Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ಸಿಗೆ ಸೇರಿದ್ದು ಯಾಕೆ? ‘ಕೈ’ಗೆ ಯುವಕರು ಮತ ಹಾಕಬೇಕು ಯಾಕೆ: ಗುಜರಾತ್ ಒಬಿಸಿ ನಾಯಕ ಅಲ್ಪೇಶ್ ಠಾಕೂರ್ ಹೇಳ್ತಾರೆ ಓದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾಂಗ್ರೆಸ್ಸಿಗೆ ಸೇರಿದ್ದು ಯಾಕೆ? ‘ಕೈ’ಗೆ ಯುವಕರು ಮತ ಹಾಕಬೇಕು ಯಾಕೆ: ಗುಜರಾತ್ ಒಬಿಸಿ ನಾಯಕ ಅಲ್ಪೇಶ್ ಠಾಕೂರ್ ಹೇಳ್ತಾರೆ ಓದಿ

Latest

ಕಾಂಗ್ರೆಸ್ಸಿಗೆ ಸೇರಿದ್ದು ಯಾಕೆ? ‘ಕೈ’ಗೆ ಯುವಕರು ಮತ ಹಾಕಬೇಕು ಯಾಕೆ: ಗುಜರಾತ್ ಒಬಿಸಿ ನಾಯಕ ಅಲ್ಪೇಶ್ ಠಾಕೂರ್ ಹೇಳ್ತಾರೆ ಓದಿ

Public TV
Last updated: November 30, 2017 12:31 pm
Public TV
Share
5 Min Read
Alpesh Thakor 1
SHARE

ಗುಜರಾತ್‍ನಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇತ್ತೀಚಿಗೆ ಗುಜರಾತ್ ಯುವ ನಾಯಕರಾದ ಪಾಟೀದಾರ ಸಮುದಾಯದ ನಾಯಕ ಹಾರ್ದಿಕ್ ಪಟೇಲ್, ಹಿಂದುಳಿದ ವರ್ಗಗಳ ನಾಯಕ ಅಲ್ಪೇಶ್ ಠಾಕೂರ್ ಮತ್ತು ದಲಿತ ನಾಯಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಸೇರ್ಪಡೆ ಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಮತ್ತಷ್ಟು ಬಲ ಬಂದಿದೆ. ಒಗ್ಗಟಿನ ಮೂಲಕ ಕಾಂಗ್ರೆಸ್ ಎದುರಾಳಿ ಬಿಜೆಪಿಯನ್ನು ಬಗ್ಗು ಬಡಿದು ಶತಾಯಗತಾಯ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿದೆ. ಹೀಗಾಗಿ ಒಬಿಸಿ ನಾಯಕ ಅಲ್ಪೇಶ್ ಠಾಕೂರ್ ಅವರು ನಾನು ರಾಜಕೀಯ ಪ್ರವೇಶಿಸಿದ್ದು ಯಾಕೆ? ಕಾಂಗ್ರೆಸ್ ಸೇರಿದ್ದು ಯಾಕೆ ಎನ್ನುವುದನ್ನು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ನೀವು ರಾಜಕೀಯ ಪ್ರವೇಶಿಸಲು ಕಾರಣ ಏನು? ಅದರಲ್ಲೂ ಕಾಂಗ್ರೆಸ್ಸನ್ನೇ ಆಯ್ಕೆ ಮಾಡಿಕೊಂಡಿದ್ದು ಯಾಕೆ?
ಬಿಜೆಪಿ ವಿರುದ್ಧದ ಧೋರಣೆಯಿಂದ ನಾನು ರಾಜಕೀಯ ಪ್ರವೇಶ ಮಾಡಿದ್ದೇನೆ. ನಾನು ಕಾಂಗ್ರೆಸ್ ಸೇರುವುದು ಜನಾದೇಶವಾಗಿತ್ತು. ಬಿಜೆಪಿ ಸುಧಾರಿಸದಿದ್ರೆ ರಾಜಕೀಯ ಪ್ರವೇಶಿಸುತ್ತೇವೆ ಎಂದು ನಾವು ಈ ಮೊದಲೇ ಹೇಳಿದ್ದೇವು. ಅದರಂತೆ ಜನಾದೇಶ ಪಡೆದು ಕಾಂಗ್ರೆಸ್ ಸೇರಿದ್ದೇನೆ. ನಾನು ಬಿಜೆಪಿ ಸೇರಿದರೆ ಅಪಾದಿತನಾಗುತ್ತಿದ್ದೆ ಮತ್ತು ಎಷ್ಟು ಹಣಕ್ಕೆ ನಾನು ಖರೀದಿಯಾದೆ ಎಂಬಂತೆ ಸಾರ್ವಜನಿಕ ವಲಯದಲ್ಲಿ ಚರ್ಚಗೆ ಗ್ರಾಸವಾಗುತ್ತಿತ್ತು. ಸಿದ್ಧಾಂತದ ವಿರುದ್ಧ ಹಾಗೂ ಬಿಜೆಪಿ ವೈಫಲ್ಯದ ವಿರುದ್ಧ ಹೋರಾಡಲು ನಾನು ಕಾಂಗ್ರೆಸ್ ಸೇರಿದ್ದೇನೆ.

ಹಾರ್ದಿಕ್ ಪಟೇಲ್ ರೀತಿಯಲ್ಲಿ ನೀವೂ ಕಾಂಗ್ರೆಸ್ ಸೇರ್ಪಡೆಯಿಂದ ನಿಮ್ಮ ಪ್ರತಿಷ್ಠೆ ಕಡಿಮೆಯಾಗಿದೆ ಎಂದು ನಿಮ್ಮ ಪ್ರತಿಸ್ಪರ್ಧಿಗಳು ಹೇಳುತ್ತಿದ್ದಾರೆ
ಸಮಯ ಬರಲಿ ಎಲ್ಲದಕ್ಕೂ ಉತ್ತರ ಸಿಗಲಿದೆ, ನಾವು ಎಲ್ಲರನ್ನು ತಯಾರಿ ಮಾಡುತ್ತಿದ್ದೇವೆ ಕಾರ್ಯಕರ್ತರರೊಂದಿಗೆ ಸಭೆ ನಡೆಸುತ್ತಿದ್ದೇವೆ. ಉತ್ತರ ಗುಜರಾತ್ ನಲ್ಲಿ ಅಭ್ಯರ್ಥಿಗಳನ್ನು ಪ್ರಕಟಿಸಿದ ನಂತರ ಪರಿಸ್ಥಿತಿ ಅರ್ಥವಾಗಲಿದೆ.

Alpesh Thakor 2

ನೀವೂ ಚುನಾವಣೆಗೆ ಸ್ವರ್ಧಿಸುವುದಿಲ್ಲ ಎಂದು ಬಿಜೆಪಿ ಸಾರ್ವಜನಿಕವಾಗಿ ಹೇಳುತ್ತಿದೆ. ನೀವೇನು ಮಾಡುತ್ತೀರಿ?
ಆಡಳಿತದಲ್ಲಿರುವ ಬಿಜೆಪಿಯವರು ಸುಧಾರಣೆ ಮಾಡದೇ ಇದ್ದರೆ ನಾವು ರಾಜಕೀಯ ಸೇರುವುದು ನಿಶ್ಚಿತ ಎಂದು ಈ ಮೊದಲೇ ತಿಳಿಸಿದ್ದೆವು. ಕಳೆದ ಎರಡು ವರ್ಷದಲ್ಲಿ ಬಡತನ, ರೈತರ ಸಮಸ್ಯೆ, ನಿರುದ್ಯೋಗ, ಶಿಕ್ಷಣದ ಬಗೆಗೆ ನಾವು ಎತ್ತಿದ ಸಮಸ್ಯೆ ಗಳಿಗೆ ಉತ್ತರ ಇನ್ನು ಬಂದಿಲ್ಲ. ಈಗ ಬಿಜೆಪಿ ವಿರುದ್ಧ ಜನಾಕ್ರೋಶ ಇರುವ ಕಾರಣ ನಾವು ರಾಜಕೀಯ ಪ್ರವೇಶ ಮಾಡಿದ್ದೇವೆ.

ಪಾಟೀದಾರ್ ಮೀಸಲಾತಿ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಕಾರಣ ನೀವೂ ಪ್ರತಿಪಾದಿಸುವ ಒಬಿಸಿ ಕೋಟಾಕ್ಕೆ ಪಾಟೀದಾರ ಮೀಸಲಾತಿ ಪೆಟ್ಟಾಗಬಹುದು
ಮೀಸಲಾತಿಯ ಬಗ್ಗೆಯೇ ಎಲ್ಲ ಚರ್ಚೆ ಆರಂಭವಾಗಿ ಕೊನೆಗೊಳ್ಳುವುದು ಯಾಕೆ? ಬಹಳಷ್ಟು ಬೇರೆ ವಿಚಾರಗಳು ಇದೆಯಲ್ಲವೇ. ನಿರುದ್ಯೋಗ, ಬಡತನ, ಶಿಕ್ಷಣ ಬಡ ರೈತರು, ಸಣ್ಣ ಕೈಗಾರಿಕೆಗಳು ಸಾಯುತ್ತಿವೆ. ಜಿಎಸ್‍ಟಿ ಮತ್ತು ನೋಟ್ ಬ್ಯಾನ್ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ಶ್ರೀಮಂತ ಸಮುದಾಯವೇ ಯಾಕೆ ಮೀಸಲಾತಿ ಕೇಳುತ್ತಿವೆ? ಗುಜರಾತ್ ನಲ್ಲಿ ಸರ್ಕಾರ ನೀತಿಯಿಂದ ಬೇಸತ್ತು ಹತಾಶೆಯಿಂದ ಅವರು ಕೇಳುತ್ತಿದ್ದಾರೆ. ಶ್ರೀಮಂತ ಸಮುದಾಯದವರೇ ಹತಾಶರಾಗಿರುವ ಬಡವರು ಮತ್ತು ಮಧ್ಯಮ ವರ್ಗದವರ ಸ್ಥಿತಿಯನ್ನು ಒಮ್ಮೆ ಊಹಿಸಿಕೊಳ್ಳಿ. ಹೀಗಾಗಿ ಮಧ್ಯಮ ವರ್ಗದ ಮತ್ತು ಬಡವರಾಗಿರುವ ನಾವು ಅಹಂಕಾರದ ವಿರುದ್ಧ ಹೋರಾಡುತ್ತಿದ್ದೇವೆ.

ಮೀಸಲಾತಿ ಬೇಡಿಕೆಯನ್ನು ಇಡದೇ ಆಡಳಿತದಲ್ಲಿ ನೀತಿಗಳು ಬದಲಾವಣೆಯಾಗಬೇಕು ಎಂದು ನೀವು ಹೇಳುತ್ತೀರಾ?
ನಾನು ಹಾಗಂತ ಹೇಳುತ್ತಿಲ್ಲ, ಮೀಸಲಾತಿ ಬೇಡಿಕೆ ಅವಶ್ಯಕತೆ ಯಾಕೇ ಬೇಕು? ಎಲ್ಲ ನೀತಿಗಳನ್ನು ರೂಪಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಅವರು ಓಬಿಸಿ ಕೋಟಾದ 49% ಬೇಕೆಂದು ಕೇಳುತ್ತಿಲ್ಲ. ಅವರು (ಪಾಟೀದಾರ್) ಮೆಲ್ಜಾತಿಯ ಬಡ ಮಕ್ಕಳಿಗಾಗಿ ಮನವಿ ಮಾಡುತ್ತಿದ್ದಾರೆ. ನನ್ನ ಪ್ರಕಾರ ಕೇವಲ ಗುಜುರಾತ್ ಮಾತ್ರವಲ್ಲದೇ ಇಡೀ ದೇಶದಲ್ಲಿ ಮೇಲ್ವರ್ಗದಲ್ಲಿರುವ ಬಡ ಮಕ್ಕಳಿಗೆ ಮೀಸಲಾತಿ ನೀಡಿದರೆ ತಪ್ಪಲ್ಲ.

ನೀವು ಚಾನಸ್ಮಾದಿಂದ ಸ್ವರ್ಧಿಸುತ್ತೀರಿ ಎನ್ನುವ ವರದಿ ಬಂದಿದೆ. ಇದು ನಿಜವೇ?
ಇಲ್ಲ. ನಾನು ಎಲ್ಲ ಕ್ಷೇತ್ರಗಳನ್ನು ನೋಡುತ್ತಿದ್ದೇನೆ. ಪಕ್ಷ ಮತ್ತು ಕಾರ್ಯಕರ್ತರು ಎಲ್ಲಿ ಸ್ಪರ್ಧಿಸಬೇಕೆಂದು ಸೂಚಿಸುತ್ತಾರೋ ಅಲ್ಲಿ ಸ್ವರ್ಧಿಸುತ್ತೇನೆ.

Alpesh Thakor 3

ವ್ಯಸನ ಮುಕ್ತಿ ಅಭಿಯಾನ್ ಎಂದು ನೀವೂ ಪ್ರಚಾರ ಆರಂಭಿಸಿದ್ದೀರಿ. ಗುಜರಾತ್ ನಲ್ಲಿ ಯುವಕರು ವ್ಯಸನಕ್ಕೆ ದಾಸರಾಗಿದ್ದಾರೆ ಎಂದು ಹೇಳ್ತೀರಾ?
ಮದ್ಯ ನಿಷೇಧದ ಹೊರತಾಗಿಯೂ ಮದ್ಯಪಾನ, ಡ್ರಗ್ಸ್, ತಂಬಾಕು ದೊಡ್ಡ ಚಟವಾಗಿ ಯುವಕರಲ್ಲಿ ಕಾಡುತ್ತಿದೆ. ಪ್ರತಿವರ್ಷ 10 ಸಾವಿರ – 15 ಸಾವಿರ ಯುವಕರು ಮದ್ಯಪಾನಕ್ಕೆ ಬಲಿಯಾಗುತ್ತಿದ್ದಾರೆ. ಹೀಗಾಗಿ ಕಟ್ಟುನಿಟ್ಟಿನ ಕಾನೂನು ಜಾರಿಯಾಗಬೇಕಾದ ಅವಶ್ಯಕತೆ ಇದೆ. ಆದರೆ ಅದು ಅನುಷ್ಠಾನವಾಗುತ್ತಿಲ್ಲ.

ಒಬಿಸಿ ಏಕತಾ ವೇದಿಕೆ ನಡೆಸಿದ ಸರ್ವೆ ವರದಿ ಆಧರಿಸಿ ಈ ಸಂಖ್ಯೆ ಹೇಳ್ತಾ ಇದ್ದೀರಾ?
ನಾವು ಗುಜುರಾತ್‍ನ ಪ್ರತಿ ಹಳ್ಳಿಗಳಲ್ಲೂ ಸಭೆ ನಡೆಸಲಾಗುತ್ತಿದೆ. ಅಲ್ಲಿ ಸ್ಥಳಿಯ ಅಂಕಿ ಅಂಶಗಳನ್ನು ಕಲೆಹಾಕಿ ವರದಿ ತಯಾರಿಸಿದೆ. ನಗರ ಪ್ರದೇಶಗಳಲ್ಲಿ ಪರಿಸ್ಥಿತಿ ಇನ್ನೂ ಹದಗೆಟ್ಟಿದ್ದು ಈ ಹಿನ್ನೆಲೆ ಮದ್ಯಪಾನದ ವಿರುದ್ಧ ನಾವು ಪ್ರಚಾರ ಆರಂಭಿಸಿದ್ದೇವೆ

ಕಾಂಗ್ರೆಸ್ ಗೆ ಯುವಕರು ಮತ ಹಾಕಬೇಕು ಯಾಕೆ?
ಕಳೆದ 22 ವರ್ಷದಲ್ಲಿ ಬಿಜೆಪಿ ಏನು ಮಾಡಿದೆ? ಇಂದು ಗುಜುರಾತ್ ನಲ್ಲಿ 60 ಲಕ್ಷ ನಿರುದ್ಯೋಗಿ ಯುವಕರಿದ್ದಾರೆ. ಎಲ್ಲ ಯುವಕರು ನಮ್ಮ ಚಳುವಳಿಯ ಭಾಗವಾಗಿದ್ದಾರೆ. ರೈತರು, ಬಡವರು, ಮಹಿಳೆಯರು ಸಹ ಈ ಚಳುವಳಿಯ ಭಾಗವಾಗಿದ್ದು ಅವರಿಗೆಲ್ಲ ಬದಲಾವಣೆ ಬೇಕಾಗಿದೆ. ಇದು ಕಾಂಗ್ರೆಸ್, ಬಿಜೆಪಿ ನಡುವಿನ ಹೋರಾಟವಲ್ಲ, ಬಿಜೆಪಿ ಗುಜುರಾತ್ ನಡುವಣ ಹೋರಾಟ.

ಪ್ರಚಾರಕ್ಕಾಗಿ ಗುಜರಾತ್ ನ ಒಂದು ಭಾಗವನ್ನು ಕೇಂದ್ರಿಕರಿಸುತ್ತಿರಾ..?
ನಾಳೆಯಿಂದ ಸಾರ್ವಜನಿಕ ಸಭೆಗಳನ್ನು ನಡೆಸಲು ಯೋಚಿಸಿದ್ದಿನಿ, ಬಿಜೆಪಿ ಸೌರಾಷ್ಟ್ರ ಉತ್ತರ ಮತ್ತು ಮಧ್ಯ ಗುಜುರಾತ್ ನಿಂದ ನಿರ್ಗಮಿಸುತ್ತಾರೆ. ನಮಗಾಗಿ ಏನು ಮಾಡಿದ್ದಾರೆ ಅಂತಾ ಬಿಜೆಪಿಯನ್ನು ಕೇಳಲು ನಾನು ಜನರಿಗೆ ಹೇಳುತ್ತೇನೆ. ಇದುವರೆಗೂ ಸುಳ್ಳು ಮತ್ತು ಪೊಳ್ಳು ಭರವಸೆಗಳನ್ನು ನೀಡಿದ್ದಾರೆ. ಜಾತಿ ಸಮಸ್ಯೆಗಳನ್ನು ಸೃಷ್ಟಿಸುವ ಮೂಲಕ ಮತದಾರರ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಾರೆ.

ಬಿಜೆಪಿಯ ದೊಡ್ಡ ಕಾರ್ಯಕರ್ತರ ಪಡೆ ಮತ್ತು ಬೂತ್ ಗಳ ನಿರ್ವಹಣೆ ಯನ್ನು ಕಾಂಗ್ರೆಸ್ ಹೇಗೆ ಮಾಡುತ್ತದೆ?
ಕಾಂಗ್ರೆಸ್ ಈಗಾಗಲೇ ಬೂತ್ ಮಟ್ಟದಲ್ಲಿ ಹೇಗೆ ಕೆಲಸ ಮಾಡಬೇಕು ಎಂಬುದರ ಬಗ್ಗೆ ಯೋಚಿಸಿದೆ. ಮತದಾರರ ಮೂಲಕವೇ ಸಾಧ್ಯವಾದಷ್ಟು ಬೂತ್ ಗಳಲ್ಲಿ ಕಾಂಗ್ರೆಸ್ ಪರ ಮತ ಹಾಕಿಸುವ ಪ್ರಯತ್ನ ಮಾಡುತ್ತೇವೆ. ಒಂದು ಮತಗಟ್ಟೆಗೆ ನೂರು ಸ್ವಯಂ ಸೇವಕರು ನೇಮಕ ಮಾಡಿದ್ದೇವೆ. ಮಹಿಳೆಯರು ಯುವಕರು ಮಕ್ಕಳು ಇರುವಂತೆ ಸ್ವಯಂ ಸೇವಕನ್ನು ಎಲ್ಲ ವಿಭಾಗದಲ್ಲೂ ಸೇರಿಸಲು ಪ್ರಯತ್ನಿಸುತ್ತಿದ್ದೇವೆ. ಜೊತೆಗೆ ಇವಿಎಂಗಳು ಪರೀಕ್ಷೆ ಗೆ ಒಳಗೊಳ್ಳಬೇಕು, ಎಣಿಕೆ ಅಂತ್ಯವಾಗುವರೆಗೂ ಮತಯಂತ್ರಗಳನ್ನು ಆಯೋಗ ಕಾವಲು ಕಾಯಬೇಕು.

ರಾಹುಲ್ ಗಾಂಧಿಗೆ ಎಐಸಿಸಿ ಪಟ್ಟಕಟ್ಟಿದ್ದರೆ  ಗುಜರಾತ್ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು ಎಂದು ಭಾವಿಸುತ್ತೀರಾ?
ಸಾಕಷ್ಟು ಯುವಕರು ರಾಹುಲ್ ಅವರನ್ನು ಬೆಂಬಲಿಸುತ್ತಿದ್ದಾರೆ. ರಾಹುಲ್ ಗಾಂಧಿ ಉತ್ತಮ ರೀತಿಯಲ್ಲಿ ಪರಿಣಾಮ ಬೀರಲಿದ್ದಾರೆ. ಯುವಕರು ಹೊಸ ನಾಯಕತ್ವವನ್ನು ಬಯಸುತ್ತಿದ್ದಾರೆ.

ಇದನ್ನೂ ಓದಿ: ಚುನಾವಣಾ ಸಮೀಕ್ಷೆ: ಗುಜರಾತ್‍ನಲ್ಲಿ ಈ ಬಾರಿ ಗೆಲುವು ಯಾರಿಗೆ?

Alpesh Thakor joins Congress at a mega rally in Gandhinagar. pic.twitter.com/wWCq9nkKpX

— TOI Ahmedabad (@TOIAhmedabad) October 23, 2017

alpesh congress 2

alpesh congress 1

TAGGED:alpesh thakorbjpcongressgujrat electionnarendra modiobcRahul Gandhiಕಾಂಗ್ರೆಸ್ಗುಜರಾತ್ ಚುನಾವಣೆಚುನಾವಣೆನರೇಂದ್ರ ಮೋದಿಬಿಜೆಪಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
29 minutes ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
36 minutes ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
1 hour ago
COURT
Bengaluru City

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

Public TV
By Public TV
2 hours ago
Dandeli Car Accident
Crime

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

Public TV
By Public TV
2 hours ago
suresh kumar help
Bengaluru City

ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೇ ಕಿಡ್ನಿ ಮಾರಾಟಕ್ಕೆ ಮುಂದಾದ ತಂದೆ – ನೊಂದ ಕುಟುಂಬಕ್ಕೆ ಶಾಸಕ ಸುರೇಶ್ ಕುಮಾರ್ ನೆರವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?