Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಇಂದು ಗುಜರಾತ್, ಹಿಮಾಚಲ ಎಲೆಕ್ಷನ್ ರಿಸಲ್ಟ್- ಟೆನ್ಶನ್‍ನಲ್ಲಿರುವ ರಾಜ್ಯ ಬಿಜೆಪಿ ಪಾಳಯ

Public TV
Last updated: December 8, 2022 7:30 am
Public TV
Share
3 Min Read
ELECTION RESULT 4
SHARE

ಪಣಜಿ: ತೀವ್ರ ಕುತೂಹಲ ಕೆರಳಿಸಿರುವ ಹಿಮಾಚಲ ಪ್ರದೇಶ (Himachal Pradesh), ಗುಜರಾತ್ ವಿಧಾನಸಭೆ ಚುನಾವಣೆ (Gujrath Vidhanasabha Election) ಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು ಕೇಂದ್ರ ಚುನಾವಣಾ ಆಯೋಗ (Election Commission) ಎಲ್ಲ ತಯಾರಿ ಮಾಡಿಕೊಂಡಿದೆ. ಚುನಾವಣೊತ್ತರ ಸಮೀಕ್ಷೆಗಳಲ್ಲಿ ಗುಜರಾತ್ ನಲ್ಲಿ ಬಿಜೆಪಿ ಆಡಳಿತಕ್ಕೆ ಬಂದ್ರೆ ಹಿಮಾಚಲ ಪ್ರದೇಶದಲ್ಲಿ ನೆಕ್ ಟು ನೆಕ್ ಫೈಟ್ ಇದೆ ಎಂದು ಹೇಳಿವೆ. ಹೀಗಾಗಿ ಇಂದು ಪ್ರಕಟವಾಗಲಿರುವ ಎರಡು ರಾಜ್ಯಗಳ ಜನಾದೇಶ ಎಲ್ಲರ ಗಮನ ಸೆಳೆಯಲಿದೆ.

ಕಳೆದೊಂದು ತಿಂಗಳನಿಂದ ದೇಶದ ಜನರ ಗಮನ ಸೆಳೆದಿದ್ದು ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ ಎಂಟು ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು, ಮೊದಲು ಅಂಚೆ ಮತ ಪತ್ರಗಳನ್ನು 8:30 ರ ಬಳಿಕ ಇವಿಎಂ ಮತ ಎಣಿಕೆ ಆರಂಭವಾಗಲಿದೆ.

ELECTION RESULT

ಮತ ಎಣಿಕೆ ಹಿನ್ನಲೆ ಕೇಂದ್ರ ಚುನಾವಣಾ ಆಯೋಗ, ರಾಜ್ಯ ಚುನಾವಣಾ ಆಯೋಗಗಳೊಂದಿಗೆ ಎಲ್ಲ ತಯಾರಿ ಮಾಡಿಕೊಂಡಿದೆ. ಗುಜರಾತ್ ನ 182 ಕ್ಷೇತ್ರಗಳು ಮತ್ತು ಹಿಮಾಚಲ ಪ್ರದೇಶದ 68 ಕ್ಷೇತ್ರಗಳ ಮತ ಎಣಿಕೆಗಾಗಿ ಆಯೋಗ 116 ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಿದೆ. ಈ ಎರಡು ರಾಜ್ಯಗಳ ಜೊತೆಗೆ ಒಡಿಶಾ (Odisha), ರಾಜಸ್ಥಾನ, ಬಿಹಾರ, ಛತ್ತೀಸ್ಗಢದಲ್ಲಿ ತಲಾ ಒಂದು ಮತ್ತು ಉತ್ತರ ಪ್ರದೇಶದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಹಾಗೂ ಒಂದು ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯ ಫಲಿತಾಂಶವನ್ನು ಆಯೋಗ ಪ್ರಕಟಿಸಲಿದೆ.

ಮತ ಎಣಿಕೆ ಕೇಂದ್ರಗಳಲ್ಲಿ ಮೂರು ಹಂತಸ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಶಾಂತಿ ಮತ್ತು ಸುವ್ಯವಸ್ಥೆಗೆ ದಕ್ಕಬಾರದಂತೆ ನೋಡಿಕೊಳ್ಳಲು ಮತ ಎಣಿಕೆ ಕೇಂದ್ರಗಳ ಸುತ್ತಲೂ ಸೆಕ್ಷನ್ 144 CRPC ಅನ್ನು ವಿಧಿಸಿದೆ.

ಮೋದಿ ತವರು ಗುಜರಾತ್ ನಲ್ಲಿ ಗೆಲವು ಯಾರದು..?: ಪ್ರಧಾನಿ ನರೇಂದ್ರ ಮೋದಿ ಕ್ಷೇತ್ರ ಎನ್ನುವ ಕಾರಣಕ್ಕೆ ಗುಜರಾತ್ ಎಲ್ಲರ ಗಮನ ಸೆಳೆದಿದೆ. ಗುಜರಾತ್ ನಲ್ಲಿ ನರೇಂದ್ರ ಮೋದಿ (Narendra Modi) ಅವರ ಅಶ್ವಮೇಧ ಯಾಗವನ್ನು ತಡೆದು ನಿಲ್ಲಿಸುವುರ್ಯಾರು ಎನ್ನುವುದು ಎಲ್ಲರ ಕುತೂಹಲವಾಗಿದೆ. ಆಡಳಿತ ವಿರೋಧಿ ಅಲೆಯನ್ನು ಮೀರಿ ಬಿಜೆಪಿ (BJP) ಉತ್ತಮ ಪ್ರಯತ್ನ ಮಾಡಿದ್ದು ಮತ್ತೊಮ್ಮೆ ಅಧಿಕಾರಕ್ಕೆ ಬರುವ ಸಾಧ್ಯತೆಗಳಿದೆ ಎಂದು ಸಮೀಕ್ಷೆಗಳು ಹೇಳಿವೆ. ಕಾಂಗ್ರೆಸ್ ಕಳೆದ ಬಾರಿಗಿಂತ ಕಡಿಮೆ ಸ್ಥಾನಗಳನ್ನು ಗೆದ್ದರೆ, ಆಪ್ ಕಮಾಲ್ ಗುಜರಾತ್ ನಡೆದಿಲ್ಲ ಅದಾಗ್ಯೂ ಖಾತೆ ತೆರೆಯುವಲ್ಲಿ ಯಶಸ್ವಿಯಾಗಲಿದೆ ಎಂದು ಭವಿಷ್ಯ ನುಡಿದಿವೆ.

ELECTION RESULT 2

ಬಹುತೇಕ ರಾಷ್ಟ್ರೀಯ ಮಾಧ್ಯಮಗಳು ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹೇಳಿದ್ದು 40 – 46% ವರೆಗೂ ಮತ ಪ್ರಮಾಣ ಪಡೆಯಬಹುದು ಎಂದು ಹೇಳಿವೆ. ಕಾಂಗ್ರೆಸ್ 20-30% ಹಾಗೂ ಆಪ್ 10 – 15 % ಮತಗಳು ಪಡೆಯಬಹುದು ಎನ್ನಲಾಗಿದೆ. ಕಳೆದ ಬಾರಿ ಪಾಟಿದಾರ್ ಹೋರಾಟದಿಂದ ಉತ್ತಮ ಫಲಸು ತೆಗೆದಿದ್ದ ಕಾಂಗ್ರೆಸ್ ಗೆ ಈ ಬಾರಿ ಗಟ್ಟಿಯಾದ ಅಸ್ತ್ರವೇ ಇಲ್ಲದಂತಾಗಿದೆ. ಬೆಲೆ ಏರಿಕೆ ನಿರುದ್ಯೋಗದ ಮೇಲೆ ಇಟ್ಟು ಅಖಾಡಕ್ಕೆ ಇಳಿದ ಕೈಪಡೆಗೆ ಆಪ್ ದೊಡ್ಡ ಪೆಟ್ಟು ನೀಡಿರುವುದು ಸಮೀಕ್ಷೆಯಲ್ಲಿ ಗೊತ್ತಾಗುತ್ತಿದೆ. ಮೊದಲ ಬಾರಿಗೆ ಅಖಾಡಕ್ಕೆ ಇಳಿದಿದ್ದು ಖಾತೆ ತೆರೆಯುವ ಲಕ್ಷಣಗಳು ಕಂಡು ಬಂದಿವೆ.

ಉಪ ಚುನಾವಣೆಯಲ್ಲಿ ಸೋತಿದ್ದ ಜೆ.ಪಿ ನಡ್ಡಾಗೆ ಪ್ರತಿಷ್ಟೆಯ ಪ್ರಶ್ನೆ: ಇನ್ನೂ ಪಹಾಡಿ ರಾಜ್ಯ ಅಂತ್ಲೆ ಕರೆಸಿಕೊಳ್ಳುವ ಹಿಮಾಚಲ ಪ್ರದೇಶದಲ್ಲಿ ಈ ಬಾರಿ ಗೆಲ್ಲೊದ್ಯಾರು ಎನ್ನುವ ಕುತೂಹಲ ಎಲ್ಲರಲ್ಲಿದೆ. ಈ ರಾಜ್ಯದಲ್ಲಿ ಪ್ರತಿ ಐದು ವರ್ಷಗಳಿಗಮೊಮ್ಮೆ ಜನರು ಬೇರೆ ಬೇರೆ ಪಕ್ಷಗಳಿಗೆ ನೀಡುತ್ತಾ ಬಂದಿದ್ದಾರೆ. ಉತ್ತರಾಖಂಡ ನಲ್ಲೂ ಇದೇ ಸಂಸ್ಕೃತಿ ಇತ್ತು, ಅದನ್ನು ಬದಲಿಸಿದ್ದ ಬಿಜೆಪಿ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿತ್ತು. ಹಾಗೆಯೇ ಹಿಮಾಚಲ ಪ್ರದೇಶದಲ್ಲೂ ಸತತ ಎರಡನೇ ಬಾರಿ ಅಧಿಕಾರ ಹಿಡಿಯುವ ಪ್ರಯತ್ನದಲ್ಲಿ ಬಿಜೆಪಿ ನಾಯಕರಿದ್ದಾರೆ.

ELECTION RESULT 1

ವಿಶೇಷವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (J P Nadda) ಮುಂದೆ ಈ ಸವಾಲಿದ್ದು, ಈ ಚುನಾವಣೆ ಗೆಲ್ಲುವ ಮೂಲಕ ಉಪ ಚುನಾವಣೆ ಕಹಿ ಮರೆಯಬೇಕಿದೆ. ಆದರೆ ಸಮೀಕ್ಷೆಗಳು ಮಾತ್ರ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ (Congress) ಮತ್ತು ತೀವ್ರ ಪೈಪೋಟಿ ಇದೆ. ಕಡೆ ಘಳಿಗೆಯಲ್ಲಿ ಯಾರು ಬೇಕಾದ್ರು ಅಧಿಕಾರ ಹಿಡಿಯಬಹುದು ಎಂದು ಭವಿಷ್ಯ ನುಡಿದಿವೆ.

ಬಹುತೇಕ ಸಮೀಕ್ಷೆಗಳು ನೇರಾ ನೇರ ಫೈಟ್ ತೋರಿಸಿದ್ರು, ಕೆಲವು ಸಮೀಕ್ಷೆಗಳು ಬಿಜೆಪಿ ಸರ್ಕಾರ ರಚನೆ ಮಾಡುವ ಸಣ್ಣ ಸಾಧ್ಯತೆಗಳನ್ನು ತೋರಿಸಿವೆ. ಈ ಹಿನ್ನೆಲೆ ಕಾಂಗ್ರೆಸ್ ಕೂಡಾ ಸಾಕಷ್ಟು ಪೂರ್ವ ತಯಾರಿ ಮಾಡಿಕೊಂಡಿದ್ದು, ಇಂದಿನ ಫಲಿತಾಂಶಕ್ಕಾಗಿ ಕಾದು ಕುಳಿತಿದೆ. ಈ ನಡುವೆ ತೀವ್ರ ಹೋರಾಟ ನಡೆಸಿದ್ದ ಆಪ್ ಸಮೀಕ್ಷೆಗಳಲ್ಲಿ ಫೆಲ್ಯೂವರ್ ಆಗಿರುವುದು ಕಂಡು ಬಂದರೂ, ಸಮೀಕ್ಷೆಗಳು ಸುಳ್ಳಾಗಲಿದ್ದು ನಾವು ಅಧಿಕಾರ ಹಿಡಿಯಲಿದ್ದೇವೆ ಎಂದು ಹೇಳಿಕೊಂಡಿದೆ.

Live Tv
[brid partner=56869869 player=32851 video=960834 autoplay=true]

TAGGED:election resultgujrathhimachal pradeshಗುಜರಾತ್ಚುನಾವಣಾ ಫಲಿತಾಂಶಹಿಮಾಚಲ ಪ್ರದೇಶ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
8 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

https publictv.in i lost my love in a plane crash young man tears in front of the ahmedabad hospital
Latest

ವಿಮಾನ ದುರಂತ | ನಾನು ನನ್ನ ಪ್ರೀತಿ ಕಳೆದುಕೊಂಡೆ – ಆಸ್ಪತ್ರೆ ಮುಂದೆ ಯುವಕನ ಕಣ್ಣೀರು

Public TV
By Public TV
24 minutes ago
karwar landslide
Latest

ಕಾರವಾರದಲ್ಲಿ ಅಬ್ಬರದ ಮಳೆಗೆ ಕುಸಿದ ಗುಡ್ಡ

Public TV
By Public TV
6 minutes ago
Air Hostess Roshni
Latest

Ahmedabad Plane Crash- ಆಕಾಶದಲ್ಲಿ ಹಾರಾಡುವ ಕನಸು ಕಂಡಿದ್ದ ಗಗನಸಖಿಯ ದುರಂತ ಅಂತ್ಯ

Public TV
By Public TV
6 minutes ago
Kerala taluk officer suspended for casteist slur at nurse Ranjitha killed in Air India crash
Latest

ರಂಜಿತಾ ಸಾವಿಗೆ ವ್ಯಂಗ್ಯ – ಕೇರಳ ಉಪ ತಹಶೀಲ್ದಾರ್ ಅಮಾನತು

Public TV
By Public TV
6 minutes ago
pm modi visits plane crash site ahmedabad
Latest

Photo Gallery: ಅಹಮದಾಬಾದ್‌ನಲ್ಲಿ ವಿಮಾನ ದುರಂತ ನಡೆದ ಸ್ಥಳಕ್ಕೆ ಮೋದಿ ಭೇಟಿ

Public TV
By Public TV
30 minutes ago
Mandya 2 1
Crime

ಐಪಿಎಲ್ ಬೆಟ್ಟಿಂಗ್ ಆಡಲು ಮನೆಗಳ್ಳತನ ಮಾಡುತ್ತಿದ್ದ ಖದೀಮ ಪೊಲೀಸರ ಅತಿಥಿ

Public TV
By Public TV
35 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?