ಲಕ್ನೋ: ಜ್ಞಾನವಾಪಿ ಮಸೀದಿಯ (Gyanvapi Mosque) ಎಎಸ್ಐ ಸಮೀಕ್ಷೆಗೆ ಅನುಮತಿ ನೀಡಿದ ವಾರಣಾಸಿ ಜಿಲ್ಲಾ ನ್ಯಾಯಲಯದ ಆದೇಶ ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ (Allahabad High Court) ಆಗಸ್ಟ್ 3 ರವರೆಗೂ ತೀರ್ಪು ಕಾಯ್ದಿರಿಸಿದೆ.
ಮುಖ್ಯ ನ್ಯಾಯಮೂರ್ತಿ ಪ್ರಿಟಿಂಕರ್ ದಿವಾಕರ್ ನೇತೃತ್ವದ ಪೀಠವು ವಾದ-ಪ್ರತಿವಾದವನ್ನು ಆಲಿಸಿದ ನಂತರ ಈ ಆದೇಶವನ್ನು ನೀಡಿದ್ದು, ಅಂತಿಮ ಆದೇಶದವರೆಗೂ ಮಸೀದಿಯ ಸರ್ವೆ ನಡೆಸದಂತೆ ತಡೆ ನೀಡಿದೆ.
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಎಂದಿಗೂ ಮೊಕದ್ದಮೆಯಲ್ಲಿ ಭಾಗಿಯಾಗಿಲ್ಲ ಅಥವಾ ವಾರಣಾಸಿ ನ್ಯಾಯಾಲಯದ ಗಮನಕ್ಕೆ ಬಂದಿಲ್ಲ ಮತ್ತು ಇದರ ಹೊರತಾಗಿಯೂ, ಮಸೀದಿ ಆವರಣದ ಸಮೀಕ್ಷೆ ನಡೆಸಲು ಜಿಲ್ಲಾ ನ್ಯಾಯಲಯ ಅನುಮತಿ ನೀಡಿದೆ. ಇದನ್ನೂ ಓದಿ: ಹಿಂದಿನ ತಪ್ಪು ಮರೆಮಾಚಲು UPAಯಿಂದ INDIA ಅಂತ ಬದಲಾಯಿಸಿಕೊಂಡಿದ್ದಾರೆ: ಮೋದಿ ವಾಗ್ದಾಳಿ
ವೈಜ್ಞಾನಿಕ ಸಮೀಕ್ಷೆ ವೇಳೆ ಮಸೀದಿಯ ಆವರಣವನ್ನು ನಾಶಪಡಿಸುವ ಸಾಧ್ಯತೆ ಇದೆ ಎಂದು ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಪರ ವಕೀಲರು ವಾದಿಸಿದ್ದರು. ಮಸೀದಿಯಲ್ಲಿ ಹಿಂದೂ ದೇವರ ಕುರುಹುಗಳಿರುವ ಹಿನ್ನೆಲೆ ಅದರ ಸರ್ವೆ ಅಗತ್ಯ ಎಂದು ಹಿಂದೂ ಪರ ವಕೀಲರು ವಾದ ಮಂಡಿಸಿದರು.
ಇದಕ್ಕೂ ಮುನ್ನ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ವಾರಾಣಾಸಿ ಜಿಲ್ಲಾ ನ್ಯಾಯಲಯದ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದ ಸರ್ವೆ ಕಾರ್ಯ ಆರಂಭಿಸಿದೆ ಎಂದು ಆರೋಪಿಸಿತ್ತು. ಈ ಹಿನ್ನೆಲೆ ಮೇಲ್ಮನವಿ ಸಲ್ಲಿಸಲು ಸುಪ್ರೀಂ ಕೋರ್ಟ್ ಅವಕಾಶ ನೀಡಿತ್ತು. ಇದನ್ನೂ ಓದಿ: ಮಣಿಪುರದಲ್ಲಿ ಹೊಸ ಸಂಘರ್ಷ – ಎರಡು ಸಮುದಾಯಗಳ ನಡುವೆ ಗುಂಡಿನ ಚಕಮಕಿ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]