Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುಜರಾತಲ್ಲಿ ಟೈಫಾಯ್ಡ್, ಒಡಿಶಾದಲ್ಲಿ ಜಾಂಡೀಸ್, ಮಧ್ಯಪ್ರದೇಶದಲ್ಲಿ ಭೇದಿ; 3 ರಾಜ್ಯಗಳಲ್ಲಿ 200 ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗುಜರಾತಲ್ಲಿ ಟೈಫಾಯ್ಡ್, ಒಡಿಶಾದಲ್ಲಿ ಜಾಂಡೀಸ್, ಮಧ್ಯಪ್ರದೇಶದಲ್ಲಿ ಭೇದಿ; 3 ರಾಜ್ಯಗಳಲ್ಲಿ 200 ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ

Latest

ಗುಜರಾತಲ್ಲಿ ಟೈಫಾಯ್ಡ್, ಒಡಿಶಾದಲ್ಲಿ ಜಾಂಡೀಸ್, ಮಧ್ಯಪ್ರದೇಶದಲ್ಲಿ ಭೇದಿ; 3 ರಾಜ್ಯಗಳಲ್ಲಿ 200 ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ

Public TV
Last updated: January 5, 2026 7:53 pm
Public TV
Share
3 Min Read
Contaminated Water
SHARE

– ಅಮಿತ್‌ ಶಾ ಸ್ವ ಕ್ಷೇತ್ರದಲ್ಲಿ ಕಲುಷಿನ ನೀರಿನ ಸಮಸ್ಯೆ; 100ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ

ಗಾಂಧಿನಗರ/ಇಂದೋರ್‌/ಭುವನೇಶ್ವರ: ಗುಜರಾತ್‌, ಒಡಿಶಾ, ಮಧ್ಯಪ್ರದೇಶ ರಾಜ್ಯಗಳಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳು ಜನರನ್ನ ಕಾಡತೊಡಗಿವೆ. ಗುಜರಾತ್‌ನಲ್ಲಿ ಟೈಫಾಯ್ಡ್‌, ಒಡಿಶಾದಲ್ಲಿ ಜಾಂಡೀಸ್‌ ಹಾಗೂ ಮಧ್ಯಪ್ರದೇಶದಲ್ಲಿ ಅತಿಸಾರ ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳನ್ನ ಬಾಧಿಸುತ್ತಿವೆ.

ಗುಜರಾತ್‌ನಲ್ಲಿ 119 ಮಂದಿ ಟೈಫಾಯ್ಡ್‌ಗೆ ತುತ್ತಾಗಿದ್ದು, ಈ ಪೈಕಿ 104 ಜನ ಮಕ್ಕಳೇ ಇದ್ದಾರೆ. ಮಧ್ಯಪ್ರದೇಶದಲ್ಲಿ 142 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಇದರಲ್ಲಿ 20 ಮಂದಿಗೆ ಅತಿಸಾರ ಸಮಸ್ಯೆ ಕಾಣಿಸಿಕೊಂಡಿದೆ. ಇನ್ನೂ ಒಡಿಶಾದಲ್ಲಿ ಜಾಂಡೀಸ್‌ ಸಮಸ್ಯೆಗೆ ತುತ್ತಾಗಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಬಂಗಾಳ ಚುನಾವಣೆಗೂ ಮುನ್ನವೇ ʻಕೈʼ ಹಿಡಿದ ಟಿಎಂಸಿ ರಾಜ್ಯಸಭಾ ಸಂಸದೆ ಮೌಸಮ್ ನೂರ್

Amit Shah

ಗುಜರಾತ್‌ನಲ್ಲಿ ಟೈಫಾಯ್ಡ್‌
ಗುಜರಾತ್‌ನ ಗಾಂಧಿನಗರದ ಸೆಕ್ಟರ್‌ 24 ಮತ್ತು 28 ಹಾಗೂ ಅಡಿವಾಡ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದಾಗಿ ಸುಮಾರು 119 ಮಂದಿ ಶಂಕಿತ ಟೈಫಾಯ್ಡ್‌ಗೆ ತುತ್ತಾಗಿದ್ದಾರೆ. ಈ ಪೈಕಿ 104 ಜನ ಮಕ್ಕಳಿದ್ದಾರೆ. ಕನಿಷ್ಠ 7 ಸ್ಥಳಗಳಲ್ಲಿ ಕುಡಿಯುವ ನೀರಿಗೆ ಒಳಚರಂಡಿ ನೀರು ಮಿಶ್ರಣವಾಗಿ ಈ ಸಮಸ್ಯೆ ಕಾಣಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ.  ಇದನ್ನೂ ಓದಿ: ಜ.11ರಂದು ಸೋಮನಾಥ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ

ಇತ್ತೀಚೆಗಷ್ಟೇ ಸ್ಥಳೀಯ ಸರ್ಕಾರ 24/7 ನೀರು ಸರಬರಾಜು ಯೋಜನೆಗೆ 257 ಕೋಟಿ ರೂ. ಅನುದಾನ ಮಂಜೂರು ಮಾಡಿತ್ತು. ಇದರ ಭಾಗವಾಗಿ ಒಳಚರಂಡಿ ಇರುವ ಮಾರ್ಗಗಳಲ್ಲೇ ಹೊಸ ಪೈಪ್‌ಲೈನ್‌ಗಳನ್ನ ಹಾಕಲಾಗಿದೆ. ಒಳಚರಂಡಿ ಪಕ್ಕದಲ್ಲೇ ನೀರಿನ ಪೈಪ್‌ಲೈನ್‌ಗಳು ಹಾದು ಹೋಗಿರುವುದರಿಂದ ಕಾಮಗಾರಿ ವೇಳೆ ಚರಂಡಿ ನೀರು ಮಿಶ್ರಣವಾಗಿದೆ. ಇದನ್ನ ಸೇವಿಸಿದ ಕಾರಣ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಚಿಕಿತ್ಸೆ ಬಳಿಕ 19 ಜನರನ್ನ ಆಸ್ಪತ್ರೆಯಿಂದ ಡಿಶ್ಚಾರ್ಜ್‌ ಮಾಡಲಾಗಿದೆ. ಉಳಿದವರಿಗೆ ಗಾಂಧಿನಗರ ಸರ್ಕಾರಿ ಆಸ್ಪತ್ರೆ ಮತ್ತು ಸೆಕ್ಟರ್‌ 24, 29ರಲ್ಲಿರುವ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Odisha

ಶಾ ಸೂಚನೆ; 75 ಆರೋಗ್ಯ ತಂಡಗಳಿಂದ ತೀವ್ರ ತಪಾಸಣೆ
ಗಾಂಧಿನಗರ ಲೋಕಸಭಾ ಕ್ಷೇತ್ರದ ಸಂಸದರೂ ಆಗಿರುವ ಕೇಂದ್ರ ಗೃಹಸಚಿವ ಅಮಿತ್‌ ಶಾ ಕ್ಷೇತ್ರದಲ್ಲಿ, ತಕ್ಞಣವೇ ಸಮಸ್ಯೆಗಳನ್ನ ಸರಿಪಡಿಸಲು ಸೂಚಿಸಿದ್ದಾರೆ. ಜೊತೆಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರಿನ ಗುಣಮಟ್ಟ ಪರಿಶೀಲಿಸಲು ನಿರ್ದೇಶನ ನೀಡಿದ್ದಾರೆ. ಈ ಬೆನ್ನಲ್ಲೇ ಸೆಕ್ಟರ್ 24, 26, 28 ಮತ್ತು ಅಡಿವಾಡಾ ಪ್ರದೇಶಗಳಲ್ಲಿ ಒಟ್ಟು 20,800 ಮನೆಗಳಿದ್ದು, 90,000ಕ್ಕೂ ಹೆಚ್ಚು ಜನಸಂಖ್ಯೆ ಇದೆ. ಈಗಾಗಲೇ ಈ ಪ್ರದೇಶಗಳಲ್ಲಿ 75 ಆರೋಗ್ಯ ತಂಡಗಳು ತಪಾಸಣೆ ನಡೆಸಿದ್ದು, ವರದಿ ಬರಬೇಕಿದೆ.  ಇದನ್ನೂ ಓದಿ: ಬಾಂಗ್ಲಾದಲ್ಲಿ 2026ರ ಐಪಿಎಲ್‌ ಪ್ರಸಾರ ಬಂದ್‌ – RCB ಬ್ರ್ಯಾಂಡ್‌ಗೂ ಸಮವಿಲ್ಲ ಕ್ರಿಕೆಟ್‌ನ ಆದಾಯ!

ಮಧ್ಯಪ್ರದೇಶದಲ್ಲಿ ಭೇದಿ ಬಾಧೆ
ಇಂದೋರ್‌ನಲ್ಲಿ ಕಲುಷಿತ ನೀರು ಸೇವೆನಯಿಂದ ಉಂಟಾಗಿರುವ ಭೇದಿ ಸಮಸ್ಯೆ ಈಗ ಉಲ್ಬಣಗೊಳ್ಳುತ್ತಿದೆ. ಸದ್ಯ 142 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಈ ಪೈಕಿ 11 ಮಂದಿ ಐಸಿಯುನಲ್ಲಿದ್ದಾರೆ. ಈ ಬೆನ್ನಲ್ಲೇ ಭಾಗೀರಥಪುರ ಪ್ರದೇಶದಲ್ಲಿ ಆರೋಗ್ಯ ತಂಡಗಳು ತೀವ್ರ ತಪಾಸಣೆ ನಡೆಸಿವೆ. ಈಗಾಗಲೇ ಈ ಪ್ರದೇಶದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಈ ಬೆನ್ನಲ್ಲೇ 2,354 ಮನೆಗಳಲ್ಲಿ ಒಟ್ಟು 9,416 ಮಂದಿಯನ್ನ ತಪಾಸಣೆಗೆ ಒಳಪಡಿಸಿದ ನಂತರ 20 ಹೊಸ ರೋಗಿಗಳು ಪತ್ತೆಯಾಗಿದ್ದಾರೆ.

Bengaluru Cauvery Water Bandh
ಸಾಂದರ್ಭಿಕ ಚಿತ್ರ

ಅಧಿಕಾರಿಗಳ ಪ್ರಕಾರ, ಈ ವರೆಗೆ 398 ರೋಗಿಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರಲ್ಲಿ 256 ರೋಗಿಗಳು ಚೇತರಿಸಿಕೊಂಡು ಡಿಶ್ಚಾರ್ಜ್‌ ಆಗಿದ್ದಾರೆ.

ಒಡಿಶಾದಲ್ಲಿ ಜಾಂಡೀಸ್‌
ಇನ್ನೂ ಒಡಿಶಾದ ಖುರ್ದಾ ಜಿಲ್ಲೆಯ ಜವಾಹರ್‌ ನವೋದಯ ವಿದ್ಯಾಲಯದಲ್ಲಿ (ಜೆಎನ್‌ವಿ) ಜಾಂಡೀಸ್ ಕಾಣಿಸಿಕೊಂಡು 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕ್ರಿಸ್ಮಸ್‌ ರಜೆ ಮುಗಿಸಿ ಮತ್ತೆ ಶಾಲೆಗೆ ಹಿಂದಿರುಗಿದ್ದ ವಿದ್ಯಾರ್ಥಿಗಳು ಇದ್ದಕ್ಕಿದ್ದಂತೆ ಜಾಂಡೀಸ್‌ಗೆ ತುತ್ತಾಗಿದ್ದಾರೆ ಎಂದು ಆರೋಗ್ಯಾಧಿಕಾರಿ ನೀಲಕಂಠ ಮಿಶ್ರಾ ತಿಳಿಸಿದ್ದಾರೆ. ಹೊರಗಿನ ಕೆಲ ಆಹಾರ ಪದಾರ್ಥಗಳನ್ನು ಸೇವಿಸಿದ್ದರಿಂದ ಉಂಟಾಗಿರುವ ಸಮಸ್ಯೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿರುವುದಾಗಿ ತಿಳಿಸಿದ್ದಾರೆ.

TAGGED:Amit Shahcontaminated watergujaratIndoreJaundiceODISHATyphoidಅಮಿತ್ ಶಾಒಡಿಶಾಕಲುಷಿತ ನೀರುಗುಜರಾತ್ಮಧ್ಯಪ್ರದೇಶ
Share This Article
Facebook Whatsapp Whatsapp Telegram

Cinema news

jayamala
ಹಿರಿಯ ನಟಿ ಜಯಮಾಲಾಗೆ ಡಾ. ರಾಜ್‌ಕುಮಾರ್‌ ಪ್ರಶಸ್ತಿ
Cinema Latest Main Post Sandalwood
Kichcha Sudeep Rocking Star Yash
ಈ ಹೊಸ ಹೆಜ್ಜೆ ನಿಮಗೆ ಅದೃಷ್ಟ ತರಲಿ – ಯಶ್‍ಗೆ ಕಿಚ್ಚನ ಹಾರೈಕೆ
Cinema Latest Sandalwood Top Stories
Toxic Teaser RGV
ಟಾಕ್ಸಿಕ್ ಟೀಸರ್ ನೋಡಿ ಆರ್‌ಜಿವಿ ಹೇಳಿದ್ದೇನು ಗೊತ್ತಾ..?
Cinema Latest Top Stories
Toxic Movie Yash
ಟಾಕ್ಸಿಕ್ ರಾಯ ಹೆಸರಿನ ಗುಟ್ಟು ಇದೇನಾ..?
Cinema Latest Sandalwood Top Stories

You Might Also Like

Siddaramaiah Pinarayi Vijayan
Bengaluru City

ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ – ಕೇರಳ ಸರ್ಕಾರದ ನಡೆಗೆ ಸಿಎಂ ಸಿದ್ದರಾಮಯ್ಯ ಖಂಡನೆ

Public TV
By Public TV
1 hour ago
rent house
Bengaluru City

ಕರ್ನಾಟಕ ಬಾಡಿಗೆ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರಿಂದ ಅಂಕಿತ

Public TV
By Public TV
2 hours ago
school student karwar
Latest

Karwar: ಭಾರವಾದ ಶಾಲಾ ಬ್ಯಾಗ್ ಹೊತ್ತು ವಿದ್ಯಾರ್ಥಿಗೆ ಕೈ ಮುರಿತ

Public TV
By Public TV
2 hours ago
Renee Nicole Good
Crime

ಮಹಿಳೆಗೆ ಗುಂಡಿಕ್ಕಿ ಹತ್ಯೆಗೈದ ಅಧಿಕಾರಿ – ಆಕೆ ಭಯಾನಕವಾಗಿ ವರ್ತಿಸಿದ್ದೇ ಕಾರಣ ಎಂದ ಟ್ರಂಪ್‌

Public TV
By Public TV
2 hours ago
BJP DKSHI
Bengaluru City

ಕರ್ನಾಟಕದ ಖಜಾನೆಯಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಕೋಟಿಗಟ್ಟಲೆ ಜಾಹೀರಾತು: ಬಿಜೆಪಿ ಆರೋಪ, ಡಿಸಿಎಂ ಸಮರ್ಥನೆ

Public TV
By Public TV
3 hours ago
siddaramaiah KREDL
Bengaluru City

ಸಿಎಂಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ.

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?