Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗ್ಳೂರು ರೆಸಾರ್ಟಿಗೆ ಬಂದಿದ್ದ ಶಾಸಕರಲ್ಲಿ ಎಷ್ಟು ಮಂದಿ ಜಯಗಳಿಸಿದ್ದಾರೆ: ಡಿಕೆಶಿ ಹೇಳಿದ್ರು

Public TV
Last updated: December 18, 2017 5:17 pm
Public TV
Share
2 Min Read
DK SHIVAKUMAR 2
SHARE

ಬೆಂಗಳೂರು: ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಗುಜರಾತಿನಿಂದ ರಾಜ್ಯಕ್ಕೆ ಬಂದಿದ್ದ 44 ಶಾಸಕರಲ್ಲಿ 32 ಶಾಸಕರು ಜಯಗಳಿಸಿದ್ದಾರೆ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ

ಕೆಪಿಸಿಸಿ ಕಚೇರಿಯಲ್ಲಿ ಗುಜರಾತ್ ಚುನಾವಣಾ ಫಲಿತಾಂಶ ವಿಚಾರವಾಗಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಪಕ್ಷವನ್ನು ಹೋಳು ಮಾಡಿದರೂ ಇಂದು ನಮಗೆ ಹೆಚ್ಚಿನ ಸ್ಥಾನ ಸಿಕ್ಕಿದೆ. ಶೇಖಡವಾರು ಮತಗಳಿಕೆ ಕೂಡ ಹೆಚ್ಚಾಗಿದೆ ಆಗಿದೆ ಎಂದರು.

DK SHIVAKUMAR 1 1

ಮಾಧ್ಯಮಗಳು ಚುನಾವಣೆ ಬಗ್ಗೆ ವಾರದಿಂದ ವರದಿ ಮಾಡುತ್ತಿದ್ದವು. ಆದರೂ ನಮಗೆ ವಿಶ್ವಾಸವಿತ್ತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲ ಸಾಮಾನ್ಯ. ಚುನಾವಣೆ ನಡೆದ ರೀತಿ, ಮತದಾರರ ಮೇಲೆ ಹಾಕಿದ ಒತ್ತಡ. ನಗರದ ಮತದಾರರಿಗೆ ಬಿಜೆಪಿ ನಾಯಕರ ಬೆದರಿಕೆ. ಇವೆಲ್ಲವೂ ಚುನಾವಣೆ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದರು.

ಬಿಜೆಪಿಯವರು 150 ದಾಟುತ್ತೇವೆ ಎಂದು ಹೇಳುತ್ತಿದ್ದರು. ನಮಗೆ ಕಡಿಮೆ ಸ್ಥಾನ ಬಂದಿರಬಹುದು. ಆದರೆ ಆತ್ಮವಿಶ್ವಾಸ ಕಳೆದುಕೊಳ್ಳುವಷ್ಟು ಆಗಲಿಲ್ಲ. ನಮ್ಮ ಪಕ್ಷವನ್ನ ಹೋಳು ಮಾಡಿದ್ರು. ಗುಜರಾತ್ ಮತದಾರರು ನಮ್ಮ ಪರವಾಗಿ ನಿಂತಿದ್ದಾರೆ. ಆದ್ದರಿಂದ ಅವರೆಲ್ಲರಿಗೂ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದು ಡಿಕೆಶಿ ಹೇಳಿದರು.

ರಾಜ್ಯದಲ್ಲೂ 2008 ರಿಂದ 2013 ರವರೆಗೆ ಬಿಜೆಪಿ ಆಡಳಿತ ನಡೆಸಿದೆ. ಆದ್ದರಿಂದ ಜನರು ಅವರ ಆಡಳಿತವನ್ನು ನೋಡಿದ್ದಾರೆ. ಅಲ್ಲಿನ ಗಾಳಿ ಇಲ್ಲಿ ಬೀಸುತ್ತೆ ಅನ್ನೋದು ಸುಳ್ಳು. ಪಕ್ಕದಲ್ಲಿ ಬಿಹಾರ, ಪಂಜಾಬ್, ತೆಲಂಗಾಣ ಇದ್ರೂ ಗಾಳಿ ಬೀಸಲಿಲ್ಲ. ಆದ್ದರಿಂದ ಇಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು.

bjp 1

ನಾವೆಲ್ಲ ಕರ್ನಾಟಕದ ಚರಿತ್ರೆಯನ್ನು ನೋಡಿದ್ದೇವೆ. ಹಿಂದೆ ಜನತಾ ಸರ್ಕಾರ, ವಾಜಪೇಯಿ ಸರ್ಕಾರ ಕೇಂದ್ರದಲ್ಲಿದ್ದಾಗಲೂ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿತ್ತು. ಬಿಜೆಪಿಯವರು ಆಸೆ ಪಡುವುದರಲ್ಲಿ ತಪ್ಪೇನಿಲ್ಲ. ಆದರೆ ರಾಜ್ಯದಲ್ಲಿ ಮತ್ತೆ ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತೆ. ಸೂರತ್ ಮತ್ತು ಅಹಮದಾಬಾದ್‍ನಲ್ಲಿನ ಉದ್ಯಮಿಗಳಿಗೆ, ವ್ಯಾಪಾರಸ್ಥರಿಗೆ ಎಷ್ಟು ಬೆದರಿಕೆ ಒಡ್ಡಬೇಕಿತ್ತೋ ಅಷ್ಟೆಲ್ಲವನ್ನೂ ಬಿಜೆಪಿ ಮಾಡಿದೆ. ನಾವು ಹಿಂದುಗಳಲ್ಲವೇ ಬಿಜೆಪಿಯವರು ಮಾತ್ರ ಹಿಂದುಗಳೇ..? ನಾವು ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಪಕ್ಷ ನಡೆಸುತ್ತೇವೆ ಎಂದರು.

ರಾಜ್ಯಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ನಿಂದ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಕಣಕ್ಕೆ ಇಳಿದಿದ್ದರು. ಈ ವೇಳೆ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಆಗಮಿಸಿದ್ದರು. ಡಿಕೆ ಶಿವಕುಮಾರ್ ರೆಸಾರ್ಟ್ ನಲ್ಲಿ ಕೈ ಶಾಸಕರನ್ನು ನೋಡಿಕೊಳ್ಳುವ ಉಸ್ತುವಾರಿ ವಹಿಸಿಕೊಂಡಿದ್ದರು.

congress

Bjp flag 3

MODI 5 2

TAGGED:BangalorebjpcongressDK ShivakumargujaratPublic TVresultsಕಾಂಗ್ರೆಸ್ಗುಜರಾತ್ಡಿಕೆ ಶಿವಕುಮಾರ್ಪಬ್ಲಿಕ್ ಟಿವಿಫಲಿತಾಂಶಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

You Might Also Like

CRIME
Crime

ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

Public TV
By Public TV
8 minutes ago
Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
45 minutes ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
51 minutes ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
1 hour ago
WTC SA 3
Cricket

ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

Public TV
By Public TV
1 hour ago
Chikkodi Crime
Belgaum

ಅಣ್ಣ ಶ್ರೀಮಂತ ಆಗ್ಬಿಟ್ಟ ಅಂತ ತಮ್ಮ ಮಾಡಿದ್ದೆಂತ ನೀಚ ಕೆಲ್ಸ ಗೊತ್ತಾ? – ಹಂತಕ ಸಿಕ್ಕಿಬಿದ್ದಿದ್ದೇ ರೋಚಕ!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?