ಸ್ಟಾರ್ ನಟಿಯರಿಗೆ ಕೊಕ್ ನೀಡಿ, ಯುವ ನಟಿಗೆ ಅವಕಾಶ ಕೊಟ್ಟ ಗುಂಟೂರು ಖಾರಂ

Public TV
2 Min Read
Meenakshi Chaudhary 1

ಹೇಶ್ ಬಾಬು (Mahesh Babu) ಮುಖ್ಯ ಭೂಮಿಕೆಯ ಗುಂಟೂರು ಖಾರಂ (Guntur Kharam) ಸಿನಿಮಾಗೆ ನಾಯಕಿ ಯಾರು ಎನ್ನುವ ಚರ್ಚೆ ಹಲವು ದಿನಗಳಿಂದ ನಡೆಯುತ್ತಲೇ ಇದೆ. ಪೂಜಾ ಹೆಗಡೆ (Pooja Hegde) ಬಿಟ್ಟು ಹೋದ ಸ್ಥಾನವನ್ನು ತುಂಬುವವರು ಯಾರು? ಎನ್ನುವ ಪ್ರಶ್ನೆ ಮೂಡಿತ್ತು. ಶ್ರೀಲೀಲಾ, ತ್ರಿಷಾ ಸೇರಿದಂತೆ ಹಲವರು ಹೆಸರು ನಾಯಕಿ ಸ್ಥಾನಕ್ಕಾಗಿ ಕೇಳಿ ಬಂದಿತ್ತು. ಈ ಎಲ್ಲ ಸ್ಟಾರ್ ನಟಿಯರಿಗೆ ಕೊಕ್ ನೀಡಿ, ಯುವ ನಟಿಗೆ ಮಣೆ ಹಾಕಿದೆ ಚಿತ್ರತಂಡ.

Meenakshi Chaudhary 2

ಹೌದು, ಈ ಹಿಂದೆ ಕನ್ನಡದ ನಟಿ ಶ್ರೀಲೀಲಾ ಅಥವಾ ಸ್ಟಾರ್ ನಟಿ ತ್ರಿಷಾ ಈ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಲಿದ್ದಾರೆ ಎನ್ನುವ ಸುದ್ದಿಯಿತ್ತು. ಆದರೆ, ಇದೀಗ ಬಂದ ಮಾಹಿತಿಯ ಪ್ರಕಾರ, ಯುವ ನಟಿ ಮೀನಾಕ್ಷಿ ಚೌಧರಿ (Meenakshi Chaudhary) ಎಂಟ್ರಿಯಾಗಿದೆ.  ಕಿರುತೆರೆಯ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟವರು ಮೀನಾಕ್ಷಿ. ಆನಂತರ ಸಿನಿಮಾ ರಂಗವನ್ನು ಪ್ರವೇಶ ಮಾಡಿದವರು. ಹಿಟ್ : ದಿ ಸೆಕೆಂಡ್ ಕೇಸ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಇವರು ನಟಿಸಿದ್ದಾರೆ. ಇದನ್ನೂ ಓದಿ: ಹೃದಯ ಕಿತ್ತು ಎದೆಗೆ ಹಚ್ಚಿಕೊಂಡು ಪಾರ್ಟಿಗೆ ಬಂದ ಉರ್ಫಿ ಜಾವೇದ್

Meenakshi Chaudhary 3

ಮೀನಾಕ್ಷಿ ನಾಯಕಿಯಾಗಿ ನಟಿಸುತ್ತಿದ್ದರೆ, ಹಾಟ್ ಬ್ಯೂಟಿ ರಮ್ಯಾ ಕೃಷ್ಣ (Ramya Krishna) ವಿಶೇಷ ಪಾತ್ರವೊಂದನ್ನು ಮಾಡಲಿದ್ದಾರೆ. ಬಾಹುಬಲಿ ಸಿನಿಮಾದಲ್ಲಿ ಶಿವಗಾಮಿನಿ ಪಾತ್ರ ಮಾಡಿದ್ದ ರಮ್ಯಾ ಕೃಷ್ಣ ಅಲ್ಲಿಂದ ಅವರು ಮತ್ತೆ ಬೇಡಿಕೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಮಹೇಶ್ ಬಾಬು ಸಿನಿಮಾವನ್ನು ರಮ್ಯಾ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಅವರಿಗಾಗಿಯೇ ಪಾತ್ರವನ್ನು ಹಿಗ್ಗಿಸಿದ್ದಾರಂತೆ ಚಿತ್ರತಂಡ.

 

ಗುಂಟೂರು ಖಾರಂ’ ಸಿನಿಮಾ ಶೂಟಿಂಗ್ ಪದೇ ಪದೇ ತಡವಾಗುತ್ತಿದೆ. ಚಿತ್ರಕಥೆಯಲ್ಲಿ ಬದಲಾವಣೆ ಮಾಡುತ್ತಿದ್ದು ಬರುವ ಸಂಕ್ರಾಂತಿಗೂ ಸಿನಿಮಾ ರಿಲೀಸ್ ಆಗಲ್ಲ ಎನ್ನುವ ವಾದ ಶುರುವಾಗಿದೆ. ಟಾಲಿವುಡ್ ಮಾತ್ರವಲ್ಲದೇ ಬಾಲಿವುಡ್‌ನಲ್ಲೂ ಬೇಡಿಕೆ ಸೃಷ್ಟಿಸಿಕೊಂಡಿರುವ ಪೂಜಾ ಹೆಗ್ಡೆಗೆ ಈಗ ಡೇಟ್ಸ್ ಸಮಸ್ಯೆ ಕಾರಣದಿಂದಾಗಿ ಶೂಟಿಂಗ್ ಮುಂದೂಡಲ್ಪಟ್ಟಿತ್ತು. ಕೆಲವು ದೃಶ್ಯಗಳನ್ನು ರೀಶೂಟ್ ಮಾಡುವಂತೆ ಮಹೇಶ್ ಬಾಬು ತಿಳಿಸಿದ್ದಾರೆ ಎಂದೂ ಹೇಳಲಾಗುತ್ತಿದೆ. ಹೀಗಾಗಿ ಎಲ್ಲ ಪಕ್ಕಾ ಮಾಡಿಕೊಂಡೇ ಈ ಬಾರಿ ಚಿತ್ರೀಕರಣಕ್ಕೆ ಹೊರಡಲಿದೆ ಚಿತ್ರತಂಡ.

[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

Share This Article