Sandalwood Top Stories
rana daggubati
ಆನ್‌ಲೈನ್ ಬೆಟ್ಟಿಂಗ್ – ಇ.ಡಿ ವಿಚಾರಣೆಗೆ ಹಾಜರಾದ ನಟ ರಾಣಾ ದಗ್ಗುಬಾಟಿ
Cinema Latest Top Stories
Dhruva Sarja Raghavendra Hegde
ಧ್ರುವ ಬಳಗದ ಆರೋಪಕ್ಕೆ ನಿರ್ದೇಶಕ ರಾಘವೇಂದ್ರ ಹೆಗಡೆ ಸ್ಪಷ್ಟನೆ
Cinema Latest Sandalwood Top Stories
darshan 28 years cinema journey
ದರ್ಶನ್ ಸಿನಿ ಜರ್ನಿಗೆ 28 ವರ್ಷ: ‘ಡಿ’ ಫ್ಯಾನ್ಸ್ ಸಂಭ್ರಮ
Cinema Latest Sandalwood Top Stories

You Might Also Like

Girish Mattannavar
Crime

ಜೈನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ – ಗಿರೀಶ್ ಮಟ್ಟಣ್ಣನವರ್, Kudla Rampage ಮೇಲೆ ಎಫ್‌ಐಆರ್

Public TV
By Public TV
16 minutes ago
misappropriation of more than rs 2 crore from pmay housing scheme in hassan case registered
Crime

ಹಾಸನ | 2 ಕೋಟಿಗೂ ಹೆಚ್ಚಿನ ಅನುದಾನ ದುರುಪಯೋಗ – ನೋಡಲ್ ಅಧಿಕಾರಿ ವಿರುದ್ಧ ಕೇಸ್‌ ದಾಖಲು

Public TV
By Public TV
39 minutes ago
KN Rajanna
Bengaluru City

ಸೆಪ್ಟೆಂಬರ್‌ ಕ್ರಾಂತಿ ಎಂದಿದ್ದ ರಾಜಣ್ಣಗೆ ಆಗಸ್ಟ್‌ನಲ್ಲೇ ಕೇಡುಗಾಲ – ವಜಾಗೆ ಕಾರಣ ಏನು?

Public TV
By Public TV
47 minutes ago
KN Rajanna Siddaramaiah
Bengaluru City

ಸಂಪುಟದಿಂದ ರಾಜಣ್ಣ ಕಿಕ್‌ಔಟ್‌ – ಆಪ್ತನ ತಲೆದಂಡದಿಂದ ಮೌನಕ್ಕೆ ಶರಣಾದ ಸಿಎಂ

Public TV
By Public TV
49 minutes ago
Ranganath
Bengaluru City

ರಾಜಣ್ಣ ವಜಾ ಬೆನ್ನಲ್ಲೇ ಹೊಸ ಬಾಂಬ್‌ ಸಿಡಿಸಿದ ಕುಣಿಗಲ್‌ ರಂಗನಾಥ್‌

Public TV
By Public TV
60 minutes ago
KN Rajanna
Bengaluru City

ಸಚಿವ ಸ್ಥಾನಕ್ಕೆ ಕೆಎನ್‌ ರಾಜಣ್ಣ ರಾಜೀನಾಮೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?