Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಂಡೀಪುರ ಹೆದ್ದಾರಿಯಿಂದ ಡಿವೈಡರ್ ಕೋರಿ ಪ್ರಧಾನಿಗೆ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಬಂಡೀಪುರ ಹೆದ್ದಾರಿಯಿಂದ ಡಿವೈಡರ್ ಕೋರಿ ಪ್ರಧಾನಿಗೆ ಪತ್ರ

Chamarajanagar

ಬಂಡೀಪುರ ಹೆದ್ದಾರಿಯಿಂದ ಡಿವೈಡರ್ ಕೋರಿ ಪ್ರಧಾನಿಗೆ ಪತ್ರ

Public TV
Last updated: July 1, 2022 11:58 am
Public TV
Share
2 Min Read
CNG BANDIPUR 66
SHARE

ಚಾಮರಾಜನಗರ: ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ವನ್ಯ ಪ್ರಾಣಿಗಳಿಗೆ ಸಂಚಕಾರವುಂಟಾಗುತ್ತೆ ಅಂತಾ ಈಗಾಗಲೇ ರಾತ್ರಿ ಸಂಚಾರ ನಿರ್ಬಂಧ ಮಾಡಲಾಗಿದೆ. ಇದೀಗ ಗುಂಡ್ಲುಪೇಟೆ ಶಾಸಕರು ಪ್ರಧಾನಿ ಮೋದಿಗೆ ಪತ್ರ ಬರೆದು ಚತುಷ್ಪಥ ರಸ್ತೆ ನಿರ್ಮಿಸಿ, ಸುಗಮ ಸಂಚಾರಕ್ಕೆ ಡಿವೈಡರ್ ಅಳವಡಿಸಲು ಪತ್ರ ನೀಡಿದ್ದಾರೆ. ಇದರಿಂದ ವನ್ಯ ಸಂಕುಲಕ್ಕೆ ಸಂಕಷ್ಟ ಎದುರಾಗುತ್ತೆ. ಅಲ್ಲದೆ ಈ ಪತ್ರ ಎಲ್ಲೆಡೆ ವೈರಲ್ ಆಗಿದ್ದು ಶಾಸಕರ ನಡೆಗೆ ಪರಿಸರವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

CNG BANDIPUR

ಹೌದು. ರಾಷ್ಟ್ರೀಯ ಹೆದ್ದಾರಿ 766. ಮೈಸೂರಿನಿಂದ ಕೇರಳ, ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಸದ್ಯ ವಾಹನ ಸವಾರರ ಪಾಲಿಗೆ ಮೃತ್ಯುಕೂಪವಾಗಿ ಪರಿಣಮಿಸಿದೆ. ನಂಜನಗೂಡಿನಿಂದ ಗುಂಡ್ಲುಪೇಟೆವರೆಗಿನ ಹೆದ್ದಾರಿಯಲ್ಲಿ ತಿಂಗಳಿಗೆ ಸರಾಸರಿ 15ಕ್ಕೂ ಹೆಚ್ಚು ಅಪಘಾತಗಳು ನಡೆದು 5ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡಿದ್ದಾರೆ. ರಸ್ತೆಯನ್ನ ಅವೈಜ್ಞಾನಿಕ ರೀತಿಯಲ್ಲಿ ನಿರ್ಮಿಸಿರುವುದೇ ಅಪಘಾತಕ್ಕೆ ಕಾರಣ ಅಂತಾ ಪೊಲೀಸರು ವರದಿ ಕೊಟ್ಟಿದ್ರು. ಇದನ್ನೂ ಓದಿ: ರಾಜ್ಯದ ಜನತೆಗೆ ಕರೆಂಟ್‌ ಶಾಕ್‌ – ಇಂದಿನಿಂದ ವಿದ್ಯುತ್‌ ದರ ಏರಿಕೆ

CNG BANDIPUR 5

ಅಲ್ಲದೇ ಸಂಸದ ಶ್ರೀನಿವಾಸ್ ಪ್ರಸಾದ್ ಕೂಡ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದು ನಂಜನಗೂಡು ಅರಣ್ಯ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮಾಡಬಾರದು, ವಿಭಜಕ ಅಳವಡಿಸಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ರು. ರಸ್ತೆ ಅಗಲೀಕರಣ ಮಾಡುವುದರಿಂದ ವಾಹನಗಳು ಅತಿವೇಗದಿಂದ ಚಲಿಸುತ್ತವೆ. ಇದರಿಂದ ವನ್ಯಜೀವಿಗಳ ಪ್ರಾಣಕ್ಕೆ ಕುತ್ತು ಬರುತ್ತೆ. ಹೀಗಾಗಿ ಅರಣ್ಯಪ್ರದೇಶ ಪ್ರಾರಂಭವಾಗುವವರೆಗೂ ಮಾತ್ರ ರಸ್ತೆ ಅಗಲೀಕರಣ ಮಾಡಲಿ ಎಂದು ಸಲಹೆ ನೀಡಿದ್ದಾರೆ.

CNG BANDIPUR 4

ಈ ನಡುವೆ ಬಂಡೀಪುರ ಅರಣ್ಯದ ನಡುವೆ ಕೇರಳ ಹಾಗೂ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ನಂಜನಗೂಡಿನಿಂದ ಗುಂಡ್ಲುಪೇಟೆ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ದಟ್ಟಣೆಯಿಂದ ಅಪಘಾತಗಳು ಹೆಚ್ಚಾಗುತ್ತಿವೆ. ಕೃಷಿ ಉತ್ಪನ್ನ ಸಾಗಾಣೆಗೆ ರೈತರಿಗೂ ತೊಂದರೆಯಾಗುತ್ತಿದೆ. ಹಾಗಾಗಿ ಕೇರಳ ಹಾಗು ತಮಿಳುನಾಡು ಗಡಿಯವರೆಗು ಡಬಲ್ ರೋಡ್ ಮಾಡಿ ರಸ್ತೆ ವಿಭಜಕ ಅಳವಡಿಸಬೇಕೆಂದು ಶಾಸಕ ನಿರಂಜನ್ ಕುಮಾರ್ ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದಿದ್ದ ನೀರಜ್ ಚೋಪ್ರಾಗೆ ವಜ್ರದ ಕಿರೀಟ

CNG BANDIPUR 3

ಶಾಸಕರ ಪತ್ರದ ವಿಚಾರಕ್ಕೆ ಪರಿಸರವಾದಿಗಳೂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೀವವೈವಿಧ್ಯತೆಗೆ ಇದರಿಂದ ಧಕ್ಕೆಯಾಗಲಿದೆ. ವನ್ಯಜೀವಿಗಳಿಗೆ ಕಂಟಕವಾಗಲಿದೆ, ಬೇಕಿದ್ದರೆ ಕಾಡಿನ ಹೊರಗೆ ರಸ್ತೆ ಅಗಲೀಕರಣ, ರಸ್ತೆವಿಭಜಕ ಅಳವಡಿಸಲಿ ಎಂದು ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ ಒಂದೆಡೆ ರಸ್ತೆ ಅಗಲೀಕರಣ ಮಾಡಿ ಎಂದು ಶಾಸಕರು ಪತ್ರ ಬರೆದಿದ್ರೆ ಮತ್ತೊಂದೆಡೆ ಪರಿಸರವಾದಿಗಳು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಂಡೀಪುರದಲ್ಲಿ ರಸ್ತೆ ಆಗಲೀಕರಣ, ವಿಭಜಕ ಮಾಡಲೂ ಮುಂದಾದ್ರೆ ಪ್ರಾಣಿಗಳಿಗೆ ಕುತ್ತು ಗ್ಯಾರಂಟಿ.

Live Tv

TAGGED:bandipurachamarajanagarnarendra modiprime ministerಚಾಮರಾಜನಗರನರೇಂದ್ರ ಮೋದಿಪ್ರಧಾನಿಬಂಡೀಪುರ
Share This Article
Facebook Whatsapp Whatsapp Telegram

Cinema news

rakshitha spandana
ಬಿಗ್‌ ಬಾಸ್‌ ಮನೆಯಲ್ಲಿ ಕಿತ್ತಾಡಿಕೊಂಡ ರಕ್ಷಿತಾ-ಸ್ಪಂದನಾ; ಮಾಳು ಹೊರಹೋಗೋದಕ್ಕೆ ಕಾರಣ ಯಾರು?
Cinema Latest Top Stories TV Shows
CM Nandini
ಖ್ಯಾತ ಕಿರುತೆರೆ ನಟಿ ಆತ್ಮಹತ್ಯೆಗೆ ಶರಣು
Bengaluru City Cinema Crime Latest Main Post TV Shows
Raj B Shetty 1
ರಾಜ್ ಬಿ ಶೆಟ್ಟಿ ನಟನೆಯ ರಕ್ಕಸಪುರದೊಳ್ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories
K POP Kannada Movie
ಕೊರಿಯನ್ ಪಾಪ್ ಸಂಸ್ಕೃತಿ ಬಿಂಬಿಸುವ ಕನ್ನಡದ ʻಕೆ-ಪಾಪ್ʼ
Cinema Latest Sandalwood

You Might Also Like

S Madhu Bangarappa
Bengaluru City

ಹಳ್ಳಿ ಕಡೆ ಕಾಡಿನಲ್ಲಿ ಮನೆ ಕಟ್ಟಿಕೊಂಡ ರೀತಿಯೇ ಕೋಗಿಲು ಲೇಔಟ್ ಅಕ್ರಮ ಸಕ್ರಮಕ್ಕೆ ಕ್ರಮ: ಮಧು ಬಂಗಾರಪ್ಪ

Public TV
By Public TV
12 minutes ago
Bus Accident
Crime

ಹುಲಿಕಲ್ ಘಾಟ್‌ನಲ್ಲಿ‌ ಧರೆಗೆ ಬಸ್ ಡಿಕ್ಕಿ: ಮಗು ಸಾವು, ಮೂವರಿಗೆ ಗಂಭೀರ ಗಾಯ

Public TV
By Public TV
26 minutes ago
Madhu Bangarappa 1
Bengaluru City

ಒಂದೇ ಒಂದು ಮಗು ಇದ್ದರೂ ಸರ್ಕಾರಿ ಶಾಲೆ ಮುಚ್ಚೋದಿಲ್ಲ, ವಿಲೀನವೂ ಮಾಡಲ್ಲ: ಮಧು ಬಂಗಾರಪ್ಪ

Public TV
By Public TV
1 hour ago
Amit Shah
Latest

ಪ.ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದ್ರೆ, ನುಸುಳುಕೋರರ ತಡೆಗೆ ರಾಷ್ಟ್ರೀಯ ಗ್ರಿಡ್ ಸ್ಥಾಪನೆ – ಅಮಿತ್ ಶಾ

Public TV
By Public TV
1 hour ago
Raichuru Venkateshwar Temple
Districts

ವೈಕುಂಠ ಏಕಾದಶಿ ಸಂಭ್ರಮ – ವೆಂಕಟೇಶ್ವರ ದೇವಾಲಯದಲ್ಲಿ ನೂರಾರು ಭಕ್ತರಿಂದ ವಿಶೇಷ ಪೂಜೆ, ದರ್ಶನ

Public TV
By Public TV
2 hours ago
Sabarimala Temple Theft case
Court

ಶಬರಿಮಲೆ ಚಿನ್ನ ಕಳ್ಳತನ ಕೇಸ್ – SITಗೆ ಹೆಚ್ಚುವರಿ ಇಬ್ಬರು ಅಧಿಕಾರಿಗಳ ಸೇರ್ಪಡೆಗೆ ಕೇರಳ ಹೈಕೋರ್ಟ್ ಅನುಮತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?