Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜ್ಞಾನವಾಪಿ ಮಸೀದಿ ಇರುವ ಜಾಗದಲ್ಲಿ ಕನ್ನಡ ಶಾಸನ ಪತ್ತೆ – ASI ವರದಿಯಲ್ಲಿದೆ ಕನ್ನಡ ಬರಹದ ಪ್ರೂಫ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜ್ಞಾನವಾಪಿ ಮಸೀದಿ ಇರುವ ಜಾಗದಲ್ಲಿ ಕನ್ನಡ ಶಾಸನ ಪತ್ತೆ – ASI ವರದಿಯಲ್ಲಿದೆ ಕನ್ನಡ ಬರಹದ ಪ್ರೂಫ್‌

Bengaluru City

ಜ್ಞಾನವಾಪಿ ಮಸೀದಿ ಇರುವ ಜಾಗದಲ್ಲಿ ಕನ್ನಡ ಶಾಸನ ಪತ್ತೆ – ASI ವರದಿಯಲ್ಲಿದೆ ಕನ್ನಡ ಬರಹದ ಪ್ರೂಫ್‌

Public TV
Last updated: January 27, 2024 5:14 pm
Public TV
Share
3 Min Read
123
SHARE

ಪವಿತ್ರ ಕಡ್ತಲ

– ಕನ್ನಡ ಬರಹದ ಬಗ್ಗೆ ಇತಿಹಾಸಕಾರರು ಹೇಳೋದೇನು?
– ಕನ್ನಡ ಶಾಸನ ಸಿಕ್ಕಿರುವುದು ಕನ್ನಡಿಗರಾದ ನಾವು ಹೆಮ್ಮೆ ಪಡಬೇಕಾದ ವಿಚಾರ ಎಂದ ಇತಿಹಾಸತಜ್ಞ

ಬೆಂಗಳೂರು: ಜ್ಞಾನವಾಪಿ ಮಸೀದಿ (Gyanvapi Mosque) ಇರುವ ಜಾಗದಲ್ಲಿ ಪ್ರಾಚೀನ ಕಾಲದ ಶಾಸನಗಳು (Kannada Inscription ) ಪತ್ತೆಯಾಗಿವೆ. ಅದರಲ್ಲಿ ಕನ್ನಡದ ಶಾಸನವೂ ಇದೆ ಎಂಬ ವಿಚಾರ ಎಎಸ್‌ಐ (ASI) ವರದಿಯಿಂದ ಬಹಿರಂಗವಾಗಿದೆ. ಕನ್ನಡ ಬರಹವಿರುವ ಪ್ರೂಫ್‌ ಕೂಡ ಎಎಸ್‌ಐ ವರದಿಯಲ್ಲಿದೆ.

ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಸಂಬಂಧಿಸಿದಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ವರದಿ ಈಚೆಗೆ ಬಹಿರಂಗವಾಗಿದೆ. ಮಸೀದಿ ಇರುವ ಜಾಗದಲ್ಲಿ ಸಿಕ್ಕ ಪ್ರಾಚೀನ ಶಾಸನದಲ್ಲಿ ‘ದೊಡ್ಡರಸಯ್ಯನ ನರಸಂಣನಭಿಂನಹ’ (ದೊಡ್ಡರಸಯ್ಯನ ನರಸಿಂಹನ ಭಿನ್ನಹ) ಎಂದು ಕನ್ನಡದಲ್ಲಿ ಬರಹವಿರುವ ಸಾಕ್ಷಿ ಕೂಡ ವರದಿಯಲ್ಲಿದೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಜಾಗದಲ್ಲೇ ಹಿಂದೂ ದೇವಾಲಯವಿತ್ತು – ಪುರಾತತ್ವ ಇಲಾಖೆ ವರದಿ ಬಹಿರಂಗ

STONE

ಇತಿಹಾಸಕಾರರು ಹೇಳೋದೇನು?
ಇದು ವಿಜಯನಗರದ ಪಾಳಯಗಾರರ ಅಥವಾ ಅಧಿಕಾರಿಗಳ ಕಾಲದಲ್ಲಿ ನೀಡಿರುವ ಸೇವಾರ್ಥ ಇರಬಹುದು. ಸುಮಾರು 16ನೇ ಶತಮಾನದ್ದು. ಸಾಮಾನ್ಯವಾಗಿ ದೇವರಿಗೆ ಸೇವಾರ್ಥವನ್ನು ನೀಡುವ ಸಮಯದಲ್ಲಿ ಈ ರೀತಿ ಕಲ್ಲಿನಲ್ಲಿ ಸೇವಾರ್ಥಿಯ ಹೆಸರನ್ನು ಹಾಕಿರುತ್ತಾರೆ.

ಕಾಶಿ ವಿಶ್ವನಾಥನಿಗೆ ಪ್ರತಿ ವರ್ಷವೂ ದತ್ತಿಯನ್ನು ನೀಡೋದು ಸಂಪ್ರದಾಯ. ದತ್ತಿ ಅಂದ್ರೆ ಒಂದೆರಡು ಹಳ್ಳಿ ಅಥವಾ ಗ್ರಾಮವನ್ನು ಸಂಪೂರ್ಣವಾಗಿ ದೇವರಿಗಾಗಿಯೇ ಮೀಸಲಿಟ್ಟು ಅಲ್ಲಿ ಬೆಳೆ ಬೆಳೆದು, ಬರುವ ದುಡ್ಡನ್ನು ವಾರ್ಷಿಕವಾಗಿ ಗ್ರಾಮದ ಬ್ರಾಹ್ಮಣರ ಮುಖಾಂತರ ಆಯಾಯ ಪಾಳೆಯಗಾರರು/ಅಧಿಕಾರಿಗಳ ಹೆಸರಿನಲ್ಲಿ ಕಾಶಿ ವಿಶ್ವನಾಥನ ಸನ್ನಿಧಾನದಲ್ಲಿ ಪೂಜೆ ಮಾಡಿಸುತ್ತಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯೊಳಗಿರುವ ವಜುಖಾನಾದ ಸಂಪೂರ್ಣ ಸ್ವಚ್ಛತೆಗೆ ಸುಪ್ರೀಂ ಗ್ರೀನ್‌ ಸಿಗ್ನಲ್‌

Gyanvapi Mosque Temple 2

ಸಾಮಾನ್ಯವಾಗಿ ಈ ದುಡ್ಡನ್ನು ದೇವಸ್ಥಾನಕ್ಕೆ ಬಳಸಿ ತದನಂತರ ಅಲ್ಲಿ ಕಟ್ಟಡಕ್ಕೆ ಬಳಸುತ್ತಾರೆ. ಈ ವೇಳೆ ಸೇವಾರ್ಥಿಗಳ ಹೆಸರನ್ನು ಹಾಕಲಾಗಿದೆ. ಕೋಲಾರ ಮೂಲದ ಪಾಳೆಯಗಾರರು ಅಥವಾ ಅಧಿಕಾರಿಗಳು ಇರಬಹುದು. ದಕ್ಷಿಣದ ರಾಜರಿಗೆ ಕಾಶಿ ವಿಶ್ವನಾಥನ ಮೇಲೆ ಅಪಾರ ನಂಬಿಕೆ. ಕೆಂಪೇಗೌಡರು ಕೂಡ ಕಾಶಿ ವಿಶ್ವನಾಥ ದೇವರ ಹೆಸರಿನಲ್ಲಿ ದತ್ತಿಯನ್ನು ನೀಡುತ್ತಿದ್ದರು. ಇದರಿಂದ ಒಳ್ಳೆಯದಾಗುತ್ತೆ ಎನ್ನುವ ನಂಬಿಕೆ ಎಂದು ಕನ್ನಡದ ಶಾಸಕನದ ಕುರಿತು ಇತಿಹಾಸಕಾರರು ಮಾಹಿತಿ ನೀಡಿದ್ದಾರೆ.

‘ಪಬ್ಲಿಕ್ ಟಿವಿ’ ಜೊತೆ ಇತಿಹಾಸ ತಜ್ಞ ತಲಕಾಡು ಚಿಕ್ಕರಂಗೇಗೌಡ ಮಾತನಾಡಿ, ಕನ್ನಡ ಶಾಸನ ಸಿಕ್ಕಿರೋ ಬಗ್ಗೆ ಕನ್ನಡಿಗರಾದ ನಾವು ಹೆಮ್ಮೆ ಪಡಬೇಕಾದ ವಿಚಾರ. 16ನೇ ಶತಮಾನದ ಶಾಸನ ಇದು. ಈ ಹಿಂದೆ ಕನ್ನಡದ ರಾಜರು ಉತ್ತರದ ಪ್ರಸಿದ್ಧ ದೇವಾಲಯಗಳಿಗೆ ದತ್ತಿ ಕೊಡುತ್ತಿದ್ದರು. ಆ ರೀತಿ ದತ್ತಿ ಕೊಟ್ಟಿರುವವರೇ ದೊಡ್ಡರಸಯ್ಯ ಮತ್ತು ನರಸಿಂಹ. ಇವರು ಕರ್ನಾಟಕದ ಯಾವುದಾದರೂ ಜಿಲ್ಲೆಯ ಪ್ರಸಿದ್ಧ ವ್ಯಕ್ತಿಗಳೇ ಆಗಿರುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಕೇಸ್‌- ಪೂಜಾ ಸ್ಥಳಗಳ ಕಾಯ್ದೆಯ ವ್ಯಾಪ್ತಿಗೆ ಒಳಪಡಲ್ಲ, ಮುಸ್ಲಿಮರು ಸಲ್ಲಿಸಿದ್ದ 5 ಅರ್ಜಿ ವಜಾ

1234

ಹಿಂದೆ ಅವರು ದತ್ತಿಕೊಟ್ಟ ಕಾರಣಕ್ಕೆ ಅವರ ಹೆಸರನ್ನ ಹಾಕಿದ್ದಾರೆ. ಈ ಶಾಸನ ಸರ್ವೇಗೆ ಪೂರಕವಾಗಲಿದೆ. ಮತ್ತಷ್ಟು ಕನ್ನಡದ ಶಾಸನಗಳು ಪತ್ತೆಯಾದರು ಅಚ್ಚರಿ ಇಲ್ಲ ಎಂದು ಹೇಳಿದ್ದಾರೆ.

839 ಪುಟಗಳ ಸರ್ವೆ ವರದಿ
ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಸಮುಚ್ಛಯದಲ್ಲಿರುವ ಜ್ಞಾನವಾಪಿ ಮಸೀದಿಯಲ್ಲಿ ನಡೆಸಲಾಗಿದ್ದ ಸರ್ವೆ ವರದಿಯನ್ನು ಜ.25 ರಂದು ಬಹಿರಂಗಗೊಳಿಸಲಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸರ್ವೆ ನಡೆಸಿತ್ತು. 839 ಪುಟಗಳ ಸರ್ವೆ ವರದಿ ಈಗ ಬಹಿರಂಗವಾಗಿದೆ. ಇದನ್ನೂ ಓದಿ: ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ಜ್ಞಾನವಾಪಿ ಮಸೀದಿಯ ಸಮೀಕ್ಷಾ ವರದಿ ಸಲ್ಲಿಕೆ

ಎಎಸ್‌ಐ ವರದಿಯಲ್ಲಿ, ಮಸೀದಿ ನಿರ್ಮಾಣಕ್ಕೂ ಮೊದಲು ವಿವಾದಿತ ಸ್ಥಳದಲ್ಲಿ ಬೃಹತ್‌ ರೂಪದ ಭವ್ಯ ಮಂದಿರ ಇತ್ತು. ದೇಗುಲ ಕೆಡವಿ ಅದರ ಅವಶೇಷಗಳ ಮೇಲೆ ಮಸೀದಿ ನಿರ್ಮಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕೋರ್ಟ್‌ ಆದೇಶದಂತೆ ಎಎಸ್‌ಐ ಮಸೀದಿ ಆವರಣದಲ್ಲಿ ವೈಜ್ಞಾನಿಕ ಸರ್ವೆ ನಡೆಸಿತ್ತು. ಮಸೀದಿಯನ್ನು ಹಿಂದೆ ಇದ್ದ ದೇಗುಲದ ಕಂಬಗಳನ್ನು ಬಳಸಿಕೊಂಡು ನಿರ್ಮಿಸಲಾಗಿದೆ ಎಂಬ ಅಂಶವನ್ನು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.

TAGGED:Gyanvapi Mosque SurveyKannada Inscriptionಕನ್ನಡ ಶಾಸನಜ್ಞಾನವಾಪಿ ಮಸೀದಿ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Narendra Modi great friend of mine Donald Trump Announces 26 percentage Discounted Reciprocal Tariff On India
Latest

ಟ್ರಂಪ್ ಟ್ಯಾರಿಫ್‌ ಗೆ ಭಾರೀ ಹಿನ್ನಡೆ – ಸುಂಕ ಹೇರಲು ಅಧಿಕಾರ ಇಲ್ಲ; ಯುಎಸ್‌ ಸುಪ್ರೀಂ ಕೋರ್ಟ್‌ ಚಾಟಿ

Public TV
By Public TV
21 minutes ago
rottweiler dog
Bengaluru City

ಬೆಂಗಳೂರು | 4 ವರ್ಷದ ಬಾಲಕನ ಮೇಲೆ ರಾಟ್ ವೀಲರ್ ದಾಳಿ

Public TV
By Public TV
23 minutes ago
Pralhad Joshi 2
Bagalkot

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ – ಕಾಂಗ್ರೆಸ್‌ ಸರ್ಕಾರ ಇದ್ದಾಗಲೇ ಯಾಕೆ ಹೀಗಾಗುತ್ತೆ: ಜೋಶಿ ಪ್ರಶ್ನೆ

Public TV
By Public TV
49 minutes ago
Yathindra Siddaramaiah 1
Latest

ಆಧಾರರಹಿತ ಆರೋಪ ಮಾಡಿ ಅವಮಾನಿಸಿದ್ದರೆ ಸ್ನೇಹಮಯಿ ವಿರುದ್ಧ ಕ್ರಮ ಆಗ್ಬೇಕು: ಯತೀಂದ್ರ ಸಿದ್ದರಾಮಯ್ಯ

Public TV
By Public TV
1 hour ago
Contractors Association
Dharwad

ಬಾಕಿ ಬಿಲ್​ 37,000 ಕೋಟಿ ಬಿಡುಗಡೆಗೆ ಆಗ್ರಹ – ಮಾ.6 ರಂದು ಬೆಂಗಳೂರಲ್ಲಿ ಮುಷ್ಕರಕ್ಕೆ ಗುತ್ತಿಗೆದಾರರ ಸಂಘ ಕರೆ

Public TV
By Public TV
2 hours ago
Bagalkote 1
Bagalkot

ಬಾಗಲಕೋಟೆಯಲ್ಲಿ ಉದ್ವಿಗ್ನ – ಮುಸ್ಲಿಂ ಮುಖಂಡರು ಗೈರು, ಶಾಂತಿ ಸಭೆ ವಿಫಲ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?