Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಸಜ್ಜು – ಜನತಾ ಸಂಗಮದಲ್ಲಿ ಮುಖಂಡರೊಂದಿಗೆ ಹೆಚ್‍ಡಿಕೆ ಸಮಾಲೋಚನೆ

Public TV
Last updated: November 16, 2021 6:10 pm
Public TV
Share
3 Min Read
H.D Kumarswamy
SHARE

ಬೆಂಗಳೂರು: ಮುಂದಿನ ಪಾಲಿಕೆ ಚುನಾವಣೆ ಹಾಗೂ 2023ರ ವಿಧಾನಸಭೆ ಚುನಾವಣೆಗೆ ರಾಜಧಾನಿಯ ಮುಖಂಡರು, ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ನಗರದಲ್ಲಿ ಜೆಡಿಎಸ್ ಸಂಘಟನಾ ಕಾರ್ಯಾಗಾರ ಜನತಾ ಸಂಗಮ ನಡೆಸಲಾಗುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

hdk

ಕಾರ್ಯಗಾರದಲ್ಲಿ ಭಾಗಿಯಾಗುವುದಕ್ಕೆ ಮುನ್ನ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರಕ್ಕೆ ಜೆಡಿಎಸ್ ಪಕ್ಷವು ಅನೇಕ ಅಭಿವೃದ್ಧಿ ಯೋಜನೆಗಳನ್ನು ನೀಡಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಪಕ್ಷದ ಜವಾಬ್ದಾರಿ ಏನಿದೆ ಎಂಬ ಬಗ್ಗೆಯೂ ಇಂದಿನ ಕಾರ್ಯಗಾರದಲ್ಲಿ ಚರ್ಚೆ ನಡೆಸಲಾಗುವುದು. ಜೊತೆಗೆ, ಪಕ್ಷದ ಸಂಘಟನೆಯಲ್ಲಿ ಎಲ್ಲೆಲ್ಲಿ ಲೋಪ ಆಗಿದೆ ಎನ್ನುವುದನ್ನು ಚರ್ಚೆ ಮಾಡಿ ಸರಿಪಡಿಸಲಾಗುವುದು ಎಂದರು. ಇದನ್ನೂ ಓದಿ: ವಾಯುಸೇನೆ ವಿಮಾನದಲ್ಲಿ ಲ್ಯಾಂಡಿಂಗ್ – ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಮೋದಿ

ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಿ ಆಗಿದ್ದಾಗ ಹಾಗೂ ನಾನು ಮುಖ್ಯಮಂತ್ರಿ ಆಗಿದ್ದಾಗ ಬೆಂಗಳೂರು ನಗರ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಕುಡಿಯುವ ನೀರು, ಐಟಿ ಬಿಟಿ, ಮೆಟ್ರೋ, ಮೂಲಸೌಕರ್ಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದೇವೆ. ನಗರಕ್ಕೆ ಸಾಕಷ್ಟು ಕೆಲಸ ಮಾಡಿದ್ದಾಗ್ಯೂ ಆ ಬಗ್ಗೆ ಜನರಿಗೆ ಪೂರ್ಣ ಮಾಹಿತಿ ಇಲ್ಲ. ಪಕ್ಷದ ಸಾಧನೆಗಳನ್ನು ಜನತೆಗೆ ತಲುಪಿಸುವ ಕೆಲಸ ಮಾಡುವ ವಿಚಾರವಾಗಿ ಕಾರ್ಯಗಾರದಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಹೆಸರಿಗೆ ಮಾತ್ರ ಸರ್ಕಾರಿ ಆಸ್ಪತ್ರೆ- ಚಿಕಿತ್ಸೆ ಕೊಡಲು ವೈದ್ಯರೇ ಇಲ್ಲ

HDD

ಬಿಬಿಎಂಪಿ ಚುನಾವಣೆಗೆ ತಯಾರಿ:
ನಮ್ಮ ಪಕ್ಷವನ್ನು ಪಾಲಿಕೆ ಚುನಾವಣೆಗೆ ಸಜ್ಜು ಮಾಡುತ್ತಿದ್ದೇವೆ. ಫೆಬ್ರವರಿಯಲ್ಲಿ ಬಿಬಿಎಂಪಿ ಚುನಾವಣೆ ಎನ್ನುವ ಸುದ್ದಿ ಇದೆ. ಹೀಗಾಗಿ ಪಕ್ಷದ ಸಂಘಟನೆಗೆ ಹೆಚ್ಚು ಗಮನ ಕೊಡಲಾಗುತ್ತದೆ. ವಾರ್ಡ್ ವಿಂಗಡಣೆ ಕೆಲಸ ನಡೆಯುತ್ತಿದೆ. ನಗರದ ಏಳೆಂಟು ವಿಧಾನಸಭೆ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಉತ್ತಮ ಶಕ್ತಿ ಹೊಂದಿದೆ. ಉಳಿದ ಕ್ಷೇತ್ರಗಳಲ್ಲಿ ಬಲ ಹೆಚ್ಚಿಸಿಕೊಳ್ಳುವ ಬಗ್ಗೆಯೂ ಚರ್ಚೆ ಮಾಡುತ್ತಿದ್ದೇವೆ. ಪಾಲಿಕೆ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡುತ್ತೇವೆ. ಆ ಮಾತನ್ನು ಈಗಾಗಲೇ ಹೇಳಿದ್ದೇವೆ ಎಂದು ನುಡಿದರು.

H.D Kumarswamy

ಬಿಟ್ ಕಾಯಿನ್ ಬರೀ ಗೊಂದಲ:
ಬಿಟ್ ಕಾಯಿನ್ ವಿಚಾರದಲ್ಲಿ ಬರೀ ಗೊಂದಲ ಎಬ್ಬಿಸಲಾಗುತ್ತಿದೆ. ತನಿಖೆಯನ್ನು ಇಡಿಗೆ (ಜಾರಿ ನಿರ್ದೇಶನಾಲಯ) ಕೊಡಲಾಗಿದೆ ಅಂತಿದ್ದಾರೆ. ನಿಖರ ಮಾಹಿತಿ ಯಾರ ಬಳಿಯೂ ಇಲ್ಲ. ಮುಖ್ಯ ಆರೋಪಿಯನ್ನು ಏಳೆಂಟು ಬಾರಿ ಅರೆಸ್ಟ್ ಮಾಡಿ ತನಿಖೆಗೆ ಒಳಪಡಿಸಲಾಗಿದೆ. ಸರ್ಕಾರವು ಈ ಹಗರಣದ ಬಗ್ಗೆ ನುರಿತ ತಜ್ಞರ ಸಹಕಾರ ಪಡೆದು ತನಿಖೆ ನಡೆಸಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದರು. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಜ್‍ಕುಮಾರ್ ರಾವ್ – ಫೋಟೋ ವೈರಲ್

Bitcoin

ಆರೋಪಿ ಶ್ರೀಕಿ ಜೀವಕ್ಕೆ ಅಪಾಯ ಇದೆ. ಆತನಿಗೆ ಪೊಲೀಸ್ ರಕ್ಷಣೆ ಕೊಡಬೇಕು ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ, “ಇಷ್ಟು ವರ್ಷ ಆತನ ಜೀವಕ್ಕೆ ಅಪಾಯ ಇರಲಿಲ್ಲ. ಈಗ ಅವನಿಗೆ ಜೀವ ಬೆದರಿಕೆ ಇದೆ ಎಂದರೆ ಹೇಗೆ? ಕಾಂಗ್ರೆಸ್ ಪಕ್ಷಕ್ಕೆ ಈ ಬಗ್ಗೆ ನಿಖರ ಮಾಹಿತಿ ಇರಬೇಕು. ರಕ್ಷಣೆ ಕೊಡೋದು ತಪ್ಪಲ್ಲ, ಕೊಡಲಿ. ಇದುವರೆಗೆ ಎಂಥೆಂತವರಿಗೋ ರಕ್ಷಣೆ ನೀಡಲಾಗಿದೆ. ಇವರಿಗೂ ಕೊಡಲಿ, ಬೇಡ ಅಂದವರು ಯಾರು?” ಎಂದರು.

Siddaramaiah 2

ಇದೇ ವೇಳೆ ಪೇಜಾವರ ಶ್ರೀಗಳ ಬಗ್ಗೆ ಹಾಗೂ ತಮ್ಮ ಗ್ರಾಮ ವಾಸ್ತವ್ಯದ ಬಗ್ಗೆ ಸಂಗೀತ ನಿರ್ದೇಶಕ ಹಂಸಲೇಖ ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಮುಖ್ಯಮಂತ್ರಿ ಆಗಿದ್ದಾಗ ನಾನು ಮಾಡಿದ ಗ್ರಾಮ ವಾಸ್ತವ್ಯಕ್ಕೆ ಮಹಾತ್ಮ ಗಾಂಧೀಜಿ ಅವರೇ ಸ್ಫೂರ್ತಿ ಮತ್ತು ಆದರ್ಶ. ಗ್ರಾಮ ವಾಸ್ತವ್ಯ ಅನ್ನೋದು ನಾಟಕೀಯವಾಗಿ ಮಾಡಿಲ್ಲ. ಆತ್ಮತೃಪ್ತಿಗಾಗಿ, ಜನರ ಪರ ಕೆಲಸ ಮಾಡುವುದಕ್ಕೆ ನಾನು ಆ ಕಾರ್ಯಕ್ರಮ ಮಾಡಿದ್ದೇನೆ”. ನನ್ನ ಗ್ರಾಮ ವಾಸ್ತವ್ಯದಿಂದ ಅನೇಕರಿಗೆ ಅನುಕೂಲವಾಗಿದೆ. ಯಾರನ್ನೋ ಮೆಚ್ಚಿಸಲಿಕ್ಕೆ ನಾನು ಗ್ರಾಮ ವಾಸ್ತವ್ಯ ಮಾಡಲಿಲ್ಲ. ಆ ವಿಚಾರಗಳ ಬಗ್ಗೆ ಚರ್ಚೆ ಮಾತನಾಡುವುದು ಅಗತ್ಯ ಇರಲಿಲ್ಲ. ಮುಖ್ಯವಾಗಿ ಧರ್ಮ ಹಾಗೂ ಧಾರ್ಮಿಕ ಗುರುಗಳ ಬಗ್ಗೆ ಹೀಗೆ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು. ಇದನ್ನೂ ಓದಿ: ತಮ್ಮ ಕಲಾ ಕೌಶಲ್ಯದ ಮೂಲಕ ಅಪ್ಪುಗೆ ಗೌರವ ನಮನ ಸಲ್ಲಿಸಿದ ಕಲಾವಿದ

ಸುದ್ದಿಗೋಷ್ಠಿಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಸರವಣ, ಜೆಡಿಎಸ್ ನಗರ ಅಧ್ಯಕ್ಷ ಆರ್.ಪ್ರಕಾಶ್ ಉಪಸ್ಥಿತರಿದ್ದರು.

TAGGED:BBMP Electionbengaluruh d kumaraswamyjdspressmeetಜೆಡಿಎಸ್ಬಿಬಿಎಂಪಿ ಚುನಾವಣೆಬೆಂಗಳೂರುಸುದ್ದಿಗೋಷ್ಠಿಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

You Might Also Like

Mangaluru Crime
Crime

ಮಂಗಳೂರು | ಲವ್, ಸೆಕ್ಸ್, ದೋಖಾ ಆರೋಪ – ಕೇಸ್ ದಾಖಲಾಗ್ತಿದ್ದಂತೆ ಆರೋಪಿ ಯುವಕ ಎಸ್ಕೇಪ್

Public TV
By Public TV
5 hours ago
Chikkaballapura 6
Chikkaballapur

ಪೈಪ್‌ಲೈನ್‌ಗೆ ರಂಧ್ರ ಕೊರೆದು ಪೆಟ್ರೋಲ್ ಕಳ್ಳತನ ಮಾಡ್ತಿದ್ದ ಅಪ್ಪ-ಮಗ ಅಂದರ್

Public TV
By Public TV
5 hours ago
China
Latest

ಚೀನಾದಲ್ಲಿ ಜಲಪ್ರಳಯಕ್ಕೆ 6 ಮಂದಿ ಬಲಿ

Public TV
By Public TV
5 hours ago
Koppala crime
Crime

3ನೇ ಪತ್ನಿಯ ಹತ್ಯೆಗೈದು ಗೋಣಿ ಚೀಲದಲ್ಲಿ ಪ್ಯಾಕ್ – ಲಗೇಜ್ ಎಂದು ಸರ್ಕಾರಿ ಬಸ್ಸಲ್ಲಿ ಕಳುಹಿಸಿದ್ದವ 24 ವರ್ಷಗಳ ಬಳಿಕ ಅರೆಸ್ಟ್

Public TV
By Public TV
5 hours ago
Rain 1
Belgaum

ಪಶ್ಚಿಮಘಟ್ಟ ಭಾಗದಲ್ಲಿ ನಿಲ್ಲದ ಮಳೆಯ ಅಬ್ಬರ – ಎಲ್ಲೆಲ್ಲಿ ಏನೇನಾಗಿದೆ?

Public TV
By Public TV
6 hours ago
Sports Department
Crime

6 ತಿಂಗಳಿಂದ ಸಂಬಳ ಇಲ್ಲ – ಸರ್ಕಾರಿ ಕಚೇರಿಯಲ್ಲೇ ಉದ್ಯೋಗಿ ಆತ್ಮಹತ್ಯೆಗೆ ಯತ್ನ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?