Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏಕ ಭಾರತ್, ಶ್ರೇಷ್ಠ ಭಾರತ್ – ಅಹಮದಾಬಾದ್‌ ಕನ್ನಡ ಸಂಘದ ಕಾರ್ಯಕ್ರಮಕ್ಕೆ ಮೋದಿ ಮೆಚ್ಚುಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಏಕ ಭಾರತ್, ಶ್ರೇಷ್ಠ ಭಾರತ್ – ಅಹಮದಾಬಾದ್‌ ಕನ್ನಡ ಸಂಘದ ಕಾರ್ಯಕ್ರಮಕ್ಕೆ ಮೋದಿ ಮೆಚ್ಚುಗೆ

Districts

ಏಕ ಭಾರತ್, ಶ್ರೇಷ್ಠ ಭಾರತ್ – ಅಹಮದಾಬಾದ್‌ ಕನ್ನಡ ಸಂಘದ ಕಾರ್ಯಕ್ರಮಕ್ಕೆ ಮೋದಿ ಮೆಚ್ಚುಗೆ

Public TV
Last updated: October 8, 2022 11:02 pm
Public TV
Share
2 Min Read
gujarat ahmedabad kannada organisation 75 years anniversary program pralhad joshi narendra Modi Tweet 1
SHARE

ಅಹಮದಾಬಾದ್‌: ಗುಜರಾತ್‌ನ ಅಹಮದಾಬಾದ್‌ ಕನ್ನಡ ಸಂಘದ(Ahmedabad Kannada Organisation) 75ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಏಕ ಭಾರತ್, ಶ್ರೇಷ್ಠ ಭಾರತ್. ಇಂತಹ ಸಾಂಸ್ಕೃತಿಕ ವಿನಿಮಯಗಳು ಉತ್ತೇಜನಕಾರಿ. ಕರ್ನಾಟಕದ ಸಂಸ್ಕೃತಿ ಮತ್ತು ಕನ್ನಡ ಭಾಷೆಯನ್ನು ಭಾರತದಾದ್ಯಂತ ವ್ಯಾಪಕವಾಗಿ ಗೌರವಿಸಲಾಗುತ್ತಿದೆ ಎಂದು ಮೋದಿ ಕನ್ನಡದಲ್ಲೇ ಟ್ವೀಟ್‌ ಮಾಡಿದ್ದಾರೆ.

ಏಕ ಭಾರತ್, ಶ್ರೇಷ್ಠ ಭಾರತ್.

ಇಂತಹ ಸಾಂಸ್ಕೃತಿಕ ವಿನಿಮಯಗಳು ಉತ್ತೇಜನಕಾರಿ. ಕರ್ನಾಟಕದ ಸಂಸ್ಕೃತಿ ಮತ್ತು ಕನ್ನಡ ಭಾಷೆಯನ್ನು ಭಾರತದಾದ್ಯಂತ ವ್ಯಾಪಕವಾಗಿ ಗೌರವಿಸಲಾಗುತ್ತಿದೆ! https://t.co/4rbVVzAnJl

— Narendra Modi (@narendramodi) October 8, 2022

ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೇಂದ್ರ ಸಂಸದೀಯ ಮತ್ತು ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ, ಅಹಮದಾಬಾದ್‌ನಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಸ್ಥಳ ನೀಡುವಂತೆ ಗುಜರಾತ್(Gujarat) ಸಿಎಂ ಭೂಪೇಂದ್ರ ಪಟೇಲ್ ಅವರಲ್ಲಿ ಮನವಿ ಮಾಡಿದ್ದಾರೆ.

ಕರ್ನಾಟಕ ಭವನ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಸರ್ಕಾರ ಹಾಗೂ ತಮ್ಮ ವೈಯಕ್ತಿಕ ಸಹಕಾರ ನೀಡುವುದಾಗಿ ಅವರು ಹೇಳಿದರು. ವಾರ್ಷಿಕೋತ್ಸವದಲ್ಲಿ ಗುಜರಾತ್‌ ಕನ್ನಡಿಗರೊಂದಿಗೆ ಎರಡು ರಾಜ್ಯಗಳು ಹೊಂದಿರುವ ವಿಶೇಷ ಬಾಂಧವ್ಯದ ಕುರಿತ ಹಲವು ವಿಚಾರಗಳನ್ನು ಹಂಚಿಕೊಂಡರು.

ನರ್ಮದಾ ನದಿಯಿಂದ ಕಾವೇರಿ ವರೆಗೆ ಕನ್ನಡ ಹಾಗೂ ಗುಜರಾತಿ ಮಾತನಾಡುವವರಿದ್ದಾರೆ. ಈ ಬಾಂಧವ್ಯ ನೂರಾರು ವರ್ಷಗಳಿಂದೆ ನಡೆದುಕೊಂಡು ಬಂದಿದೆ, ಮುಂದೆ ಕೂಡ ಇದೇ ರೀತಿ ಉಳಿಯಲಿದೆ.

ಮುಂಚಿನಿಂದಲೂ ನನಗೆ ವೈಯ್ಯಕ್ತಿವಾಗಿ ಹಾಗೂ ಸಂಘಟನೆಯ ದೃಷ್ಟಿಯಿಂದ ಗುಜರಾತಿ ಸಮುದಾಯದೊಂದಿಗೆ ಗಾಢವಾದ ಸಂಬಂಧವಿದೆ.3/12 pic.twitter.com/r8TkLexMgY

— Pralhad Joshi (@JoshiPralhad) October 8, 2022

ಒಂದೆಡೆ ದೇಶದ ಆಜಾದಿ ಕಾ ಅಮೃತ ಮಹೋತ್ಸವ ನಡೆಯುತ್ತಿದೆ. ಗುಜರಾತ್ ನಲ್ಲಿ ಕನ್ನಡ ಸಂಘದ 75ನೇ ವರ್ಷದ ಸಂಭ್ರಮ ನಡೆಯುತ್ತಿದೆ. ಅಂದಿನ ದಿನಗಳಲ್ಲಿಯೇ ಕನ್ನಡಿಗರು ಗುಜರಾತ್ ರಾಜ್ಯಕ್ಕೆ ಬಂದು, ಇಲ್ಲಿನ ಜನರೊಂದಿಗೆ ಬೆರೆತು, ವ್ಯಾಪಾರ-ವಹಿವಾಟು ನಡೆಸಿ ಗುಜರಾತನ ಏಳಿಗೆಗೆ ಕೊಡುಗೆಗಳನ್ನು ನೀಡಿದ್ದಾರೆ. ಇದು ಶ್ಲಾಘನೀಯ ಕಾರ್ಯ. ನರ್ಮದಾ ನದಿಯಿಂದ ಕಾವೇರಿವರೆಗೆ ಕನ್ನಡ ಹಾಗೂ ಗುಜರಾತಿ ಮಾತನಾಡುವವರಿದ್ದಾರೆ. ಈ ಬಾಂಧವ್ಯ ನೂರಾರು ವರ್ಷಗಳಿಂದೆ ನಡೆದುಕೊಂಡು ಬಂದಿದೆ ಎಂದು ಜೋಶಿ(Pralhad joshi) ಸಂತಸ ವ್ಯಕ್ತಪಡಿಸಿದರು.

ಆರ್‌ಎಸ್‌ಎಸ್‌, ಜನ ಸಂಘ ಹಾಗೂ ಬಿಜೆಪಿಯನ್ನು ಕಟ್ಟುವಾಗ ಆರಂಭಿಕ ದಿನಗಳಲ್ಲಿ ನಮಗೆ ಸಹಕಾರ ನೀಡುತ್ತಿದ್ದವರು ಗುಜರಾತಿಗಳು. ಈ ದೃಷ್ಟಿಯಿಂದ ಈ ಸಮುದಾಯದೊಂದಿಗೆ ನನ್ನ ವಿಶೇಷ ಸಂಬಂಧವಿದೆ ಎಂದು ಜೋಶಿ ತಮ್ಮ ಹಳೆಯ ನೆನಪುಗಳನ್ನು ಸ್ಮರಿಸಿದರು. ಇದನ್ನೂ ಓದಿ: ತಿರುಪತಿಯಲ್ಲಿ ದರ್ಶನಕ್ಕೆ ಕಾಯಬೇಕು 50 ಗಂಟೆ

ಆಜಾದಿ ಕಾ ಅಮೃತ ಮಹೋತ್ಸವ ಸಮಯದಲ್ಲಿ ಹರ್‌ ಘರ್‌ ತಿರಂಗಾ ಅಭಿಯಾನಕ್ಕೆ ನಮ್ಮ ಪ್ರಧಾನಿಗಳು ಕರೆ ನೀಡಿದಾಗ, ದೇಶ ಸ್ಪಂದಿಸಿದ ರೀತಿ ಅದ್ಭುತ. ಗುಜರಾತ ಹಾಗೂ ಕರ್ನಾಟಕ ಸೇರಿದಂತೆ ಪ್ರತಿ ಮನೆಯ ಮೆಲೆ ತ್ರಿವರ್ಣ ರಾರಾಜಿಸುತ್ತಿತ್ತು. 5/12 pic.twitter.com/9IbUyvA5QD

— Pralhad Joshi (@JoshiPralhad) October 8, 2022

ಇಂದು ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ದೇಶ ಅಭೂತಪೂರ್ವ ಬೆಳವಣಿಗೆ ಕಾಣುತ್ತಿದೆ. 200 ವರ್ಷಗಳ ವರೆಗೆ ನಮ್ಮನ್ನು ಆಳಿ, ದೇಶ ಬಿಟ್ಟು ಹೋಗುವಾಗ ಅಪಹಾಸ್ಯ ಮಾಡಿ, ಈ ದೇಶದ ಏಳಿಗೆ ಸಾಧ್ಯವೇ ಇಲ್ಲ ಎಂಬ ರೀತಿಯಲ್ಲಿ ಮಾತನಾಡಿದ್ದ ಬ್ರಿಟಿಷರನ್ನು ಹಿಂದಿಕ್ಕಿ ನಾವು ಇಂದು ಐದನೇ ಅತ್ಯಂತ ಪ್ರಬಲ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ್ದೇವೆ. ಈ ಸಾಧನೆಯಲ್ಲಿ ಕರ್ನಾಟಕ ಹಾಗೂ ಗುಜರಾತ್ ಅತ್ಯಂತ ಮಹತ್ವದ ಕೊಡುಗೆಗಳನ್ನು ನೀಡಿವೆ ಎಂದು ಜೋಶಿ ತಮ್ಮ ಅನಿಸಿಕೆ ಹಂಚಿಕೊಂಡರು.‌

ಈಗ ಸರ್ಕಾರ ಕೈಗೆತ್ತಿಕೊಂಡಿರುವ ಮತ್ತೊಂದು ಮಹತ್ವದ ಕಾರ್ಯ ನೂತನ ಶಿಕ್ಷಣ ನೀತಿ. ರಾಷ್ಟ್ರದ ಭವಿಷ್ಯದ ದೃಷ್ಟಿಯಿಂದ ಇದು ಅತ್ಯಂತ ಉತ್ತಮ ನೀತಿಯಾಗಿದೆ. ಆಯಾ ರಾಜ್ಯದಲ್ಲಿ, ಅಲ್ಲಿನ ಮಾತೃ ಭಾಷೆಗೆ ಪ್ರಾಮುಖ್ಯತೆ ನೀಡಲಾಗಿದೆ. ಇಂಗ್ಲೀಷ್‌ಗಿಂತ ಪುರಾತನ ಇತಿಹಾಸ ಹೊಂದಿರುವ ಭಾಷೆಗಳು ನಮ್ಮ ದೇಶದಲ್ಲಿದ್ದು, ಅವುಗಳಿಗೆ ಪ್ರಾಮುಖ್ಯತೆ ನೀಡುವ ದೃಷ್ಟಿಯಿಂದ ಈ ನೀತಿ ಜಾರಿಗೊಳಿಸಲಾಗುತ್ತಿದೆ. 19 ಹಾಗೂ 20ನೇ ಶತಮಾನಗಳು ಪಾಶ್ಚಿಮಾತ್ಯರ ಪಾಲಾಗಿದ್ದರೆ, 21ನೇ ಶತಮಾನ ಭಾರತದ್ದಾಗಿ ಮಾಡುವ ಸಂಕಲ್ಪದೊಂದಿಗೆ ಪ್ರಧಾನಿ ಮೋದಿ ಹಾಗೂ ಅಮಿತ್‌ ಶಾ ಅವರ ನೇತೃತ್ವದಲ್ಲಿ ನಾವು ಶ್ರಮಿಸುತ್ತಿದ್ದೇವೆ ಎಂದು ಇದೇ ವೇಳೆ ಪ್ರಹ್ಲಾದ್‌ ಜೋಶಿ ಹೇಳಿದರು.

Live Tv
[brid partner=56869869 player=32851 video=960834 autoplay=true]

TAGGED:Ahmedabadgujaratnarendra modiPralhad Joshiಅಹಮದಾಬಾದ್ಕನ್ನಡ ಸಂಘಕರ್ನಾಟಕಗುಜರಾತ್ನರೇಂದ್ರ ಮೋದಿಪ್ರಹ್ಲಾದ್ ಜೋಶಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Weather 1
Bagalkot

ರಾಜ್ಯದಲ್ಲಿ ಏ.29ರವರೆಗೆ, ಬೆಂಗ್ಳೂರಲ್ಲಿ ಮೇ 5ರವರೆಗೆ ಮಳೆ ಮುನ್ಸೂಚನೆ

Public TV
By Public TV
3 minutes ago
Chikkamagaluru marriage
Chikkamagaluru

ಕಾಫಿನಾಡಲ್ಲೊಂದು ಅಪರೂಪದ ಮದ್ವೆ – ATMನಿಂದ ಲವ್ ಶುರು, ಈಗ ಜಾತಿ ಸಂಕೋಲೆ ಮೀರಿ ಕೈಹಿಡಿದ ಜೋಡಿ

Public TV
By Public TV
31 minutes ago
Chinnaswamy Stadium RCB
Bengaluru City

ಚಿನ್ನಸ್ವಾಮಿಯಲ್ಲಿ ಇಂದು ಬಿಗ್ ಫೈಟ್ – ಆರ್‌ಸಿಬಿ ತವರು ನೆಲದ ಕೊನೆಯ ಲೀಗ್ ಪಂದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್‌

Public TV
By Public TV
32 minutes ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ – ವಿದ್ಯಾರ್ಥಿಗಳೇ, ಪೋಷಕರೇ ಬನ್ನಿ

Public TV
By Public TV
52 minutes ago
Minister D. Sudhakars health condition is critical 2
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 24-04-2026

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?