ನಾನು ಅಡಿಗಲ್ಲು ಹಾಕಿದ ಸೇತುವೆ ಉದ್ಘಾಟನೆಗೆ ಆಹ್ವಾನವಿಲ್ಲ – ಎಚ್‍ಡಿಡಿ ಅಸಮಾಧಾನ

Public TV
1 Min Read
Modi H. D. Deve Gowda

ಬೆಂಗಳೂರು: ನಾನು ಅಡಿಗಲ್ಲು ಹಾಕಿದ್ದ ಸೇತುವೆ ಉದ್ಘಾಟನೆಗೆ ನನಗೆ ಆಹ್ವಾನ ನೀಡಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಅಸಮಾಧಾನ ಹೊರ ಹಾಕಿದ್ದಾರೆ.

ಜೆಪಿ ಭವನದಲ್ಲಿ ಮಾತನಾಡಿದ ಅವರು ಬೋಗಿಬೀಲ್ ಸೇತುವೆ ಉದ್ಘಾಟನೆ ಕುರಿತು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಯಾರೊಬ್ಬರೂ ಅಸ್ಸಾಂನಲ್ಲಿ ನಡೆಯುತ್ತಿರುವ ಬೋಗಿಬೀಲ್ ಸೇತುವೆ ಉದ್ಘಾಟನೆಗೆ ಆಹ್ವಾನಿಸಿಲ್ಲ. ನಾವು ಮಾಡಿದ ಕೆಲಸವನ್ನು ಯಾರು ನೆನಪು ಇಟ್ಟುಕೊಳ್ಳುತ್ತಾರೆ ಎಂದು ಪ್ರಶ್ನಿಸಿದ ಅವರು ಅದು ದೊಡ್ಡ ವಿಷಯವಲ್ಲ ಬಿಡಿ ಎಂದು ಕಿಡಿಕಾರಿದರು. ಇದನ್ನು ಓದಿ: ಬೋಗಿಬೀಲ್ ಸೇತುವೆ ವಿಶೇಷತೆ ಏನು?

ಕಾಶ್ಮೀರ ರೈಲ್ವೇ, ದೆಹಲಿ ಮೆಟ್ರೋ ಯೋಜನೆಗಳನ್ನು ನಾನೇ ಮಂಜೂರು ಮಾಡಿದ್ದೆ. ನನ್ನ ಕಾಲದಲ್ಲಿಯೇ ಅದಕ್ಕೆ ಹಣ ಬಿಡುಗಡೆ ಮಾಡಿ, ಅಡಿಗಲ್ಲು ಹಾಕಿಸಿದ್ದೆ. ಈಗ ಅದೆಲ್ಲವನ್ನೂ ಮರೆತಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

1997ರಲ್ಲಿ ಶಂಕುಸ್ಥಾಪನೆ ಮಾಡಿ ಸೇತುವೆ ನಿರ್ಮಾಣ ತಡವಾಗಿದ್ದು ಏಕೆ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಅದೆಲ್ಲ ಡಿಫರೆಂಟ್ ವಿಷಯ ಎಂದು ಉತ್ತರಿಸಿ, ನಾನು ಹಾಸನ-ಮೈಸೂರು ಯೋಜನೆಯನ್ನು 13 ತಿಂಗಳು ಮುಗಿಸಿದೆ. ನಿಗದಿತ ಸಮಯದಲ್ಲಿ ಅನೇಕ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿದ್ದೇನೆ. ಅವುಗಳಲ್ಲಿ ಅನಗವಾಡಿ ಸೇತುವೆ ಕೂಡ ಒಂದು. ಪ್ರಧಾನಿ ನರೇಂದ್ರ ಮೋದಿ ಅವರು ಹೋಗಿ ಅನಗವಾಡಿ ಸೇತುವೆ ನೋಡಿಕೊಂಡು ಬರಲಿ ಎಂದು ವ್ಯಂಗ್ಯವಾಡಿದರು.

DEVEGOWDA 1

ದೇವೇಗೌಡ ಮುಂಬೈ ಕರ್ನಾಟಕಕ್ಕೆ ಏನು ಮಾಡಿಲ್ಲ ಅಂತ ಅನೇಕರು ಮಾತನಾಡುತ್ತಾರೆ. ಅಂತವರು ಕೂಡ ಅನಗವಾಡಿ ಸೇತುವೆ ನೋಡಿಕೊಂಡು ಬರಲಿ. ಆಗ ನಾನು ಏನು ಮಾಡಿದ್ದೇನೆ ಅಂತ ಅವರಿಗೆ ಅರ್ಥವಾಗುತ್ತದೆ. ಅನಗವಾಡಿ ಸೇತುವೆ ಅಷ್ಟೇ ಅಲ್ಲದೆ ನನ್ನ ಆಡಳಿತದ ಅವಧಿಯಲ್ಲಿ ಮುಂಬೈ ಕರ್ನಾಟಕಕ್ಕೆ ಅನೇಕ ಕೊಡುಗೆ ಕೊಟ್ಟಿದ್ದೇನೆ. ಆದರೂ ನಾನು ಕೆಲಸ ಮಾಡಿಲ್ಲ, ಮಾಡಿಲ್ಲ ಅಂತ ಆರೋಪಿಸುತ್ತಾರೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *