Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಕಾಂಗ್ರೆಸ್ಸಿಗೆ ಸೇರಿದ್ದು ಯಾಕೆ? ‘ಕೈ’ಗೆ ಯುವಕರು ಮತ ಹಾಕಬೇಕು ಯಾಕೆ: ಗುಜರಾತ್ ಒಬಿಸಿ ನಾಯಕ ಅಲ್ಪೇಶ್ ಠಾಕೂರ್ ಹೇಳ್ತಾರೆ ಓದಿ

Public TV
Last updated: November 30, 2017 12:31 pm
Public TV
Share
5 Min Read
Alpesh Thakor 1
SHARE

ಗುಜರಾತ್‍ನಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇತ್ತೀಚಿಗೆ ಗುಜರಾತ್ ಯುವ ನಾಯಕರಾದ ಪಾಟೀದಾರ ಸಮುದಾಯದ ನಾಯಕ ಹಾರ್ದಿಕ್ ಪಟೇಲ್, ಹಿಂದುಳಿದ ವರ್ಗಗಳ ನಾಯಕ ಅಲ್ಪೇಶ್ ಠಾಕೂರ್ ಮತ್ತು ದಲಿತ ನಾಯಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಸೇರ್ಪಡೆ ಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಮತ್ತಷ್ಟು ಬಲ ಬಂದಿದೆ. ಒಗ್ಗಟಿನ ಮೂಲಕ ಕಾಂಗ್ರೆಸ್ ಎದುರಾಳಿ ಬಿಜೆಪಿಯನ್ನು ಬಗ್ಗು ಬಡಿದು ಶತಾಯಗತಾಯ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿದೆ. ಹೀಗಾಗಿ ಒಬಿಸಿ ನಾಯಕ ಅಲ್ಪೇಶ್ ಠಾಕೂರ್ ಅವರು ನಾನು ರಾಜಕೀಯ ಪ್ರವೇಶಿಸಿದ್ದು ಯಾಕೆ? ಕಾಂಗ್ರೆಸ್ ಸೇರಿದ್ದು ಯಾಕೆ ಎನ್ನುವುದನ್ನು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ನೀವು ರಾಜಕೀಯ ಪ್ರವೇಶಿಸಲು ಕಾರಣ ಏನು? ಅದರಲ್ಲೂ ಕಾಂಗ್ರೆಸ್ಸನ್ನೇ ಆಯ್ಕೆ ಮಾಡಿಕೊಂಡಿದ್ದು ಯಾಕೆ?
ಬಿಜೆಪಿ ವಿರುದ್ಧದ ಧೋರಣೆಯಿಂದ ನಾನು ರಾಜಕೀಯ ಪ್ರವೇಶ ಮಾಡಿದ್ದೇನೆ. ನಾನು ಕಾಂಗ್ರೆಸ್ ಸೇರುವುದು ಜನಾದೇಶವಾಗಿತ್ತು. ಬಿಜೆಪಿ ಸುಧಾರಿಸದಿದ್ರೆ ರಾಜಕೀಯ ಪ್ರವೇಶಿಸುತ್ತೇವೆ ಎಂದು ನಾವು ಈ ಮೊದಲೇ ಹೇಳಿದ್ದೇವು. ಅದರಂತೆ ಜನಾದೇಶ ಪಡೆದು ಕಾಂಗ್ರೆಸ್ ಸೇರಿದ್ದೇನೆ. ನಾನು ಬಿಜೆಪಿ ಸೇರಿದರೆ ಅಪಾದಿತನಾಗುತ್ತಿದ್ದೆ ಮತ್ತು ಎಷ್ಟು ಹಣಕ್ಕೆ ನಾನು ಖರೀದಿಯಾದೆ ಎಂಬಂತೆ ಸಾರ್ವಜನಿಕ ವಲಯದಲ್ಲಿ ಚರ್ಚಗೆ ಗ್ರಾಸವಾಗುತ್ತಿತ್ತು. ಸಿದ್ಧಾಂತದ ವಿರುದ್ಧ ಹಾಗೂ ಬಿಜೆಪಿ ವೈಫಲ್ಯದ ವಿರುದ್ಧ ಹೋರಾಡಲು ನಾನು ಕಾಂಗ್ರೆಸ್ ಸೇರಿದ್ದೇನೆ.

ಹಾರ್ದಿಕ್ ಪಟೇಲ್ ರೀತಿಯಲ್ಲಿ ನೀವೂ ಕಾಂಗ್ರೆಸ್ ಸೇರ್ಪಡೆಯಿಂದ ನಿಮ್ಮ ಪ್ರತಿಷ್ಠೆ ಕಡಿಮೆಯಾಗಿದೆ ಎಂದು ನಿಮ್ಮ ಪ್ರತಿಸ್ಪರ್ಧಿಗಳು ಹೇಳುತ್ತಿದ್ದಾರೆ
ಸಮಯ ಬರಲಿ ಎಲ್ಲದಕ್ಕೂ ಉತ್ತರ ಸಿಗಲಿದೆ, ನಾವು ಎಲ್ಲರನ್ನು ತಯಾರಿ ಮಾಡುತ್ತಿದ್ದೇವೆ ಕಾರ್ಯಕರ್ತರರೊಂದಿಗೆ ಸಭೆ ನಡೆಸುತ್ತಿದ್ದೇವೆ. ಉತ್ತರ ಗುಜರಾತ್ ನಲ್ಲಿ ಅಭ್ಯರ್ಥಿಗಳನ್ನು ಪ್ರಕಟಿಸಿದ ನಂತರ ಪರಿಸ್ಥಿತಿ ಅರ್ಥವಾಗಲಿದೆ.

Alpesh Thakor 2

ನೀವೂ ಚುನಾವಣೆಗೆ ಸ್ವರ್ಧಿಸುವುದಿಲ್ಲ ಎಂದು ಬಿಜೆಪಿ ಸಾರ್ವಜನಿಕವಾಗಿ ಹೇಳುತ್ತಿದೆ. ನೀವೇನು ಮಾಡುತ್ತೀರಿ?
ಆಡಳಿತದಲ್ಲಿರುವ ಬಿಜೆಪಿಯವರು ಸುಧಾರಣೆ ಮಾಡದೇ ಇದ್ದರೆ ನಾವು ರಾಜಕೀಯ ಸೇರುವುದು ನಿಶ್ಚಿತ ಎಂದು ಈ ಮೊದಲೇ ತಿಳಿಸಿದ್ದೆವು. ಕಳೆದ ಎರಡು ವರ್ಷದಲ್ಲಿ ಬಡತನ, ರೈತರ ಸಮಸ್ಯೆ, ನಿರುದ್ಯೋಗ, ಶಿಕ್ಷಣದ ಬಗೆಗೆ ನಾವು ಎತ್ತಿದ ಸಮಸ್ಯೆ ಗಳಿಗೆ ಉತ್ತರ ಇನ್ನು ಬಂದಿಲ್ಲ. ಈಗ ಬಿಜೆಪಿ ವಿರುದ್ಧ ಜನಾಕ್ರೋಶ ಇರುವ ಕಾರಣ ನಾವು ರಾಜಕೀಯ ಪ್ರವೇಶ ಮಾಡಿದ್ದೇವೆ.

ಪಾಟೀದಾರ್ ಮೀಸಲಾತಿ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಕಾರಣ ನೀವೂ ಪ್ರತಿಪಾದಿಸುವ ಒಬಿಸಿ ಕೋಟಾಕ್ಕೆ ಪಾಟೀದಾರ ಮೀಸಲಾತಿ ಪೆಟ್ಟಾಗಬಹುದು
ಮೀಸಲಾತಿಯ ಬಗ್ಗೆಯೇ ಎಲ್ಲ ಚರ್ಚೆ ಆರಂಭವಾಗಿ ಕೊನೆಗೊಳ್ಳುವುದು ಯಾಕೆ? ಬಹಳಷ್ಟು ಬೇರೆ ವಿಚಾರಗಳು ಇದೆಯಲ್ಲವೇ. ನಿರುದ್ಯೋಗ, ಬಡತನ, ಶಿಕ್ಷಣ ಬಡ ರೈತರು, ಸಣ್ಣ ಕೈಗಾರಿಕೆಗಳು ಸಾಯುತ್ತಿವೆ. ಜಿಎಸ್‍ಟಿ ಮತ್ತು ನೋಟ್ ಬ್ಯಾನ್ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ಶ್ರೀಮಂತ ಸಮುದಾಯವೇ ಯಾಕೆ ಮೀಸಲಾತಿ ಕೇಳುತ್ತಿವೆ? ಗುಜರಾತ್ ನಲ್ಲಿ ಸರ್ಕಾರ ನೀತಿಯಿಂದ ಬೇಸತ್ತು ಹತಾಶೆಯಿಂದ ಅವರು ಕೇಳುತ್ತಿದ್ದಾರೆ. ಶ್ರೀಮಂತ ಸಮುದಾಯದವರೇ ಹತಾಶರಾಗಿರುವ ಬಡವರು ಮತ್ತು ಮಧ್ಯಮ ವರ್ಗದವರ ಸ್ಥಿತಿಯನ್ನು ಒಮ್ಮೆ ಊಹಿಸಿಕೊಳ್ಳಿ. ಹೀಗಾಗಿ ಮಧ್ಯಮ ವರ್ಗದ ಮತ್ತು ಬಡವರಾಗಿರುವ ನಾವು ಅಹಂಕಾರದ ವಿರುದ್ಧ ಹೋರಾಡುತ್ತಿದ್ದೇವೆ.

ಮೀಸಲಾತಿ ಬೇಡಿಕೆಯನ್ನು ಇಡದೇ ಆಡಳಿತದಲ್ಲಿ ನೀತಿಗಳು ಬದಲಾವಣೆಯಾಗಬೇಕು ಎಂದು ನೀವು ಹೇಳುತ್ತೀರಾ?
ನಾನು ಹಾಗಂತ ಹೇಳುತ್ತಿಲ್ಲ, ಮೀಸಲಾತಿ ಬೇಡಿಕೆ ಅವಶ್ಯಕತೆ ಯಾಕೇ ಬೇಕು? ಎಲ್ಲ ನೀತಿಗಳನ್ನು ರೂಪಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಅವರು ಓಬಿಸಿ ಕೋಟಾದ 49% ಬೇಕೆಂದು ಕೇಳುತ್ತಿಲ್ಲ. ಅವರು (ಪಾಟೀದಾರ್) ಮೆಲ್ಜಾತಿಯ ಬಡ ಮಕ್ಕಳಿಗಾಗಿ ಮನವಿ ಮಾಡುತ್ತಿದ್ದಾರೆ. ನನ್ನ ಪ್ರಕಾರ ಕೇವಲ ಗುಜುರಾತ್ ಮಾತ್ರವಲ್ಲದೇ ಇಡೀ ದೇಶದಲ್ಲಿ ಮೇಲ್ವರ್ಗದಲ್ಲಿರುವ ಬಡ ಮಕ್ಕಳಿಗೆ ಮೀಸಲಾತಿ ನೀಡಿದರೆ ತಪ್ಪಲ್ಲ.

ನೀವು ಚಾನಸ್ಮಾದಿಂದ ಸ್ವರ್ಧಿಸುತ್ತೀರಿ ಎನ್ನುವ ವರದಿ ಬಂದಿದೆ. ಇದು ನಿಜವೇ?
ಇಲ್ಲ. ನಾನು ಎಲ್ಲ ಕ್ಷೇತ್ರಗಳನ್ನು ನೋಡುತ್ತಿದ್ದೇನೆ. ಪಕ್ಷ ಮತ್ತು ಕಾರ್ಯಕರ್ತರು ಎಲ್ಲಿ ಸ್ಪರ್ಧಿಸಬೇಕೆಂದು ಸೂಚಿಸುತ್ತಾರೋ ಅಲ್ಲಿ ಸ್ವರ್ಧಿಸುತ್ತೇನೆ.

Alpesh Thakor 3

ವ್ಯಸನ ಮುಕ್ತಿ ಅಭಿಯಾನ್ ಎಂದು ನೀವೂ ಪ್ರಚಾರ ಆರಂಭಿಸಿದ್ದೀರಿ. ಗುಜರಾತ್ ನಲ್ಲಿ ಯುವಕರು ವ್ಯಸನಕ್ಕೆ ದಾಸರಾಗಿದ್ದಾರೆ ಎಂದು ಹೇಳ್ತೀರಾ?
ಮದ್ಯ ನಿಷೇಧದ ಹೊರತಾಗಿಯೂ ಮದ್ಯಪಾನ, ಡ್ರಗ್ಸ್, ತಂಬಾಕು ದೊಡ್ಡ ಚಟವಾಗಿ ಯುವಕರಲ್ಲಿ ಕಾಡುತ್ತಿದೆ. ಪ್ರತಿವರ್ಷ 10 ಸಾವಿರ – 15 ಸಾವಿರ ಯುವಕರು ಮದ್ಯಪಾನಕ್ಕೆ ಬಲಿಯಾಗುತ್ತಿದ್ದಾರೆ. ಹೀಗಾಗಿ ಕಟ್ಟುನಿಟ್ಟಿನ ಕಾನೂನು ಜಾರಿಯಾಗಬೇಕಾದ ಅವಶ್ಯಕತೆ ಇದೆ. ಆದರೆ ಅದು ಅನುಷ್ಠಾನವಾಗುತ್ತಿಲ್ಲ.

ಒಬಿಸಿ ಏಕತಾ ವೇದಿಕೆ ನಡೆಸಿದ ಸರ್ವೆ ವರದಿ ಆಧರಿಸಿ ಈ ಸಂಖ್ಯೆ ಹೇಳ್ತಾ ಇದ್ದೀರಾ?
ನಾವು ಗುಜುರಾತ್‍ನ ಪ್ರತಿ ಹಳ್ಳಿಗಳಲ್ಲೂ ಸಭೆ ನಡೆಸಲಾಗುತ್ತಿದೆ. ಅಲ್ಲಿ ಸ್ಥಳಿಯ ಅಂಕಿ ಅಂಶಗಳನ್ನು ಕಲೆಹಾಕಿ ವರದಿ ತಯಾರಿಸಿದೆ. ನಗರ ಪ್ರದೇಶಗಳಲ್ಲಿ ಪರಿಸ್ಥಿತಿ ಇನ್ನೂ ಹದಗೆಟ್ಟಿದ್ದು ಈ ಹಿನ್ನೆಲೆ ಮದ್ಯಪಾನದ ವಿರುದ್ಧ ನಾವು ಪ್ರಚಾರ ಆರಂಭಿಸಿದ್ದೇವೆ

ಕಾಂಗ್ರೆಸ್ ಗೆ ಯುವಕರು ಮತ ಹಾಕಬೇಕು ಯಾಕೆ?
ಕಳೆದ 22 ವರ್ಷದಲ್ಲಿ ಬಿಜೆಪಿ ಏನು ಮಾಡಿದೆ? ಇಂದು ಗುಜುರಾತ್ ನಲ್ಲಿ 60 ಲಕ್ಷ ನಿರುದ್ಯೋಗಿ ಯುವಕರಿದ್ದಾರೆ. ಎಲ್ಲ ಯುವಕರು ನಮ್ಮ ಚಳುವಳಿಯ ಭಾಗವಾಗಿದ್ದಾರೆ. ರೈತರು, ಬಡವರು, ಮಹಿಳೆಯರು ಸಹ ಈ ಚಳುವಳಿಯ ಭಾಗವಾಗಿದ್ದು ಅವರಿಗೆಲ್ಲ ಬದಲಾವಣೆ ಬೇಕಾಗಿದೆ. ಇದು ಕಾಂಗ್ರೆಸ್, ಬಿಜೆಪಿ ನಡುವಿನ ಹೋರಾಟವಲ್ಲ, ಬಿಜೆಪಿ ಗುಜುರಾತ್ ನಡುವಣ ಹೋರಾಟ.

ಪ್ರಚಾರಕ್ಕಾಗಿ ಗುಜರಾತ್ ನ ಒಂದು ಭಾಗವನ್ನು ಕೇಂದ್ರಿಕರಿಸುತ್ತಿರಾ..?
ನಾಳೆಯಿಂದ ಸಾರ್ವಜನಿಕ ಸಭೆಗಳನ್ನು ನಡೆಸಲು ಯೋಚಿಸಿದ್ದಿನಿ, ಬಿಜೆಪಿ ಸೌರಾಷ್ಟ್ರ ಉತ್ತರ ಮತ್ತು ಮಧ್ಯ ಗುಜುರಾತ್ ನಿಂದ ನಿರ್ಗಮಿಸುತ್ತಾರೆ. ನಮಗಾಗಿ ಏನು ಮಾಡಿದ್ದಾರೆ ಅಂತಾ ಬಿಜೆಪಿಯನ್ನು ಕೇಳಲು ನಾನು ಜನರಿಗೆ ಹೇಳುತ್ತೇನೆ. ಇದುವರೆಗೂ ಸುಳ್ಳು ಮತ್ತು ಪೊಳ್ಳು ಭರವಸೆಗಳನ್ನು ನೀಡಿದ್ದಾರೆ. ಜಾತಿ ಸಮಸ್ಯೆಗಳನ್ನು ಸೃಷ್ಟಿಸುವ ಮೂಲಕ ಮತದಾರರ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಾರೆ.

ಬಿಜೆಪಿಯ ದೊಡ್ಡ ಕಾರ್ಯಕರ್ತರ ಪಡೆ ಮತ್ತು ಬೂತ್ ಗಳ ನಿರ್ವಹಣೆ ಯನ್ನು ಕಾಂಗ್ರೆಸ್ ಹೇಗೆ ಮಾಡುತ್ತದೆ?
ಕಾಂಗ್ರೆಸ್ ಈಗಾಗಲೇ ಬೂತ್ ಮಟ್ಟದಲ್ಲಿ ಹೇಗೆ ಕೆಲಸ ಮಾಡಬೇಕು ಎಂಬುದರ ಬಗ್ಗೆ ಯೋಚಿಸಿದೆ. ಮತದಾರರ ಮೂಲಕವೇ ಸಾಧ್ಯವಾದಷ್ಟು ಬೂತ್ ಗಳಲ್ಲಿ ಕಾಂಗ್ರೆಸ್ ಪರ ಮತ ಹಾಕಿಸುವ ಪ್ರಯತ್ನ ಮಾಡುತ್ತೇವೆ. ಒಂದು ಮತಗಟ್ಟೆಗೆ ನೂರು ಸ್ವಯಂ ಸೇವಕರು ನೇಮಕ ಮಾಡಿದ್ದೇವೆ. ಮಹಿಳೆಯರು ಯುವಕರು ಮಕ್ಕಳು ಇರುವಂತೆ ಸ್ವಯಂ ಸೇವಕನ್ನು ಎಲ್ಲ ವಿಭಾಗದಲ್ಲೂ ಸೇರಿಸಲು ಪ್ರಯತ್ನಿಸುತ್ತಿದ್ದೇವೆ. ಜೊತೆಗೆ ಇವಿಎಂಗಳು ಪರೀಕ್ಷೆ ಗೆ ಒಳಗೊಳ್ಳಬೇಕು, ಎಣಿಕೆ ಅಂತ್ಯವಾಗುವರೆಗೂ ಮತಯಂತ್ರಗಳನ್ನು ಆಯೋಗ ಕಾವಲು ಕಾಯಬೇಕು.

ರಾಹುಲ್ ಗಾಂಧಿಗೆ ಎಐಸಿಸಿ ಪಟ್ಟಕಟ್ಟಿದ್ದರೆ  ಗುಜರಾತ್ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು ಎಂದು ಭಾವಿಸುತ್ತೀರಾ?
ಸಾಕಷ್ಟು ಯುವಕರು ರಾಹುಲ್ ಅವರನ್ನು ಬೆಂಬಲಿಸುತ್ತಿದ್ದಾರೆ. ರಾಹುಲ್ ಗಾಂಧಿ ಉತ್ತಮ ರೀತಿಯಲ್ಲಿ ಪರಿಣಾಮ ಬೀರಲಿದ್ದಾರೆ. ಯುವಕರು ಹೊಸ ನಾಯಕತ್ವವನ್ನು ಬಯಸುತ್ತಿದ್ದಾರೆ.

ಇದನ್ನೂ ಓದಿ: ಚುನಾವಣಾ ಸಮೀಕ್ಷೆ: ಗುಜರಾತ್‍ನಲ್ಲಿ ಈ ಬಾರಿ ಗೆಲುವು ಯಾರಿಗೆ?

Alpesh Thakor joins Congress at a mega rally in Gandhinagar. pic.twitter.com/wWCq9nkKpX

— TOI Ahmedabad (@TOIAhmedabad) October 23, 2017

alpesh congress 2

alpesh congress 1

TAGGED:alpesh thakorbjpcongressgujrat electionnarendra modiobcRahul Gandhiಕಾಂಗ್ರೆಸ್ಗುಜರಾತ್ ಚುನಾವಣೆಚುನಾವಣೆನರೇಂದ್ರ ಮೋದಿಬಿಜೆಪಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Mahesh Babu Namrata Shirodkar
ಪತ್ನಿ ಜೊತೆ ಸ್ಟೈಲ್‌ ಆಗಿ ಕಾಣಿಸಿಕೊಂಡ ಮಹೇಶ್ ಬಾಬು
Cinema Latest South cinema Top Stories
Yo yo singh
ಒಂದೇ ತಿಂಗಳಲ್ಲಿ ಬರೋಬ್ಬರಿ 18 ಕೆಜಿ ತೂಕ ಇಳಿಸಿಕೊಂಡ ಹನಿ ಸಿಂಗ್
Cinema Latest Sandalwood Top Stories
vijayalakshmi
ಪರಪ್ಪನ ಅಗ್ರಹಾರ ಜೈಲಲ್ಲಿ ಗಂಟೆಗಟ್ಟಲೆ ಕಾದು ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ
Cinema Latest Sandalwood Top Stories
Vishnuvardhan 3
ದಾದಾ ಫ್ಯಾನ್ಸ್‌ಗೆ ಶುಭ ಸುದ್ದಿ – ಬರುತ್ತಿದೆ ಹೊಸ ಸ್ಮಾರಕ
Cinema Latest Top Stories
Willson Garden Blast
ವಿಲ್ಸನ್ ಗಾರ್ಡನ್ ನಿಗೂಢ ಬ್ಲಾಸ್ಟ್ – ಗಾಯಗೊಂಡಿದ್ದ ತಾಯಿ, ಮಗಳು ಸಾವು
Cinema Latest Sandalwood Top Stories

You Might Also Like

Jaishankar Wang Yi
Latest

3 ವರ್ಷಗಳ ನಂತರ ಮೊದಲ ಬಾರಿಗೆ ಭಾರತಕ್ಕೆ ಚೀನಾ ವಿದೇಶಾಂಗ ಸಚಿವ ಭೇಟಿ

Public TV
By Public TV
4 hours ago
Bengaluru Nagarathpete fire
Big Bulletin

Video | ನಗರ್ತಪೇಟೆಯಲ್ಲಿ ಮತ್ತೊಂದು ಅಗ್ನಿ ಅವಘಡ – 4 ಅಂತಸ್ತಿನ ಕಟ್ಟಡಕ್ಕೆ ಬೆಂಕಿ

Public TV
By Public TV
4 hours ago
himachal pradesh cloudburst
Latest

ಹಿಮಾಚಲ ಪ್ರದೇಶದಲ್ಲಿ ಮಳೆ ಅವಾಂತರ – ಈವರೆಗೂ 260ಕ್ಕೂ ಅಧಿಕ ಮಂದಿ ಸಾವು

Public TV
By Public TV
4 hours ago
nitish kumar
Latest

ಉಪರಾಷ್ಟ್ರಪತಿ ಚುನಾವಣೆ- ಸಿ.ಪಿ.ರಾಧಾಕೃಷ್ಣನ್‌ಗೆ ಜೆಡಿಯು ಬೆಂಬಲ

Public TV
By Public TV
4 hours ago
Tumakuru Woman Suicide
Crime

Tumakuru | ಗಂಡನ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

Public TV
By Public TV
4 hours ago
Mobile Laptop
Latest

ಜಿಎಸ್‌ಟಿ ಸ್ಲ್ಯಾಬ್‌ನಲ್ಲಿ ಬದಲಾವಣೆ; ಕಾರು, ಮೊಬೈಲ್, ಕಂಪ್ಯೂಟರ್ – ಯಾವ್ಯಾವುದರ ಬೆಲೆ ಇಳಿಕೆ?

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?