Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗನ್ಸ್ ಅಂಡ್ ರೋಸಸ್: ಅಪ್ಪಟ ಸಿನಿಮಾ ವ್ಯಾಮೋಹಿ ನಿರ್ಮಾಪಕನ ಆಗಮನ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಗನ್ಸ್ ಅಂಡ್ ರೋಸಸ್: ಅಪ್ಪಟ ಸಿನಿಮಾ ವ್ಯಾಮೋಹಿ ನಿರ್ಮಾಪಕನ ಆಗಮನ!

Cinema

ಗನ್ಸ್ ಅಂಡ್ ರೋಸಸ್: ಅಪ್ಪಟ ಸಿನಿಮಾ ವ್ಯಾಮೋಹಿ ನಿರ್ಮಾಪಕನ ಆಗಮನ!

Public TV
Last updated: December 22, 2024 4:33 pm
Public TV
Share
2 Min Read
nataraj
SHARE

ಕನ್ನಡವೂ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ರೂಪುಗೊಂಡಿರುವ ಚಿತ್ರ ‘ಗನ್ಸ್ ಅಂಡ್ ರೋಸಸ್’. ಹೆಚ್‌ಎಸ್ ಶ್ರೀನಿವಾಸ್ ಕುಮಾರ್ ನಿರ್ದೇಶನದ ಈ ಚಿತ್ರ, ಟೀಸರ್ ಮೂಲಕ ಒಂದಷ್ಟು ಕುತೂಹಲ ಮೂಡಿಸಿತ್ತು. ಭೂಗತ ಜಗತ್ತು, ಅದರೊಂದಿಗೆ ಹೊಸೆದುಕೊಂಡ ಡ್ರಗ್ಸ್ ಮಾಫಿಯಾ ಹಾಗೂ ನವಿರು ಪ್ರೇಮದ ಕಥಾನಕವನ್ನು ಈ ಸಿನಿಮಾ ಒಳಗೊಂಡಿದೆ. ಹೊಸ ಆವೇಗದ ತಂಡವೊಂದರ ಸಾಥ್ ಹಾಗೂ ಪ್ರತಿಭಾನ್ವಿತ ಕಲಾವಿದರು, ತಂತ್ರಜ್ಞರ ಮೂಲಕ ‘ಗನ್ಸ್ ಅಂಡ್ ರೋಸಸ್’ (Guns And Roses) ಸಿನಿಮಾ ರೂಪ ಧರಿಸಿದೆ. ಜನವರಿ 3ರಂದು ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆಗೊಳ್ಳಲಿದೆ.

guns and roses 1

ವಿಶೇಷವೆಂದರೆ, ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಹೆಚ್.ಆರ್ ನಟರಾಜ್ ಎಂಬ ಅಪ್ಪಟ ಸಿನಿಮಾ ವ್ಯಾಮೋಹಿ ನಿರ್ಮಾಪಕರ ಆಗಮನವಾಗಿದೆ. ದ್ರೋಣ ಕ್ರಿಯೇಷನ್ಸ್ ಬ್ಯಾನರಿನಡಿಯಲ್ಲಿ ಹೆಚ್.ಆರ್ ನಟರಾಜ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ನಟರಾಜ್ ಅವರು ಲ್ಯಾಂಡ್ ಡೆವಲಪರ್ ಆಗಿ ಕಾರ್ಯನಿರ್ವಹಿಸುತ್ತಾ, ರಾಜಕೀಯ ರಂಗದಲ್ಲಿಯೂ ಸಕ್ರಿಯರಾಗಿರುವವರು. 2015ರಲ್ಲಿ ತುಮಕೂರು ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣಾ ಕಣಕ್ಕಿಳಿದಿದ್ದರು. ಹೀಗೆ ತಮ್ಮ ವ್ಯವಹಾರ, ರಾಜಕೀಯ ಚಟುವಟಿಕೆಗಳ ನಡುವಲ್ಲಿಯೇ ಅಪಾರವಾದ ಸಿನಿಮಾಸಕ್ತಿ ಹೊಂದಿರುವವರು ಹೆಚ್.ಆರ್ ನಟರಾಜ್. ಈ ಕಾರಣದಿಂದಲೇ ಆರಂಭದಿಂದಲೂ ಸಾಕಷ್ಟು ಸಿನಿಮಾ ಮಂದಿಯೊಂದಿಗೆ ನಂಟು ಹೊಂದಿದ್ದಾರೆ. ಅದರ ಫಲವಾಗಿಯೇ ಈಗ್ಗೆ ಇಪ್ಪತೈದು ವರ್ಷಗಳಿಂದಲೂ ಈ ಸಿನಿಮಾ ನಿರ್ದೇಶಕರಾದ ಹೆಚ್.ಎಸ್ ಶ್ರೀನಿವಾಸ್ ಕುಮಾರ್ ನಟರಾಜ್ ಅವರಿಗೆ ಪರಿಚಿತರಾಗಿದ್ದರು. ಆ ಪರಿಚಯವೇ ‘ಗನ್ಸ್ ಅಂಡ್ ರೋಸಸ್’ ಚಿತ್ರ ಜೀವತಳೆಯಲು ಕಾರಣವಾಗಿದೆ. ಇದನ್ನೂ ಓದಿ:ಅಲ್ಲು ಅರ್ಜುನ್‌ ದುಡ್ಡಿನ ಮದದಿಂದ ಸುಳ್ಳು ಹೇಳ್ತಿದ್ದಾರೆ: ಎಸಿಪಿ ವಾರ್ನಿಂಗ್‌

guns and roses

ಹೆಸರಾಂತ ಕಥೆಗಾರ, ನಿರ್ಮಾಪಕ, ನಟ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ನಾಯಕನಾಗಲು ಈ ಹಿಂದೆಯೇ ಭೂಮಿಕೆ ಸಿದ್ಧವಾಗಿತ್ತು. ಚಿತ್ರರಂಗದಲ್ಲಿ ಇಪ್ಪತೈದು ವರ್ಷಗಳಿಂದ ನಿರ್ದೇಶನ ವಿಭಾಗದಲ್ಲಿ ಕಾರ್ಯನಿರ್ವಹಿಸಿರುವ ಹೆಚ್.ಎಸ್ ಶ್ರೀನಿವಾಸ್ ಕುಮಾರ್ ನಿರ್ದೇಶಕನಾಗಿ ಬಡ್ತಿ ಪಡೆಯುವ ತಯಾರಿಯಲ್ಲಿದ್ದರು. ಅಜಯ್ ಕುಮಾರ್ ಗರಡಿಯಲ್ಲಿ ಪಳಗಿಕೊಂಡಿದ್ದ ಯುವಕ ಶರತ್ ಸಿದ್ಧಗೊಳಿಸಿದ್ದ ಕಥೆ ಹೆಚ್.ಆರ್ ನಟರಾಜ್ ಅವರಿಗೆ ಹಿಡಿಸಿತ್ತು. ಈ ಸಿನಿಮಾ ಶುರು ಮಾಡುವ ಮುನ್ನ ಗುರುಗಳನ್ನು ಸಂಪರ್ಕಿಸಿದಾಗ ಅವರಿಂದಲೂ ಆಶೀರ್ವಾದದ ಹಸಿರು ನಿಶಾನೆ ಕಂಡಿತ್ತು. ಇದೇ ಹುರುಪಿನಲ್ಲಿ ಅವರು ಈ ಚಿತ್ರವನ್ನು ಯಾವುದಕ್ಕೂ ಕೊರತೆಯಾಗದಂತೆ ನಿರ್ಮಾಣ ಮಾಡಿರುವ ಧನ್ಯತಾ ಭಾವ ಹೊಂದಿದ್ದಾರೆ.

guns and roses

ಸಿನಿಮಾ ನಂಟು ಹೆಚ್.ಆರ್ ನಟರಾಜ್ ಅವರ ಪಾಲಿಗೆ ಹೊಸತೇನಲ್ಲ. ಆದರೆ, ‘ಗನ್ಸ್ ಅಂಡ್ ರೋಸಸ್’ ಚಿತ್ರದ ಮೂಲಕ ಅವರು ಅಧಿಕೃತವಾಗಿ ನಿರ್ಮಾಪಕರಾಗಿ ಎಂಟ್ರಿ ಕೊಟ್ಟಿದ್ದಾರೆ. ಇನ್ನೂ ಒಂದಷ್ಟು ಚೆಂದದ ಸಿನಿಮಾಗಳನ್ನು ನಿರ್ಮಾಣ ಮಾಡಿ, ನೈಜ ಪ್ರತಿಭೆಗಳಿಗೆ ಉತ್ತೇಜನ ನೀಡುವ ಅಭಿಲಾಶೆಯನ್ನೂ ಹೊಂದಿದ್ದಾರೆ. ಯಾವ ಪಾತ್ರಕ್ಕಾದರೂ ಸೈ ಎಂಬಂಥ ಅರ್ಜುನ್ ಈ ಮೂಲಕ ನಾಯಕ ನಟನಾಗಿ ಆಗಮಿಸುತ್ತಿದ್ದಾರೆ. ಈಗಾಗಲೇ ಕನ್ನಡ ಮತ್ತು ತೆಲುಗು ಚಿತ್ರಗಳಲ್ಲಿ ನಟಿಸಿರುವ ಯಶ್ವಿಕಾ ನಿಷ್ಕಲಾ (Yashvika Nishkala) ಅರ್ಜುನ್‌ಗೆ (Arjun) ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಶಶಿ ಕುಮಾರ್ ಸಂಗೀತ ನಿರ್ದೇಶನ, ಜನಾರ್ದನ ಬಾಬು ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಕಿಶೋರ್, ಶೋಭರಾಜ್, ಅವಿನಾಶ್, ಸುಚೇಂದ್ರ ಪ್ರಸಾದ್, ನೀನಾಸಂ ಅಶ್ವಥ್, ಜೀವನ್ ರಿಚ್ಚಿ, ಅರುಣಾ ಬಾಲರಾಜ್ ಮುಂತಾದವರ ತಾರಾಗಣವಿದೆ. ಥ್ರ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಎಂ. ಸಂಜೀವ್ ರೆಡ್ಡಿ ಸಂಕಲನವಿರುವ ‘ಗನ್ಸ್ ಅಂಡ್ ರೋಸಸ್’ ಜನವರಿ 3ರಂದು ತೆರೆಗಾಣಲಿದೆ.

TAGGED:guns and roses filmsandalwoodಗನ್ಸ್ ಅಂಡ್ ರೋಸಸ್ಹೆಚ್‌ ಆರ್‌ ನಟರಾಜ್‌
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Oil
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರ್ತಿದೆ 7.7 ಲಕ್ಷ ಬ್ಯಾರೆಲ್ ಕಚ್ಚಾ ತೈಲವಿರುವ ಹಡಗು

Public TV
By Public TV
4 hours ago
Lamborghini Car
Bengaluru City

ಬೆಂಗ್ಳೂರಲ್ಲಿ ಮುಂದುವರಿದ ಐಷಾರಾಮಿ ಕಾರುಗಳ ದರ್ಬಾರ್ – ರಾಜಾರೋಷವಾಗಿ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್

Public TV
By Public TV
4 hours ago
War
Latest

ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?

Public TV
By Public TV
5 hours ago
Randeep singh surjewala
Bagalkot

ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರಿಗೆ ಕಾಂಗ್ರೆಸ್‌ ಟಿಕೆಟ್‌ ಫಿಕ್ಸ್‌..?

Public TV
By Public TV
5 hours ago
Drugs Seize
Bengaluru City

ಡಿಆರ್‌ಐ ಅಧಿಕಾರಿಗಳ ಭರ್ಜರಿ ಬೇಟೆ – ಬೆಂಗಳೂರಲ್ಲಿ 9 ಕೋಟಿ‌ ಮೌಲ್ಯದ ಡ್ರಗ್ಸ್ ಜಪ್ತಿ

Public TV
By Public TV
6 hours ago
Ballary Police
Bellary

ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಚಿನ್ನ ಕೊಡೋದಾಗಿ ವಂಚನೆ – 30 ಲಕ್ಷ ಪಡೆದು ಪರಾರಿಯಾಗಿದ್ದ ಆರೋಪಿಗಳು ಅರೆಸ್ಟ್

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?