Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮಭಕ್ತರಿಗೆ ಮರೆಯಲಾಗದ ಗಿಫ್ಟ್‌ – ಉಚಿತ ಹಚ್ಚೆಹಾಕುವ ಮೂಲಕ ಶ್ರೀರಾಮನ ಸೇವೆಗೆ ಮುಂದಾದ ಗುಜರಾತ್‌ ಕಲಾವಿದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಮಭಕ್ತರಿಗೆ ಮರೆಯಲಾಗದ ಗಿಫ್ಟ್‌ – ಉಚಿತ ಹಚ್ಚೆಹಾಕುವ ಮೂಲಕ ಶ್ರೀರಾಮನ ಸೇವೆಗೆ ಮುಂದಾದ ಗುಜರಾತ್‌ ಕಲಾವಿದ

Latest

ರಾಮಭಕ್ತರಿಗೆ ಮರೆಯಲಾಗದ ಗಿಫ್ಟ್‌ – ಉಚಿತ ಹಚ್ಚೆಹಾಕುವ ಮೂಲಕ ಶ್ರೀರಾಮನ ಸೇವೆಗೆ ಮುಂದಾದ ಗುಜರಾತ್‌ ಕಲಾವಿದ

Public TV
Last updated: January 5, 2024 9:19 pm
Public TV
Share
3 Min Read
Ram
SHARE

ಅಯೋಧ್ಯೆ: ಶ್ರೀರಾಮಮಂದಿರ (Shri Ram Mandir) ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ದೇಶ-ವಿದೇಶಗಳಿಂದ ಭಕ್ತರು ಹಲವು ರೀತಿಯಲ್ಲಿ ಉಡುಗೊರೆಗಳನ್ನು ಅಯೋಧ್ಯೆಗೆ ತಲುಪಿಸುತ್ತಿದ್ದಾರೆ. ಆದ್ರೆ ಗುಜರಾತ್‌ನ (Gujarat) ನವಸಾರಿ ನಗರದ ಕಲಾವಿನೊಬ್ಬ ಸಾವಿರಾರು ರಾಮಭಕ್ತರಿಗೆ ಉಚಿತವಾಗಿ ಹಚ್ಚೆಹಾಕುವ ಮೂಲಕ ಶ್ರೀರಾಮನ ಸೇವೆಗೆ ಮುಂದಾಗಿದ್ದಾನೆ.

ಕಲಾವಿದ (Gujarat Tattooist) ಜಯ್ ಸೋನಿ ‌ಗುಜರಾತ್‌ನಲ್ಲಿ ರಾಮನ ಭಕ್ತರಿಗೆ ಉಚಿತವಾಗಿ ಶ್ರೀರಾಮನ ಹೆಸರನ್ನು ಹಚ್ಚೆಹಾಕಲು ಮುಂದಾಗಿದ್ದಾನೆ. ಈಗಾಗಲೇ ಅಭಿಯಾನ ಶುರು ಮಾಡಿದ್ದು 200 ಭಕ್ತರ ಕೈಯಲ್ಲಿ ʻಶ್ರೀರಾಮʼನ ಹೆಸರನ್ನು ಹಚ್ಚೆಹಾಕಿದ್ದಾನೆ, ಇನ್ನೂ 700 ಮಂದಿಗೆ ಮುಂಗಡವಾಗಿ ಕಾಯ್ದಿರಿಸಿದ್ದಾನೆ. ಜನವರಿ 22ರಂದು ರಾಮಮಂದಿರ ಉದ್ಘಾಟನೆಯಾಗುವ ವೇಳೆಗೆ ಕನಿಷ್ಠ 1,000 ಮಂದಿಗೆ ಹಚ್ಚೆಹಾಕುವ ಮೂಲಕ ಶ್ರೀರಾಮನ ಸೇವೆ ಸಲ್ಲಿಸಲು ಮುಂದಾಗಿದ್ದಾನೆ. ಇದನ್ನೂ ಓದಿ: Ayodhya Ram Mandir: ಆನೆ, ಸಿಂಹ, ಹನುಮಾನ್, ಗರುಡ ಮೂರ್ತಿಗಳ ಫೋಟೋ ಬಿಡುಗಡೆ

Ayodhya Ram Mandir 5

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದಾಗ ನನ್ನ ಕಡೆಯಿಂದ ಏನು ಸೇವೆ ಮಾಡಬಹುದೆಂದು ನಾನು ಯೋಚಿಸುತ್ತಿದ್ದೆ. ಟ್ಯಾಟೂ ಕಲಾವಿದನಾಗಿರುವುದರಿಂದ, ಭಕ್ತರಿಗೆ ಭಗವಾನ್ ಶ್ರೀರಾಮನ ಹೆಸರನ್ನೇ ಉಚಿತವಾಗಿ ಹಚ್ಚೆ ಹಾಕಬೇಕೆಂದು ನಿರ್ಧರಿಸಿದೆ ಎಂಬುದಾಗಿ ಕಲಾವಿದ ಹೇಳಿಕೊಂಡಿದ್ದಾನೆ. ಇದನ್ನೂ ಓದಿ: ರಾಮಮಂದಿರ ಲೋಕಾರ್ಪಣೆ – AI ಕಣ್ಗಾವಲು ಸಾಧ್ಯತೆ, 11 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ

ಅಯೋಧ್ಯೆಯಲ್ಲಿ (Ayodhya) ರಾಮಮಂದಿರ (Ram Mandir) ಉದ್ಘಾಟನೆ ಕಾಲ ಸನ್ನಿಹಿತವಾಗಿದೆ. ದೇಶದೆಲ್ಲೆಡೆ ಶ್ರೀರಾಮನ ಸ್ಮರಣೆ, ಭಜನೆ ಕೇಳಿಬರುತ್ತಿದೆ. ಹಿಂದೂಗಳ ಮನೆ ಮನದಲ್ಲಿ ಸಂಭ್ರಮ ತುಂಬಿದೆ. ಇದೇ ಜನವರಿ 22 ರಂದು ರಾಮಮಂದಿರ ಉದ್ಘಾಟನೆಯಾಗಲಿದೆ. ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ (ಬಾಲರಾಮ) ಪ್ರಾಣ ಪ್ರತಿಷ್ಠೆ ಕೂಡ ಜರುಗಲಿದೆ. ಈ ದಿನಕ್ಕಾಗಿ ಕೋಟ್ಯಂತರ ರಾಮಭಕ್ತರು ಕಾತರದಿಂದ ಕಾಯುತ್ತಿದ್ದಾರೆ. ಜ.22 ರ ಪ್ರಮುಖ ಧಾರ್ಮಿಕ ಆಚರಣೆ ಪ್ರಾಣ ಪ್ರತಿಷ್ಠೆ (Pran Pratistha). ಎಷ್ಟೋ ಜನಕ್ಕೆ ಪ್ರಾಣ ಪ್ರತಿಷ್ಠೆ ಬಗ್ಗೆ ಗೊತ್ತಿರುವುದಿಲ್ಲ. ಪ್ರಾಣ ಪ್ರತಿಷ್ಠೆ ಎಂದರೇನು? ಇದರಲ್ಲಿನ ಆಚರಣೆಗಳು ಹೇಗಿರುತ್ತವೆ? ಎಂಬ ಪ್ರಶ್ನೆಗಳಿಗೆ ವಿವರ ಇಲ್ಲಿದೆ.

AYODHYA

ಏನಿದು ಪ್ರಾಣ ಪ್ರತಿಷ್ಠೆ?
ಪ್ರಾಣ ಪ್ರತಿಷ್ಠೆ ಎನ್ನುವುದು ಹಿಂದೂ ಮತ್ತು ಜೈನ ಧರ್ಮದ ಪ್ರಮುಖ ಆಚರಣೆಯಾಗಿದೆ. ವಿಗ್ರಹವು ಕೇವಲ ದೇವರ ರೂಪವನ್ನು ಚಿತ್ರಿಸುವ ಒಂದು ಕಲಾಕೃತಿಯಷ್ಟೆ. ಪ್ರಾಣ ಪ್ರತಿಷ್ಠೆಯ ನಂತರವೇ ವಿಗ್ರಹವು ದೈವಿಕವಾಗುತ್ತದೆ. ಅದಕ್ಕಾಗಿ ವಿಗ್ರಹವನ್ನು ಪವಿತ್ರಗೊಳಿಸಿ ದೇವಾಲಯದ ಗರ್ಭಗುಡಿಯಲ್ಲಿ ಸ್ಥಾಪಿಸಲಾಗುತ್ತದೆ. ಪ್ರಾಣ ಎಂದರೆ ‘ಜೀವಶಕ್ತಿ, ಉಸಿರು, ಚೈತನ್ಯ’ ಮತ್ತು ಪ್ರತಿಷ್ಠೆ ಎಂದರೆ ‘ಸ್ಥಾಪನೆ’. ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಪೂಜಾ ವಿಧಾನ, ವೈದಿಕ ಸ್ತೋತ್ರಗಳ ಪಠಣ ನಡೆಸಲಾಗುವುದು. ಪ್ರಾಣ ಪ್ರತಿಷ್ಠೆ ಎಂದರೆ, ವಿಗ್ರಹಕ್ಕೆ ಜೀವಶಕ್ತಿ ತುಂಬಿ ದೈವಿಕವಾಗಿಸುವ ಆಚರಣೆ ಎನ್ನುತ್ತಾರೆ ಹಿರಿಯರು.

ಪ್ರಾಣ ಪ್ರತಿಷ್ಠೆ ಪ್ರಕ್ರಿಯೆಗೂ ಮೊದಲು ವಿಗ್ರಹದಲ್ಲಿ ದೈವಿಕ ಶಕ್ತಿ ಇರುವುದಿಲ್ಲ. ಪ್ರಾಣ ಪ್ರತಿಷ್ಠೆ ನಂತರವೇ ವಿಗ್ರಹಕ್ಕೆ ವಿಶೇಷ ಶಕ್ತಿ ಬರುತ್ತದೆ. ಬಳಿಕ ವಿಗ್ರಹವು ದೈವಿಕ ಶಕ್ತಿಯಾಗಿ ರೂಪಾಂತರಗೊಳ್ಳುತ್ತದೆ. ಆಗ ದೇವಾಲಯಗಳಲ್ಲಿ ಭಕ್ತರು ವಿಗ್ರಹವನ್ನು ಪೂಜಿಸಬಹುದು ಎಂಬ ನಂಬಿಕೆಯಿದೆ.

ram temple ayodhya

ಆಚರಣೆ ಹೇಗಿರುತ್ತೆ?
ವಿಗ್ರಹವನ್ನು ದೇವಾಲಯಕ್ಕೆ ಸಾಂಪ್ರದಾಯಿಕವಾಗಿ ತರುವುದರೊಂದಿಗೆ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಪ್ರಾರಂಭವಾಗುತ್ತದೆ. ಅಂದರೆ ವಿಗ್ರಹವನ್ನು ಹೊರಗಿನಿಂದ ಕೇಂದ್ರ ಸ್ಥಳಕ್ಕೆ ಸ್ಥಳಾಂತರಿಸುವುದು. ಅತಿಥಿಯನ್ನು ಸ್ವಾಗತಿಸುವಂತೆಯೇ ದೇವಾಲಯಕ್ಕೆ ದೇವರ ವಿಗ್ರಹವನ್ನು ತರಲಾಗುವುದು. ನಂತರ ವಿಗ್ರಹಕ್ಕೆ ಅಭಿಷೇಕ ಮಾಡಿಸಲಾಗುತ್ತದೆ. ನಂತರ ಸುಗಂಧ ದ್ರವ್ಯಗಳನ್ನು ಹಚ್ಚಲಾಗುತ್ತದೆ. ನಂತರ ವಿಗ್ರಹದ ಕಣ್ಣಿಗೆ ಬಟ್ಟೆಯನ್ನು ಕಟ್ಟಿ ಸರಿಯಾದ ಸ್ಥಳದಲ್ಲಿ ಪೂರ್ವಾಭಿಮುಖವಾಗಿ ಸ್ಥಾಪಿಸುತ್ತಾರೆ.

ಪುರೋಹಿತರು ಮಂತ್ರಗಳನ್ನು ಪಠಿಸುತ್ತಾರೆ. ಮಂತ್ರಗಳ ಪಠಣೆ, ಆಚರಣೆಯಿಂದ ವಿಗ್ರಹಕ್ಕೆ ದೈವಶಕ್ತಿ ಬರುತ್ತದೆ. ನಂತರ ವಿಗ್ರಹಕ್ಕೆ ಅಭಿಮುಖವಾಗಿ ಕನ್ನಡಿಯನ್ನು ಹಿಡಿಯಲಾಗುತ್ತದೆ. ಬಳಿಕ ವಿಗ್ರಹದ ಕಣ್ಣಿಗೆ ಕಟ್ಟಿದ ಬಟ್ಟೆಯನ್ನು ಬಿಚ್ಚಿಲಾಗುತ್ತದೆ. ಆಗ ಕನ್ನಡಿ ಒಡೆಯುತ್ತದೆ. ಕನ್ನಡಿ ಒಡೆಯುವುದು, ವಿಗ್ರಹ ದೈವಿಕ ಶಕ್ತಿಯಾಗಿ ರೂಪಾಂತರಗೊಂಡಿದೆ ಎಂಬುದಕ್ಕೆ ಸಾಕ್ಷಿ. ಈ ಪ್ರಕ್ರಿಯೆ ಮುಗಿದ ನಂತರ ವಿಗ್ರಹವನ್ನು ಪೂಜಿಸಲು ಯೋಗ್ಯವೆಂದು ಪರಿಗಣಿಸಲಾಗುತ್ತದೆ. ವಿಗ್ರಹಕ್ಕೆ ಜೀವತುಂಬಿ ದೈವಿಕವಾಗಿಸುವ ಆಚರಣೆ ಇದು ಎಂದು ನಂಬಲಾಗಿದೆ.

Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

Budget 2026 1 1
Latest

ವಿಕಸಿತ ಭಾರತಕ್ಕೆ ಕೇಂದ್ರದ ಯುವಶಕ್ತಿ ಬಜೆಟ್ – ಜೀರಾಮ್‌ಜೀ ಯೋಜನೆಗೆ 95,692 ಕೋಟಿ ಮೀಸಲು; ಹಿಂದಿಗಿಂತಲೂ ಹೆಚ್ಚು!

Public TV
By Public TV
6 hours ago
Hassan Car Accident
Crime

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ

Public TV
By Public TV
7 hours ago
Ind vs Pak U19 1
Cricket

U19 World Cup | ಭಾರತಕ್ಕೆ 58 ರನ್‌ಗಳ ಭರ್ಜರಿ ಜಯ – ಮೈದಾನದಲ್ಲೇ ಕಣ್ಣೀರಿಟ್ಟ ಪಾಕ್‌ ಕ್ರಿಕೆಟಿಗ

Public TV
By Public TV
7 hours ago
India vs Pakistan 1
Cricket

Boycott | ವಿಶ್ವಕಪ್‌ ಟೂರ್ನಿ ಆಡ್ತೀವಿ, ಭಾರತದ ವಿರುದ್ಧ ಆಡಲ್ಲ – ಪಾಕಿಸ್ತಾನ ಅಚ್ಚರಿ ನಿರ್ಧಾರ

Public TV
By Public TV
8 hours ago
Chaluvarayaswamy
Districts

ಕೃಷಿಯಾಧಾರಿತ ಕರ್ನಾಟಕಕ್ಕೆ ಕೇಂದ್ರ ಬಜೆಟ್‌ನಲ್ಲಿಲ್ಲ ಒತ್ತು: ಚಲುವರಾಯಸ್ವಾಮಿ

Public TV
By Public TV
8 hours ago
CJ Roy 6
Bengaluru City

ಬೆಲ್ಜಿಯಮ್ ದೇಶದ ಪಿಸ್ತೂಲ್‌ನಿಂದ ಸಿ.ಜೆ ರಾಯ್ ಶೂಟೌಟ್

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?