ಮಧ್ಯಪ್ರದೇಶದ ಬೆನ್ನಲ್ಲೇ ಗುಜರಾತ್‍ನಲ್ಲಿ ಇಕ್ಕಟ್ಟಿಗೆ ಸಿಲುಕಿದ ಕಾಂಗ್ರೆಸ್

Public TV
2 Min Read
Sonia Gandhi Rahul Gandhi

– ರಾಜ್ಯಸಭೆ ಚುನಾವಣೆಗೂ ಮುನ್ನ 5 ಶಾಸಕರು ರಾಜೀನಾಮೆ
– ಶಾಸಕರನ್ನು ಉಳಿಸಿಕೊಳ್ಳಲು ರೆಸಾರ್ಟ್ ಮೊರೆ

ಗಾಂಧಿನಗರ: ಮಧ್ಯಪ್ರದೇಶದ ಸಿಎಂ ಕಮಲ್‍ನಾಥ್ ಸರ್ಕಾರವನ್ನು ಅತಂತ್ರಕ್ಕೆ ಸಿಲುಕಿದ ಬೆನ್ನಲ್ಲೇ ಗುಜರಾತ್‍ನಲ್ಲಿ ಕಾಂಗ್ರೆಸ್ ಶಾಸಕರ ಹೈಜಾಕ್‍ಗೆ ‘ಕಮಲ ಪಡೆ’ ಸರ್ವಪ್ರಯತ್ನ ನಡೆಸಿದೆ.

ರಾಜ್ಯಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಗುಜರಾತ್‍ನ 5 ಜನ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದಾರೆ. ಶಾಸಕರ ನಡೆಯಿಂದ ಕಾಂಗ್ರೆಸ್ ಹೈಕಮಾಂಡ್ ಕಂಗೆಟ್ಟು ಹೋಗಿದ್ದು, ಉಳಿದ ಶಾಸಕರನ್ನು ಪಕ್ಷದಲ್ಲೇ ಇರಿಸಿಕೊಳ್ಳಲು ರೆಸಾರ್ಟ್ ಮೊರೆ ಹೋಗಿದೆ. ಇದನ್ನೂ ಓದಿ:  ನಾಳೆ ಬೆಳಗ್ಗೆಯೇ ಬಹುಮತ ಸಾಬೀತುಪಡಿಸಿ- ಕೈ ಸರ್ಕಾರಕ್ಕೆ ಎಂಪಿ ರಾಜ್ಯಪಾಲ ಆದೇಶ

Gujarath

ಗುಜರಾತ್‍ನ 4 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್ 26ರಂದು ಚುನಾವಣೆ ನಡೆಯಲಿದೆ. ಈ ಮಧ್ಯೆ ಕಾಂಗ್ರೆಸ್ ಶಾಸಕರಾದ ಪ್ರವೀಣ್ ಮಾರು, ಮಂಗಲ್ ಗವಿತ್, ಸೋಮಭಾಯ್ ಪಟೇಲ್, ಜೆ.ವಿ.ಕಾಕಾಡಿಯಾ ಹಾಗೂ ಪ್ರದ್ಯುಮನ್ ಜಡೇಜಾ ಭಾನುವಾರ ರಾಜೀನಾಮೆ ನೀಡಿದ್ದಾರೆ.

ಇದಕ್ಕೂ ಮೊದಲು ಆಪರೇಷನ್ ಕಮಲದ ಭಯದಿಂದ ಕಾಂಗ್ರೆಸ್ ತನ್ನ 14 ಶಾಸಕರನ್ನು ಜೈಪುರಕ್ಕೆ ಕಳುಹಿಸಿತ್ತು. ಜೊತೆಗೆ 36 ಶಾಸಕರನ್ನು ರಾಜಸ್ಥಾನಕ್ಕೆ ಕಳುಹಿಸಲಾಗಿದೆ. ಈ ಮೂಲಕ ಎಲ್ಲ ಶಾಸಕರನ್ನು ರೆಸಾರ್ಟಿಗೆ ಕರೆದೊಯ್ಯಲಾಗಿದೆ. ಮೊಬೈಲ್ ಬಳಸದಂತೆ ಹಾಗೂ ತಮ್ಮ ಬಳಿ ಇಟ್ಟುಕೊಳ್ಳದಂತೆ ಶಾಸಕರಿಗೆ ಕಾಂಗ್ರೆಸ್ ನಾಯಕರು ಸೂಚನೆ ನೀಡಿದ್ದಾರೆ. ಒಂದು ರೀತಿ ಬಂಧನಕ್ಕೆ ಒಳಗಾಗಿರುವ ಶಾಸಕರು ಕುಟುಂಬ ಅಥವಾ ಪರಿಚಯಸ್ಥರನ್ನು ಭೇಟಿಯಾಗಲು ಸಹ ಸಾಧ್ಯವಾಗುತ್ತಿಲ್ಲ. ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರವು ಕಾಂಗ್ರೆಸ್ ಹೈಕಮಾಂಡ್ ಆದೇಶದಂತೆ ಗುಜರಾತ್‍ನ ‘ಕೈ’ ಶಾಸಕರಿಗೆ ರಕ್ಷಣೆ ಒದಗಿಸಿದೆ ಎಂದು ವರದಿಯಾಗಿದೆ.

BJP CONGRESS FLAG

14 ಶಾಸಕರನ್ನು ಜೈಪುರಕ್ಕೆ ಕಳುಹಿಸಲಾಗಿದೆ. 36 ಶಾಸಕರನ್ನು ರಾಜಸ್ಥಾನಕ್ಕೆ ಕಳುಹಿಸಲಾಗಿದ್ದು, ಅವರನ್ನು ಉದಯಪುರಕ್ಕೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಉಳಿದ 5 ಶಾಸಕರನ್ನು ಗುಜರಾತ್‍ನ ರೆಸಾರ್ಟಿಗೆ ಕರೆದೊಯ್ಯಲು ಕಾಂಗ್ರೆಸ್ ನಿರ್ಧರಿಸಿದೆಯಂತೆ.

ಅಂಕಿ ಅಂಶ:
* ಗುಜರಾತ್ ವಿಧಾನಸಭೆಯಲ್ಲಿ ಒಟ್ಟು ಸ್ಥಾನಗಳು- 180
* ಕಾಂಗ್ರೆಸ್ 5 ಶಾಸಕರ ರಾಜೀನಾಮೆಯಿಂದ 175ಕ್ಕೆ ಕುಸಿತ
* ಬಿಜೆಪಿಯ ಬಲ 106 (ಬಿಜೆಪಿ ಶಾಸಕರು 103, ಎನ್‍ಸಿಪಿ 1, ಭಾರತೀಯ ಬುಡಕಟ್ಟು ಪಕ್ಷ2 )
* ಕಾಂಗ್ರೆಸ್‍ನ ಬಲ 69 (ಕಾಂಗ್ರೆಸ್ 68, ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ 1)
* ಗುಜರಾತ್‍ನಲ್ಲಿ ರಾಜ್ಯಸಭೆಯ ಎಷ್ಟು ಸ್ಥಾನಗಳಲ್ಲಿ ಚುನಾವಣೆ – 4

Vote Finger

ಅಭಯ್ ಭಾರದ್ವಾಜ್, ರಾಮಿವಾ ಬೆನ್ ಬಾರಾ ಮತ್ತು ನರ್ಹಾರಿ ಅಮೀನ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಶಕ್ತಿ ಸಿಂಗ್ ಗೋಹಿಲ್ ಮತ್ತು ಭಾರತ್ ಸಿಂಗ್ ಸೋಲಂಕಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ಸದ್ಯದ ಪರಿಸ್ಥಿಯ ಪ್ರಕಾರ ಬಿಜೆಪಿ 2 ಮತ್ತು ಕಾಂಗ್ರೆಸ್ 1 ಸುಲಭವಾಗಿ ಸ್ಥಾನವನ್ನು ಗೆಲ್ಲುತ್ತವೆ. ಆದರೆ ಕಾಂಗ್ರೆಸ್‍ನ ಇಬ್ಬರು ಶಾಸಕರು ಅಡ್ಡ ಮತ ಚಲಾಯಿಸಿದರೆ ಬಿಜೆಪಿ 3 ಸ್ಥಾನಗಳನ್ನು ಗೆಲ್ಲುತ್ತದೆ. ಬಿಜೆಪಿಯಲ್ಲಿ 106 ಶಾಸಕರು ಇದ್ದಾರೆ. ಈ ಮೂಲಕ 3 ರಾಜ್ಯಸಭಾ ಸ್ಥಾನಗಳನ್ನು ಗೆಲ್ಲಲು ಅವರಿಗೆ ಇನ್ನೂ 2 ಮತಗಳು ಬೇಕಾಗುತ್ತವೆ. ಹೀಗಾಗಿ ಕಾಂಗ್ರೆಸ್‍ನ ಇಬ್ಬರು ಶಾಸಕರ ಅಡ್ಡ ಮತದಾನ ಬಿಜೆಪಿಗೆ ಅಗತ್ಯವಿದೆ.

gujarat assembly A

2017ರಲ್ಲಿ ಗುಜರಾತ್‍ನ 3 ರಾಜ್ಯಸಭಾ ಸ್ಥಾನಗಳ ಚುನಾವಣೆಯ ಸಂದರ್ಭದಲ್ಲಿ ಇದೇ ರೀತಿಯ ಪರಿಸ್ಥಿತಿ ಸೃಷ್ಟಿಯಾಗಿತ್ತು. ಅಹ್ಮದ್ ಪಟೇಲ್ ಅವರ ವಿಜಯವನ್ನು ನಿರ್ಧರಿಸಲು ಕಾಂಗ್ರೆಸ್ ತನ್ನ ಶಾಸಕರನ್ನು ಕರ್ನಾಟಕಕ್ಕೆ ಕಳುಹಿಸಿತ್ತು. ಕೆಲವು ಶಾಸಕರು ಸಹ ಅಡ್ಡ ಮತದಾನ ಮಾಡಿದರು. ಆದರೆ ಅಹ್ಮದ್ ಪಟೇಲ್ ಮೇಲುಗೈ ಸಾಧಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *